Homeಮುಖಪುಟಮುಸ್ಲಿಮರ ಮೇಲೆ ದೋಷಾರೋಪಣೆಗೆ ಯತ್ನ: ಗಣೇಶ ಚತುರ್ಥಿ ವೇಳೆ ಹುಸಿ ಬೆದರಿಕೆ ಹಾಕಿದ ಹಿಂದೂ ವ್ಯಾಪಾರಿ...

ಮುಸ್ಲಿಮರ ಮೇಲೆ ದೋಷಾರೋಪಣೆಗೆ ಯತ್ನ: ಗಣೇಶ ಚತುರ್ಥಿ ವೇಳೆ ಹುಸಿ ಬೆದರಿಕೆ ಹಾಕಿದ ಹಿಂದೂ ವ್ಯಾಪಾರಿ ಸೆರೆ

- Advertisement -
- Advertisement -

ಗಣೇಶ ಚತುರ್ಥಿಯ ಮುನ್ನಾ ದಿನ ಮುಂಬೈ ಪೊಲೀಸರು ಭಯೋತ್ಪಾದನೆಯ ಕುರಿತು ಹುಸಿ ಸಂದೇಶವನ್ನು ಕಳುಹಿಸಿದ ಹಿಂದೂ ವ್ಯಾಪಾರಿಯನ್ನು ಬಿಹಾರದಲ್ಲಿ ಬಂಧಿಸಿದ್ದಾರೆ. ಈ ಸಂದೇಶವು ಮುಸ್ಲಿಮರ ಮೇಲೆ ಸುಳ್ಳು ಆರೋಪ ಹೊರಿಸುವ ಉದ್ದೇಶದಿಂದ ಕಳುಹಿಸಿದ್ದು ಎಂದು ಅಧಿಕಾರಿಗಳು ಮತ್ತು ಸಮುದಾಯದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಆರೋಪಿ ಅಶ್ವಿನಿಕುಮಾರ್ ಸುಪ್ರಾ, ಮುಂಬೈ ಟ್ರಾಫಿಕ್ ಪೊಲೀಸ್ ಸಹಾಯವಾಣಿಗೆ ವಾಟ್ಸಾಪ್ ಮೂಲಕ ಬೆದರಿಕೆಯ ಸಂದೇಶ ಕಳುಹಿಸಿದ್ದ. ಈ ಸಂದೇಶದಲ್ಲಿ “14 ಪಾಕಿಸ್ತಾನಿ ಭಯೋತ್ಪಾದಕರು 34 ವಾಹನಗಳಲ್ಲಿ 400 ಕಿಲೋಗ್ರಾಂ ಆರ್‌ಡಿಎಕ್ಸ್‌ನೊಂದಿಗೆ ಮುಂಬೈ ಪ್ರವೇಶಿಸಿದ್ದು, ಒಂದು ಕೋಟಿ ಜನರನ್ನು ಕೊಲ್ಲಲು ಉದ್ದೇಶಿಸಿದ್ದಾರೆ” ಎಂದು ಸುಳ್ಳು ಮಾಹಿತಿ ನೀಡಿದ್ದ.

ಈ ಸಂದೇಶವನ್ನು ‘ಲಷ್ಕರ್-ಎ-ಜಿಹಾದಿ’ ಎಂಬ ಕಾಲ್ಪನಿಕ ಗುಂಪಿನ ಹೆಸರಿನಲ್ಲಿ ಕಳುಹಿಸಲಾಗಿದ್ದು, ಇದರಿಂದ ಮುಸ್ಲಿಮರನ್ನು ಉದ್ದೇಶಪೂರ್ವಕವಾಗಿ ಸಿಲುಕಿಸುವ ಪ್ರಯತ್ನ ಇದಾಗಿದೆ ಎಂದು ತಕ್ಷಣವೇ ಅನುಮಾನ ಮೂಡಿತು. ಈ ಬೆದರಿಕೆಯಿಂದ ಪೊಲೀಸರು ಮುಂಬೈ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಉನ್ನತ ಮಟ್ಟದ ಎಚ್ಚರಿಕೆ ಘೋಷಿಸಿದರು. ನಂತರ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜಂಟಿ ಪೊಲೀಸ್ ಆಯುಕ್ತ ರಾಜೀವ್ ನಾರಾಯಣ್ ಮಿಶ್ರಾ ಅವರು ನೋಯ್ಡಾ ಪೊಲೀಸ್ ಆಯುಕ್ತ ಲಕ್ಷ್ಮಿ ಸಿಂಗ್ ಅವರ ನೆರವಿನಿಂದ ಆರೋಪಿಯನ್ನು ಬಂಧಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ತನಿಖಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿ ಮತ್ತು ತಾಂತ್ರಿಕ ಕಣ್ಗಾವಲು ಮೂಲಕ ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಆತನಿಗೆ ಸಿಮ್ ಕಾರ್ಡ್ ಪಡೆಯಲು ಸಹಾಯ ಮಾಡಿದ ಮತ್ತೊಬ್ಬ ವ್ಯಕ್ತಿಯನ್ನು ಕೂಡ ವಶಕ್ಕೆ ಪಡೆಯಲಾಗಿದೆ.

