Homeಮುಖಪುಟಮುಸ್ಲಿಮರ ಮೇಲೆ ದೋಷಾರೋಪಣೆಗೆ ಯತ್ನ: ಗಣೇಶ ಚತುರ್ಥಿ ವೇಳೆ ಹುಸಿ ಬೆದರಿಕೆ ಹಾಕಿದ ಹಿಂದೂ ವ್ಯಾಪಾರಿ...

ಮುಸ್ಲಿಮರ ಮೇಲೆ ದೋಷಾರೋಪಣೆಗೆ ಯತ್ನ: ಗಣೇಶ ಚತುರ್ಥಿ ವೇಳೆ ಹುಸಿ ಬೆದರಿಕೆ ಹಾಕಿದ ಹಿಂದೂ ವ್ಯಾಪಾರಿ ಸೆರೆ

- Advertisement -
- Advertisement -

ಗಣೇಶ ಚತುರ್ಥಿಯ ಮುನ್ನಾ ದಿನ ಮುಂಬೈ ಪೊಲೀಸರು ಭಯೋತ್ಪಾದನೆಯ ಕುರಿತು ಹುಸಿ ಸಂದೇಶವನ್ನು ಕಳುಹಿಸಿದ ಹಿಂದೂ ವ್ಯಾಪಾರಿಯನ್ನು ಬಿಹಾರದಲ್ಲಿ ಬಂಧಿಸಿದ್ದಾರೆ. ಈ ಸಂದೇಶವು ಮುಸ್ಲಿಮರ ಮೇಲೆ ಸುಳ್ಳು ಆರೋಪ ಹೊರಿಸುವ ಉದ್ದೇಶದಿಂದ ಕಳುಹಿಸಿದ್ದು ಎಂದು ಅಧಿಕಾರಿಗಳು ಮತ್ತು ಸಮುದಾಯದ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಆರೋಪಿ ಅಶ್ವಿನಿಕುಮಾರ್ ಸುಪ್ರಾ, ಮುಂಬೈ ಟ್ರಾಫಿಕ್ ಪೊಲೀಸ್ ಸಹಾಯವಾಣಿಗೆ ವಾಟ್ಸಾಪ್ ಮೂಲಕ ಬೆದರಿಕೆಯ ಸಂದೇಶ ಕಳುಹಿಸಿದ್ದ. ಈ ಸಂದೇಶದಲ್ಲಿ “14 ಪಾಕಿಸ್ತಾನಿ ಭಯೋತ್ಪಾದಕರು 34 ವಾಹನಗಳಲ್ಲಿ 400 ಕಿಲೋಗ್ರಾಂ ಆರ್‌ಡಿಎಕ್ಸ್‌ನೊಂದಿಗೆ ಮುಂಬೈ ಪ್ರವೇಶಿಸಿದ್ದು, ಒಂದು ಕೋಟಿ ಜನರನ್ನು ಕೊಲ್ಲಲು ಉದ್ದೇಶಿಸಿದ್ದಾರೆ” ಎಂದು ಸುಳ್ಳು ಮಾಹಿತಿ ನೀಡಿದ್ದ.

ಈ ಸಂದೇಶವನ್ನು ‘ಲಷ್ಕರ್-ಎ-ಜಿಹಾದಿ’ ಎಂಬ ಕಾಲ್ಪನಿಕ ಗುಂಪಿನ ಹೆಸರಿನಲ್ಲಿ ಕಳುಹಿಸಲಾಗಿದ್ದು, ಇದರಿಂದ ಮುಸ್ಲಿಮರನ್ನು ಉದ್ದೇಶಪೂರ್ವಕವಾಗಿ ಸಿಲುಕಿಸುವ ಪ್ರಯತ್ನ ಇದಾಗಿದೆ ಎಂದು ತಕ್ಷಣವೇ ಅನುಮಾನ ಮೂಡಿತು. ಈ ಬೆದರಿಕೆಯಿಂದ ಪೊಲೀಸರು ಮುಂಬೈ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಉನ್ನತ ಮಟ್ಟದ ಎಚ್ಚರಿಕೆ ಘೋಷಿಸಿದರು. ನಂತರ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜಂಟಿ ಪೊಲೀಸ್ ಆಯುಕ್ತ ರಾಜೀವ್ ನಾರಾಯಣ್ ಮಿಶ್ರಾ ಅವರು ನೋಯ್ಡಾ ಪೊಲೀಸ್ ಆಯುಕ್ತ ಲಕ್ಷ್ಮಿ ಸಿಂಗ್ ಅವರ ನೆರವಿನಿಂದ ಆರೋಪಿಯನ್ನು ಬಂಧಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ತನಿಖಾಧಿಕಾರಿಗಳು ಸಿಸಿಟಿವಿ ದೃಶ್ಯಾವಳಿ ಮತ್ತು ತಾಂತ್ರಿಕ ಕಣ್ಗಾವಲು ಮೂಲಕ ಆರೋಪಿಯನ್ನು ಪತ್ತೆಹಚ್ಚಿದ್ದಾರೆ. ಆತನಿಗೆ ಸಿಮ್ ಕಾರ್ಡ್ ಪಡೆಯಲು ಸಹಾಯ ಮಾಡಿದ ಮತ್ತೊಬ್ಬ ವ್ಯಕ್ತಿಯನ್ನು ಕೂಡ ವಶಕ್ಕೆ ಪಡೆಯಲಾಗಿದೆ.

