Homeಕರ್ನಾಟಕ’ಹಿಂದಿ’ ದಕ್ಷಿಣ ಭಾರತೀಯರ ಅವಕಾಶಗಳನ್ನು ಕಸಿದಿದೆ: ಎಚ್‌.ಡಿ ಕುಮಾರಸ್ವಾಮಿ

’ಹಿಂದಿ’ ದಕ್ಷಿಣ ಭಾರತೀಯರ ಅವಕಾಶಗಳನ್ನು ಕಸಿದಿದೆ: ಎಚ್‌.ಡಿ ಕುಮಾರಸ್ವಾಮಿ

ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ.

- Advertisement -
- Advertisement -

ಭಾಷೆಯ ಕಾರಣಕ್ಕೆ ತಮಿಳುನಾಡಿನ ಡಿಎಂಕೆ ಸಂಸದೆ ಕನಿಮೊಳಿ ಅವರನ್ನು ವಿಮಾನ ನಿಲ್ದಾಣದಲ್ಲಿ ‘ನೀವು ಭಾರತೀಯರೇ’ ಎಂದು ಪ್ರಶ್ನಿಸಿದ್ದನ್ನು ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ’ಹಿಂದಿ ವ್ಯಾಮೋಹ, ಹಿಂದಿ ರಾಜಕಾರಣ, ಹಿಂದಿ ಶ್ರೇಷ್ಠತೆ ವ್ಯಸನ ದಕ್ಷಿಣ ಭಾರತದ ನಾಯಕರ, ಜನರ ಅವಕಾಶಗಳನ್ನು ಕಸಿದ ವಿಚಾರ ಚರ್ಚಾರ್ಹ’ ಎಂದು ಹೇಳಿದ್ದಾರೆ.

ಈ ವಿಚಾರದಲಿ ಕನಿಮೋಳಿ ಪರವಾಗಿ ನನ್ನ ಧ್ವನಿ ಕೂಡಾ ಇದೆ ಎಂದು ಅವರು ಕನಿಮೋಳಿ ಅವರನ್ನು ಬೆಂಬಲಿಸಿದ್ದಾರೆ.


ಇದನ್ನೂ ಓದಿ: ಹಿಂದಿ ತಿಳಿದಿದ್ದವರು ಮಾತ್ರ ಭಾರತೀಯರೆ?: ಡಿಎಂಕೆ ಸಂಸದೆ ಕನಿಮೊಳಿ ಪ್ರಶ್ನೆ 


ಹಿಂದಿ ರಾಜಕಾರಣವು ದಕ್ಷಿಣ ಭಾರತದ ಹಲವು ನಾಯಕರ ಪ್ರಧಾನಿಯಾಗುವ ಅವಕಾಶ ಕಸಿದಿದೆ. ಅದರಲ್ಲಿ ಹೆಚ್.ಡಿ ದೇವೇಗೌಡರು, ಕರುಣಾನಿಧಿ, ಕಾಮರಾಜರ ಹೆಸರುಗಳು ಪ್ರಧಾನ. ಈ ವ್ಯೂಹವನ್ನು ದೇವೇಗೌಡರು ಭೇದಿಸಿ ಅತ್ಯುನ್ನತ ಪಟ್ಟ ಅಲಂಕರಿಸಿದರಾದರೂ, ಭಾಷೆ ವಿಚಾರಕ್ಕೆ ಅವರನ್ನು ಮೂದಲಿಸಿದ, ಗೇಲಿ ಮಾಡಿದ, ಕನ್ನಡತನ ಪ್ರಶ್ನಿಸಿದ ಪ್ರಸಂಗಗಳು ಆಗಿ ಹೋಗಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಭಾರತದ ಪ್ರಧಾನ ಮಂತ್ರಿಯಾಗಿದ್ದ ದೇವೇಗೌಡರಿಂದ ಅಂದು ಕೆಂಪು ಕೋಟೆಯಲ್ಲಿ ಹಿಂದಿಯಲ್ಲೇ ಭಾಷಣ ಮಾಡಿಸುವಲ್ಲಿ ‘ಹಿಂದಿ ರಾಜಕಾರಣ’ ಯಶಸ್ವಿಯಾಗಿತ್ತು. ಬಿಹಾರ ಮತ್ತು ಉತ್ತರ ಪ್ರದೇಶದ ಬಹುದೊಡ್ಡ ರೈತ ಸಮುದಾಯದ ದೃಷ್ಟಿಯಿಂದ ಅಂದು ದೇವೇಗೌಡರು ಹಿಂದಿಯಲ್ಲೇ ಮಾತನಾಡಿದರು. ಅಷ್ಟರ ಮಟ್ಟಿಗೆ ಈ ದೇಶದಲ್ಲಿ ಹಿಂದಿ ರಾಜಕಾರಣ ಕೆಲಸ ಮಾಡುತ್ತದೆ ಎಂದು ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

