Homeಕರ್ನಾಟಕ‘ಹಿಂದೂ’ ಪದಕ್ಕೆ ಹೀನರ್ಥವಿದೆ: ಲೇಖನ ಪ್ರಕಟಿಸಿದ ಇಸ್ಕಾನ್‌ ವಿರುದ್ಧ ಬಿಜೆಪಿ ಹೋರಾಡುವುದೆ?

‘ಹಿಂದೂ’ ಪದಕ್ಕೆ ಹೀನರ್ಥವಿದೆ: ಲೇಖನ ಪ್ರಕಟಿಸಿದ ಇಸ್ಕಾನ್‌ ವಿರುದ್ಧ ಬಿಜೆಪಿ ಹೋರಾಡುವುದೆ?

- Advertisement -
- Advertisement -

“ಹಿಂದೂ ಎಂಬ ಪದಕ್ಕೆ ಕೆಟ್ಟ ಅರ್ಥವಿದೆ. ಹಲವು ಗ್ರಂಥಗಳಲ್ಲಿ ಈ ಉಲ್ಲೇಖಗಳನ್ನು ಮಾಡಲಾಗಿದೆ” ಎಂದು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿಯವರು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ. “ಕಾಂಗ್ರೆಸ್‌ ಪಕ್ಷವು ಹಿಂದೂ ವಿರೋಧಿ”, “ಸತೀಶ್ ಜಾರಕಿಹೊಳಿ ಹಿಂದೂ ವಿರೋಧಿ” ಎಂದು ಬಿಜೆಪಿ ಹಾಗೂ ಸಂಘಪರಿವಾರ ಬೀದಿಗೆ ಇಳಿದು ಪ್ರತಿಭಟಿಸಿವೆ.

ಬಿಜೆಪಿ ನಾಯಕರಂತೂ ತರಹೇವಾರಿ ಹೇಳಿಕೆಗಳನ್ನು ನೀಡುತ್ತಾ, ಜಾರಕಿಹೊಳಿಯವರ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಈ ಪದದ ಹಿನ್ನೆಲೆಯ ಕುರಿತು ತನಿಖೆ ನಡೆಸುವಂತೆ ಸತೀಶ್ ಜಾರಕಿಹೊಳಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಲ್ಲಿ ಮನವಿಯನ್ನೂ ಮಾಡಿದ್ದಾರೆ. ಆದರೆ ಜಾರಕಿಹೊಳಿಯವರ ವಿರುದ್ಧ ದ್ವೇಷ ಅಭಿಯಾನ ನಡೆಯುತ್ತಲೇ ಇದೆ. ಈ ಚರ್ಚೆಯ ಹೊತ್ತಿನಲ್ಲಿ ‘ಇಸ್ಕಾನ್‌ ಸಂಸ್ಥೆ’ ಪ್ರಕಟಿಸಿರುವ ಲೇಖನ ಚರ್ಚೆಗೆ ಗ್ರಾಸವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಇಸ್ಕಾನ್‌’ ಧಾರ್ಮಿಕ ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಈ ಹಿಂದೆ ಪ್ರಕಟವಾಗಿರುವ ಲೇಖನವೊಂದು ಚರ್ಚೆಗೆ ಬಳಕೆಯಾಗುತ್ತಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಮುಖಂಡ ಹಾಗೂ ವಕೀಲರಾದ ಭೀಮನಗೌಡ ಪರಗೊಂಡ ಅವರು, “ನಂದ ನಂದನದಾಸ ಎಂಬುವವರ ಹತ್ತಾರು ಲೇಖನಗಳನ್ನು ಇಸ್ಕಾನ್‌ ಸಂಸ್ಥೆಯ ಜಾಲತಾಣದಲ್ಲಿ ಬರೆದಿರುವ ಇಸ್ಕಾನ್‌ ಸದಸ್ಯರಾಗಿದ್ದಾರೆ. 4 ವರ್ಷಗಳ ಹಿಂದೆಯೇ ʼಹಿಂದೂʼ ಎಂದರೆ ಕಳ್ಳ, ಕರಿಯ ಎಂದಿದ್ದಾರೆ. ಸತೀಶ್‌ ಜಾರಕಿಹೊಳಿಯವರ ವಿರುದ್ದ ಹರಿಹಾಯ್ದವರು ಇಸ್ಕಾನ್‌ ವಿರುದ್ದ ಉಸಿರೆತ್ತುತ್ತಾರಾ?” ಎಂದು ಪ್ರಶ್ನಿಸುತ್ತಾ ಬಿಜೆಪಿಯನ್ನು ಟ್ಯಾಗ್‌ ಮಾಡಿದ್ದಾರೆ.

