Homeಮುಖಪುಟಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

- Advertisement -
- Advertisement -

ಲಂಡನ್‌ನ ಸ್ಕೂಲ್ ಆಫ್ ಓರಿಯೆಂಟಲ್ ಮತ್ತು ಆಫ್ರಿಕನ್ ಸ್ಟಡೀಸ್‌ನ (ಎಸ್‌ಒಎಎಸ್‌) ವಿಶ್ವಪ್ರಸಿದ್ಧ ಹಿಂದಿ ವಿದ್ವಾಂಸೆ ಮತ್ತು ಪ್ರಾಧ್ಯಾಪಕಿ ಫ್ರಾನ್ಸೆಸ್ಕಾ ಓರ್ಸಿನಿ ಅವರನ್ನು, ಐದು ವರ್ಷಗಳ ಮಾನ್ಯ ವೀಸಾ ಹೊಂದಿದ್ದರೂ ಭಾರತಕ್ಕೆ ಪ್ರವೇಶಿಸದಂತೆ ಸೋಮವಾರ (ಅ.20) ತಡೆಯಲಾಗಿದೆ ಎಂದು ವರದಿಗಳು ಹೇಳಿವೆ.

ಭಾರತ ಪ್ರವೇಶದಂತೆ ತಡೆಯಲು ಯಾವುದೇ ಕಾರಣವನ್ನು ತಿಳಿಸಿಲ್ಲ ಎಂದು ಓರ್ಸಿನಿ ಹೇಳಿದ್ದಾರೆ.

“ಲಂಡನ್ ವಿಶ್ವವಿದ್ಯಾಲಯದ ಎಸ್‌ಒಎಎಸ್‌ನಲ್ಲಿ ಹಿಂದಿ ವಿದ್ವಾಂಸೆಯಾಗಿರುವ ಪ್ರೊಫೆಸರ್ ಫ್ರಾನ್ಸೆಸ್ಕಾ ಓರ್ಸಿನಿ ಅವರನ್ನು 5 ವರ್ಷಗಳ ಮಾನ್ಯ ಇ-ವೀಸಾ ಇದ್ದರೂ ಇಂದು ರಾತ್ರಿ ಭಾರತ ಪ್ರವೇಶಿಸದಂತೆ ತಡೆಯಲಾಗಿದೆ ಎಂದು ನಾನು ದೃಢೀಕರಿಸಬಲ್ಲೆ. ಅವರು ಹಾಂಗ್ ಕಾಂಗ್‌ನಿಂದ ದೆಹಲಿಗೆ ಆಗಮಿಸಿದ್ದರು. ಈ ವೇಳೆ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆಯಲಾಗಿದೆ ಎಂದು ಹಿರಿಯ ಪತ್ರಕರ್ತ ಮತ್ತು ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ನನ್ನನ್ನು ಗಡಿಪಾರು ಮಾಡಲಾಗುತ್ತಿದೆ, ನನಗೆ ಗೊತ್ತಿರುವುದು ಇಷ್ಟೆ” ಎಂದು ಓರ್ಸಿನಿ ಹೇಳಿರುವುದಾಗಿ ‘ದಿ ವೈರ್’ ವರದಿ ಮಾಡಿದೆ.

ಪ್ರಸ್ತುತ ಎಸ್‌ಒಎಎಸ್‌ನ ಭಾಷೆ, ಸಂಸ್ಕೃತಿ ಮತ್ತು ಭಾಷಾಶಾಸ್ತ್ರ ಸಂಸ್ಥೆಯ ಹಿಂದಿ ಮತ್ತು ದಕ್ಷಿಣ ಏಷ್ಯಾ ಸಾಹಿತ್ಯದ ಗೌರವ ಪ್ರಾಧ್ಯಾಪಕರಾಗಿರುವ ಓರ್ಸಿನಿ, ನವದೆಹಲಿಯಲ್ಲಿ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಹಿಂದಿ ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ್ದಾರೆ. ಓರ್ಸಿನಿ ಅವರು ಲಂಡನ್ ವಿಶ್ವವಿದ್ಯಾಲಯದ ಭಾಗವಾಗಿರುವ ಎಸ್‌ಒಎಸ್‌ನಲ್ಲಿ ತಮ್ಮ ಪಿಎಚ್‌ಡಿ ಪೂರ್ಣಗೊಳಿಸಿದ್ದಾರೆ.

