Homeಮುಖಪುಟಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿ ಭಾರತ ಪ್ರವೇಶಿಸದಂತೆ ವಿಮಾನ ನಿಲ್ದಾಣದಲ್ಲಿ ತಡೆ: ವರದಿ

- Advertisement -
- Advertisement -

ಲಂಡನ್‌ನ ಸ್ಕೂಲ್ ಆಫ್ ಓರಿಯೆಂಟಲ್ ಮತ್ತು ಆಫ್ರಿಕನ್ ಸ್ಟಡೀಸ್‌ನ (ಎಸ್‌ಒಎಎಸ್‌) ವಿಶ್ವಪ್ರಸಿದ್ಧ ಹಿಂದಿ ವಿದ್ವಾಂಸೆ ಮತ್ತು ಪ್ರಾಧ್ಯಾಪಕಿ ಫ್ರಾನ್ಸೆಸ್ಕಾ ಓರ್ಸಿನಿ ಅವರನ್ನು, ಐದು ವರ್ಷಗಳ ಮಾನ್ಯ ವೀಸಾ ಹೊಂದಿದ್ದರೂ ಭಾರತಕ್ಕೆ ಪ್ರವೇಶಿಸದಂತೆ ಸೋಮವಾರ (ಅ.20) ತಡೆಯಲಾಗಿದೆ ಎಂದು ವರದಿಗಳು ಹೇಳಿವೆ.

ಭಾರತ ಪ್ರವೇಶದಂತೆ ತಡೆಯಲು ಯಾವುದೇ ಕಾರಣವನ್ನು ತಿಳಿಸಿಲ್ಲ ಎಂದು ಓರ್ಸಿನಿ ಹೇಳಿದ್ದಾರೆ.

“ಲಂಡನ್ ವಿಶ್ವವಿದ್ಯಾಲಯದ ಎಸ್‌ಒಎಎಸ್‌ನಲ್ಲಿ ಹಿಂದಿ ವಿದ್ವಾಂಸೆಯಾಗಿರುವ ಪ್ರೊಫೆಸರ್ ಫ್ರಾನ್ಸೆಸ್ಕಾ ಓರ್ಸಿನಿ ಅವರನ್ನು 5 ವರ್ಷಗಳ ಮಾನ್ಯ ಇ-ವೀಸಾ ಇದ್ದರೂ ಇಂದು ರಾತ್ರಿ ಭಾರತ ಪ್ರವೇಶಿಸದಂತೆ ತಡೆಯಲಾಗಿದೆ ಎಂದು ನಾನು ದೃಢೀಕರಿಸಬಲ್ಲೆ. ಅವರು ಹಾಂಗ್ ಕಾಂಗ್‌ನಿಂದ ದೆಹಲಿಗೆ ಆಗಮಿಸಿದ್ದರು. ಈ ವೇಳೆ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆಯಲಾಗಿದೆ ಎಂದು ಹಿರಿಯ ಪತ್ರಕರ್ತ ಮತ್ತು ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ನನ್ನನ್ನು ಗಡಿಪಾರು ಮಾಡಲಾಗುತ್ತಿದೆ, ನನಗೆ ಗೊತ್ತಿರುವುದು ಇಷ್ಟೆ” ಎಂದು ಓರ್ಸಿನಿ ಹೇಳಿರುವುದಾಗಿ ‘ದಿ ವೈರ್’ ವರದಿ ಮಾಡಿದೆ.

ಪ್ರಸ್ತುತ ಎಸ್‌ಒಎಎಸ್‌ನ ಭಾಷೆ, ಸಂಸ್ಕೃತಿ ಮತ್ತು ಭಾಷಾಶಾಸ್ತ್ರ ಸಂಸ್ಥೆಯ ಹಿಂದಿ ಮತ್ತು ದಕ್ಷಿಣ ಏಷ್ಯಾ ಸಾಹಿತ್ಯದ ಗೌರವ ಪ್ರಾಧ್ಯಾಪಕರಾಗಿರುವ ಓರ್ಸಿನಿ, ನವದೆಹಲಿಯಲ್ಲಿ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಹಿಂದಿ ಮತ್ತು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದ್ದಾರೆ. ಓರ್ಸಿನಿ ಅವರು ಲಂಡನ್ ವಿಶ್ವವಿದ್ಯಾಲಯದ ಭಾಗವಾಗಿರುವ ಎಸ್‌ಒಎಸ್‌ನಲ್ಲಿ ತಮ್ಮ ಪಿಎಚ್‌ಡಿ ಪೂರ್ಣಗೊಳಿಸಿದ್ದಾರೆ.

