Homeಮುಖಪುಟಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

- Advertisement -
- Advertisement -

ಲಂಡನ್‌ನ ಸ್ಕೂಲ್ ಆಫ್ ಓರಿಯೆಂಟಲ್ ಮತ್ತು ಆಫ್ರಿಕನ್ ಸ್ಟಡೀಸ್‌ನ (ಎಸ್‌ಒಎಎಸ್‌) ವಿಶ್ವಪ್ರಸಿದ್ಧ ಹಿಂದಿ ವಿದ್ವಾಂಸೆ ಮತ್ತು ಪ್ರಾಧ್ಯಾಪಕಿ ಫ್ರಾನ್ಸೆಸ್ಕಾ ಓರ್ಸಿನಿ ಅವರನ್ನು, ಐದು ವರ್ಷಗಳ ಮಾನ್ಯ ವೀಸಾ ಹೊಂದಿದ್ದರೂ ಭಾರತಕ್ಕೆ ಪ್ರವೇಶಿಸದಂತೆ ಸೋಮವಾರ (ಅ.20) ತಡೆಯಲಾಗಿದೆ ಎಂದು ವರದಿಗಳು ಹೇಳಿವೆ.

ಭಾರತ ಪ್ರವೇಶದಂತೆ ತಡೆಯಲು ಯಾವುದೇ ಕಾರಣವನ್ನು ತಿಳಿಸಿಲ್ಲ ಎಂದು ಓರ್ಸಿನಿ ಹೇಳಿದ್ದಾರೆ.

“ಲಂಡನ್ ವಿಶ್ವವಿದ್ಯಾಲಯದ ಎಸ್‌ಒಎಎಸ್‌ನಲ್ಲಿ ಹಿಂದಿ ವಿದ್ವಾಂಸೆಯಾಗಿರುವ ಪ್ರೊಫೆಸರ್ ಫ್ರಾನ್ಸೆಸ್ಕಾ ಓರ್ಸಿನಿ ಅವರನ್ನು 5 ವರ್ಷಗಳ ಮಾನ್ಯ ಇ-ವೀಸಾ ಇದ್ದರೂ ಇಂದು ರಾತ್ರಿ ಭಾರತ ಪ್ರವೇಶಿಸದಂತೆ ತಡೆಯಲಾಗಿದೆ ಎಂದು ನಾನು ದೃಢೀಕರಿಸಬಲ್ಲೆ. ಅವರು ಹಾಂಗ್ ಕಾಂಗ್‌ನಿಂದ ದೆಹಲಿಗೆ ಆಗಮಿಸಿದ್ದರು. ಈ ವೇಳೆ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆಯಲಾಗಿದೆ ಎಂದು ಹಿರಿಯ ಪತ್ರಕರ್ತ ಮತ್ತು ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ನನ್ನನ್ನು ಗಡಿಪಾರು ಮಾಡಲಾಗುತ್ತಿದೆ, ನನಗೆ ಗೊತ್ತಿರುವುದು ಇಷ್ಟೆ” ಎಂದು ಓರ್ಸಿನಿ ಹೇಳಿರುವುದಾಗಿ ‘ದಿ ವೈರ್’ ವರದಿ ಮಾಡಿದೆ.

ಪ್ರಸ್ತುತ ಎಸ್‌ಒಎಎಸ್‌ನ ಭಾಷೆ, ಸಂಸ್ಕೃತಿ ಮತ್ತು ಭಾಷಾಶಾಸ್ತ್ರ ಸಂಸ್ಥೆಯ ಹಿಂದಿ ಮತ್ತು ದಕ್ಷಿಣ ಏಷ್ಯಾ ಸಾಹಿತ್ಯದ ಗೌರವ ಪ್ರಾಧ್ಯಾಪಕರಾಗಿರುವ ಓರ್ಸಿನಿ, ನವದೆಹಲಿಯಲ್ಲಿ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಹಿಂದಿ ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ್ದಾರೆ. ಓರ್ಸಿನಿ ಅವರು ಲಂಡನ್ ವಿಶ್ವವಿದ್ಯಾಲಯದ ಭಾಗವಾಗಿರುವ ಎಸ್‌ಒಎಸ್‌ನಲ್ಲಿ ತಮ್ಮ ಪಿಎಚ್‌ಡಿ ಪೂರ್ಣಗೊಳಿಸಿದ್ದಾರೆ.