‘ಈಸ್ಟ್ ಆಫ್ ದೆಹಲಿ: ಬಹುಭಾಷಾ ಸಾಹಿತ್ಯ ಸಂಸ್ಕೃತಿ ಮತ್ತು ವಿಶ್ವ ಸಾಹಿತ್ಯ’, ‘ಪ್ರಿಂಟ್ ಅಂಡ್ ಪ್ಲೆಷರ್: ವಸಾಹತುಶಾಹಿ ಉತ್ತರ ಭಾರತದಲ್ಲಿ ಜನಪ್ರಿಯ ಸಾಹಿತ್ಯ ಮತ್ತು ಮನರಂಜನಾ ಕಾದಂಬರಿಗಳು ಮತ್ತು ‘ದಿ ಹಿಂದಿ ಪಬ್ಲಿಕ್ ಸ್ಪಿಯರ್ 1920-1940: ರಾಷ್ಟ್ರೀಯತೆಯ ಯುಗದಲ್ಲಿ ಭಾಷೆ ಮತ್ತು ಸಾಹಿತ್ಯ ಓರ್ಸಿನಿ ಅವರ ಪ್ರಮುಖ ಕೃತಿಗಳಾಗಿವೆ.

“ಪ್ರೊಫೆಸರ್ ಫ್ರಾನ್ಸೆಸ್ಕಾ ಓರ್ಸಿನಿ ಭಾರತೀಯ ಸಾಹಿತ್ಯದ ಮಹಾನ್ ವಿದ್ವಾಂಸರಾಗಿದ್ದು, ಅವರ ಕೃತಿಗಳು ನಮ್ಮ ಸ್ವಂತ ಸಾಂಸ್ಕೃತಿಕ ಪರಂಪರೆಯ ಬಗ್ಗೆ ನಮ್ಮ ತಿಳುವಳಿಕೆಯನ್ನು ಸಮೃದ್ಧವಾಗಿ ಬೆಳಗಿಸಿದೆ. ಯಾವುದೇ ಕಾರಣವಿಲ್ಲದೆ ಅವರನ್ನು ಗಡಿಪಾರು ಮಾಡುವುದು ಅಸುರಕ್ಷಿತ, ಸಂಶಯಗ್ರಸ್ತ ಮತ್ತು ಮೂರ್ಖತನದ ಸರ್ಕಾರದ ಲಕ್ಷಣವಾಗಿದೆ” ಎಂದು ಲೇಖಕ ರಾಮಚಂದ್ರ ಗುಹಾ ಅವರು ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ಎಂತಹ ನಾಚಿಕೆಗೇಡಿನ ವಿಷಯ! ಓರ್ಸಿನಿ ಹಿಂದಿ/ಹಿಂದೂಸ್ತಾನಿ ಭಾಷೆಯ ಪ್ರಸಿದ್ಧ ವಿದ್ವಾಂಸರು; ಹಿಂದಿ ಬೆಲ್ಟ್-ಹಿಂದುತ್ವವಾದಿಗಳಿಗೆ ಒರ್ಸಿನಿಯವರ ಸಿದ್ಧಾಂತಗಳು ಮತ್ತು ಬರವಣಿಗೆಗಳು ತುಂಬಾ ಸಂಕೀರ್ಣವಾಗಿವೆಯೇ?” ಶಿಕ್ಷಣ ತಜ್ಞೆ ಅರ್ಪಿತಾ ದಾಸ್ ಪ್ರಶ್ನಿಸಿದ್ದಾರೆ.

ನಿಜಾಮಾಬಾದ್ ‘ಎನ್‌ಕೌಂಟರ್’ ಕುರಿತು ನ್ಯಾಯಾಂಗ ತನಿಖೆಗೆ ಮಾನವ ಹಕ್ಕುಗಳ ವೇದಿಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...