ಸಂದೇಶ ಕಳುಹಿಸಿದ ನಂತರ ಸುಪ್ರಾ ತನ್ನ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿದ್ದರೂ, ಅಂತಿಮವಾಗಿ ಪತ್ತೆಹಚ್ಚಿ ಬಂಧಿಸಲಾಗಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಈಗ ಆತನ ವಿರುದ್ಧ ಭಾರತೀಯ ದಂಡ ಸಂಹಿತೆಯ ಗಂಭೀರ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ದಾಖಲಿಸಲಾಗಿದೆ.

ಮುಂಬೈನ ಮುಸ್ಲಿಂ ಮುಖಂಡರು ಈ ಸುದ್ದಿಗೆ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಇಂತಹ ಕಪೋಲಕಲ್ಪಿತ ಬೆದರಿಕೆಗಳು ಕೋಮು ದ್ವೇಷ ಹರಡಲು ಬಳಸಲಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಇದು ಕೇವಲ ಹುಸಿ ಬೆದರಿಕೆಯಲ್ಲ, ಇದು ಮುಸ್ಲಿಮರನ್ನು ಭಯೋತ್ಪಾದಕರೆಂದು ಚಿತ್ರಿಸುವ ಒಂದು ಲೆಕ್ಕಾಚಾರದ ಪ್ರಯತ್ನ” ಎಂದು ಮುಂಬೈನ ಹಿರಿಯ ಧಾರ್ಮಿಕ ಮುಖಂಡ ಮೌಲಾನ ಸಯೀದ್ ಖಾಸ್ಮಿ ಹೇಳಿದ್ದಾರೆ.

“ಪ್ರತಿ ಹಬ್ಬ ಅಥವಾ ದೊಡ್ಡ ಸಮಾರಂಭದ ಸಮಯದಲ್ಲಿ, ಕೆಲವರು ಮುಸ್ಲಿಮರನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಾರೆ. ಇಂತಹ ಪ್ರಚಾರಗಳಿಂದ ಯಾವುದೇ ಮುಗ್ಧ ಮುಸ್ಲಿಮರಿಗೆ ಕಿರುಕುಳ ಆಗದಂತೆ ಪೊಲೀಸರು ನೋಡಿಕೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಗಣೇಶ ಚತುರ್ಥಿಯ ಸಂದರ್ಭದಲ್ಲಿ ಈ ಹುಸಿ ಬೆದರಿಕೆ ಸಂಶಯಾಸ್ಪದ ಮತ್ತು ಅಪಾಯಕಾರಿ ಎಂದು ಸಮುದಾಯದ ಕಾರ್ಯಕರ್ತರು ಹೇಳಿದ್ದಾರೆ.

“ಹಬ್ಬಗಳ ಸಂದರ್ಭದಲ್ಲಿ ಭಾವನೆಗಳು ತೀವ್ರವಾಗಿರುತ್ತವೆ ಎಂಬುದು ಎಲ್ಲರಿಗೂ ಗೊತ್ತು. ಈ ಸಮಯದಲ್ಲಿ ಮುಸ್ಲಿಮರನ್ನು ಭಯೋತ್ಪಾದನೆಗೆ ಲಿಂಕ್ ಮಾಡುವ ಮೂಲಕ ಆರೋಪಿ ಗಲಭೆ ಮತ್ತು ದ್ವೇಷವನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾನೆ ಎಂಬುದು ಸ್ಪಷ್ಟ” ಎಂದು ಮಾನವ ಹಕ್ಕುಗಳ ವಕೀಲರಾದ ಅರ್ಷದ್ ಶೇಖ್ ಹೇಳಿದ್ದಾರೆ.