ಸಂದೇಶ ಕಳುಹಿಸಿದ ನಂತರ ಸುಪ್ರಾ ತನ್ನ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿದ್ದರೂ, ಅಂತಿಮವಾಗಿ ಪತ್ತೆಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಈಗ ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.

ಮುಂಬೈನ ಮುಸ್ಲಿಂ ಮುಖಂಡರು ಈ ಸುದ್ದಿಗೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಇಂತಹ ಕಪೋಲಕಲ್ಪಿತ ಬೆದರಿಕೆಗಳು ಕೋಮು ದ್ವೇಷ ಹರಡಲು ಬಳಸಲಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಇದು ಕೇವಲ ಹುಸಿ ಬೆದರಿಕೆಯಲ್ಲ, ಇದು ಮುಸ್ಲಿಮರನ್ನು ಭಯೋತ್ಪಾದಕರೆಂದು ಚಿತ್ರಿಸುವ ಒಂದು ಲೆಕ್ಕಾಚಾರದ ಪ್ರಯತ್ನ” ಎಂದು ಮುಂಬೈನ ಹಿರಿಯ ಧಾರ್ಮಿಕ ಮುಖಂಡ ಮೌಲಾನ ಸಯೀದ್ ಖಾಸ್ಮಿ ಹೇಳಿದ್ದಾರೆ.

“ಪ್ರತಿ ಹಬ್ಬ ಅಥವಾ ದೊಡ್ಡ ಸಮಾರಂಭದ ಸಮಯದಲ್ಲಿ, ಕೆಲವರು ಮುಸ್ಲಿಮರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಾರೆ. ಇಂತಹ ಪ್ರಚಾರಗಳಿಂದ ಯಾವುದೇ ಮುಗ್ಧ ಮುಸ್ಲಿಮರಿಗೆ ಕಿರುಕುಳ ಆಗದಂತೆ ಪೊಲೀಸರು ನೋಡಿಕೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಗಣೇಶ ಚತುರ್ಥಿಯ ಸಂದರ್ಭದಲ್ಲಿ ಈ ಹುಸಿ ಬೆದರಿಕೆ ಸಂಶಯಾಸ್ಪದ ಮತ್ತು ಅಪಾಯಕಾರಿ ಎಂದು ಸಮುದಾಯದ ಕಾರ್ಯಕರ್ತರು ಹೇಳಿದ್ದಾರೆ.

“ಹಬ್ಬಗಳ ಸಂದರ್ಭದಲ್ಲಿ ಭಾವನೆಗಳು ತೀವ್ರವಾಗಿರುತ್ತವೆ ಎಂಬುದು ಎಲ್ಲರಿಗೂ ಗೊತ್ತು. ಈ ಸಮಯದಲ್ಲಿ ಮುಸ್ಲಿಮರನ್ನು ಭಯೋತ್ಪಾದನೆಗೆ ಲಿಂಕ್ ಮಾಡುವ ಮೂಲಕ ಆರೋಪಿ ಗಲಭೆ ಮತ್ತು ದ್ವೇಷವನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾನೆ ಎಂಬುದು ಸ್ಪಷ್ಟ” ಎಂದು ಮಾನವ ಹಕ್ಕುಗಳ ವಕೀಲರಾದ ಅರ್ಷದ್ ಶೇಖ್ ಹೇಳಿದ್ದಾರೆ.

