Homeಕರ್ನಾಟಕ‘ಹಿಂದೂ’ ಪದಕ್ಕೆ ಹೀನರ್ಥವಿದೆ: ಲೇಖನ ಪ್ರಕಟಿಸಿದ ಇಸ್ಕಾನ್‌ ವಿರುದ್ಧ ಬಿಜೆಪಿ ಹೋರಾಡುವುದೆ?

‘ಹಿಂದೂ’ ಪದಕ್ಕೆ ಹೀನರ್ಥವಿದೆ: ಲೇಖನ ಪ್ರಕಟಿಸಿದ ಇಸ್ಕಾನ್‌ ವಿರುದ್ಧ ಬಿಜೆಪಿ ಹೋರಾಡುವುದೆ?

- Advertisement -
- Advertisement -

“ಹಿಂದೂ ಎಂಬ ಪದಕ್ಕೆ ಕೆಟ್ಟ ಅರ್ಥವಿದೆ. ಹಲವು ಗ್ರಂಥಗಳಲ್ಲಿ ಈ ಉಲ್ಲೇಖಗಳನ್ನು ಮಾಡಲಾಗಿದೆ” ಎಂದು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿಯವರು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ. “ಕಾಂಗ್ರೆಸ್‌ ಪಕ್ಷವು ಹಿಂದೂ ವಿರೋಧಿ”, “ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ” ಎಂದು ಬಿಜೆಪಿ ಹಾಗೂ ಸಂಘಪರಿವಾರ ಬೀದಿಗೆ ಇಳಿದು ಪ್ರತಿಭಟಿಸಿವೆ.

ಬಿಜೆಪಿ ನಾಯಕರಂತೂ ತರಹೇವಾರಿ ಹೇಳಿಕೆಗಳನ್ನು ನೀಡುತ್ತಾ, ಜಾರಕಿಹೊಳಿಯವರ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಈ ಪದದ ಹಿನ್ನೆಲೆಯ ಕುರಿತು ತನಿಖೆ ನಡೆಸುವಂತೆ ಸತೀಶ್ ಜಾರಕಿಹೊಳಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಲ್ಲಿ ಮನವಿಯನ್ನೂ ಮಾಡಿದ್ದಾರೆ. ಆದರೆ ಜಾರಕಿಹೊಳಿಯವರ ವಿರುದ್ಧ ದ್ವೇಷ ಅಭಿಯಾನ ನಡೆಯುತ್ತಲೇ ಇದೆ. ಈ ಚರ್ಚೆಯ ಹೊತ್ತಿನಲ್ಲಿ ‘ಇಸ್ಕಾನ್‌ ಸಂಸ್ಥೆ’ ಪ್ರಕಟಿಸಿರುವ ಲೇಖನ ಚರ್ಚೆಗೆ ಗ್ರಾಸವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಇಸ್ಕಾನ್‌’ ಧಾರ್ಮಿಕ ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಈ ಹಿಂದೆ ಪ್ರಕಟವಾಗಿರುವ ಲೇಖನವೊಂದು ಚರ್ಚೆಗೆ ಬಳಕೆಯಾಗುತ್ತಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ಹಾಗೂ ವಕೀಲರಾದ ಭೀಮನಗೌಡ ಪರಗೊಂಡ ಅವರು, “ನಂದ ನಂದನದಾಸ ಎಂಬುವವರ ಹತ್ತಾರು ಲೇಖನಗಳನ್ನು ಇಸ್ಕಾನ್‌ ಸಂಸ್ಥೆಯ ಜಾಲತಾಣದಲ್ಲಿ ಬರೆದಿರುವ ಇಸ್ಕಾನ್‌ ಸದಸ್ಯರಾಗಿದ್ದಾರೆ. 4 ವರ್ಷಗಳ ಹಿಂದೆಯೇ ʼಹಿಂದೂʼ ಎಂದರೆ ಕಳ್ಳ, ಕರಿಯ ಎಂದಿದ್ದಾರೆ. ಸತೀಶ್‌ ಜಾರಕಿಹೊಳಿಯವರ ವಿರುದ್ದ ಹರಿಹಾಯ್ದವರು ಇಸ್ಕಾನ್‌ ವಿರುದ್ದ ಉಸಿರೆತ್ತುತ್ತಾರಾ?” ಎಂದು ಪ್ರಶ್ನಿಸುತ್ತಾ ಬಿಜೆಪಿಯನ್ನು ಟ್ಯಾಗ್‌ ಮಾಡಿದ್ದಾರೆ.

