Homeಮುಖಪುಟನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ನಟ ಶಿರೀಶ್ ಸರವಣನ್ ಜೊತೆಗೆ ಜನಪ್ರಿಯ ಸಂಗೀತ ನಿರ್ದೇಶಕ ಯುವನ್ ಶಂಕರ್ ರಾಜಾ ಅವರು ಚರ್ಚಿಸುತ್ತಿರುವ ಫೋಟೋವೊಂದು ನಿನ್ನೆ ಟ್ವಿಟರ್‌ನಲ್ಲಿ ವೈರಲ್ ಆಗಿದೆ

- Advertisement -
- Advertisement -

ಹಿಂದಿ ಹೇರಿಕೆ ವಿರುದ್ಧ ದೇಶದ ಹಲವೆಡೆ ವ್ಯಾಪಕ ಪ್ರತಿರೋಧಗಳು ವ್ಯಕ್ತವಾಗುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ತಮಿಳುನಾಡಿನ ಟೀ-ಶರ್ಟ್ ಘೋಷಣೆಗಳು ವೈರಲ್ ಆಗುತ್ತಿವೆ. ಹಿಂದಿ ಥೆರಿಯಾದು, ಪೋಡಾ! ” (ನನಗೆ ಹಿಂದಿ ಗೊತ್ತಿಲ್ಲ, ಹೋಗು!). “ನಾನು ತಮೀಝ್ ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ). “ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ”ಎಂಬ ಘೋಷಣೆಗಳು ವೈರಲ್ ಆಗಿವೆ.

ಮೆಟ್ರೋ (2016) ತಮಿಳು ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ ನಟ ಶಿರೀಶ್ ಸರವಣನ್ ಜೊತೆಗೆ ಜನಪ್ರಿಯ ಸಂಗೀತ ನಿರ್ದೇಶಕ ಯುವನ್ ಶಂಕರ್ ರಾಜಾ ಅವರು ಚರ್ಚಿಸುತ್ತಿರುವ ಫೋಟೋವೊಂದು ನಿನ್ನೆ ಟ್ವಿಟರ್‌ನಲ್ಲಿ ವೈರಲ್ ಆಗಿದೆ. ಈ ಫೋಟೋವನ್ನು ಸೆ.5 ರಂದು ನಟ ಶಿರೀಶ್ ಅವರು “ಆಳವಾದ ಚರ್ಚೆಯಲ್ಲಿ, ಒಳ್ಳೆಯ ವಿಷಯಗಳು ನಮ್ಮ ಹಾದಿಗೆ ಬರುತ್ತಿವೆ” ಎಂಬ ಶೀರ್ಷಿಕೆಯೊಂದಿಗೆ ಹಂಚಿಕೊಂಡಿದ್ದರು.

ಇದನ್ನೂ ಓದಿ: ದ್ವಿಭಾಷಾ ನೀತಿ ಸಾಕು: ಹಿಂದಿ ಹೇರಿಕೆ ಬೇಡ – ಟ್ವಿಟ್ಟರ್ ಟ್ರೆಂಡಿಂಗ್

ಈ ಫೋಟೋ ಇಷ್ಟೊಂದು ವೈರಲ್ ಆಗಲು ಕಾರಣ ಇಬ್ಬರು ಧರಿಸಿದ್ದ ಟೀ ಶರ್ಟ್‌ಗಳು. ಹೌದು, ಯುವನ್ ಅವರ ಟೀ ಶರ್ಟ್‌ ಮೇಲೆ  ತಮಿಳು ಕವಿ ತಿರುವಳ್ಳುವರ್ ಅವರ ಆಧುನಿಕ ಸ್ಕೆಚ್‌ನೊಂದಿಗೆ, “ನಾನು ತಮೀಝ್ ಪೆಸುಮ್ ಇಂಡಿಯನ್” ಎಂದಿದ್ದರೆ, ಶಿರೀನ್ ಧರಿಸಿದ್ದ ಕೆಂಪು ಟೀಶರ್ಟ್ ಮೇಲೆ  “ಹಿಂದಿ ಥೆರಿಯಾದು, ಪೋಡಾ!”ಎಂಬ ಪದಗಳಿದ್ದವು. ಇವು ಈ ಫೋಟೋ ವೈರಲ್ ಆಗಲು ಕಾರಣವಾಯಿತು.