‘ಈಸ್ಟ್ ಆಫ್ ದೆಹಲಿ: ಬಹುಭಾಷಾ ಸಾಹಿತ್ಯ ಸಂಸ್ಕೃತಿ ಮತ್ತು ವಿಶ್ವ ಸಾಹಿತ್ಯ’, ‘ಪ್ರಿಂಟ್ ಅಂಡ್ ಪ್ಲೆಷರ್: ವಸಾಹತುಶಾಹಿ ಉತ್ತರ ಭಾರತದಲ್ಲಿ ಜನಪ್ರಿಯ ಸಾಹಿತ್ಯ ಮತ್ತು ಮನರಂಜನಾ ಕಾದಂಬರಿಗಳು ಮತ್ತು ‘ದಿ ಹಿಂದಿ ಪಬ್ಲಿಕ್ ಸ್ಪಿಯರ್ 1920-1940: ರಾಷ್ಟ್ರೀಯತೆಯ ಯುಗದಲ್ಲಿ ಭಾಷೆ ಮತ್ತು ಸಾಹಿತ್ಯ ಓರ್ಸಿನಿ ಅವರ ಪ್ರಮುಖ ಕೃತಿಗಳಾಗಿವೆ.

“ಪ್ರೊಫೆಸರ್ ಫ್ರಾನ್ಸೆಸ್ಕಾ ಓರ್ಸಿನಿ ಭಾರತೀಯ ಸಾಹಿತ್ಯದ ಮಹಾನ್ ವಿದ್ವಾಂಸರಾಗಿದ್ದು, ಅವರ ಕೃತಿಗಳು ನಮ್ಮ ಸ್ವಂತ ಸಾಂಸ್ಕೃತಿಕ ಪರಂಪರೆಯ ಬಗ್ಗೆ ನಮ್ಮ ತಿಳುವಳಿಕೆಯನ್ನು ಸಮೃದ್ಧವಾಗಿ ಬೆಳಗಿಸಿದೆ. ಯಾವುದೇ ಕಾರಣವಿಲ್ಲದೆ ಅವರನ್ನು ಗಡಿಪಾರು ಮಾಡುವುದು ಅಸುರಕ್ಷಿತ, ಸಂಶಯಗ್ರಸ್ತ ಮತ್ತು ಮೂರ್ಖತನದ ಸರ್ಕಾರದ ಲಕ್ಷಣವಾಗಿದೆ” ಎಂದು ಲೇಖಕ ರಾಮಚಂದ್ರ ಗುಹಾ ಅವರು ಎಕ್ಸ್ ಪೋಸ್ಟ್‌ನಲ್ಲಿ ಹೇಳಿದ್ದಾರೆ.

“ಎಂತಹ ನಾಚಿಕೆಗೇಡಿನ ವಿಷಯ! ಓರ್ಸಿನಿ ಹಿಂದಿ/ಹಿಂದೂಸ್ತಾನಿ ಭಾಷೆಯ ಪ್ರಸಿದ್ಧ ವಿದ್ವಾಂಸರು; ಹಿಂದಿ ಬೆಲ್ಟ್-ಹಿಂದುತ್ವವಾದಿಗಳಿಗೆ ಒರ್ಸಿನಿಯವರ ಸಿದ್ಧಾಂತಗಳು ಮತ್ತು ಬರವಣಿಗೆಗಳು ತುಂಬಾ ಸಂಕೀರ್ಣವಾಗಿವೆಯೇ?” ಶಿಕ್ಷಣ ತಜ್ಞೆ ಅರ್ಪಿತಾ ದಾಸ್ ಪ್ರಶ್ನಿಸಿದ್ದಾರೆ.

ನಿಜಾಮಾಬಾದ್ ‘ಎನ್‌ಕೌಂಟರ್’ ಕುರಿತು ನ್ಯಾಯಾಂಗ ತನಿಖೆಗೆ ಮಾನವ ಹಕ್ಕುಗಳ ವೇದಿಕೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...