ಭೀಮನಗೌಡ ಪರಗೊಂಡ ಅವರು ಲಗತ್ತಿಸಿರುವ ಲಿಂಕ್‌ ಕ್ಲಿಕ್ ಮಾಡಿದರೆ, ‘ಹಿಂದೂ’ ಎಂಬ ಪದದ ಹಿನ್ನೆಲೆಯ ಕುರಿತು ಮಾಡಲಾಗಿರುವ ಹಲವಾರು ಉಲ್ಲೇಖನಗಳನ್ನು ನಂದ ನಂದನದಾಸ ಅವರ ಲೇಖನದಲ್ಲಿ ಕಾಣಬಹುದು.

ಲೇಖನದಲ್ಲಿರುವ ಆಯ್ದ ಕೆಲವು ಅಂಶಗಳು ಹೀಗಿವೆ:

‘ಹಿಂದೂ’ ಎಂಬ ಪದವು ಸಂಸ್ಕೃತದದ್ದಲ್ಲ ಎಂಬುದನ್ನು ನಾವು ನೆನಪಿನಲ್ಲಿಡಬೇಕು. ಯಾವುದೇ ವೈದಿಕ ಸಾಹಿತ್ಯದಲ್ಲಿ ಇದು ಕಂಡುಬರುವುದಿಲ್ಲ ಎಂದು ಹಲವು ವಿದ್ವಾಂಸರು ಹೇಳುತ್ತಾರೆ. ಹಾಗಾದರೆ ಅಂತಹ ಹೆಸರು ನಿಜವಾಗಿಯೂ ವೈದಿಕ ಮಾರ್ಗ ಅಥವಾ ಸಂಸ್ಕೃತಿಯನ್ನು ಹೇಗೆ ಪ್ರತಿನಿಧಿಸುತ್ತದೆ? ಮತ್ತು ವೈದಿಕ ಸಾಹಿತ್ಯವಿಲ್ಲದೆ, “ಹಿಂದೂ ಧರ್ಮಕ್ಕೆ ಯಾವುದೇ ಆಧಾರವಿಲ್ಲ”….

‘ಹಿಂದೂ’ ಎಂಬ ಹೆಸರನ್ನು ಹೊರಗಿನವರು, ಸಿಂಧು ನದಿಯ ಹೆಸರನ್ನು ಸರಿಯಾಗಿ ಉಚ್ಚರಿಸಲು ಸಾಧ್ಯವಾಗದ ಆಕ್ರಮಣಕಾರರು ಬಳಸಿರುವುದಾಗಿ ಹೆಚ್ಚಿನ ವಿದ್ವಾಂಸರು ಭಾವಿಸುತ್ತಾರೆ. ಸಂಸ್ಕೃತ ನಿಘಂಟುತಜ್ಞರಾದ ಸರ್ ಮೋನಿಯರ್ ವಿಲಿಯಮ್ಸ್ ಪ್ರಕಾರ, “ಹಿಂದೂ ಅಥವಾ ಭಾರತ ಪದಗಳಿಗೆ ಸ್ಥಳೀಯ ಮೂಲವನ್ನು ಕಂಡುಹಿಡಿಯಲಾಗುವುದಿಲ್ಲ. ಈ ಪದಗಳು ಯಾವುದೇ ಬೌದ್ಧ, ಜೈನ ಪಠ್ಯಗಳಲ್ಲಿ ಅಥವಾ ಭಾರತದ ಯಾವುದೇ ಅಧಿಕೃತ 23 ಭಾಷೆಗಳಲ್ಲಿ ಕಂಡುಬರುವುದಿಲ್ಲ….”