ಭೀಮನಗೌಡ ಪರಗೊಂಡ ಅವರು ಲಗತ್ತಿಸಿರುವ ಲಿಂಕ್‌ ಕ್ಲಿಕ್ ಮಾಡಿದರೆ, ‘ಹಿಂದೂ’ ಎಂಬ ಪದದ ಹಿನ್ನೆಲೆಯ ಕುರಿತು ಮಾಡಲಾಗಿರುವ ಹಲವಾರು ಉಲ್ಲೇಖನಗಳನ್ನು ನಂದ ನಂದನದಾಸ ಅವರ ಲೇಖನದಲ್ಲಿ ಕಾಣಬಹುದು.

ಲೇಖನದಲ್ಲಿರುವ ಆಯ್ದ ಕೆಲವು ಅಂಶಗಳು ಹೀಗಿವೆ:

‘ಹಿಂದೂ’ ಎಂಬ ಪದವು ಸಂಸ್ಕೃತದದ್ದಲ್ಲ ಎಂಬುದನ್ನು ನಾವು ನೆನಪಿನಲ್ಲಿಡಬೇಕು. ಯಾವುದೇ ವೈದಿಕ ಸಾಹಿತ್ಯದಲ್ಲಿ ಇದು ಕಂಡುಬರುವುದಿಲ್ಲ ಎಂದು ಹಲವು ವಿದ್ವಾಂಸರು ಹೇಳುತ್ತಾರೆ. ಹಾಗಾದರೆ ಅಂತಹ ಹೆಸರು ನಿಜವಾಗಿಯೂ ವೈದಿಕ ಮಾರ್ಗ ಅಥವಾ ಸಂಸ್ಕೃತಿಯನ್ನು ಹೇಗೆ ಪ್ರತಿನಿಧಿಸುತ್ತದೆ? ಮತ್ತು ವೈದಿಕ ಸಾಹಿತ್ಯವಿಲ್ಲದೆ, “ಹಿಂದೂ ಧರ್ಮಕ್ಕೆ ಯಾವುದೇ ಆಧಾರವಿಲ್ಲ”….

‘ಹಿಂದೂ’ ಎಂಬ ಹೆಸರನ್ನು ಹೊರಗಿನವರು, ಸಿಂಧು ನದಿಯ ಹೆಸರನ್ನು ಸರಿಯಾಗಿ ಉಚ್ಚರಿಸಲು ಸಾಧ್ಯವಾಗದ ಆಕ್ರಮಣಕಾರರು ಬಳಸಿರುವುದಾಗಿ ಹೆಚ್ಚಿನ ವಿದ್ವಾಂಸರು ಭಾವಿಸುತ್ತಾರೆ. ಸಂಸ್ಕೃತ ನಿಘಂಟುತಜ್ಞರಾದ ಸರ್ ಮೋನಿಯರ್ ವಿಲಿಯಮ್ಸ್ ಪ್ರಕಾರ, “ಹಿಂದೂ ಅಥವಾ ಭಾರತ ಪದಗಳಿಗೆ ಸ್ಥಳೀಯ ಮೂಲವನ್ನು ಕಂಡುಹಿಡಿಯಲಾಗುವುದಿಲ್ಲ. ಈ ಪದಗಳು ಯಾವುದೇ ಬೌದ್ಧ, ಜೈನ ಪಠ್ಯಗಳಲ್ಲಿ ಅಥವಾ ಭಾರತದ ಯಾವುದೇ ಅಧಿಕೃತ 23 ಭಾಷೆಗಳಲ್ಲಿ ಕಂಡುಬರುವುದಿಲ್ಲ….”