ಸಂಸತ್‌ನಲ್ಲಿ ಕನ್ನಡದಲ್ಲಿ ಮಾಡಲಾಗುವ ಭಾಷಣಗಳ ಬಗ್ಗೆ ಆಳುವ ವರ್ಗ ದಿವ್ಯ ನಿರ್ಲಕ್ಷ್ಯ ತೋರುತ್ತದೆ ಎಂದು ಆರೋಪಿಸಿರುವ ಕುಮಾರಸ್ವಾಮಿ ಇಂತಹದ್ದೇ ಅನುಭವ ನನಗೂ ಆಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ ಎಂದಿದ್ದಾರೆ.

ರಾಜಕಾರಣ ಹೊರತುಪಡಿಸಿ ಔದ್ಯೋಗಿಕ ಕ್ಷೇತ್ರಕ್ಕೆ ಬಂದರೆ, ಕೇಂದ್ರ ಸರ್ಕಾರದ ಕೆಲ ಹುದ್ದೆಗಳ ಪರೀಕ್ಷೆಗಳನ್ನು ಇಂಗ್ಲಿಷ್‌–ಹಿಂದಿಯಲ್ಲೇ ಬರೆಯಬೇಕಿದೆ. ಅದರಲ್ಲಿ #ibpsmosa ಕೂಡ ಒಂದು. ಈ ಬಾರಿಯ ಅಧಿಸೂಚನೆಯಲ್ಲಿ ಕನ್ನಡಕ್ಕೆ ಸ್ಥಾನವೇ ಇಲ್ಲ. ಹೀಗಾಗಿ ಕನ್ನಡದ ಉದ್ಯೋಗಾಕಾಂಕ್ಷಿಗಳು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇದು ನಿಲ್ಲಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಅಧಿಕೃತ ಭಾಷೆಗಳಲ್ಲಿ ಹಿಂದಿಯೂ ಒಂದು ಎಂದು ಕೇಂದ್ರ ಸರ್ಕಾರ ಬಾಯಿ ಮಾತಿಗಷ್ಟೇ ಹೇಳುತ್ತದೆ. ಆದರೆ, ಹಿಂದಿ ಅಭಿವೃದ್ಧಿಗಾಗಿ ದೇಶ, ವಿದೇಶದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೇಂದ್ರವು ಕೋಟ್ಯಂತರ ಮೊತ್ತ ವಿನಿಯೋಗಿಸುತ್ತದೆ. ಇದು ರಹಸ್ಯ ಕಾರ್ಯಸೂಚಿಗಳಲ್ಲೊಂದು. ಪ್ರಾಮಾಣಿಕ ಭಾಷಾಭಿಮಾನದಿಂದ ಮಾತ್ರ ಇವುಗಳನ್ನು ಮೆಟ್ಟಿಸಲು ಸಾಧ್ಯ ಎಂದು ಅವರು ಹೇಳಿದ್ದಾರೆ.


ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ದಕ್ಷಿಣ ಭಾರತದ ರಾಜಕಾರಣಿಗಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...