ದಿ ಗ್ರೇಟ್ ಅಲೆಕ್ಸಾಂಡರ್ ಮೊದಲಿಗೆ ಸಿಂಧು ನದಿಯನ್ನು ‘ಇಂದು’ ಎಂದು ಮರುನಾಮಕರಣ ಮಾಡಿದನು ಎಂದು ಕೆಲವು ಮೂಲಗಳು ಹೇಳುತ್ತವೆ. ಆರಂಭದಲ್ಲಿನ “ಎಸ್‌‌” ಅನ್ನು ಕೈಬಿಡಲಾಯಿತು, ಹೀಗಾಗಿ ಗ್ರೀಕರು ಉಚ್ಚರಿಸಲು ಸುಲಭವಾಯಿತು. ಇದು ‘ಇಂದೂಸ್‌’ ಎಂದು ಹೆಸರಾಯಿತು. ಕ್ರಿಸ್ತ ಪೂರ್ವ 325ರ ಸುಮಾರಿಗೆ ಅಲೆಕ್ಸಾಂಡರ್ ಭಾರತವನ್ನು ಆಕ್ರಮಿಸಿದಾಗ ಅವನ ಮೆಸಿಡೋನಿಯನ್ ಪಡೆಗಳು ಸಿಂಧೂ ನದಿಯ ಪೂರ್ವದ ಭೂಮಿಯನ್ನು ಭಾರತ ಎಂದು ಕರೆದರು. ಇದನ್ನು ವಿಶೇಷವಾಗಿ ಬ್ರಿಟಿಷ್ ಆಳ್ವಿಕೆಯಲ್ಲಿ ಬಳಸಲಾಗುತ್ತಿತ್ತು….

ನಂತರ, ಮುಸ್ಲಿಂ ಆಕ್ರಮಣಕಾರರು ಅಫ್ಘಾನಿಸ್ತಾನ ಮತ್ತು ಪರ್ಷಿಯಾದಂತಹ ಸ್ಥಳಗಳಿಂದ ಆಗಮಿಸಿದಾಗ, ಅವರು ಸಿಂಧೂ ನದಿಯನ್ನು ಹಿಂದೂ ನದಿ ಎಂದು ಕರೆದರು. ಅದರ ನಂತರ, ಸಿಂಧೂ ನದಿ ಇರುವ ಭಾರತದ ವಾಯುವ್ಯ ಪ್ರಾಂತ್ಯಗಳಲ್ಲಿನ ಆ ಭೂಪ್ರದೇಶದ ನಿವಾಸಿಗಳನ್ನು ವಿವರಿಸಲು ‘ಹಿಂದೂ’ ಎಂಬ ಹೆಸರನ್ನು ಬಳಸಲಾಯಿತು ಮತ್ತು ಆ ಪ್ರದೇಶವನ್ನು ‘ಹಿಂದುಸ್ತಾನ್’ ಎಂದು ಕರೆಯಲಾಯಿತು.

‘ಹಿಂದೂ’ ಎಂಬ ಹೆಸರಿನ ಇನ್ನೊಂದು ನೋಟವು ಭಾರತದ ಆಧ್ಯಾತ್ಮಿಕ ಪಥಗಳ ನಿಜವಾದ ಸಾರವನ್ನು ಅರ್ಥಮಾಡಿಕೊಳ್ಳಲು ಕಾರಣವಾಗುವ ಗೊಂದಲಮಯ ಸ್ವಭಾವವನ್ನು ತೋರಿಸುತ್ತದೆ. ಆರ್.ಎನ್.ಸೂರ್ಯನಾರಾಯಣ ಅವರು ತಮ್ಮ ಯೂನಿವರ್ಸಲ್ ರಿಲಿಜನ್ (ಪು.1-2, 1952ರಲ್ಲಿ ಮೈಸೂರಿನಲ್ಲಿ ಪ್ರಕಟವಾದ) ಪುಸ್ತಕದಲ್ಲಿ ಬರೆದಿರುವಂತೆ, “….ಪಾಶ್ಚಿಮಾತ್ಯ ವಿದ್ವಾಂಸರು ಮತ್ತು ಇತಿಹಾಸಕಾರರು ಕೂಡ ಈ ಬ್ರಾಹ್ಮಣಭೂಮಿಯ ನಿಜವಾದ ಹೆಸರನ್ನು ಪತ್ತೆಹಚ್ಚಲು ವಿಫಲರಾಗಿದ್ದಾರೆ…. ಅವರು ಅದನ್ನು ‘ಹಿಂದೂ’ ಎಂಬ ಅರ್ಥಹೀನ ಪದದಿಂದ ಕರೆದು ತೃಪ್ತಿಪಡಿಸಿದ್ದಾರೆ. ವಿದೇಶಿಗರು ನವೀಕರಿಸಿದ ಈ ಪದವನ್ನು ನಮ್ಮ ಯಾವುದೇ ಸಂಸ್ಕೃತ ಲೇಖಕರು, ಪೂಜ್ಯ ಆಚಾರ್ಯರು ತಮ್ಮ ಕೃತಿಗಳಲ್ಲಿ ಬಳಸಿಲ್ಲ. ಹಿಂದೂ ಪದವನ್ನು ನಿರಂತರವಾಗಿ ಬಳಸಬೇಕೆಂದು ಒತ್ತಾಯಿಸಲು ರಾಜಕೀಯ ಶಕ್ತಿಯು ಕಾರಣವಾಗಿದೆ ಎಂದು ತೋರುತ್ತದೆ. ಹಿಂದೂ ಎಂಬ ಪದವು ಪರ್ಷಿಯನ್ ಸಾಹಿತ್ಯದಲ್ಲಿ ಕಂಡುಬರುತ್ತದೆ. ಹಿಂದೂ-ಇ-ಫಲಾಕ್ ಎಂದರೆ ‘ಆಕಾಶದ ಕಪ್ಪು’ ಮತ್ತು ‘ಶನಿ’ ಎಂದರ್ಥ…. ಪರ್ಷಿಯನ್ನರು ಸಿಂಧುವಿನ ಪವಿತ್ರ ನೆಲಕ್ಕೆ ಬಂದಾಗ, ಹಿಂದೂ ಎಂಬ ಹೆಸರನ್ನು ಇಟ್ಟರು ಎಂದು ಇತಿಹಾಸದಲ್ಲಿ ಓದಿರುವುದು ನಾಚಿಕೆಗೇಡಿನ ಮತ್ತು ಹಾಸ್ಯಾಸ್ಪದವಾಗಿದೆ.

