Homeಮುಖಪುಟಇಂಗ್ಲಿಷ್ ಪಠ್ಯಪುಸ್ತಕಗಳಿಗೆ ಹಿಂದಿ ಶೀರ್ಷಿಕೆಗಳು: ‘ಸಾಂಸ್ಕೃತಿಕ ಹೇರಿಕೆ’ ವಿರೋಧಿಸಿದ ದಕ್ಷಿಣ ರಾಜ್ಯಗಳು

ಇಂಗ್ಲಿಷ್ ಪಠ್ಯಪುಸ್ತಕಗಳಿಗೆ ಹಿಂದಿ ಶೀರ್ಷಿಕೆಗಳು: ‘ಸಾಂಸ್ಕೃತಿಕ ಹೇರಿಕೆ’ ವಿರೋಧಿಸಿದ ದಕ್ಷಿಣ ರಾಜ್ಯಗಳು

- Advertisement -
- Advertisement -

ನವದೆಹಲಿ: ಇತ್ತೀಚೆಗೆ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಇಂಗ್ಲಿಷ್ ಪಠ್ಯಪುಸ್ತಕಗಳಿಗೆ ಹಿಂದಿ ಶೀರ್ಷಿಕೆಗಳನ್ನು ನೀಡಿರುವ ಕ್ರಮವು ಹೊಸ ವಿವಾದವನ್ನು ಹುಟ್ಟುಹಾಕಿದೆ. ದಕ್ಷಿಣ ರಾಜ್ಯಗಳ ನಾಯಕರು ಕೇಂದ್ರವನ್ನು ಭಾಷಾ ಹೇರಿಕೆಗೆ ಖಂಡಿಸಿದ್ದಾರೆ.

ಈ ಕ್ರಮವು 6ನೇ ತರಗತಿಯ ಇಂಗ್ಲಿಷ್ ಪಠ್ಯಪುಸ್ತಕಕ್ಕೆ ಪೂರ್ವಿ ಎಂದು ಮರುನಾಮಕರಣ ಮಾಡಿರುವುದನ್ನು ನೋಡಬಹುದಾಗಿದೆ. ಹಾಗೆಯೇ 1 ಮತ್ತು 2ನೇ ತರಗತಿಯ ಇಂಗ್ಲಿಷ್ ಪುಸ್ತಕಗಳನ್ನು ‘ಮೃದಂಗ್’ ಮತ್ತು 3ನೇ ತರಗತಿಯ ಪುಸ್ತಕಗಳನ್ನು ‘ಸಂತೂರ್’ ಎಂದು ಮರುನಾಮಕರಣ ಮಾಡಲಾಗಿದೆ. ಇವು ಭಾರತೀಯ ಶಾಸ್ತ್ರೀಯ ಸಂಗೀತ ಮತ್ತು ವಾದ್ಯಗಳೊಂದಿಗೆ ಸಂಬಂಧಿಸಿದ ಹೆಸರುಗಳಾಗಿವೆ. ಅದೇ ರೀತಿ 6ನೇ ತರಗತಿಯ ಗಣಿತ ಪುಸ್ತಕವನ್ನು ಈಗ ‘ಗಣಿತ ಪ್ರಕಾಶ್’ ಎಂದು ಮತ್ತು 3ನೇ ತರಗತಿಯನ್ನು ಗಣಿತ ಮೇಳ ಎಂದು ಕರೆಯಲಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ (NEP) ಅಡಿಯಲ್ಲಿ ಪಠ್ಯಪುಸ್ತಕಗಳನ್ನು ಬಿಡುಗಡೆ ಮಾಡುವ ಭಾಗವಾಗಿ ತೆಗೆದುಕೊಳ್ಳಲಾದ ಈ ನಿರ್ಧಾರವನ್ನು ಕೇರಳ ಮತ್ತು ತಮಿಳುನಾಡಿನಲ್ಲಿ ತೀವ್ರವಾಗಿ ಟೀಕಿಸಲಾಗುತ್ತಿದೆ. ರಾಜಕಾರಣಿಗಳು ಇಂತಹ ಕ್ರಮಗಳು ದೇಶದ ಭಾಷಾ ವೈವಿಧ್ಯತೆ ಮತ್ತು ಒಕ್ಕೂಟ ರಚನೆಗೆ ಬೆದರಿಕೆ ಹಾಕುತ್ತವೆ ಎಂದು ಎಚ್ಚರಿಸಿದ್ದಾರೆ.