ಗಣೇಶ ಚತುರ್ಥಿ ಆಚರಣೆಗಳಿಗಾಗಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಮತ್ತು ನಾಗರಿಕರು ಭಯಪಡಬಾರದು ಎಂದು ಮುಂಬೈ ಪೊಲೀಸರು ಭರವಸೆ ನೀಡಿದ್ದಾರೆ.

“ನಗರದಾದ್ಯಂತ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ಜನರು ಭಯವಿಲ್ಲದೆ ಹಬ್ಬ ಆಚರಿಸಬೇಕು. ಈ ಸುಳ್ಳು ಬೆದರಿಕೆ ಹರಡಿದ ಆರೋಪಿ ನಮ್ಮ ವಶದಲ್ಲಿದ್ದಾರೆ” ಎಂದು ಒಬ್ಬ ಪೊಲೀಸ್ ಅಧಿಕಾರಿ ಹೆಸರು ಹೇಳಲು ಇಚ್ಚಿಸದೆ ತಿಳಿಸಿದ್ದಾರೆ.

ಆದರೆ, ಕೇವಲ ಒಬ್ಬ ವ್ಯಕ್ತಿಯನ್ನು ಬಂಧಿಸುವುದಲ್ಲದೆ, ಇಂತಹ ಸುಳ್ಳು ಪ್ರಚಾರವನ್ನು ಉತ್ತೇಜಿಸುತ್ತಿರುವ ದೊಡ್ಡ ಜಾಲಗಳ ಬಗ್ಗೆ ತನಿಖೆ ಮಾಡಬೇಕು ಎಂದು ಮುಸ್ಲಿಂ ಗುಂಪುಗಳು ಹೇಳಿವೆ.

“ಒಬ್ಬ ವ್ಯಕ್ತಿಯನ್ನು ಬಂಧಿಸಿದರೆ ಸಾಲದು. ಈ ರೀತಿಯ ಕೃತ್ಯಗಳ ಹಿಂದೆ ರಾಜಕೀಯ ಅಥವಾ ಕೋಮು ಗುಂಪುಗಳ ಬೆಂಬಲ ಇದೆಯೇ ಎಂದು ನಮಗೆ ತಿಳಿಯಬೇಕು” ಎಂದು ಸಾಮಾಜಿಕ ಕಾರ್ಯಕರ್ತ ಪ್ರೊಫೆಸರ್ ನದೀಮ್ ಅನ್ಸಾರಿ ಹೇಳಿದ್ದಾರೆ.

“ಭಾರತೀಯ ಮುಸ್ಲಿಮರು ಯಾವಾಗಲೂ ಶಾಂತಿಯುತವಾಗಿ ಬದುಕಿದ್ದಾರೆ, ಮತ್ತು ಇಂತಹ ಸುಳ್ಳು ಭಯೋತ್ಪಾದನಾ ಬೆದರಿಕೆಗಳಿಂದ ನಮ್ಮನ್ನು ದೂಷಿಸುವುದು ತಪ್ಪು” ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದಾದ್ಯಂತ ಅದ್ಧೂರಿಯಾಗಿ ಆಚರಿಸುವ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಪ್ರತಿ ವರ್ಷ ಮುಂಬೈಗೆ ಬರುತ್ತಾರೆ. ಈ ಹಬ್ಬದ ಸಂದರ್ಭದಲ್ಲಿ ಮುಸ್ಲಿಮರು ಯಾವಾಗಲೂ ತಮ್ಮ ಹಿಂದೂ ನೆರೆಹೊರೆಯವರಿಗೆ ಬೆಂಬಲ ನೀಡಿದ್ದಾರೆ. ಆದರೂ, ಇಂತಹ ಘಟನೆಗಳು ಅವರನ್ನು ಸುಲಭ ಗುರಿಗಳನ್ನಾಗಿ ಮಾಡುತ್ತವೆ ಎಂದು ಸಮುದಾಯದ ಸದಸ್ಯರು ಹೇಳುತ್ತಾರೆ.

