Homeಮುಖಪುಟತಮಿಳುನಾಡಿನಲ್ಲಿ ಎಂದೆಂದಿಗೂ ಹಿಂದಿಗೆ ಸ್ಥಾನವಿಲ್ಲ: ಮುಖ್ಯಮಂತ್ರಿ ಸ್ಟಾಲಿನ್

ತಮಿಳುನಾಡಿನಲ್ಲಿ ಎಂದೆಂದಿಗೂ ಹಿಂದಿಗೆ ಸ್ಥಾನವಿಲ್ಲ: ಮುಖ್ಯಮಂತ್ರಿ ಸ್ಟಾಲಿನ್

- Advertisement -
- Advertisement -

ಹಿಂದಿ ವಿರೋಧಿ ಆಂದೋಲನದ ಸಮಯದಲ್ಲಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ರಾಜ್ಯದ ಹುತಾತ್ಮರನ್ನು ಡಿಎಂಕೆ ಅಧ್ಯಕ್ಷ ಮತ್ತು ತನಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಇಂದು ಶ್ಲಾಘಿಸಿದರು. ನಮ್ಮಲ್ಲಿ ಹಿಂದಿ ಭಾಷೆಗೆ ಶಾಶ್ವತವಾಗಿ ಜಾಗವಿಲ್ಲ ಎಂದು ಪ್ರತಿಪಾದಿಸಿದರು.

ಭಾಷಾ ಹುತಾತ್ಮರ ದಿನದ ಸಂದರ್ಭದಲ್ಲಿ ಗೌರವ ಸಲ್ಲಿಸಿದ ಅವರು, “ಮಾತೃಭಾಷೆಯನ್ನು ತನ್ನ ಜೀವದಂತೆ ಪ್ರೀತಿಸುವ, ಹಿಂದಿ ಹೇರಿಕೆಯ ವಿರುದ್ಧ ಒಗ್ಗಟ್ಟಿನಿಂದ ಹೋರಾಡುವ ರಾಜ್ಯ; ಅದನ್ನು ಹೇರಿದಾಗಲೆಲ್ಲಾ ಅದೇ ತೀವ್ರತೆಯಿಂದ ಪ್ರತಿಭಟಿಸಿತು” ಎಂದು ಹೇಳಿದರು.

“ಭಾಷಾ ಹುತಾತ್ಮರ ದಿನ; ಅಂದು, ಇಂದು ಮತ್ತು ಎಂದೆಂದಿಗೂ (ತಮಿಳಿನಲ್ಲಿ) ಹಿಂದಿಗೆ ಸ್ಥಾನವಿಲ್ಲ” ಎಂದು ದ್ರಾವಿಡ ಪಕ್ಷದ ಮುಖ್ಯಸ್ಥರು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

1965 ರಲ್ಲಿ ಉತ್ತುಂಗಕ್ಕೇರಿದ್ದ ಹಿಂದಿ ವಿರೋಧಿ ಆಂದೋಲನಕ್ಕೆ ಸಂಬಂಧಿಸಿದ ಇತಿಹಾಸದ ಸಂಕ್ಷಿಪ್ತ ವೀಡಿಯೊವನ್ನು ಅವರು ಹಂಚಿಕೊಂಡರು. ಇದರಲ್ಲಿ ಭಾಷಾ ವಿಷಯದಲ್ಲಿ ದಿವಂಗತ ಡಿಎಂಕೆ ನಾಯಕರಾದ ಸಿ ಎನ್ ಅಣ್ಣಾದೊರೈ ಮತ್ತು ಎಂ ಕರುಣಾನಿಧಿ ಅವರ ಕೊಡುಗೆಗಳ ಜೊತೆಗೆ ‘ಹುತಾತ್ಮರ’ ಕುರಿತ ಉಲ್ಲೇಖಗಳು ಸೇರಿವೆ.

ಹಿಂದಿ ವಿರೋಧಿ ಆಂದೋಲನವನ್ನು ಮುನ್ನಡೆಸುವ ಮೂಲಕ ತಮಿಳುನಾಡು, “ಉಪಖಂಡದ ವಿವಿಧ ಭಾಷಾ ರಾಷ್ಟ್ರೀಯ ಜನಾಂಗಗಳ ಹಕ್ಕು ಮತ್ತು ಗುರುತನ್ನು ರಕ್ಷಿಸಿದೆ” ಎಂದು ಸ್ಟಾಲಿನ್ ಹೇಳಿದರು.

“ತಮಿಳಿಗಾಗಿ ತಮ್ಮ ಅಮೂಲ್ಯ ಜೀವಗಳನ್ನು ಅರ್ಪಿಸಿದ ಹುತಾತ್ಮರಿಗೆ ನಾನು ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಭಾಷಾ ಯುದ್ಧದಲ್ಲಿ ಇನ್ನು ಮುಂದೆ ಯಾವುದೇ ಜೀವ ಕಳೆದುಹೋಗುವುದಿಲ್ಲ; ತಮಿಳು ಮೇಲಿನ ನಮ್ಮ ಪ್ರೀತಿ ಎಂದಿಗೂ ಸಾಯುವುದಿಲ್ಲ! ಹಿಂದಿ ಹೇರಿಕೆಯನ್ನು ನಾವು ಶಾಶ್ವತವಾಗಿ ವಿರೋಧಿಸುತ್ತೇವೆ. #LanguageMartyrsDay #StopHindiImposition” ಎಂದು ಸಿಎಂ ಹೇಳಿದರು.

1964-65ರಲ್ಲಿ ತಮಿಳುನಾಡಿನಾದ್ಯಂತ ನಡೆದ ಹಿಂದಿ ವಿರೋಧಿ ಆಂದೋಲನದ ಸಂದರ್ಭದಲ್ಲಿ, ಮುಖ್ಯವಾಗಿ ಸ್ವಯಂ ದಹನದ ಮೂಲಕ ತಮ್ಮ ಪ್ರಾಣವನ್ನು ತ್ಯಾಗ ಮಾಡಿದವರನ್ನು ಭಾಷಾ ಹುತಾತ್ಮರು ಉಲ್ಲೇಖಿಸುತ್ತಾರೆ. ಇಂದಿನವರೆಗೂ, ತನಿಳುನಾಡು ರಾಜ್ಯವು ತಮಿಳು ಮತ್ತು ಇಂಗ್ಲಿಷ್ ದ್ವಿಭಾಷಾ ಸೂತ್ರವನ್ನು ಅನುಸರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...