Homeಮುಖಪುಟನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಟ ಶಿರೀಶ್ ಸರವಣನ್ ಜೊತೆಗೆ ಜನಪ್ರಿಯ ಸಂಗೀತ ನಿರ್ದೇಶಕ ಯುವನ್ ಶಂಕರ್ ರಾಜಾ ಅವರು ಚರ್ಚಿಸುತ್ತಿರುವ ಫೋಟೋವೊಂದು ನಿನ್ನೆ ಟ್ವಿಟರ್‌ನಲ್ಲಿ ವೈರಲ್ ಆಗಿದೆ

- Advertisement -
- Advertisement -

ಹಿಂದಿ ಹೇರಿಕೆ ವಿರುದ್ಧ ದೇಶದ ಹಲವೆಡೆ ವ್ಯಾಪಕ ಪ್ರತಿರೋಧಗಳು ವ್ಯಕ್ತವಾಗುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ತಮಿಳುನಾಡಿನ ಟೀ-ಶರ್ಟ್ ಘೋಷಣೆಗಳು ವೈರಲ್ ಆಗುತ್ತಿವೆ. ಹಿಂದಿ ಥೆರಿಯಾದು, ಪೋಡಾ! ” (ನನಗೆ ಹಿಂದಿ ಗೊತ್ತಿಲ್ಲ, ಹೋಗು!). “ನಾನು ತಮೀಝ್ ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ). “ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ”ಎಂಬ ಘೋಷಣೆಗಳು ವೈರಲ್ ಆಗಿವೆ.

ಮೆಟ್ರೋ (2016) ತಮಿಳು ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ನಟ ಶಿರೀಶ್ ಸರವಣನ್ ಜೊತೆಗೆ ಜನಪ್ರಿಯ ಸಂಗೀತ ನಿರ್ದೇಶಕ ಯುವನ್ ಶಂಕರ್ ರಾಜಾ ಅವರು ಚರ್ಚಿಸುತ್ತಿರುವ ಫೋಟೋವೊಂದು ನಿನ್ನೆ ಟ್ವಿಟರ್‌ನಲ್ಲಿ ವೈರಲ್ ಆಗಿದೆ. ಈ ಫೋಟೋವನ್ನು ಸೆ.5 ರಂದು ನಟ ಶಿರೀಶ್ ಅವರು “ಆಳವಾದ ಚರ್ಚೆಯಲ್ಲಿ, ಒಳ್ಳೆಯ ವಿಷಯಗಳು ನಮ್ಮ ಹಾದಿಗೆ ಬರುತ್ತಿವೆ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದರು.

ಇದನ್ನೂ ಓದಿ: ದ್ವಿಭಾಷಾ ನೀತಿ ಸಾಕು: ಹಿಂದಿ ಹೇರಿಕೆ ಬೇಡ – ಟ್ವಿಟ್ಟರ್ ಟ್ರೆಂಡಿಂಗ್

ಈ ಫೋಟೋ ಇಷ್ಟೊಂದು ವೈರಲ್ ಆಗಲು ಕಾರಣ ಇಬ್ಬರು ಧರಿಸಿದ್ದ ಟೀ ಶರ್ಟ್‌ಗಳು. ಹೌದು, ಯುವನ್ ಅವರ ಟೀ ಶರ್ಟ್‌ ಮೇಲೆ  ತಮಿಳು ಕವಿ ತಿರುವಳ್ಳುವರ್ ಅವರ ಆಧುನಿಕ ಸ್ಕೆಚ್‌ನೊಂದಿಗೆ, “ನಾನು ತಮೀಝ್ ಪೆಸುಮ್ ಇಂಡಿಯನ್” ಎಂದಿದ್ದರೆ, ಶಿರೀನ್ ಧರಿಸಿದ್ದ ಕೆಂಪು ಟೀಶರ್ಟ್ ಮೇಲೆ  “ಹಿಂದಿ ಥೆರಿಯಾದು, ಪೋಡಾ!”ಎಂಬ ಪದಗಳಿದ್ದವು. ಇವು ಈ ಫೋಟೋ ವೈರಲ್ ಆಗಲು ಕಾರಣವಾಯಿತು.

ಈ ಚಿತ್ರ ತಮಿಳುನಾಡಿನಲ್ಲಿ ಹೊಸ ಅಲೆಯನ್ನೇ ಹುಟ್ಟುಹಾಕಿತು. ಟ್ವಿಟ್ಟರ್‌ನಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಹಲವಾರು ಜನರು ಇದೇ ರೀತಿಯ ಟೀ ಶರ್ಟ್ ಧರಿಸಿದ ಫೋಟೋಗಳನ್ನು ಸಾಮಾಜಿಕ ಸಾಲತಾಣಗಳಲ್ಲಿ ಹಂಚಿಕೊಂಡರು.

ತೂತುಕುಡಿ ಸಂಸದೆ ಕನಿಮೋಳಿ ಹೇಳುವಂತೆ ಡಿಎಂಕೆ ಮುಖಂಡರು ಈ ಕೆಲಸವನ್ನು ಸಣ್ಣ ರೀತಿಯಲ್ಲಿ ಪ್ರಾರಂಭಿಸಿದ್ದು, ಟೀ ಶರ್ಟ್‌ಗಳನ್ನು ಮುದ್ರಿಸಿದ್ದಾರೆ ಎಂದಿದ್ದಾರೆ. ಅಷ್ಟೇ ಅಲ್ಲದೇ ಕನಿಮೋಳಿ ಭಾನುವಾರ ಟಿ-ಶರ್ಟ್ ಧರಿಸಿದ ಯುವಕರ ಗುಂಪಿನೊಂದಿಗೆ ತನ್ನ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಟೀ-ಶರ್ಟ್‌ ತಯಾರಿಕೆಗೆ ಹೆಸರುವಾಸಿಯಾದ ತಿರುಪ್ಪೂರಿನ ಗಾರ್ಮೆಂಟ್ ತಯಾರಕರು ಇದೇ ರೀತಿಯ ಟೀಶರ್ಟ್‌‌ಗಳನ್ನು ತಯಾರಿಸಿ ಮಾರುಕಟ್ಟೆಗೆ ಬಿಟ್ಟಿದ್ದಾರೆ.

ಬರೀ ಟೀ ಶರ್ಟ್‌‌ಗಳೇ ಅಲ್ಲದೆ ಮೊಬೈಲ್ ಪೌಚ್‌ಗಳು, ಮೀಮ್ಸ್‌ಗಳಲ್ಲೂ ಹಿಂದಿ ಥೆರಿಯಾದು, ಪೋಡಾ ಟ್ರೆಂಡಿಂಗ್‌ನಲ್ಲಿದೆ.

ತಮ್ಮ ಮೇಲೆ ಹಿಂದಿ ಹೇರಿಕೆ ಮಾಡಲು ಬಂದರೇ ಯಾವ ಯಾವ ರೀತಿಯ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂಬುದನ್ನು ತಮಿಳುನಾಡಿನ ಜನತೆ ತೋರಿಸುತ್ತಲೇ ಇದ್ದಾರೆ. ಈಗ ಇದಕ್ಕೆ ಟೀ-ಶರ್ಟ್‌ ಅಭಿಯಾನ ಸೇರಿಕೊಂಡಿದೆ. ತಮಿಳುನಾಡಿನಲ್ಲಿ ಜನರ ಜೊತೆಗೆ ಚಿತ್ರರಂಗ, ರಾಜಕೀಯ ನಾಯಕರು ಸಹ ಹಿಂದಿ ಹೇರಿಕೆ ವಿರುದ್ಧ ದನಿಯೆತ್ತಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....