“ನಾವು ನೀರು ವಿತರಿಸುತ್ತೇವೆ, ಸಂಚಾರ ನಿರ್ವಹಿಸುತ್ತೇವೆ ಮತ್ತು ಗಣೇಶ ವಿಸರ್ಜನೆಯ ಸಮಯದಲ್ಲಿ ವೈದ್ಯಕೀಯ ಶಿಬಿರಗಳನ್ನು ಸಹ ನಡೆಸುತ್ತೇವೆ. ಮುಸ್ಲಿಮರು ಯಾವಾಗಲೂ ಈ ಆಚರಣೆಗಳ ಭಾಗವಾಗಿದ್ದಾರೆ” ಎಂದು ಬೈಕುಲ್ಲಾದ ಸ್ವಯಂಸೇವಕ ಮೊಹಮ್ಮದ್ ಇರ್ಫಾನ್ ಹೇಳಿದ್ದಾರೆ.

“ಆದರೂ, ಒಂದು ಸುಳ್ಳು ಸಂದೇಶ ನಮ್ಮ ಮೇಲೆ ಅನುಮಾನಕ್ಕೆ ಕಾರಣವಾಗಬಹುದು. ಅದಕ್ಕಾಗಿಯೇ ಇಂತಹ ಪಿತೂರಿಗಳನ್ನು ತೀವ್ರವಾಗಿ ಖಂಡಿಸಬೇಕು” ಎಂದು ಅವರು ಹೇಳಿದ್ದಾರೆ.

ತನಿಖೆಗೆ ಸಹಾಯ ಮಾಡಲು ಭಯೋತ್ಪಾದನಾ ನಿಗ್ರಹ ದಳವನ್ನು (ಎಟಿಎಸ್) ಸಹ ತೊಡಗಿಸಿಕೊಳ್ಳಲಾಗಿದೆ, ಮತ್ತು ಆರೋಪಿಯ ವಿರುದ್ಧ ಕಾನೂನು ಪ್ರಕ್ರಿಯೆಗಳು ಮುಂದುವರಿಯುತ್ತಿವೆ. ಪೊಲೀಸರ ಕ್ಷಿಪ್ರ ಕ್ರಮವನ್ನು ಮುಸ್ಲಿಂ ಮುಖಂಡರು ಸ್ವಾಗತಿಸಿದ್ದಾರೆ. ಆದರೆ, ತಮ್ಮ ಸಮುದಾಯದ ವಿರುದ್ಧ ಭಯೋತ್ಪಾದನಾ ಆರೋಪಗಳ ಪುನರಾವರ್ತಿತ ದುರುಪಯೋಗದಲ್ಲಿ ನಿಜವಾದ ಅಪಾಯ ಅಡಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

“ಶಾಂತಿಗೆ ದೊಡ್ಡ ಬೆದರಿಕೆ ಮುಸ್ಲಿಮರಲ್ಲ” ಎಂದು ಮೌಲಾನ ಖಾಸ್ಮಿ ಹೇಳಿದ್ದಾರೆ. “ಸ್ವಾರ್ಥ ಉದ್ದೇಶಗಳಿಗಾಗಿ ಧರ್ಮವನ್ನು ಬಳಸುವವರು ಉತ್ಪಾದಿಸುವ ದ್ವೇಷವೇ ದೊಡ್ಡ ಅಪಾಯ. ಸುಳ್ಳುಗಳನ್ನು ನಿಲ್ಲಿಸದಿದ್ದರೆ ಕೋಮು ಸೌಹಾರ್ದತೆ ಎಷ್ಟು ದುರ್ಬಲವಾಗಬಹುದು ಎಂಬುದಕ್ಕೆ ಈ ಪ್ರಕರಣವು ಒಂದು ಜ್ಞಾಪಕ” ಎಂದು ಅವರು ಹೇಳಿದ್ದಾರೆ.

ಕೌಶಂಬಿ: ‘ನಕಲಿ ಎನ್‌ಕೌಂಟರ್’ ಆರೋಪ; ಮುಸ್ಲಿಂ ಯುವಕನಿಗೆ ಗುಂಡು, ಸಹೋದರ ನಾಪತ್ತೆ; ನ್ಯಾಯಕ್ಕಾಗಿ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...