ದಿ ಗ್ರೇಟ್ ಅಲೆಕ್ಸಾಂಡರ್ ಮೊದಲಿಗೆ ಸಿಂಧು ನದಿಯನ್ನು ‘ಇಂದು’ ಎಂದು ಮರುನಾಮಕರಣ ಮಾಡಿದನು ಎಂದು ಕೆಲವು ಮೂಲಗಳು ಹೇಳುತ್ತವೆ. ಆರಂಭದಲ್ಲಿನ “ಎಸ್‌‌” ಅನ್ನು ಕೈಬಿಡಲಾಯಿತು, ಹೀಗಾಗಿ ಗ್ರೀಕರು ಉಚ್ಚರಿಸಲು ಸುಲಭವಾಯಿತು. ಇದು ‘ಇಂದೂಸ್‌’ ಎಂದು ಹೆಸರಾಯಿತು. ಕ್ರಿಸ್ತ ಪೂರ್ವ 325ರ ಸುಮಾರಿಗೆ ಅಲೆಕ್ಸಾಂಡರ್ ಭಾರತವನ್ನು ಆಕ್ರಮಿಸಿದಾಗ ಅವನ ಮೆಸಿಡೋನಿಯನ್ ಪಡೆಗಳು ಸಿಂಧೂ ನದಿಯ ಪೂರ್ವದ ಭೂಮಿಯನ್ನು ಭಾರತ ಎಂದು ಕರೆದರು. ಇದನ್ನು ವಿಶೇಷವಾಗಿ ಬ್ರಿಟಿಷ್ ಆಳ್ವಿಕೆಯಲ್ಲಿ ಬಳಸಲಾಗುತ್ತಿತ್ತು….

ನಂತರ, ಮುಸ್ಲಿಂ ಆಕ್ರಮಣಕಾರರು ಅಫ್ಘಾನಿಸ್ತಾನ ಮತ್ತು ಪರ್ಷಿಯಾದಂತಹ ಸ್ಥಳಗಳಿಂದ ಆಗಮಿಸಿದಾಗ, ಅವರು ಸಿಂಧೂ ನದಿಯನ್ನು ಹಿಂದೂ ನದಿ ಎಂದು ಕರೆದರು. ಅದರ ನಂತರ, ಸಿಂಧೂ ನದಿ ಇರುವ ಭಾರತದ ವಾಯುವ್ಯ ಪ್ರಾಂತ್ಯಗಳಲ್ಲಿನ ಆ ಭೂಪ್ರದೇಶದ ನಿವಾಸಿಗಳನ್ನು ವಿವರಿಸಲು ‘ಹಿಂದೂ’ ಎಂಬ ಹೆಸರನ್ನು ಬಳಸಲಾಯಿತು ಮತ್ತು ಆ ಪ್ರದೇಶವನ್ನು ‘ಹಿಂದುಸ್ತಾನ್’ ಎಂದು ಕರೆಯಲಾಯಿತು.

‘ಹಿಂದೂ’ ಎಂಬ ಹೆಸರಿನ ಇನ್ನೊಂದು ನೋಟವು ಭಾರತದ ಆಧ್ಯಾತ್ಮಿಕ ಪಥಗಳ ನಿಜವಾದ ಸಾರವನ್ನು ಅರ್ಥಮಾಡಿಕೊಳ್ಳಲು ಕಾರಣವಾಗುವ ಗೊಂದಲಮಯ ಸ್ವಭಾವವನ್ನು ತೋರಿಸುತ್ತದೆ. ಆರ್.ಎನ್.ಸೂರ್ಯನಾರಾಯಣ ಅವರು ತಮ್ಮ ಯೂನಿವರ್ಸಲ್ ರಿಲಿಜನ್ (ಪು.1-2, 1952ರಲ್ಲಿ ಮೈಸೂರಿನಲ್ಲಿ ಪ್ರಕಟವಾದ) ಪುಸ್ತಕದಲ್ಲಿ ಬರೆದಿರುವಂತೆ, “….ಪಾಶ್ಚಿಮಾತ್ಯ ವಿದ್ವಾಂಸರು ಮತ್ತು ಇತಿಹಾಸಕಾರರು ಕೂಡ ಈ ಬ್ರಾಹ್ಮಣಭೂಮಿಯ ನಿಜವಾದ ಹೆಸರನ್ನು ಪತ್ತೆಹಚ್ಚಲು ವಿಫಲರಾಗಿದ್ದಾರೆ…. ಅವರು ಅದನ್ನು ‘ಹಿಂದೂ’ ಎಂಬ ಅರ್ಥಹೀನ ಪದದಿಂದ ಕರೆದು ತೃಪ್ತಿಪಡಿಸಿದ್ದಾರೆ. ವಿದೇಶಿಗರು ನವೀಕರಿಸಿದ ಈ ಪದವನ್ನು ನಮ್ಮ ಯಾವುದೇ ಸಂಸ್ಕೃತ ಲೇಖಕರು, ಪೂಜ್ಯ ಆಚಾರ್ಯರು ತಮ್ಮ ಕೃತಿಗಳಲ್ಲಿ ಬಳಸಿಲ್ಲ. ಹಿಂದೂ ಪದವನ್ನು ನಿರಂತರವಾಗಿ ಬಳಸಬೇಕೆಂದು ಒತ್ತಾಯಿಸಲು ರಾಜಕೀಯ ಶಕ್ತಿಯು ಕಾರಣವಾಗಿದೆ ಎಂದು ತೋರುತ್ತದೆ. ಹಿಂದೂ ಎಂಬ ಪದವು ಪರ್ಷಿಯನ್ ಸಾಹಿತ್ಯದಲ್ಲಿ ಕಂಡುಬರುತ್ತದೆ. ಹಿಂದೂ-ಇ-ಫಲಾಕ್ ಎಂದರೆ ‘ಆಕಾಶದ ಕಪ್ಪು’ ಮತ್ತು ‘ಶನಿ’ ಎಂದರ್ಥ…. ಪರ್ಷಿಯನ್ನರು ಸಿಂಧುವಿನ ಪವಿತ್ರ ನೆಲಕ್ಕೆ ಬಂದಾಗ, ಹಿಂದೂ ಎಂಬ ಹೆಸರನ್ನು ಇಟ್ಟರು ಎಂದು ಇತಿಹಾಸದಲ್ಲಿ ಓದಿರುವುದು ನಾಚಿಕೆಗೇಡಿನ ಮತ್ತು ಹಾಸ್ಯಾಸ್ಪದವಾಗಿದೆ.