ಹಿಂದೂ ಎಂಬ ಹೆಸರಿನ ಮೂಲದ ಇನ್ನೊಂದು ದೃಷ್ಟಿಕೋನವು ಅವಹೇಳನಕಾರಿ ಅರ್ಥವನ್ನು ಆಧರಿಸಿದೆ. “ಇದಲ್ಲದೆ, ಈ ಹೆಸರನ್ನು [ಹಿಂದೂ] ಮೂಲ ಆರ್ಯ ಜನಾಂಗಕ್ಕೆ ಮುಸ್ಲಿಂ ಆಕ್ರಮಣಕಾರರು ಅವಮಾನಿಸಲು ನೀಡಿರುವುದಾಗಿದೆ. ನಮ್ಮ ಲೇಖಕರು ಹೇಳುವಂತೆ ಪರ್ಷಿಯನ್ ಭಾಷೆಯಲ್ಲಿ ಈ ಪದದ ಅರ್ಥ ಗುಲಾಮ. ಇಸ್ಲಾಂ ಪ್ರಕಾರ, ಇಸ್ಲಾಂ ಧರ್ಮವನ್ನು ಸ್ವೀಕರಿಸದ ಎಲ್ಲರನ್ನು ಗುಲಾಮರು ಎಂದು ಕರೆಯಲಾಗುತ್ತದೆ” (ಉಲ್ಲೇಖ: 1898ರಲ್ಲಿ ಲಾಹೋರ್‌ನಲ್ಲಿ ಪ್ರಕಟವಾಗಿರುವ ಮಹರ್ಷಿ ಶ್ರೀ ದಯಾನಂದ ಸರಸ್ವತಿಯವರ ಕೃತಿ).

“ಇದಲ್ಲದೆ, 1964 ರಲ್ಲಿ ಲಕ್ನೋದಲ್ಲಿ ಪ್ರಕಟವಾದ ಲುಘೆತ್-ಎ-ಕಿಶ್ವರಿ ಎಂಬ ಪರ್ಷಿಯನ್ ನಿಘಂಟಿನಲ್ಲಿ ಹಿಂದೂ ಪದದ ಅರ್ಥವನ್ನು- ‘ಚೋರ್ [ಕಳ್ಳ], ಡಕೂ [ಡಕಾಯಿಟ್], ರಾಹ್ಜಾನ್ [ವೇಲೇಯರ್] ಮತ್ತು ಗುಲಾಮ್ [ಗುಲಾಮ]” ಎಂದು ನೀಡಲಾಗಿದೆ. ಮತ್ತೊಂದು ನಿಘಂಟಾದ ಉರ್ದು-ಫಿರೋಜ್-ಉಲ್-ಲಘಾತ್ (ಭಾಗ ಒಂದನೇ, ಪುಟ 615)ನಲ್ಲಿ ಹಿಂದೂ ಪದದ ಪರ್ಷಿಯನ್ ಅರ್ಥವನ್ನು- ಬರ್ದಾ (ವಿಧೇಯ ಸೇವಕ), ಸಿಯಾ ಫಾಮ್ (ಕಪ್ಪು ಬಣ್ಣ) ಮತ್ತು ಕಾಲಾ (ಕಪ್ಪು) ಎಂದು ವಿವರಿಸಲಾಗಿದೆ.

