Homeಮುಖಪುಟಇಂಗ್ಲಿಷ್ ಸೇರಿದಂತೆ ಎನ್‌ಸಿಇಆರ್‌ಟಿ ಪಠ್ಯ ಪುಸ್ತಕಗಳಿಗೆ ಹಿಂದಿ ಹೆಸರು: ಕೇರಳದಿಂದ ತೀವ್ರ ವಿರೋಧ

ಇಂಗ್ಲಿಷ್ ಸೇರಿದಂತೆ ಎನ್‌ಸಿಇಆರ್‌ಟಿ ಪಠ್ಯ ಪುಸ್ತಕಗಳಿಗೆ ಹಿಂದಿ ಹೆಸರು: ಕೇರಳದಿಂದ ತೀವ್ರ ವಿರೋಧ

- Advertisement -
- Advertisement -

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಆರ್‌ಟಿ) ತನ್ನ ಹಲವು ಹೊಸ ಇಂಗ್ಲಿಷ್ ಮಾಧ್ಯಮ ಪಠ್ಯಪುಸ್ತಕಗಳಿಗೆ ಹಿಂದಿ ಶೀರ್ಷಿಕೆಗಳನ್ನು ನೀಡಿದೆ. ಅವುಗಳಲ್ಲಿ ಇಂಗ್ಲಿಷ್ ಭಾಷೆಯನ್ನು ಕಲಿಸಲು ಉದ್ದೇಶಿಸಲಾದ ಪುಸ್ತಕಗಳು ಸೇರಿವೆ ಎಂದು ಇಂಡಿಯಾ ಟುಡೇ ಸೋಮವಾರ ವರದಿ ಮಾಡಿದೆ.

ಎನ್‌ಸಿಆರ್‌ಟಿ ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಶಾಲಾ ಶಿಕ್ಷಣವನ್ನು ಸುಧಾರಿಸುವ ಕಾರ್ಯಕ್ರಮಗಳು ಮತ್ತು ನೀತಿಗಳ ಕುರಿತು ಸರ್ಕಾರಕ್ಕೆ ಸಲಹೆಗಳನ್ನು ನೀಡುತ್ತದೆ.

ಪಠ್ಯಪುಸ್ತಕಗಳ ಶೀರ್ಷಿಕೆಗಳನ್ನು ಬದಲಾಯಿಸುವ ಮಂಡಳಿಯ ನಿರ್ಧಾರವನ್ನು ಕೇರಳದ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಟೀಕಿಸಿದ್ದಾರೆ. ಈ ನಿರ್ಧಾರವು ಅರ್ಥಹೀನ ಎಂದು  ಅವರು ಹೇಳಿದ್ದು, ಪುನರ್‌ ಪರಿಶೀಲಿಸುವಂತೆ ಒತ್ತಾಯಿಸಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಹಿಂದೆ 6ನೇ ತರಗತಿಯ ಇಂಗ್ಲಿಷ್ ಪಠ್ಯಪುಸ್ತಕಕ್ಕೆ ‘ಹನಿಸಕಲ್’ ಎಂಬ ಹೆಸರಿತ್ತು. ಅದನ್ನು ಈಗ ‘ಪೂರ್ವಿ’ ಎಂದು ಬದಲಾಯಿಸಲಾಗಿದೆ. ಇದರ ಹಿಂದಿ ಅರ್ಥ ‘ಪೂರ್ವ’ ಎಂದಾಗಿದೆ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಒಂದು ರಾಗದ ಹೆಸರೂ ಹೌದು ಎಂದು ವರದಿ ಹೇಳಿದೆ.

