Homeಮುಖಪುಟಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

- Advertisement -
- Advertisement -

ಲಂಡನ್‌ನ ಸ್ಕೂಲ್ ಆಫ್ ಓರಿಯೆಂಟಲ್ ಮತ್ತು ಆಫ್ರಿಕನ್ ಸ್ಟಡೀಸ್‌ನ (ಎಸ್‌ಒಎಎಸ್‌) ವಿಶ್ವಪ್ರಸಿದ್ಧ ಹಿಂದಿ ವಿದ್ವಾಂಸೆ ಮತ್ತು ಪ್ರಾಧ್ಯಾಪಕಿ ಫ್ರಾನ್ಸೆಸ್ಕಾ ಓರ್ಸಿನಿ ಅವರನ್ನು, ಐದು ವರ್ಷಗಳ ಮಾನ್ಯ ವೀಸಾ ಹೊಂದಿದ್ದರೂ ಭಾರತಕ್ಕೆ ಪ್ರವೇಶಿಸದಂತೆ ಸೋಮವಾರ (ಅ.20) ತಡೆಯಲಾಗಿದೆ ಎಂದು ವರದಿಗಳು ಹೇಳಿವೆ.

ಭಾರತ ಪ್ರವೇಶದಂತೆ ತಡೆಯಲು ಯಾವುದೇ ಕಾರಣವನ್ನು ತಿಳಿಸಿಲ್ಲ ಎಂದು ಓರ್ಸಿನಿ ಹೇಳಿದ್ದಾರೆ.

“ಲಂಡನ್ ವಿಶ್ವವಿದ್ಯಾಲಯದ ಎಸ್‌ಒಎಎಸ್‌ನಲ್ಲಿ ಹಿಂದಿ ವಿದ್ವಾಂಸೆಯಾಗಿರುವ ಪ್ರೊಫೆಸರ್ ಫ್ರಾನ್ಸೆಸ್ಕಾ ಓರ್ಸಿನಿ ಅವರನ್ನು 5 ವರ್ಷಗಳ ಮಾನ್ಯ ಇ-ವೀಸಾ ಇದ್ದರೂ ಇಂದು ರಾತ್ರಿ ಭಾರತ ಪ್ರವೇಶಿಸದಂತೆ ತಡೆಯಲಾಗಿದೆ ಎಂದು ನಾನು ದೃಢೀಕರಿಸಬಲ್ಲೆ. ಅವರು ಹಾಂಗ್ ಕಾಂಗ್‌ನಿಂದ ದೆಹಲಿಗೆ ಆಗಮಿಸಿದ್ದರು. ಈ ವೇಳೆ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆಯಲಾಗಿದೆ ಎಂದು ಹಿರಿಯ ಪತ್ರಕರ್ತ ಮತ್ತು ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ನನ್ನನ್ನು ಗಡಿಪಾರು ಮಾಡಲಾಗುತ್ತಿದೆ, ನನಗೆ ಗೊತ್ತಿರುವುದು ಇಷ್ಟೆ” ಎಂದು ಓರ್ಸಿನಿ ಹೇಳಿರುವುದಾಗಿ ‘ದಿ ವೈರ್’ ವರದಿ ಮಾಡಿದೆ.

ಪ್ರಸ್ತುತ ಎಸ್‌ಒಎಎಸ್‌ನ ಭಾಷೆ, ಸಂಸ್ಕೃತಿ ಮತ್ತು ಭಾಷಾಶಾಸ್ತ್ರ ಸಂಸ್ಥೆಯ ಹಿಂದಿ ಮತ್ತು ದಕ್ಷಿಣ ಏಷ್ಯಾ ಸಾಹಿತ್ಯದ ಗೌರವ ಪ್ರಾಧ್ಯಾಪಕರಾಗಿರುವ ಓರ್ಸಿನಿ, ನವದೆಹಲಿಯಲ್ಲಿ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಹಿಂದಿ ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ್ದಾರೆ. ಓರ್ಸಿನಿ ಅವರು ಲಂಡನ್ ವಿಶ್ವವಿದ್ಯಾಲಯದ ಭಾಗವಾಗಿರುವ ಎಸ್‌ಒಎಸ್‌ನಲ್ಲಿ ತಮ್ಮ ಪಿಎಚ್‌ಡಿ ಪೂರ್ಣಗೊಳಿಸಿದ್ದಾರೆ.