ಹಿಂದೂ ಎಂಬ ಹೆಸರಿನ ಮೂಲದ ಇನ್ನೊಂದು ದೃಷ್ಟಿಕೋನವು ಅವಹೇಳನಕಾರಿ ಅರ್ಥವನ್ನು ಆಧರಿಸಿದೆ. “ಇದಲ್ಲದೆ, ಈ ಹೆಸರನ್ನು [ಹಿಂದೂ] ಮೂಲ ಆರ್ಯ ಜನಾಂಗಕ್ಕೆ ಮುಸ್ಲಿಂ ಆಕ್ರಮಣಕಾರರು ಅವಮಾನಿಸಲು ನೀಡಿರುವುದಾಗಿದೆ. ನಮ್ಮ ಲೇಖಕರು ಹೇಳುವಂತೆ ಪರ್ಷಿಯನ್ ಭಾಷೆಯಲ್ಲಿ ಈ ಪದದ ಅರ್ಥ ಗುಲಾಮ. ಇಸ್ಲಾಂ ಪ್ರಕಾರ, ಇಸ್ಲಾಂ ಧರ್ಮವನ್ನು ಸ್ವೀಕರಿಸದ ಎಲ್ಲರನ್ನು ಗುಲಾಮರು ಎಂದು ಕರೆಯಲಾಗುತ್ತದೆ” (ಉಲ್ಲೇಖ: 1898ರಲ್ಲಿ ಲಾಹೋರ್‌ನಲ್ಲಿ ಪ್ರಕಟವಾಗಿರುವ ಮಹರ್ಷಿ ಶ್ರೀ ದಯಾನಂದ ಸರಸ್ವತಿಯವರ ಕೃತಿ).

“ಇದಲ್ಲದೆ, 1964 ರಲ್ಲಿ ಲಕ್ನೋದಲ್ಲಿ ಪ್ರಕಟವಾದ ಲುಘೆತ್-ಎ-ಕಿಶ್ವರಿ ಎಂಬ ಪರ್ಷಿಯನ್ ನಿಘಂಟಿನಲ್ಲಿ ಹಿಂದೂ ಪದದ ಅರ್ಥವನ್ನು- ‘ಚೋರ್ [ಕಳ್ಳ], ಡಕೂ [ಡಕಾಯಿಟ್], ರಾಹ್ಜಾನ್ [ವೇಲೇಯರ್] ಮತ್ತು ಗುಲಾಮ್ [ಗುಲಾಮ]” ಎಂದು ನೀಡಲಾಗಿದೆ. ಮತ್ತೊಂದು ನಿಘಂಟಾದ ಉರ್ದು-ಫಿರೋಜ್-ಉಲ್-ಲಘಾತ್ (ಭಾಗ ಒಂದನೇ, ಪುಟ 615)ನಲ್ಲಿ ಹಿಂದೂ ಪದದ ಪರ್ಷಿಯನ್ ಅರ್ಥವನ್ನು- ಬರ್ದಾ (ವಿಧೇಯ ಸೇವಕ), ಸಿಯಾ ಫಾಮ್ (ಕಪ್ಪು ಬಣ್ಣ) ಮತ್ತು ಕಾಲಾ (ಕಪ್ಪು) ಎಂದು ವಿವರಿಸಲಾಗಿದೆ.