ಮುಂದುವರಿದು, 1 ಮತ್ತು 2 ನೇ ತರಗತಿಯ ಇಂಗ್ಲಿಷ್ ಪಠ್ಯಪುಸ್ತಕಗಳಿಗೆ ಈಗ ‘ಮೃದಂಗ್’ ಎಂದು ಹೆಸರಿಸಲಾಗಿದೆ ಮತ್ತು 3 ನೇ ತರಗತಿಯ ಪಠ್ಯಪುಸ್ತಕದ ಹೆಸರನ್ನು ‘ಸಂತೂರ್’ ಎಂದು ಬದಲಾಯಿಸಲಾಗಿದೆ. ಮೃದಂಗ್ ಮತ್ತು ಸಂತೂರ್ ಭಾರತೀಯ ಸಂಗೀತ ವಾದ್ಯಗಳ ಹೆಸರುಗಳಾಗಿವೆ.

ಎನ್‌ಸಿಇಆರ್‌ಟಿ ಈ ಹಿಂದೆ ವಿವಿಧ ಭಾಷೆಗಳಲ್ಲಿ ಪಠ್ಯಪುಸ್ತಕಗಳಿಗೆ ವಿಭಿನ್ನ ಶೀರ್ಷಿಕೆಗಳನ್ನು ಬಳಸಿತ್ತು ಎಂದು ಇಂಡಿಯಾ ಟುಡೇ ವರದಿ ಹೇಳಿದೆ. 6 ನೇ ತರಗತಿಯ ಗಣಿತ ಪಠ್ಯಪುಸ್ತಕವನ್ನು ಇಂಗ್ಲಿಷ್‌ನಲ್ಲಿ ಮ್ಯಾಥ್‌ಮ್ಯಾಟಿಕ್ಸ್, ಹಿಂದಿಯಲ್ಲಿ ಗಣಿತ್ ಮತ್ತು ಉರ್ದು ಭಾಷೆಯಲ್ಲಿ ರಿಯಾಜಿ ಎಂದು ಕರೆಯಲಾಗಿತ್ತು.

ಹೊಸ ಬದಲಾವಣೆಯ ಪ್ರಕಾರ, ಗಣಿತ ಪಠ್ಯಪುಸ್ತಕದ ಇಂಗ್ಲಿಷ್ ಮತ್ತು ಹಿಂದಿ ಆವೃತ್ತಿಗಳಿಗೆ ಗಣಿತ್ ಪ್ರಕಾಶ್ ಎಂದು ಹೆಸರಿಸಲಾಗಿದೆ. ಉರ್ದು ಆವೃತ್ತಿಯ ಶೀರ್ಷಿಕೆ ಏನು ಎಂಬುದು ಸ್ಪಷ್ಟವಾಗಿಲ್ಲ.

ಕೇರಳದ ವಿರೋಧ

ಪಠ್ಯಪುಸ್ತಕಗಳಿಗೆ ಹಿಂದಿ ಮರುನಾಮಕರಣ ಮಾಡುವ ಎನ್‌ಸಿಇಆರ್‌ಟಿಯ ನಿರ್ಧಾರವು ‘ಒಕ್ಕೂಟ ವ್ಯವಸ್ಥೆಯ ತತ್ವಗಳು ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ’ ವಿರುದ್ಧವಾಗಿದೆ ಎಂದು ಸೋಮವಾರ ಕೇರಳದ ಶಿಕ್ಷಣ ಸಚಿವ ಶಿವನ್‌ಕುಟ್ಟಿ ಹೇಳಿದ್ದಾರೆ.

“ಇದು ಅರ್ಥಹೀನ ಮಾತ್ರವಲ್ಲ, ನಮ್ಮ ದೇಶದ ಭಾಷಾ ವೈವಿಧ್ಯತೆಯನ್ನು ಹಾಳುಮಾಡುವ ರೀತಿಯಲ್ಲಿ ಒಬ್ಬರ ಸಾಂಸ್ಕೃತಿಕ ಮೌಲ್ಯಗಳನ್ನು ಹೇರುವ ಕೃತ್ಯವಾಗಿದೆ” ಎಂದಿದ್ದಾರೆ.