ಗಣೇಶ ಚತುರ್ಥಿ ಆಚರಣೆಗಳಿಗಾಗಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಮತ್ತು ನಾಗರಿಕರು ಭಯಪಡಬಾರದು ಎಂದು ಮುಂಬೈ ಪೊಲೀಸರು ಭರವಸೆ ನೀಡಿದ್ದಾರೆ.

“ನಗರದಾದ್ಯಂತ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ. ಜನರು ಭಯವಿಲ್ಲದೆ ಹಬ್ಬ ಆಚರಿಸಬೇಕು. ಈ ಸುಳ್ಳು ಬೆದರಿಕೆ ಹರಡಿದ ಆರೋಪಿ ನಮ್ಮ ವಶದಲ್ಲಿದ್ದಾರೆ” ಎಂದು ಒಬ್ಬ ಪೊಲೀಸ್ ಅಧಿಕಾರಿ ಹೆಸರು ಹೇಳಲು ಇಚ್ಚಿಸದೆ ತಿಳಿಸಿದ್ದಾರೆ.

ಆದರೆ, ಕೇವಲ ಒಬ್ಬ ವ್ಯಕ್ತಿಯನ್ನು ಬಂಧಿಸುವುದಲ್ಲದೆ, ಇಂತಹ ಸುಳ್ಳು ಪ್ರಚಾರವನ್ನು ಉತ್ತೇಜಿಸುತ್ತಿರುವ ದೊಡ್ಡ ಜಾಲಗಳ ಬಗ್ಗೆ ತನಿಖೆ ಮಾಡಬೇಕು ಎಂದು ಮುಸ್ಲಿಂ ಗುಂಪುಗಳು ಹೇಳಿವೆ.

“ಒಬ್ಬ ವ್ಯಕ್ತಿಯನ್ನು ಬಂಧಿಸಿದರೆ ಸಾಲದು. ಈ ರೀತಿಯ ಕೃತ್ಯಗಳ ಹಿಂದೆ ರಾಜಕೀಯ ಅಥವಾ ಕೋಮು ಗುಂಪುಗಳ ಬೆಂಬಲ ಇದೆಯೇ ಎಂದು ನಮಗೆ ತಿಳಿಯಬೇಕು” ಎಂದು ಸಾಮಾಜಿಕ ಕಾರ್ಯಕರ್ತ ಪ್ರೊಫೆಸರ್ ನದೀಮ್ ಅನ್ಸಾರಿ ಹೇಳಿದ್ದಾರೆ.

“ಭಾರತೀಯ ಮುಸ್ಲಿಮರು ಯಾವಾಗಲೂ ಶಾಂತಿಯುತವಾಗಿ ಬದುಕಿದ್ದಾರೆ, ಮತ್ತು ಇಂತಹ ಸುಳ್ಳು ಭಯೋತ್ಪಾದನಾ ಬೆದರಿಕೆಗಳಿಂದ ನಮ್ಮನ್ನು ದೂಷಿಸುವುದು ತಪ್ಪು” ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದಾದ್ಯಂತ ಅದ್ಧೂರಿಯಾಗಿ ಆಚರಿಸುವ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಪ್ರತಿ ವರ್ಷ ಮುಂಬೈಗೆ ಬರುತ್ತಾರೆ. ಈ ಹಬ್ಬದ ಸಂದರ್ಭದಲ್ಲಿ ಮುಸ್ಲಿಮರು ಯಾವಾಗಲೂ ತಮ್ಮ ಹಿಂದೂ ನೆರೆಹೊರೆಯವರಿಗೆ ಬೆಂಬಲ ನೀಡಿದ್ದಾರೆ. ಆದರೂ, ಇಂತಹ ಘಟನೆಗಳು ಅವರನ್ನು ಸುಲಭ ಗುರಿಗಳನ್ನಾಗಿ ಮಾಡುತ್ತವೆ ಎಂದು ಸಮುದಾಯದ ಸದಸ್ಯರು ಹೇಳುತ್ತಾರೆ.

