Homeಮುಖಪುಟಕನ್ನಡದ ಯಶಸ್ವಿ ಚಿತ್ರ ’ಯು ಟರ್ನ್’ ಹಿಂದಿಗೆ ಕೊಂಡೊಯ್ದ ಏಕ್ತಾ ಕಪೂರ್‌, ನಾಯಕಿಯಾಗಿ ಅಲಯ

ಕನ್ನಡದ ಯಶಸ್ವಿ ಚಿತ್ರ ’ಯು ಟರ್ನ್’ ಹಿಂದಿಗೆ ಕೊಂಡೊಯ್ದ ಏಕ್ತಾ ಕಪೂರ್‌, ನಾಯಕಿಯಾಗಿ ಅಲಯ

- Advertisement -
- Advertisement -

ಪವನ್ ಕುಮಾರ್‌ ನಿರ್ದೇಶನದ ಕನ್ನಡದ ಯಶಸ್ವಿ ಚಲನಚಿತ್ರ ಯು ಟರ್ನ್ ಹಿಂದಿಗೆ ರಿಮೇಕ್ ಆಗುತ್ತಿದ್ದು, ಏಕ್ತಾ ಕಪೂರ್ ಮತ್ತು ಆಕೆಯ ತಾಯಿ ಶೋಭಾ ಕಪೂರ್‌ ನಿರ್ಮಿಸುತ್ತಿದ್ದಾರೆ. ಕನ್ನಡದಲ್ಲಿ ಶ್ರದ್ಧಾ ಶ್ರೀನಾಥ್ ನಿರ್ವಹಿಸಿದ ಪಾತ್ರದಲ್ಲಿ ಅಲಯ ಎಫ್ ಕಾಣಿಸಿಕೊಳ್ಳಲ್ಲಿದ್ದಾರೆ. ಹಿಂದಿ ರಿಮೇಕ್ ಅನ್ನು ಆರಿಫ್ ಖಾನ್ ನಿರ್ದೇಶಿಸಲಿದ್ದಾರೆ.

ಕನ್ನಡದ ಹಿಟ್ ಚಲನಚಿತ್ರ ಯು ಟರ್ನ್‌ 2016 ರಲ್ಲಿ ತೆರೆಕಂಡಿತ್ತು. ನಾಯಕಿಯಾಗಿ ಶ್ರದ್ಧಾ ಶ್ರೀನಾಥ್ ಕಾಣಿಸಿಕೊಂಡಿದ್ದರು. ಬಳಿಕ ಈ ಚಿತ್ರ ಮಲಯಾಳಂ, ತೆಲುಗು ತಮಿಳು ಮತ್ತು ಬಂಗಾಳಿ ಭಾಷೆಗಳಲ್ಲೂ ತಯಾರಾಗಿತ್ತು. ತೆಲುಗು ಮತ್ತು ತಮಿಳು ಭಾಷೆಯಲ್ಲಿ ಸಮಂತಾ ನಾಯಕಿಯಾಗಿದ್ದರು. ಈಗ ಈ ಚಿತ್ರ ಹಿಂದಿ ರಿಮೇಕ್‌ನಲ್ಲಿ ಕಾಣಿಸಿಕೊಳ್ಳಲಿದ್ದು, ಅಲಯ ಏಫ್ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಅಲಯಗೆ ಇದು ಬಾಲಿವುಡ್‌ನ ಎರಡನೇ ಚಿತ್ರವಾಗಿದೆ.

ಯು ಟರ್ನ್ ಚಿತ್ರವನ್ನು ನಿರ್ಮಿಸುತ್ತಿರುವುದಾಗಿ ನಿರ್ಮಾಪಕಿ ಏಕ್ತಾ ಕಪೂರ್ ಸೋಮವಾರ ತಮ್ಮ ಟ್ವಿಟರ್‌ ಖಾತೆಯಲ್ಲಿ ತಿಳಿಸಿದ್ದಾರೆ. “ತಮಿಳು, ತೆಲುಗು ಮತ್ತು ಕನ್ನಡದಲ್ಲಿ  ಬ್ಲಾಕ್ ಬಾಸ್ಟರ್‌ ಯಶಸ್ಸು ಮತ್ತು ಪ್ರಶಸ್ತಿಗಳನ್ನು ಪಡೆದಿರುವ ಯು ಟರ್ನ್ ಅನ್ನು ಹಿಂದಿಯಲ್ಲಿ ರಿಮೇಕ್ ಮಾಡಲು ಉತ್ಸುಕವಾಗಿದ್ದೇವೆ. ಜೀವನದಲ್ಲಿ, ಯಾವುದೇ ಶಾರ್ಟ್‌ಕಟ್‌ಗಳಿಲ್ಲ. ಆದರೆ ಕೆಲವೊಮ್ಮೆ ನೀವು ನಿಯಮಗಳನ್ನು ಮುರಿಯಬೇಕು ಮತ್ತು ನಿಮ್ಮ ಪ್ರಯಾಣದ ಹಾದಿಯನ್ನು ಬದಲಾಯಿಸಲು ಯು ಟರ್ನ್ ತೆಗೆದುಕೊಳ್ಳಬೇಕು’ ಎಂದಿದ್ದಾರೆ.

ಇದನ್ನೂ ಓದಿ: ನನ್ನ ತಪ್ಪಿನಿಂದ ರಾಹುಲ್ ಗಾಂಧಿ ಕೆಟ್ಟ ರೀತಿಯ ಟ್ರೋಲ್‌ಗೆ ಒಳಗಾದರು- ನಟಿ ರಮ್ಯಾ

 

ಇನ್ಸ್ಟಾಗ್ರಾಮ್‌ನಲ್ಲಿ ತನ್ನ ಹೊಸ ಚಿತ್ರವನ್ನು ಪ್ರಕಟಿಸಿರುವ ನಟಿ ಅಲಯ “ಕೆಲವೊಮ್ಮೆ ಜೀವನದಲ್ಲಿ, ಶಾರ್ಟ್ಕಟ್ ತೆಗೆದುಕೊಳ್ಳುವುದು ಮುಂದಿರುವ ಮಾರ್ಗವಲ್ಲ. ನಿಮ್ಮ ಪ್ರಯಾಣದ ಹಾದಿಯನ್ನು ಬದಲಾಯಿಸುವ ಮೊದಲು ಎರಡು ಬಾರಿ ಯೋಚಿಸಿ ಮತ್ತು ಯುಟರ್ನ್ ತೆಗೆದುಕೊಳ್ಳಿ!” ಎಂದಿದ್ದಾರೆ.

 

View this post on Instagram

 

A post shared by ALAYA F (@alayaf)

ಚಿತ್ರದ ಹಿಂದಿ ರಿಮೇಕ್ ಅನ್ನು ಆರಿಫ್ ಖಾನ್ ನಿರ್ದೇಶಿಸಲಿದ್ದು, ಏಕ್ತಾ ಕಪೂರ್ ಮತ್ತು ತಾಯಿ ಶೋಭಾ ಕಪೂರ್ ನಿರ್ಮಿಸಲಿದ್ದಾರೆ. ಚಿತ್ರದ ಶೂಟಿಂಗ್ ‌ಮಂಗಳವಾರದಿಂದ ಪ್ರಾರಂಭವಾಗುತ್ತದೆ.


ಇದನ್ನೂ ಓದಿ: ಚಿತ್ರರಂಗದ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳುವ ಕೇಂದ್ರದ ಹೊಸ ಕಾನೂನು: ಕಮಲ್ ಹಾಸನ್ ಸೇರಿ ಚಿತ್ರತಾರೆಯರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...