Homeಮುಖಪುಟನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಟ ಶಿರೀಶ್ ಸರವಣನ್ ಜೊತೆಗೆ ಜನಪ್ರಿಯ ಸಂಗೀತ ನಿರ್ದೇಶಕ ಯುವನ್ ಶಂಕರ್ ರಾಜಾ ಅವರು ಚರ್ಚಿಸುತ್ತಿರುವ ಫೋಟೋವೊಂದು ನಿನ್ನೆ ಟ್ವಿಟರ್‌ನಲ್ಲಿ ವೈರಲ್ ಆಗಿದೆ

- Advertisement -
- Advertisement -

ಹಿಂದಿ ಹೇರಿಕೆ ವಿರುದ್ಧ ದೇಶದ ಹಲವೆಡೆ ವ್ಯಾಪಕ ಪ್ರತಿರೋಧಗಳು ವ್ಯಕ್ತವಾಗುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ತಮಿಳುನಾಡಿನ ಟೀ-ಶರ್ಟ್ ಘೋಷಣೆಗಳು ವೈರಲ್ ಆಗುತ್ತಿವೆ. ಹಿಂದಿ ಥೆರಿಯಾದು, ಪೋಡಾ! ” (ನನಗೆ ಹಿಂದಿ ಗೊತ್ತಿಲ್ಲ, ಹೋಗು!). “ನಾನು ತಮೀಝ್ ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ). “ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ”ಎಂಬ ಘೋಷಣೆಗಳು ವೈರಲ್ ಆಗಿವೆ.

ಮೆಟ್ರೋ (2016) ತಮಿಳು ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ನಟ ಶಿರೀಶ್ ಸರವಣನ್ ಜೊತೆಗೆ ಜನಪ್ರಿಯ ಸಂಗೀತ ನಿರ್ದೇಶಕ ಯುವನ್ ಶಂಕರ್ ರಾಜಾ ಅವರು ಚರ್ಚಿಸುತ್ತಿರುವ ಫೋಟೋವೊಂದು ನಿನ್ನೆ ಟ್ವಿಟರ್‌ನಲ್ಲಿ ವೈರಲ್ ಆಗಿದೆ. ಈ ಫೋಟೋವನ್ನು ಸೆ.5 ರಂದು ನಟ ಶಿರೀಶ್ ಅವರು “ಆಳವಾದ ಚರ್ಚೆಯಲ್ಲಿ, ಒಳ್ಳೆಯ ವಿಷಯಗಳು ನಮ್ಮ ಹಾದಿಗೆ ಬರುತ್ತಿವೆ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದರು.

ಇದನ್ನೂ ಓದಿ: ದ್ವಿಭಾಷಾ ನೀತಿ ಸಾಕು: ಹಿಂದಿ ಹೇರಿಕೆ ಬೇಡ – ಟ್ವಿಟ್ಟರ್ ಟ್ರೆಂಡಿಂಗ್

ಈ ಫೋಟೋ ಇಷ್ಟೊಂದು ವೈರಲ್ ಆಗಲು ಕಾರಣ ಇಬ್ಬರು ಧರಿಸಿದ್ದ ಟೀ ಶರ್ಟ್‌ಗಳು. ಹೌದು, ಯುವನ್ ಅವರ ಟೀ ಶರ್ಟ್‌ ಮೇಲೆ  ತಮಿಳು ಕವಿ ತಿರುವಳ್ಳುವರ್ ಅವರ ಆಧುನಿಕ ಸ್ಕೆಚ್‌ನೊಂದಿಗೆ, “ನಾನು ತಮೀಝ್ ಪೆಸುಮ್ ಇಂಡಿಯನ್” ಎಂದಿದ್ದರೆ, ಶಿರೀನ್ ಧರಿಸಿದ್ದ ಕೆಂಪು ಟೀಶರ್ಟ್ ಮೇಲೆ  “ಹಿಂದಿ ಥೆರಿಯಾದು, ಪೋಡಾ!”ಎಂಬ ಪದಗಳಿದ್ದವು. ಇವು ಈ ಫೋಟೋ ವೈರಲ್ ಆಗಲು ಕಾರಣವಾಯಿತು.

ಈ ಚಿತ್ರ ತಮಿಳುನಾಡಿನಲ್ಲಿ ಹೊಸ ಅಲೆಯನ್ನೇ ಹುಟ್ಟುಹಾಕಿತು. ಟ್ವಿಟ್ಟರ್‌ನಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಹಲವಾರು ಜನರು ಇದೇ ರೀತಿಯ ಟೀ ಶರ್ಟ್ ಧರಿಸಿದ ಫೋಟೋಗಳನ್ನು ಸಾಮಾಜಿಕ ಸಾಲತಾಣಗಳಲ್ಲಿ ಹಂಚಿಕೊಂಡರು.

ತೂತುಕುಡಿ ಸಂಸದೆ ಕನಿಮೋಳಿ ಹೇಳುವಂತೆ ಡಿಎಂಕೆ ಮುಖಂಡರು ಈ ಕೆಲಸವನ್ನು ಸಣ್ಣ ರೀತಿಯಲ್ಲಿ ಪ್ರಾರಂಭಿಸಿದ್ದು, ಟೀ ಶರ್ಟ್‌ಗಳನ್ನು ಮುದ್ರಿಸಿದ್ದಾರೆ ಎಂದಿದ್ದಾರೆ. ಅಷ್ಟೇ ಅಲ್ಲದೇ ಕನಿಮೋಳಿ ಭಾನುವಾರ ಟಿ-ಶರ್ಟ್ ಧರಿಸಿದ ಯುವಕರ ಗುಂಪಿನೊಂದಿಗೆ ತನ್ನ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಟೀ-ಶರ್ಟ್‌ ತಯಾರಿಕೆಗೆ ಹೆಸರುವಾಸಿಯಾದ ತಿರುಪ್ಪೂರಿನ ಗಾರ್ಮೆಂಟ್ ತಯಾರಕರು ಇದೇ ರೀತಿಯ ಟೀಶರ್ಟ್‌‌ಗಳನ್ನು ತಯಾರಿಸಿ ಮಾರುಕಟ್ಟೆಗೆ ಬಿಟ್ಟಿದ್ದಾರೆ.

ಬರೀ ಟೀ ಶರ್ಟ್‌‌ಗಳೇ ಅಲ್ಲದೆ ಮೊಬೈಲ್ ಪೌಚ್‌ಗಳು, ಮೀಮ್ಸ್‌ಗಳಲ್ಲೂ ಹಿಂದಿ ಥೆರಿಯಾದು, ಪೋಡಾ ಟ್ರೆಂಡಿಂಗ್‌ನಲ್ಲಿದೆ.

ತಮ್ಮ ಮೇಲೆ ಹಿಂದಿ ಹೇರಿಕೆ ಮಾಡಲು ಬಂದರೇ ಯಾವ ಯಾವ ರೀತಿಯ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂಬುದನ್ನು ತಮಿಳುನಾಡಿನ ಜನತೆ ತೋರಿಸುತ್ತಲೇ ಇದ್ದಾರೆ. ಈಗ ಇದಕ್ಕೆ ಟೀ-ಶರ್ಟ್‌ ಅಭಿಯಾನ ಸೇರಿಕೊಂಡಿದೆ. ತಮಿಳುನಾಡಿನಲ್ಲಿ ಜನರ ಜೊತೆಗೆ ಚಿತ್ರರಂಗ, ರಾಜಕೀಯ ನಾಯಕರು ಸಹ ಹಿಂದಿ ಹೇರಿಕೆ ವಿರುದ್ಧ ದನಿಯೆತ್ತಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...