ಕೇರಳ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಈ ಬದಲಾವಣೆಯನ್ನು ಖಂಡಿಸಿ, ತಕ್ಷಣದ ಪರಿಶೀಲನೆಗೆ ಒತ್ತಾಯಿಸಿದ್ದಾರೆ. “ಇದು ಭಾರತದ ಒಕ್ಕೂಟ ವ್ಯವಸ್ಥೆ ಮತ್ತು ನಮ್ಮ ಸಾಂವಿಧಾನಿಕ ಮೌಲ್ಯಗಳಿಗೆ ವಿರುದ್ಧವಾಗಿದೆ. ಶಿಕ್ಷಣವು ಸಬಲೀಕರಣ ಮತ್ತು ಪರಸ್ಪರರ ಒಪ್ಪಿಗೆಯ ಸಾಧನವಾಗಿರಬೇಕು, ಹೇರಿಕೆಯಲ್ಲ” ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಇಂಗ್ಲಿಷ್ ಶೀರ್ಷಿಕೆಗಳನ್ನು ದಶಕಗಳಿಂದ ಭಾಷಾ ಸಾಮರಸ್ಯವನ್ನು ಉತ್ತೇಜಿಸಲು ಬಳಸಲಾಗುತ್ತಿದೆ. ಅವುಗಳನ್ನು ಹಿಂದಿ ಪದಗಳೊಂದಿಗೆ ಬದಲಾಯಿಸುವುದು ಸಂಪೂರ್ಣವಾಗಿ ತಪ್ಪು ಮತ್ತು ಭಾರತದ ಬಹುಭಾಷಾ ಪಾತ್ರದ ಮೂಲಕ್ಕೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಇದೇ ರೀತಿಯ ಕಳವಳಗಳನ್ನು ಪ್ರತಿಧ್ವನಿಸುತ್ತಾ, ಹಿಂದಿ ಹೇರಿಕೆಯನ್ನು ನಿರಂತರವಾಗಿ ವಿರೋಧಿಸುತ್ತಿರುವ ತಮಿಳುನಾಡಿನ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷವು ಈ ಕ್ರಮವನ್ನು ಟೀಕಿಸಿದೆ. ರಾಜ್ಯಸಭಾ ಸಂಸದ ಪಿ.ವಿಲ್ಸನ್ ಅವರು, “ಕೇಂದ್ರವು ಮಾತನಾಡುತ್ತಿರುವ ತ್ರಿಭಾಷಾ ನೀತಿ ಇದೇನಾ? ಇಂಗ್ಲಿಷ್ ಪುಸ್ತಕಗಳಿಗೂ ಈಗ ಹಿಂದಿ ಹೆಸರುಗಳನ್ನು ನೀಡಲಾಗುತ್ತಿದೆ. ಪ್ರಾದೇಶಿಕ ಭಾಷೆಗಳಿಗೆ ಜಾಗ ಎಲ್ಲಿದೆ?” ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಬಹಳ ಹಿಂದಿನಿಂದಲೂ ಎನ್‌ಇಪಿಯ ಭಾಷಾ ನೀತಿಯು ಶಿಕ್ಷಣದಲ್ಲಿ ಹಿಂದಿ ಪ್ರಾಬಲ್ಯವನ್ನು ಉತ್ತೇಜಿಸುವ ಪರೋಕ್ಷ ಪ್ರಯತ್ನವಾಗಿದೆ ಎಂದು ತಮ್ಮ ಈ ಹಿಂದಿನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ವಿಶೇಷವಾಗಿ ತಮಿಳುನಾಡಿನಂತಹ ಹಿಂದಿಯೇತರ ಮಾತನಾಡುವ ರಾಜ್ಯದಲ್ಲಿ ತನ್ನದೇ ಆದ ಶಿಕ್ಷಣ ನೀತಿಯನ್ನು ರೂಪಿಸಲು ಈಗಾಗಲೇ ತಜ್ಞರ ಸಮಿತಿಯನ್ನು ಸ್ಥಾಪಿಸಿದೆ ಮತ್ತು ಎನ್‌ಇಪಿಯನ್ನು ಜಾರಿಗೆ ತರಲು ನಿರಾಕರಿಸಿದೆ.