ಇದನ್ನೂ ಓದಿರಿ: ಸದುದ್ದೇಶದಿಂದ ನೀಡಿದ ಹೇಳಿಕೆ ಹಿಂಪಡೆಯುವೆ: ಸತೀಶ್ ಜಾರಕಿಹೊಳಿ

ಆದ್ದರಿಂದ, ಮೂಲತಃ, ಹಿಂದೂ ಎಂಬುದು ಕೇವಲ ಮುಸ್ಲಿಂ ಮೂಲದ ಮುಂದುವರಿಕೆಯಾಗಿದ್ದು ಅದು ಕಳೆದ 1300 ವರ್ಷಗಳಲ್ಲಿ ಮಾತ್ರ ಬಳಕೆಗೆ ಬಂದಿತು. ಹೀಗಾಗಿ ಇದು ಮಾನ್ಯವಾದ ಸಂಸ್ಕೃತ ಪದವಲ್ಲ, ನಿಜವಾದ ವೈದಿಕ ಸಂಸ್ಕೃತಿ ಅಥವಾ ವೈದಿಕ ಆಧ್ಯಾತ್ಮಿಕ ಮಾರ್ಗದೊಂದಿಗೆ ಯಾವುದೇ ಸಂಬಂಧವನ್ನು ಇದು ಹೊಂದಿಲ್ಲ ಎಂದು ನಾವು ಅರ್ಥಮಾಡಿಕೊಳ್ಳಬಹುದು. “ಹಿಂದೂ ಧರ್ಮ” ಎಂದು ಕರೆಯಲ್ಪಡುವ ಯಾವುದೇ ಧರ್ಮವು ಅಸ್ತಿತ್ವದಲ್ಲಿಲ್ಲ…. (ಪೂರ್ಣ ಲೇಖನವನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ) (ಲೇಖನದ ‘ಆರ್ಕೈವ್‌ ಲಿಂಕ್‌’)

ಸತೀಶ್ ಜಾರಕಿಹೊಳಿಯವರ ಮೇಲಷ್ಟೇ ವಿರೋಧವೇಕೆ?

ಹಿಂದೂ ಪದಕ್ಕೆ ಹೀನಾರ್ಥಗಳಿವೆ ಎಂದು ತಿಳಿಸುವ ಲೇಖವನ್ನು ಧಾರ್ಮಿಕ ಸಂಸ್ಥೆಯೊಂದು ಕಳೆದ ನಾಲ್ಕು ವರ್ಷಗಳ ಹಿಂದೆಯೇ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಸತೀಶ್ ಜಾರಕಿಹೊಳಿಯವರು ಹೇಳಿದ್ದನ್ನೇ ಇಸ್ಕಾನ್‌ ಕೂಡ ಹೇಳಿದೆ. ಬಿಜೆಪಿ ಹಾಗೂ ಸಂಘಪರಿವಾರ ‘ಇಸ್ಕಾನ್‌’ ವಿರುದ್ಧ ಹೋರಾಡುತ್ತದೆಯೇ ಎಂಬ ಪ್ರಶ್ನೆ ಈಗ ಮುನ್ನೆಲೆಗೆ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಾರಕಿಹೊಳಿರವರು

    ಇವರ ಚೀರಾಟಗಳಿಗೆ ಬೆದರಿ ಶೀಘ್ರವಾಗಿ ಬಬಿಜೆಪಿ ಸೇರಿಬಿಟ್ಟರೆ ಸಬ್ ಕಾ ಸಾಥ್ ಸಬ್ಕಾ ವಿನಾಶ್ ಆದರೂ ಅಸಲೀ ದೇಶಭಕ್ತ ಆಗುತ್ತಾರೆ.

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...