Homeಕರ್ನಾಟಕ’ಹಿಂದಿ’ ದಕ್ಷಿಣ ಭಾರತೀಯರ ಅವಕಾಶಗಳನ್ನು ಕಸಿದಿದೆ: ಎಚ್‌.ಡಿ ಕುಮಾರಸ್ವಾಮಿ

’ಹಿಂದಿ’ ದಕ್ಷಿಣ ಭಾರತೀಯರ ಅವಕಾಶಗಳನ್ನು ಕಸಿದಿದೆ: ಎಚ್‌.ಡಿ ಕುಮಾರಸ್ವಾಮಿ

ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ.

- Advertisement -
- Advertisement -

ಭಾಷೆಯ ಕಾರಣಕ್ಕೆ ತಮಿಳುನಾಡಿನ ಡಿಎಂಕೆ ಸಂಸದೆ ಕನಿಮೊಳಿ ಅವರನ್ನು ವಿಮಾನ ನಿಲ್ದಾಣದಲ್ಲಿ ‘ನೀವು ಭಾರತೀಯರೇ’ ಎಂದು ಪ್ರಶ್ನಿಸಿದ್ದನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ’ಹಿಂದಿ ವ್ಯಾಮೋಹ, ಹಿಂದಿ ರಾಜಕಾರಣ, ಹಿಂದಿ ಶ್ರೇಷ್ಠತೆ ವ್ಯಸನ ದಕ್ಷಿಣ ಭಾರತದ ನಾಯಕರ, ಜನರ ಅವಕಾಶಗಳನ್ನು ಕಸಿದ ವಿಚಾರ ಚರ್ಚಾರ್ಹ’ ಎಂದು ಹೇಳಿದ್ದಾರೆ.

ಈ ವಿಚಾರದಲಿ ಕನಿಮೋಳಿ ಪರವಾಗಿ ನನ್ನ ಧ್ವನಿ ಕೂಡಾ ಇದೆ ಎಂದು ಅವರು ಕನಿಮೋಳಿ ಅವರನ್ನು ಬೆಂಬಲಿಸಿದ್ದಾರೆ.


ಇದನ್ನೂ ಓದಿ: ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ?: ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನೆ 


ಹಿಂದಿ ರಾಜಕಾರಣವು ದಕ್ಷಿಣ ಭಾರತದ ಹಲವು ನಾಯಕರ ಪ್ರಧಾನಿಯಾಗುವ ಅವಕಾಶ ಕಸಿದಿದೆ. ಅದರಲ್ಲಿ ಹೆಚ್.ಡಿ ದೇವೇಗೌಡರು, ಕರುಣಾನಿಧಿ, ಕಾಮರಾಜರ ಹೆಸರುಗಳು ಪ್ರಧಾನ. ಈ ವ್ಯೂಹವನ್ನು ದೇವೇಗೌಡರು ಭೇದಿಸಿ ಅತ್ಯುನ್ನತ ಪಟ್ಟ ಅಲಂಕರಿಸಿದರಾದರೂ, ಭಾಷೆ ವಿಚಾರಕ್ಕೆ ಅವರನ್ನು ಮೂದಲಿಸಿದ, ಗೇಲಿ ಮಾಡಿದ, ಕನ್ನಡತನ ಪ್ರಶ್ನಿಸಿದ ಪ್ರಸಂಗಗಳು ಆಗಿ ಹೋಗಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಭಾರತದ ಪ್ರಧಾನ ಮಂತ್ರಿಯಾಗಿದ್ದ ದೇವೇಗೌಡರಿಂದ ಅಂದು ಕೆಂಪು ಕೋಟೆಯಲ್ಲಿ ಹಿಂದಿಯಲ್ಲೇ ಭಾಷಣ ಮಾಡಿಸುವಲ್ಲಿ ‘ಹಿಂದಿ ರಾಜಕಾರಣ’ ಯಶಸ್ವಿಯಾಗಿತ್ತು. ಬಿಹಾರ ಮತ್ತು ಉತ್ತರ ಪ್ರದೇಶದ ಬಹುದೊಡ್ಡ ರೈತ ಸಮುದಾಯದ ದೃಷ್ಟಿಯಿಂದ ಅಂದು ದೇವೇಗೌಡರು ಹಿಂದಿಯಲ್ಲೇ ಮಾತನಾಡಿದರು. ಅಷ್ಟರ ಮಟ್ಟಿಗೆ ಈ ದೇಶದಲ್ಲಿ ಹಿಂದಿ ರಾಜಕಾರಣ ಕೆಲಸ ಮಾಡುತ್ತದೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಸಂಸತ್‌ನಲ್ಲಿ ಕನ್ನಡದಲ್ಲಿ ಮಾಡಲಾಗುವ ಭಾಷಣಗಳ ಬಗ್ಗೆ ಆಳುವ ವರ್ಗ ದಿವ್ಯ ನಿರ್ಲಕ್ಷ್ಯ ತೋರುತ್ತದೆ ಎಂದು ಆರೋಪಿಸಿರುವ ಕುಮಾರಸ್ವಾಮಿ ಇಂತಹದ್ದೇ ಅನುಭವ ನನಗೂ ಆಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ ಎಂದಿದ್ದಾರೆ.

ರಾಜಕಾರಣ ಹೊರತುಪಡಿಸಿ ಔದ್ಯೋಗಿಕ ಕ್ಷೇತ್ರಕ್ಕೆ ಬಂದರೆ, ಕೇಂದ್ರ ಸರ್ಕಾರದ ಕೆಲ ಹುದ್ದೆಗಳ ಪರೀಕ್ಷೆಗಳನ್ನು ಇಂಗ್ಲಿಷ್‌–ಹಿಂದಿಯಲ್ಲೇ ಬರೆಯಬೇಕಿದೆ. ಅದರಲ್ಲಿ #ibpsmosa ಕೂಡ ಒಂದು. ಈ ಬಾರಿಯ ಅಧಿಸೂಚನೆಯಲ್ಲಿ ಕನ್ನಡಕ್ಕೆ ಸ್ಥಾನವೇ ಇಲ್ಲ. ಹೀಗಾಗಿ ಕನ್ನಡದ ಉದ್ಯೋಗಾಕಾಂಕ್ಷಿಗಳು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇದು ನಿಲ್ಲಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅಧಿಕೃತ ಭಾಷೆಗಳಲ್ಲಿ ಹಿಂದಿಯೂ ಒಂದು ಎಂದು ಕೇಂದ್ರ ಸರ್ಕಾರ ಬಾಯಿ ಮಾತಿಗಷ್ಟೇ ಹೇಳುತ್ತದೆ. ಆದರೆ, ಹಿಂದಿ ಅಭಿವೃದ್ಧಿಗಾಗಿ ದೇಶ, ವಿದೇಶದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೇಂದ್ರವು ಕೋಟ್ಯಂತರ ಮೊತ್ತ ವಿನಿಯೋಗಿಸುತ್ತದೆ. ಇದು ರಹಸ್ಯ ಕಾರ್ಯಸೂಚಿಗಳಲ್ಲೊಂದು. ಪ್ರಾಮಾಣಿಕ ಭಾಷಾಭಿಮಾನದಿಂದ ಮಾತ್ರ ಇವುಗಳನ್ನು ಮೆಟ್ಟಿಸಲು ಸಾಧ್ಯ ಎಂದು ಅವರು ಹೇಳಿದ್ದಾರೆ.


ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ದಕ್ಷಿಣ ಭಾರತದ ರಾಜಕಾರಣಿಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...