ಮರುನಾಮಕರಣವು ಕೇವಲ ಇಂಗ್ಲಿಷ್ ಪುಸ್ತಕಗಳಿಗೆ ಸೀಮಿತವಾಗಿಲ್ಲ. 1ರಿಂದ 6ನೇ ತರಗತಿಯವರೆಗಿನ ಹೊಸ NCERT ಪುಸ್ತಕಗಳನ್ನು NEP ಚೌಕಟ್ಟಿನಡಿಯಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಹಿಂದಿನ ಆವೃತ್ತಿಗಳು ವಿಭಿನ್ನ ಭಾಷೆಗಳಲ್ಲಿ ಅಂದರೆ Mathematics in English, ಹಿಂದಿಯಲ್ಲಿ ಗಣಿತ  and Riyazi in Urdu  ಮುಂತಾದವು ವಿಭಿನ್ನ ಶೀರ್ಷಿಕೆಗಳನ್ನು ಆಯಾ ಭಾಷೆಯಲ್ಲೇ ಹೊಂದಿದ್ದವು. ಹೊಸ ಆವೃತ್ತಿಗಳು ‘ಗಣಿತ್ ಪ್ರಕಾಶ್‌’ ಎಂದು ಎಲ್ಲಾ ಭಾಷೆಗಳಿಗೂ ಈ ಹಿಂದಿ ಶೀರ್ಷಿಕೆಯನ್ನು ಹೊಂದಿವೆ.

ಸಾಂಸ್ಕೃತಿಕ ಮತ್ತು ಭಾಷಾ ಸ್ವಾಯತ್ತತೆಯನ್ನು ಗೌರವಿಸುವ ಕೇರಳದಂತಹ ರಾಜ್ಯಗಳು ಈ ಬದಲಾವಣೆಯನ್ನು ಸಾಂಸ್ಕೃತಿಕ ಕೇಂದ್ರೀಕರಣದ ದೊಡ್ಡ ಪ್ರವೃತ್ತಿಯ ಸಂಕೇತವೆಂದು ನೋಡುತ್ತಿವೆ. “ಇದು ಸಾಂಸ್ಕೃತಿಕ ಹೇರಿಕೆ. ಇಂಗ್ಲಿಷ್ ಪುಸ್ತಕಗಳನ್ನು ಹಿಂದಿಯಲ್ಲಿ ಮರುನಾಮಕರಣ ಮಾಡಿರುವುದಕ್ಕೆ ಯಾವ ಸಮರ್ಥನೆಯನ್ನು ನೀಡಬಹುದು?” ಎಂದು ಶಿವನ್‌ಕುಟ್ಟಿ ಪ್ರಶ್ನಿಸಿದ್ದಾರೆ. ಇತರ ದಕ್ಷಿಣ ರಾಜ್ಯಗಳು ಕೇಂದ್ರದ ಇಂತಹ ಕ್ರಮಗಳನ್ನು “ಸಾಮೂಹಿಕವಾಗಿ ವಿರೋಧಿಸಲು” ಕರೆ ನೀಡಿದೆ.

ಹೆಚ್ಚುತ್ತಿರುವ ಟೀಕೆಗಳ ಹೊರತಾಗಿಯೂ ಕೇಂದ್ರ ಸರ್ಕಾರ ಈ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು, ತ್ರಿಭಾಷಾ ನೀತಿಯು ಸಾಂವಿಧಾನಿಕ ಆದೇಶ ಮತ್ತು NEP 2020ರ ಕೇಂದ್ರದ ಅಂಶವಾಗಿದೆ ಎಂದು ಹೇಳಿದ್ದಾರೆ.