ಇದನ್ನೂ ಓದಿರಿ: ಸದುದ್ದೇಶದಿಂದ ನೀಡಿದ ಹೇಳಿಕೆ ಹಿಂಪಡೆಯುವೆ: ಸತೀಶ್ ಜಾರಕಿಹೊಳಿ

ಆದ್ದರಿಂದ, ಮೂಲತಃ, ಹಿಂದೂ ಎಂಬುದು ಕೇವಲ ಮುಸ್ಲಿಂ ಮೂಲದ ಮುಂದುವರಿಕೆಯಾಗಿದ್ದು ಅದು ಕಳೆದ 1300 ವರ್ಷಗಳಲ್ಲಿ ಮಾತ್ರ ಬಳಕೆಗೆ ಬಂದಿತು. ಹೀಗಾಗಿ ಇದು ಮಾನ್ಯವಾದ ಸಂಸ್ಕೃತ ಪದವಲ್ಲ, ನಿಜವಾದ ವೈದಿಕ ಸಂಸ್ಕೃತಿ ಅಥವಾ ವೈದಿಕ ಆಧ್ಯಾತ್ಮಿಕ ಮಾರ್ಗದೊಂದಿಗೆ ಯಾವುದೇ ಸಂಬಂಧವನ್ನು ಇದು ಹೊಂದಿಲ್ಲ ಎಂದು ನಾವು ಅರ್ಥಮಾಡಿಕೊಳ್ಳಬಹುದು. “ಹಿಂದೂ ಧರ್ಮ” ಎಂದು ಕರೆಯಲ್ಪಡುವ ಯಾವುದೇ ಧರ್ಮವು ಅಸ್ತಿತ್ವದಲ್ಲಿಲ್ಲ…. (ಪೂರ್ಣ ಲೇಖನವನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ) (ಲೇಖನದ ‘ಆರ್ಕೈವ್‌ ಲಿಂಕ್‌’)

ಸತೀಶ್ ಜಾರಕಿಹೊಳಿಯವರ ಮೇಲಷ್ಟೇ ವಿರೋಧವೇಕೆ?

ಹಿಂದೂ ಪದಕ್ಕೆ ಹೀನಾರ್ಥಗಳಿವೆ ಎಂದು ತಿಳಿಸುವ ಲೇಖವನ್ನು ಧಾರ್ಮಿಕ ಸಂಸ್ಥೆಯೊಂದು ಕಳೆದ ನಾಲ್ಕು ವರ್ಷಗಳ ಹಿಂದೆಯೇ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಸತೀಶ್ ಜಾರಕಿಹೊಳಿಯವರು ಹೇಳಿದ್ದನ್ನೇ ಇಸ್ಕಾನ್‌ ಕೂಡ ಹೇಳಿದೆ. ಬಿಜೆಪಿ ಹಾಗೂ ಸಂಘಪರಿವಾರ ‘ಇಸ್ಕಾನ್‌’ ವಿರುದ್ಧ ಹೋರಾಡುತ್ತದೆಯೇ ಎಂಬ ಪ್ರಶ್ನೆ ಈಗ ಮುನ್ನೆಲೆಗೆ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾರಕಿಹೊಳಿರವರು

    ಇವರ ಚೀರಾಟಗಳಿಗೆ ಬೆದರಿ ಶೀಘ್ರವಾಗಿ ಬಬಿಜೆಪಿ ಸೇರಿಬಿಟ್ಟರೆ ಸಬ್ ಕಾ ಸಾಥ್ ಸಬ್ಕಾ ವಿನಾಶ್ ಆದರೂ ಅಸಲೀ ದೇಶಭಕ್ತ ಆಗುತ್ತಾರೆ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....