‘ಈಸ್ಟ್ ಆಫ್ ದೆಹಲಿ: ಬಹುಭಾಷಾ ಸಾಹಿತ್ಯ ಸಂಸ್ಕೃತಿ ಮತ್ತು ವಿಶ್ವ ಸಾಹಿತ್ಯ’, ‘ಪ್ರಿಂಟ್ ಅಂಡ್ ಪ್ಲೆಷರ್: ವಸಾಹತುಶಾಹಿ ಉತ್ತರ ಭಾರತದಲ್ಲಿ ಜನಪ್ರಿಯ ಸಾಹಿತ್ಯ ಮತ್ತು ಮನರಂಜನಾ ಕಾದಂಬರಿಗಳು ಮತ್ತು ‘ದಿ ಹಿಂದಿ ಪಬ್ಲಿಕ್ ಸ್ಪಿಯರ್ 1920-1940: ರಾಷ್ಟ್ರೀಯತೆಯ ಯುಗದಲ್ಲಿ ಭಾಷೆ ಮತ್ತು ಸಾಹಿತ್ಯ ಓರ್ಸಿನಿ ಅವರ ಪ್ರಮುಖ ಕೃತಿಗಳಾಗಿವೆ.

“ಪ್ರೊಫೆಸರ್ ಫ್ರಾನ್ಸೆಸ್ಕಾ ಓರ್ಸಿನಿ ಭಾರತೀಯ ಸಾಹಿತ್ಯದ ಮಹಾನ್ ವಿದ್ವಾಂಸರಾಗಿದ್ದು, ಅವರ ಕೃತಿಗಳು ನಮ್ಮ ಸ್ವಂತ ಸಾಂಸ್ಕೃತಿಕ ಪರಂಪರೆಯ ಬಗ್ಗೆ ನಮ್ಮ ತಿಳುವಳಿಕೆಯನ್ನು ಸಮೃದ್ಧವಾಗಿ ಬೆಳಗಿಸಿದೆ. ಯಾವುದೇ ಕಾರಣವಿಲ್ಲದೆ ಅವರನ್ನು ಗಡಿಪಾರು ಮಾಡುವುದು ಅಸುರಕ್ಷಿತ, ಸಂಶಯಗ್ರಸ್ತ ಮತ್ತು ಮೂರ್ಖತನದ ಸರ್ಕಾರದ ಲಕ್ಷಣವಾಗಿದೆ” ಎಂದು ಲೇಖಕ ರಾಮಚಂದ್ರ ಗುಹಾ ಅವರು ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ಎಂತಹ ನಾಚಿಕೆಗೇಡಿನ ವಿಷಯ! ಓರ್ಸಿನಿ ಹಿಂದಿ/ಹಿಂದೂಸ್ತಾನಿ ಭಾಷೆಯ ಪ್ರಸಿದ್ಧ ವಿದ್ವಾಂಸರು; ಹಿಂದಿ ಬೆಲ್ಟ್-ಹಿಂದುತ್ವವಾದಿಗಳಿಗೆ ಒರ್ಸಿನಿಯವರ ಸಿದ್ಧಾಂತಗಳು ಮತ್ತು ಬರವಣಿಗೆಗಳು ತುಂಬಾ ಸಂಕೀರ್ಣವಾಗಿವೆಯೇ?” ಶಿಕ್ಷಣ ತಜ್ಞೆ ಅರ್ಪಿತಾ ದಾಸ್ ಪ್ರಶ್ನಿಸಿದ್ದಾರೆ.

ನಿಜಾಮಾಬಾದ್ ‘ಎನ್‌ಕೌಂಟರ್’ ಕುರಿತು ನ್ಯಾಯಾಂಗ ತನಿಖೆಗೆ ಮಾನವ ಹಕ್ಕುಗಳ ವೇದಿಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...