Homeಕರ್ನಾಟಕಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು: 'ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ'ಎಂದು ಎಚ್‌ಡಿಕೆ ಆಕ್ರೋಶ

ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು: ‘ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ’ಎಂದು ಎಚ್‌ಡಿಕೆ ಆಕ್ರೋಶ

- Advertisement -
- Advertisement -

ಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಭಾನುವಾರ (ಡಿ.26) ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು ನುಸುಳಿದ್ದು ಅಭ್ಯರ್ಥಿಗಳು ಗೊಂದಲಕ್ಕೆ ಸಿಲುಕಿದ್ದರು. ಇದಕ್ಕೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಇದೇ ವಿಷಯಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಯಮಾರಸ್ವಾವಿ “ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ” ಎಂದು ಕಿಡಿ ಕಾರಿದ್ದಾರೆ.

“ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇಪದೆ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ. ಕೇಂದ್ರ ಸರಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಿರಂತರವಾಗಿ ನಡೆಯುತ್ತಲೇ ಇದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹರಿಯಾಣ: ದುಷ್ಕರ್ಮಿಗಳಿಂದ ಯೇಸು ಕ್ರಿಸ್ತನ ಪ್ರತಿಮೆ ಧ್ವಂಸ

’ನಿನ್ನೆ ರಾಷ್ಟ್ರೀಯ ಪರಿಕ್ಷಾ ಸಂಸ್ಥೆ ನಡೆಸಿದ ಪರೀಕ್ಷೆಯಲ್ಲಿ ಯುಜಿಸಿ – ಎನ್‌ ಇಟಿ ಕನ್ನಡ ಐಚ್ಛಿಕ ಭಾಷಾ ಪಶ್ನೆ ಪತ್ರಿಕೆಯ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲೇ ಇದ್ದವು. ಅದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೆ ಒಳಗಾಗಿ ಪರೀಕ್ಷೆಯನ್ನು ಬಹಿಷ್ಕರಿಸಿ, ಪ್ರತಿಭಟನೆ ನಡೆಸಿದ್ದಾರೆ. ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಅಲ್ಲದೆ, ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿರುವ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಇಂಥ ಕೃತ್ಯಗಳನ್ನು ಕನ್ನಡದ ವಿರುದ್ಧ ಎಸಗಲಾಗುತ್ತಿದೆ. ಕನ್ನಡಿಗರ ಬಗ್ಗೆ ಈ ಕಠಿಣತೆ ಏಕೆ..?’ ಎಂದು ಪ್ರಶ್ನಿಸಿದ್ದಾರೆ.

’ರೈಲ್ವೆ, ಬ್ಯಾಂಕಿಂಗ್ ಸೇರಿದಂತೆ ಕೇಂದ್ರ ಸರಕಾರದ  ಇನ್ನು ಹಲವಾರು ಉದ್ಯೋಗ ಅವಕಾಶಗಳಲ್ಲಿ ಕನ್ನಡದ ಪ್ರತಿಭಾವಂತ ಯುವಜನರಿಗೆ ಅನ್ಯಾಯ ಆಗುತ್ತಿದೆ. ಕನ್ನಡಿಗರ ಕಡೆಗಣನೆ ದೇಶಕ್ಕೆ ಒಳ್ಳೆಯದಲ್ಲ. ನಮ್ಮ ಮೌನ ನಮ್ಮ  ದೌರ್ಬಲ್ಯವಲ್ಲ ಎಂಬುದು ನೆನಪಿರಲಿ. ಈ ಅನ್ಯಾಯವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕೂಡಲೇ ಪರಿಕ್ಷಾ ಸಂಸ್ಥೆಯು ಆಗಿರುವ ಲೋಪ ಸರಿಮಾಡಿ ಪುನಾ ಪರೀಕ್ಷೆ ನಡೆಸಬೇಕು. ಎರಡು ವರ್ಷಗಳಿಂದ ಪರಿಕ್ಷೆಗಾಗಿ ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದ್ದಾರೆ.

’ಪರೀಕ್ಷೆ ಅವ್ಯವಸ್ಥೆ ಆಗರವಾಗಿತ್ತು ಎನ್ನುವುದು ತಿಳಿದುಬಂದಿದೆ. ಅದನ್ನು ಸರಿಪಡಿಸಿ ಉತ್ತಮ ರೀತಿಯಲ್ಲಿ ಪರೀಕ್ಷೆ ನಡೆಸಬೇಕು’ ಎಂದು ಹೇಳಿದ್ದಾರೆ.

ಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಆನ್‌ಲೈನ್‌ನಲ್ಲಿ ಭಾನುವಾರ ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ನಿಗದಿಯಾಗಿತ್ತು. ಸಾಮಾನ್ಯಜ್ಞಾನ ಪ್ರಶ್ನೆಪತ್ರಿಕೆ (100 ಅಂಕಗಳು) ಸರಿಯಾಗಿತ್ತು. ಆದರೆ ಕನ್ನಡ ಪ್ರಶ್ನೆಪತ್ರಿಕೆ (200 ಅಂಕ) ಗೊಂದಲವನ್ನು ಉಂಟುಮಾಡಿತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಒಟ್ಟು ನೂರು ಪ್ರಶ್ನೆಗಳು ಇರುತ್ತವೆ. ತಾಂತ್ರಿಕ ದೋಷದಿಂದಾಗಿ ಮೊದಲ ಹತ್ತು ಪ್ರಶ್ನೆಗಳು ಮಾತ್ರ ಕನ್ನಡದಲ್ಲಿದ್ದವು. ಉಳಿದ ಪ್ರಶ್ನೆಗಳೆಲ್ಲ ಹಿಂದಿ ಭಾಷೆಯದ್ದಾಗಿದ್ದವು. ಹೀಗಾಗಿ ಪರೀಕ್ಷಾ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದರು.

ತಾಂತ್ರಿಕ ದೋಷದಿಂದಾಗಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಭಾಷೆಯ ಪ್ರಶ್ನೆಗಳು ಬಂದಿದ್ದು, ಮರು ಪರೀಕ್ಷೆ ನಡೆಸುವುದಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ತಿಳಿಸಿದೆ.


ಇದನ್ನೂ ಓದಿ: ಎನ್‌ಇಟಿ ‘ಕನ್ನಡ’ ಪ್ರಶ್ನೆಪತ್ರಿಕೆಯಲ್ಲಿ ‘ಹಿಂದಿ’ ಹಾವಳಿ; ಅಭ್ಯರ್ಥಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...