Homeಕರ್ನಾಟಕಎನ್‌ಇಟಿ 'ಕನ್ನಡ' ಪ್ರಶ್ನೆಪತ್ರಿಕೆಯಲ್ಲಿ 'ಹಿಂದಿ' ಹಾವಳಿ; ಅಭ್ಯರ್ಥಿಗಳ ಆಕ್ರೋಶ

ಎನ್‌ಇಟಿ ‘ಕನ್ನಡ’ ಪ್ರಶ್ನೆಪತ್ರಿಕೆಯಲ್ಲಿ ‘ಹಿಂದಿ’ ಹಾವಳಿ; ಅಭ್ಯರ್ಥಿಗಳ ಆಕ್ರೋಶ

ಪರೀಕ್ಷಾ ಅಭ್ಯರ್ಥಿಗಳು ಪ್ರತಿಭಟಿಸಿರುವ ಬೆನ್ನಲ್ಲೇ ಮರು ಪರೀಕ್ಷೆ ನಡೆಸುವುದಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ತಿಳಿಸಿದೆ

- Advertisement -
- Advertisement -

ಕನ್ನಡ ವಿಷಯಕ್ಕೆ ಸಂಬಂಧಿಸಿದಂತೆ ಇಂದು (ಭಾನುವಾರ) ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ) ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಪ್ರಶ್ನೆಗಳು ನುಸುಳಿದ್ದು ಅಭ್ಯರ್ಥಿಗಳು ಗೊಂದಲಕ್ಕೆ ಸಿಲುಕಿದರು. ತಾಂತ್ರಿಕ ದೋಷದಿಂದಾಗಿ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಭಾಷೆಯ ಪ್ರಶ್ನೆಗಳು ಬಂದಿದ್ದು, ಮರು ಪರೀಕ್ಷೆ ನಡೆಸುವುದಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ತಿಳಿಸಿದೆ.

ಆನ್‌ಲೈನ್‌ನಲ್ಲಿ ಪರೀಕ್ಷೆ ನಿಗದಿಯಾಗಿತ್ತು. ಸಾಮಾನ್ಯಜ್ಞಾನ ಪ್ರಶ್ನೆಪತ್ರಿಕೆ (100 ಅಂಕಗಳು) ಸರಿಯಾಗಿತ್ತು. ಆದರೆ ಕನ್ನಡ ಪ್ರಶ್ನೆಪತ್ರಿಕೆ (200 ಅಂಕ) ಗೊಂದಲವನ್ನು ಉಂಟುಮಾಡಿತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಒಟ್ಟು ನೂರು ಪ್ರಶ್ನೆಗಳು ಇರುತ್ತವೆ. ತಾಂತ್ರಿಕ ದೋಷದಿಂದಾಗಿ ಮೊದಲ ಹತ್ತು ಪ್ರಶ್ನೆಗಳು ಮಾತ್ರ ಕನ್ನಡದಲ್ಲಿದ್ದವು. ಉಳಿದ ಪ್ರಶ್ನೆಗಳೆಲ್ಲ ಹಿಂದಿ ಭಾಷೆಯದ್ದಾಗಿದ್ದವು. ಹೀಗಾಗಿ ಪರೀಕ್ಷಾ ಅಭ್ಯರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಪರೀಕ್ಷಾ ಅಭ್ಯರ್ಥಿ ಹರೀಶ್ ಸಿಂಗ್ರಿಹಳ್ಳಿ, “ಹೆಚ್ಚುವರಿ ಸಮಯವನ್ನು ನೀಡಿ ಕೆಲವು ಕಡೆ ಪರೀಕ್ಷೆ ನಡೆಸಲಾಗಿದೆ. ಆದರೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ನಡೆದಿಲ್ಲ. ನನ್ನ ಪರೀಕ್ಷೆ 9ರಿಂದ 12 ಗಂಟೆಗೆ ಮುಗಿಯಬೇಕಿತ್ತು. ಆದರೆ 2 ಗಂಟೆಗೆ ಮುಗಿಯಿತು” ಎಂದು ತಿಳಿಸಿದರು.