“ನಾವು ನೀರು ವಿತರಿಸುತ್ತೇವೆ, ಸಂಚಾರ ನಿರ್ವಹಿಸುತ್ತೇವೆ ಮತ್ತು ಗಣೇಶ ವಿಸರ್ಜನೆಯ ಸಮಯದಲ್ಲಿ ವೈದ್ಯಕೀಯ ಶಿಬಿರಗಳನ್ನು ಸಹ ನಡೆಸುತ್ತೇವೆ. ಮುಸ್ಲಿಮರು ಯಾವಾಗಲೂ ಈ ಆಚರಣೆಗಳ ಭಾಗವಾಗಿದ್ದಾರೆ” ಎಂದು ಬೈಕುಲ್ಲಾದ ಸ್ವಯಂಸೇವಕ ಮೊಹಮ್ಮದ್ ಇರ್ಫಾನ್ ಹೇಳಿದ್ದಾರೆ.

“ಆದರೂ, ಒಂದು ಸುಳ್ಳು ಸಂದೇಶ ನಮ್ಮ ಮೇಲೆ ಅನುಮಾನಕ್ಕೆ ಕಾರಣವಾಗಬಹುದು. ಅದಕ್ಕಾಗಿಯೇ ಇಂತಹ ಪಿತೂರಿಗಳನ್ನು ತೀವ್ರವಾಗಿ ಖಂಡಿಸಬೇಕು” ಎಂದು ಅವರು ಹೇಳಿದ್ದಾರೆ.

ತನಿಖೆಗೆ ಸಹಾಯ ಮಾಡಲು ಭಯೋತ್ಪಾದನಾ ನಿಗ್ರಹ ದಳವನ್ನು (ಎಟಿಎಸ್) ಸಹ ತೊಡಗಿಸಿಕೊಳ್ಳಲಾಗಿದೆ, ಮತ್ತು ಆರೋಪಿಯ ವಿರುದ್ಧ ಕಾನೂನು ಪ್ರಕ್ರಿಯೆಗಳು ಮುಂದುವರಿಯುತ್ತಿವೆ. ಪೊಲೀಸರ ಕ್ಷಿಪ್ರ ಕ್ರಮವನ್ನು ಮುಸ್ಲಿಂ ಮುಖಂಡರು ಸ್ವಾಗತಿಸಿದ್ದಾರೆ. ಆದರೆ, ತಮ್ಮ ಸಮುದಾಯದ ವಿರುದ್ಧ ಭಯೋತ್ಪಾದನಾ ಆರೋಪಗಳ ಪುನರಾವರ್ತಿತ ದುರುಪಯೋಗದಲ್ಲಿ ನಿಜವಾದ ಅಪಾಯ ಅಡಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

“ಶಾಂತಿಗೆ ದೊಡ್ಡ ಬೆದರಿಕೆ ಮುಸ್ಲಿಮರಲ್ಲ” ಎಂದು ಮೌಲಾನ ಖಾಸ್ಮಿ ಹೇಳಿದ್ದಾರೆ. “ಸ್ವಾರ್ಥ ಉದ್ದೇಶಗಳಿಗಾಗಿ ಧರ್ಮವನ್ನು ಬಳಸುವವರು ಉತ್ಪಾದಿಸುವ ದ್ವೇಷವೇ ದೊಡ್ಡ ಅಪಾಯ. ಸುಳ್ಳುಗಳನ್ನು ನಿಲ್ಲಿಸದಿದ್ದರೆ ಕೋಮು ಸೌಹಾರ್ದತೆ ಎಷ್ಟು ದುರ್ಬಲವಾಗಬಹುದು ಎಂಬುದಕ್ಕೆ ಈ ಪ್ರಕರಣವು ಒಂದು ಜ್ಞಾಪಕ” ಎಂದು ಅವರು ಹೇಳಿದ್ದಾರೆ.

ಕೌಶಂಬಿ: ‘ನಕಲಿ ಎನ್‌ಕೌಂಟರ್’ ಆರೋಪ; ಮುಸ್ಲಿಂ ಯುವಕನಿಗೆ ಗುಂಡು, ಸಹೋದರ ನಾಪತ್ತೆ; ನ್ಯಾಯಕ್ಕಾಗಿ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...