Homeಕರ್ನಾಟಕಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು: 'ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ'ಎಂದು ಎಚ್‌ಡಿಕೆ ಆಕ್ರೋಶ

ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು: ‘ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ’ಎಂದು ಎಚ್‌ಡಿಕೆ ಆಕ್ರೋಶ

- Advertisement -
- Advertisement -

ಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಭಾನುವಾರ (ಡಿ.26) ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು ನುಸುಳಿದ್ದು ಅಭ್ಯರ್ಥಿಗಳು ಗೊಂದಲಕ್ಕೆ ಸಿಲುಕಿದ್ದರು. ಇದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಇದೇ ವಿಷಯಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಯಮಾರಸ್ವಾವಿ “ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ” ಎಂದು ಕಿಡಿ ಕಾರಿದ್ದಾರೆ.

“ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇಪದೆ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹರಿಯಾಣ: ದುಷ್ಕರ್ಮಿಗಳಿಂದ ಯೇಸು ಕ್ರಿಸ್ತನ ಪ್ರತಿಮೆ ಧ್ವಂಸ

’ನಿನ್ನೆ ರಾಷ್ಟ್ರೀಯ ಪರಿಕ್ಷಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಯುಜಿಸಿ – ಎನ್‌ ಇಟಿ ಕನ್ನಡ ಐಚ್ಛಿಕ ಭಾಷಾ ಪಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲೇ ಇದ್ದವು. ಅದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿ ಪರೀಕ್ಷೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ. ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಅಲ್ಲದೆ, ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ. ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ..?’ ಎಂದು ಪ್ರಶ್ನಿಸಿದ್ದಾರೆ.

’ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರದ  ಇನ್ನು ಹಲವಾರು ಉದ್ಯೋಗ ಅವಕಾಶಗಳಲ್ಲಿ ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯ ಆಗುತ್ತಿದೆ. ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ. ನಮ್ಮ ಮೌನ ನಮ್ಮ  ದೌರ್ಬಲ್ಯವಲ್ಲ ಎಂಬುದು ನೆನಪಿರಲಿ. ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೂಡಲೇ ಪರಿಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಪುನಾ ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರಿಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದ್ದಾರೆ.

’ಪರೀಕ್ಷೆ ಅವ್ಯವಸ್ಥೆ ಆಗರವಾಗಿತ್ತು ಎನ್ನುವುದು ತಿಳಿದುಬಂದಿದೆ. ಅದನ್ನು ಸರಿಪಡಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಬೇಕು’ ಎಂದು ಹೇಳಿದ್ದಾರೆ.

ಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಆನ್‌ಲೈನ್‌ನಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ನಿಗದಿಯಾಗಿತ್ತು. ಸಾಮಾನ್ಯಜ್ಞಾನ ಪ್ರಶ್ನೆಪತ್ರಿಕೆ (100 ಅಂಕಗಳು) ಸರಿಯಾಗಿತ್ತು. ಆದರೆ ಕನ್ನಡ ಪ್ರಶ್ನೆಪತ್ರಿಕೆ (200 ಅಂಕ) ಗೊಂದಲವನ್ನು ಉಂಟುಮಾಡಿತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಒಟ್ಟು ನೂರು ಪ್ರಶ್ನೆಗಳು ಇರುತ್ತವೆ. ತಾಂತ್ರಿಕ ದೋಷದಿಂದಾಗಿ ಮೊದಲ ಹತ್ತು ಪ್ರಶ್ನೆಗಳು ಮಾತ್ರ ಕನ್ನಡದಲ್ಲಿದ್ದವು. ಉಳಿದ ಪ್ರಶ್ನೆಗಳೆಲ್ಲ ಹಿಂದಿ ಭಾಷೆಯದ್ದಾಗಿದ್ದವು. ಹೀಗಾಗಿ ಪರೀಕ್ಷಾ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದರು.

ತಾಂತ್ರಿಕ ದೋಷದಿಂದಾಗಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಭಾಷೆಯ ಪ್ರಶ್ನೆಗಳು ಬಂದಿದ್ದು, ಮರು ಪರೀಕ್ಷೆ ನಡೆಸುವುದಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ತಿಳಿಸಿದೆ.


ಇದನ್ನೂ ಓದಿ: ಎನ್‌ಇಟಿ ‘ಕನ್ನಡ’ ಪ್ರಶ್ನೆಪತ್ರಿಕೆಯಲ್ಲಿ ‘ಹಿಂದಿ’ ಹಾವಳಿ; ಅಭ್ಯರ್ಥಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...