“ಹೆಚ್ಚುವರಿ ಸಮಯ ನೀಡಿ ಪರೀಕ್ಷೆ ನಡೆಸಿದರೂ ಮತ್ತೊಂದು ಸಮಸ್ಯೆಯಾಗಿತ್ತು. ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ಪ್ರಶ್ನೆಗಳು ಪುನಾರಾವರ್ತನೆಯಾಗಿದ್ದವು. ಹೀಗಾಗಿ ಪರೀಕ್ಷೆ ಬರೆದವರಿಗೂ ಮರು ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದೆ. ಅಲ್ಲದೆ ತುಮಕೂರಿನಲ್ಲಿ ಪರೀಕ್ಷೆ ಬರೆಯಲು ಬಯಸಿದ್ದ ಅನೇಕರನ್ನು ಬೆಂಗಳೂರಿನ ಪರೀಕ್ಷಾ ಕೇಂದ್ರಗಳಿಗೆ ಹಾಕಲಾಗಿತ್ತು. ಹೀಗಾಗಿ ನಮ್ಮ ಸಮಯ, ಹಣ ಎರಡೂ ವ್ಯರ್ಥವಾಗಿದೆ” ಎಂದರು.

ತುಮಕೂರಿನಲ್ಲಿ ಪ್ರತಿಭಟನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅಭ್ಯರ್ಥಿಗಳು, “ಈ ರೀತಿ ಮತ್ತೆ ಆಗಬಾರದು. ಎಲ್ಲರಿಗೂ ಅನ್ಯಾಯವಾಗಿದೆ. ಬೇರೆ ಭಾಷೆಗೆ ಇಲ್ಲದೆ ಇರುವ ಸಮಸ್ಯೆ ಕನ್ನಡಕ್ಕೆ ಮಾತ್ರ ಯಾಕೆ?” ಎಂದು ಪ್ರಶ್ನಿಸಿದರು.

“ಇಲ್ಲಿಯವರೆಗೂ ಬೇರೆ ವಿಷಯಗಳ ಪರೀಕ್ಷೆಗಳು ಸುವ್ಯವಸ್ಥಿತವಾಗಿ ನಡೆದಿವೆ. ಆದರೆ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ದೋಷ ಕಂಡು ಬಂದಿದೆ. ಮುಂದಿನ ಭವಿಷ್ಯದ ಮೇಲೆ ಜಿಗುಪ್ಸೆ ಬರುವ ರೀತಿಯಲ್ಲಿ ಹಿಂದಿ ಆಕ್ರಮಿಸಿದೆ. ಇದು ಕನ್ನಡಿಗರ ದುರಂತ ಸ್ಥಿತಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪರೀಕ್ಷಾ ಅಭ್ಯರ್ಥಿಗಳ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಹೊಸ ನೋಟಿಫಿಕೇಷನ್‌ ಹೊರಡಿಸಿದ್ದು, ಮರು ಪರೀಕ್ಷೆ ನಡೆಸುವುದಾಗಿ ತಿಳಿಸಿದೆ.

“ತಾಂತ್ರಿಕ ದೋಷದಿಂದಾಗಿ ಯುಜಿಸಿ-ಎನ್‌ಇಟಿ ಕನ್ನಡ ಪರೀಕ್ಷೆಯಲ್ಲಿ ತೊಂದರೆಯಾಗಿದ್ದು, ಶೀಘ್ರದಲ್ಲೇ ಮರುಪರೀಕ್ಷೆ ನಡೆಸಲು ಕ್ರಮ ವಹಿಸಲಾಗುವುದು” ಎಂದು ಎನ್‌ಟಿಎ ಹೇಳಿದೆ.


ಇದನ್ನೂ ಓದಿರಿ: ಮಧ್ಯಪ್ರದೇಶ: ಹಿಂದುತ್ವ ಗುಂಪಿನ ರ್‍ಯಾಲಿಯಿಂದಾಗಿ ಕೋಮು ಘರ್ಷಣೆ; 12ಕ್ಕೂ ಹೆಚ್ಚು ಮುಸ್ಲಿಮರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...