ಈ ಚಿತ್ರ ತಮಿಳುನಾಡಿನಲ್ಲಿ ಹೊಸ ಅಲೆಯನ್ನೇ ಹುಟ್ಟುಹಾಕಿತು. ಟ್ವಿಟ್ಟರ್‌ನಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಹಲವಾರು ಜನರು ಇದೇ ರೀತಿಯ ಟೀ ಶರ್ಟ್ ಧರಿಸಿದ ಫೋಟೋಗಳನ್ನು ಸಾಮಾಜಿಕ ಸಾಲತಾಣಗಳಲ್ಲಿ ಹಂಚಿಕೊಂಡರು.

ತೂತುಕುಡಿ ಸಂಸದೆ ಕನಿಮೋಳಿ ಹೇಳುವಂತೆ ಡಿಎಂಕೆ ಮುಖಂಡರು ಈ ಕೆಲಸವನ್ನು ಸಣ್ಣ ರೀತಿಯಲ್ಲಿ ಪ್ರಾರಂಭಿಸಿದ್ದು, ಟೀ ಶರ್ಟ್‌ಗಳನ್ನು ಮುದ್ರಿಸಿದ್ದಾರೆ ಎಂದಿದ್ದಾರೆ. ಅಷ್ಟೇ ಅಲ್ಲದೇ ಕನಿಮೋಳಿ ಭಾನುವಾರ ಟಿ-ಶರ್ಟ್ ಧರಿಸಿದ ಯುವಕರ ಗುಂಪಿನೊಂದಿಗೆ ತನ್ನ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ.

ಟೀ-ಶರ್ಟ್‌ ತಯಾರಿಕೆಗೆ ಹೆಸರುವಾಸಿಯಾದ ತಿರುಪ್ಪೂರಿನ ಗಾರ್ಮೆಂಟ್ ತಯಾರಕರು ಇದೇ ರೀತಿಯ ಟೀಶರ್ಟ್‌‌ಗಳನ್ನು ತಯಾರಿಸಿ ಮಾರುಕಟ್ಟೆಗೆ ಬಿಟ್ಟಿದ್ದಾರೆ.

ಬರೀ ಟೀ ಶರ್ಟ್‌‌ಗಳೇ ಅಲ್ಲದೆ ಮೊಬೈಲ್ ಪೌಚ್‌ಗಳು, ಮೀಮ್ಸ್‌ಗಳಲ್ಲೂ ಹಿಂದಿ ಥೆರಿಯಾದು, ಪೋಡಾ ಟ್ರೆಂಡಿಂಗ್‌ನಲ್ಲಿದೆ.

ತಮ್ಮ ಮೇಲೆ ಹಿಂದಿ ಹೇರಿಕೆ ಮಾಡಲು ಬಂದರೇ ಯಾವ ಯಾವ ರೀತಿಯ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂಬುದನ್ನು ತಮಿಳುನಾಡಿನ ಜನತೆ ತೋರಿಸುತ್ತಲೇ ಇದ್ದಾರೆ. ಈಗ ಇದಕ್ಕೆ ಟೀ-ಶರ್ಟ್‌ ಅಭಿಯಾನ ಸೇರಿಕೊಂಡಿದೆ. ತಮಿಳುನಾಡಿನಲ್ಲಿ ಜನರ ಜೊತೆಗೆ ಚಿತ್ರರಂಗ, ರಾಜಕೀಯ ನಾಯಕರು ಸಹ ಹಿಂದಿ ಹೇರಿಕೆ ವಿರುದ್ಧ ದನಿಯೆತ್ತಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...