ಆದಾಗ್ಯೂ ಇಂಗ್ಲಿಷ್ ಪಠ್ಯಪುಸ್ತಕಗಳನ್ನು ಹಿಂದಿಯಲ್ಲಿ ಹೆಸರಿಸುವುದು ಸರಿಯಾದುದಲ್ಲ  ಎಂದು ವಿಮರ್ಶಕರು ವಾದಿಸುತ್ತಾರೆ. “ಇಂಗ್ಲಿಷ್ ಪುಸ್ತಕಗಳು ಹಿಂದಿ ಶೀರ್ಷಿಕೆಗಳನ್ನು ಹೊಂದಿರಬೇಕು ಎಂದು ಸಂವಿಧಾನದಲ್ಲಿ ಎಲ್ಲಿಯೂ ಹೇಳಿಲ್ಲ” ಎಂದು ಅನಾಮಧೇಯರಾಗಿ ಉಳಿಯಲು ಬಯಸುವ ಹಿರಿಯ ಶಿಕ್ಷಣತಜ್ಞರು ಹೇಳುತ್ತಾರೆ.

ಈ ನಿರ್ಧಾರವು ಕೇಂದ್ರದ ಶಿಕ್ಷಣ ಸುಧಾರಣೆಯ ವಿಧಾನ ಮತ್ತು ಪ್ರಾದೇಶಿಕ ಭಾಷೆಗಳ ಸ್ಥಿತಿಗತಿಯ ಬಗ್ಗೆ ವಿಶಾಲವಾದ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಇಂತಹ ನಿರ್ಧಾರಗಳು ಉತ್ತರ-ದಕ್ಷಿಣ ವಿಭಜನೆಯನ್ನು ಇನ್ನಷ್ಟು ಹೆಚ್ಚಿಸಬಹುದು ಮತ್ತು ಒಕ್ಕೂಟ ವ್ಯವಸ್ಥೆಯನ್ನು ಹಾನಿಗೊಳಿಸಬಹುದು ಎಂದು ವಿಶ್ಲೇಷಕರು ಎಚ್ಚರಿಸಿದ್ದಾರೆ.

ಭಾಷಾ ರಾಜಕೀಯವು ಭಾರತದಲ್ಲಿ ವಿಶೇಷವಾಗಿ ಹಿಂದಿ ಮಾತನಾಡುವ ಹೃದಯಭಾಗ ಮತ್ತು ದಕ್ಷಿಣ ರಾಜ್ಯಗಳ ನಡುವೆ ಬಹಳ ಹಿಂದಿನಿಂದಲೂ ವಿವಾದಾತ್ಮಕ ವಿಷಯವಾಗಿದೆ. 1960ರ ದಶಕದ ಹಿಂದಿ ವಿರೋಧಿ ಆಂದೋಲನದಿಂದಲೂ ತಮಿಳುನಾಡಿಗೆ ಹಿಂದಿ ಹೇರಿಕೆಯನ್ನು ವಿರೋಧಿಸುವ ಇತಿಹಾಸವಿದೆ. ಹೀಗಾಗಿ ಪ್ರಸ್ತುತ ನಡೆಯನ್ನು ವಿಶಾಲವಾದ ಐತಿಹಾಸಿಕ ಸಂದರ್ಭದಲ್ಲಿ ನೋಡಲಾಗುತ್ತಿದೆ.

ಇಲ್ಲಿ ಆಳವಾಗಿ ಬೇರೂರಿರುವ ಅನುಮಾನಗಳಿವೆ. ಭಾಷಾ ಗುರುತನ್ನು ಹಾಳುಮಾಡುವ ಯಾವುದೇ ಪ್ರಯತ್ನವು ಪ್ರತಿರೋಧವನ್ನು ಎದುರಿಸಬೇಕಾಗುತ್ತದೆ ಎಂಬುದನ್ನು ಕೇಂದ್ರವು ನೆನಪಿನಲ್ಲಿಡಬೇಕು ಎಂದು ರಾಜಕೀಯ ವಿಶ್ಲೇಷಕ ಆರ್.ಬಾಲಸುಬ್ರಮಣಿಯಂ ಹೇಳುತ್ತಾರೆ.