‘ಈಸ್ಟ್ ಆಫ್ ದೆಹಲಿ: ಬಹುಭಾಷಾ ಸಾಹಿತ್ಯ ಸಂಸ್ಕೃತಿ ಮತ್ತು ವಿಶ್ವ ಸಾಹಿತ್ಯ’, ‘ಪ್ರಿಂಟ್ ಅಂಡ್ ಪ್ಲೆಷರ್: ವಸಾಹತುಶಾಹಿ ಉತ್ತರ ಭಾರತದಲ್ಲಿ ಜನಪ್ರಿಯ ಸಾಹಿತ್ಯ ಮತ್ತು ಮನರಂಜನಾ ಕಾದಂಬರಿಗಳು ಮತ್ತು ‘ದಿ ಹಿಂದಿ ಪಬ್ಲಿಕ್ ಸ್ಪಿಯರ್ 1920-1940: ರಾಷ್ಟ್ರೀಯತೆಯ ಯುಗದಲ್ಲಿ ಭಾಷೆ ಮತ್ತು ಸಾಹಿತ್ಯ ಓರ್ಸಿನಿ ಅವರ ಪ್ರಮುಖ ಕೃತಿಗಳಾಗಿವೆ.

“ಪ್ರೊಫೆಸರ್ ಫ್ರಾನ್ಸೆಸ್ಕಾ ಓರ್ಸಿನಿ ಭಾರತೀಯ ಸಾಹಿತ್ಯದ ಮಹಾನ್ ವಿದ್ವಾಂಸರಾಗಿದ್ದು, ಅವರ ಕೃತಿಗಳು ನಮ್ಮ ಸ್ವಂತ ಸಾಂಸ್ಕೃತಿಕ ಪರಂಪರೆಯ ಬಗ್ಗೆ ನಮ್ಮ ತಿಳುವಳಿಕೆಯನ್ನು ಸಮೃದ್ಧವಾಗಿ ಬೆಳಗಿಸಿದೆ. ಯಾವುದೇ ಕಾರಣವಿಲ್ಲದೆ ಅವರನ್ನು ಗಡಿಪಾರು ಮಾಡುವುದು ಅಸುರಕ್ಷಿತ, ಸಂಶಯಗ್ರಸ್ತ ಮತ್ತು ಮೂರ್ಖತನದ ಸರ್ಕಾರದ ಲಕ್ಷಣವಾಗಿದೆ” ಎಂದು ಲೇಖಕ ರಾಮಚಂದ್ರ ಗುಹಾ ಅವರು ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ಎಂತಹ ನಾಚಿಕೆಗೇಡಿನ ವಿಷಯ! ಓರ್ಸಿನಿ ಹಿಂದಿ/ಹಿಂದೂಸ್ತಾನಿ ಭಾಷೆಯ ಪ್ರಸಿದ್ಧ ವಿದ್ವಾಂಸರು; ಹಿಂದಿ ಬೆಲ್ಟ್-ಹಿಂದುತ್ವವಾದಿಗಳಿಗೆ ಒರ್ಸಿನಿಯವರ ಸಿದ್ಧಾಂತಗಳು ಮತ್ತು ಬರವಣಿಗೆಗಳು ತುಂಬಾ ಸಂಕೀರ್ಣವಾಗಿವೆಯೇ?” ಶಿಕ್ಷಣ ತಜ್ಞೆ ಅರ್ಪಿತಾ ದಾಸ್ ಪ್ರಶ್ನಿಸಿದ್ದಾರೆ.

ನಿಜಾಮಾಬಾದ್ ‘ಎನ್‌ಕೌಂಟರ್’ ಕುರಿತು ನ್ಯಾಯಾಂಗ ತನಿಖೆಗೆ ಮಾನವ ಹಕ್ಕುಗಳ ವೇದಿಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...