ಭಾಷಾ ವೈವಿಧ್ಯತೆಯನ್ನು ಗೌರವಿಸಲು ಮತ್ತು ಮಕ್ಕಳ ಮನಸ್ಸಿನಲ್ಲಿ ಸೂಕ್ಷ್ಮ ಸಂವೇದನೆಯನ್ನು ಬೆಳೆಸಲು ದಶಕಗಳಿಂದ ಬಳಸಲಾಗುತ್ತಿದ್ದ ಇಂಗ್ಲಿಷ್ ಶೀರ್ಷಿಕೆಗಳನ್ನು ಬದಲಾಯಿಸುವುದು ಸಂಪೂರ್ಣವಾಗಿ ತಪ್ಪು ಎಂದು ಹೇಳಿದ್ದಾರೆ.

“ಹಿಂದಿಯೇತರ ಇತರ ರಾಜ್ಯಗಳಂತೆ ಕೇರಳ ಕೂಡ ಭಾಷಾ ವೈವಿಧ್ಯತೆಯನ್ನು ರಕ್ಷಿಸಲು ಮತ್ತು ಪ್ರಾದೇಶಿಕ ಸಾಂಸ್ಕೃತಿಕ ಸ್ವಾತಂತ್ರ್ಯಕ್ಕೆ ಆದ್ಯತೆ ನೀಡಲು ಬದ್ಧವಾಗಿದೆ. ಪಠ್ಯಪುಸ್ತಕಗಳ ಶೀರ್ಷಿಕೆಗಳು ಕೇವಲ ಹೆಸರುಗಳಲ್ಲ; ಅವು ಮಕ್ಕಳ ಗ್ರಹಿಕೆ ಮತ್ತು ಕಲ್ಪನೆಯನ್ನು ರೂಪಿಸುತ್ತವೆ. ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳು ಇಂಗ್ಲಿಷ್ ಶೀರ್ಷಿಕೆಗಳಿಗೆ ಅರ್ಹರು. ಶಿಕ್ಷಣವು ಹೇರಿಕೆಯ ಸಾಧನವಾಗಿರಬಾರದು, ಬದಲಾಗಿ ಸಬಲೀಕರಣ ಮತ್ತು ಒಮ್ಮತದ ಸಾಧನವಾಗಿರಬೇಕು” ಎಂದಿದ್ದಾರೆ.

ಹಿಂದಿ ಭಾಷೆಯ ಹೇರಿಕೆಯನ್ನು ವಿರೋಧಿಸಲು ರಾಜ್ಯ ಸರ್ಕಾರಗಳು ಒಗ್ಗೂಡಬೇಕೆಂದು ಅವರು ಕರೆ ನೀಡಿದ್ದಾರೆ.

2020ರ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಎನ್‌ಸಿಇಆರ್‌ಟಿ 2023ರಲ್ಲಿ ಹೊಸ ಪಠ್ಯಪುಸ್ತಕಗಳನ್ನು ಪರಿಚಯಿಸಿತು. ಮೊದಲು 1 ಮತ್ತು 2 ನೇ ತರಗತಿಯ ಪಠ್ಯಪುಸ್ತಕಗಳನ್ನು ಬಿಡುಗಡೆ ಮಾಡಿತ್ತು. ನಂತರ 2024 ರಲ್ಲಿ 3 ಮತ್ತು 6 ನೇ ತರಗತಿಯ ಪಠ್ಯಪುಸ್ತಕಗಳನ್ನು ಬಿಡುಗಡೆ ಮಾಡಿತ್ತು. 4, 5, 7 ಮತ್ತು 8 ನೇ ತರಗತಿಗಳಿಗೆ ಹೊಸ ಪಠ್ಯಪುಸ್ತಕಗಳನ್ನು ಈಗ ಬಿಡುಗಡೆ ಮಾಡಲಾಗುತ್ತಿದೆ.

ಉತ್ತರಪ್ರದೇಶ: ಮುಸ್ಲಿಂ ಯುವತಿಯ ಬುರ್ಖಾ ಬಿಚ್ಚಿ ಥಳಿತ; ವೀಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...