ಪ್ರಾದೇಶಿಕ ಭಾಷೆಗಳ ಮೇಲೆ ಹಿಂದಿಯನ್ನು ಪ್ರಚಾರ ಮಾಡುವುದು. ಪಠ್ಯಪುಸ್ತಕ ಶೀರ್ಷಿಕೆಗಳ ಮೂಲಕವೂ ಸಹ  ಹಿಂದಿ ಹೇರುವುದು ನಮ್ಮನ್ನು ಹೊರಗಿಡುವಿಕೆಯ ಸಂದೇಶ ಎಂದು ದಕ್ಷಿಣ ರಾಜ್ಯಗಳು ವಾದಿಸುತ್ತಿವೆ. ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಉತ್ತೇಜಿಸುವುದು ಮುಖ್ಯವಾದರೂ, ಪ್ರಾದೇಶಿಕ ಭಾಷೆಗಳು ಮತ್ತು ಜಾಗತಿಕ ಭಾಷೆಯಾಗಿ ಉಳಿದಿರುವ ಇಂಗ್ಲಿಷ್ ಅನ್ನು ಬದಿಗಿಡುವ ನೆಪದಲ್ಲಿ ಅದು ಬರಬಾರದು ಎಂದು ವಿಮರ್ಶಕರು ವಾದಿಸುತ್ತಾರೆ.

ರಾಜಕೀಯ ವಿವಾದದ ನಡುವೆ, ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಗೊಂದಲವನ್ನು ಎದುರಿಸಬೇಕಾಗಿದೆ. “ನಮ್ಮ ವಿದ್ಯಾರ್ಥಿಗಳು ಈಗಾಗಲೇ ಹೊಸ ಪಠ್ಯಕ್ರಮ ಮತ್ತು ಸ್ವರೂಪದೊಂದಿಗೆ ಹೋರಾಡುತ್ತಿದ್ದಾರೆ. ಹೆಸರುಗಳಲ್ಲಿನ ಈ ಬದಲಾವಣೆಗಳು ಅವ್ಯವಸ್ಥೆಯನ್ನು ಇನ್ನಷ್ಟು ಹೆಚ್ಚಿಸುತ್ತವೆ” ಎಂದು ಬೆಂಗಳೂರಿನ ಶಾಲಾ ಶಿಕ್ಷಕರೊಬ್ಬರು ಅವಲತ್ತುಕೊಂಡಿದ್ದಾರೆ.

ಶಿಕ್ಷಣದ ಮೂಲಕ ಭಾರತೀಯ ಮೌಲ್ಯಗಳನ್ನು ಉತ್ತೇಜಿಸುವುದು ಮುಖ್ಯವಾದರೂ, ಬೋಧನಾ ಮಾಧ್ಯಮ ಮತ್ತು ಭಾಷೆ ದೇಶದ ವೈವಿಧ್ಯಮಯ ಭಾಷಾ ವಾಸ್ತವತೆಯನ್ನು ಪ್ರತಿಬಿಂಬಿಸಬೇಕು ಎಂದು ಅನೇಕ ಶಿಕ್ಷಕರು ಭಾವಿಸುತ್ತಾರೆ. “ಇಂಗ್ಲಿಷ್ ಪುಸ್ತಕಗಳನ್ನು ಹಿಂದಿಯಲ್ಲಿ ಹೆಸರಿಸುವುದರಿಂದ ಹಿಂದಿಯೇತರ ಭಾಷಿಕರನ್ನು ದೂರವಿಡಬಹುದು ಮತ್ತು ಕಲಿಕೆಯನ್ನು ಸಂಕೀರ್ಣಗೊಳಿಸಬಹುದು” ಎಂದು ಚೆನ್ನೈ ಮೂಲದ ಪ್ರಾಂಶುಪಾಲರು ಹೇಳಿದರು.

ಉತ್ತರ ಪ್ರದೇಶ| ವಾಕ್-ಶ್ರವಣದೋಷವುಳ್ಳ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಚಿತ್ರಹಿಂಸೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...