‘ಹಿಂದೂ’ ಎಂಬ ಪದ ಅವಮಾನಕರ ಶಬ್ದವಾಗಿದ್ದು, ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಎಂದು ಚಿಂತಕ ಕೆ.ಎಸ್. ಭಗವಾನ್ ಹೇಳಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ. ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಿಣಿ ಬ್ರಿಡ್ಜ್ನಲ್ಲಿ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿಂದೂ ಎಂಬುವುದು
ಹಿಂದೂ ಎಂಬ ಪದದ ಬಗ್ಗೆ ಮಾತನಾಡಿದ ಕೆ.ಎಸ್. ಭಗವಾನ್ ಅವರು, ಹಿಂದೂ ಶಬ್ದ ಬಂದಿದ್ದು 1030ನೇ ಇಸವಿಯಲ್ಲಿ. ಪರ್ಷಿಯನ್ ಲೇಖಕ ಆಲ್ಬರೋನಿ ಭಾರತದ ಬಗ್ಗೆ ಬರೆಯುತ್ತಾ ಸಿಂಧೂ ನದಿಯನ್ನು ಹಿಂದೂ ಅಂತ ಕರೆದರು. ಪರ್ಷಿಯನ್ ಭಾಷೆಯಲ್ಲಿ ‘ಸ’ ಕಾರ ಇಲ್ವಂತೆ, ‘ಸ’ ಕಾರ ‘ಹ’ ಕಾರ ಆಗುತ್ತಂತೆ. ಮುಂದೆ ಅಕ್ಬರ್ನ ಕಾಲದಲ್ಲಿ ಈ ದೇಶಕ್ಕೆ ಹಿಂದೂಸ್ತಾನ ಎಂದು ಹೆಸರು ಬಂತು. ಹೀಗಾಗಿ ರಾಮಾಯಣ, ಮಹಾಭಾರತ, ಪುರಾಣ, ವೇದ ಗ್ರಂಥಗಳಲ್ಲಿ ಹಿಂದೂ ಅನ್ನೋ ಹೆಸರಿಲ್ಲ ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಕಾಶ್ಮೀರದ ಶೈವ ಗ್ರಂಥಗಳಲ್ಲಿ ಹಿಂದೂ ಪದಕ್ಕೆ ಯಾರೂ ಹೀನನಾಗಿದ್ದಾರೊ, ಯಾರು ದೂಷಣೆಗೆ ಒಳಗಾಗಿದ್ದಾರೋ ಅವನು ಹಿಂದೂ ಎಂದು ಇದೆ. ಹಾಗಾಗಿ ಹಿಂದೂ ಅನ್ನೋ ಶಬ್ದ ಬಹಳ ಅಪಮಾನಕರವಾಗಿದೆ. ಚಾತುರ್ವಣದಲ್ಲಿ ಶೂದ್ರ ಅನ್ನೋ ಶಬ್ದ ಸಹ ಮನುಸ್ಮೃತಿ ಪ್ರಕಾರ ಅಪಮಾನಕ್ಕೆ ಒಳಗಾಗಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಎಂಬುವುದು
ಸಂವಿಧಾನದಲ್ಲಿ ಸಮಾನತೆ ಸ್ವಾತಂತ್ರ್ಯ ಸೇರಿ ದೊಡ್ಡ ತತ್ವವನ್ನು ಬಾಬಾ ಸಾಹೇಬರು ಅಳವಡಿಸಿದ್ದಾರೆ. ಸಂವಿಧಾನ ತೆಗೆದು ಹಾಕಲು ನಮ್ಮ ದೇಶದ ಜನ ಅವಕಾಶ ನೀಡಬಾರದು. ಮನುಸ್ಮೃತಿಯನ್ನು ವಾಪಸ್ ತರಬಾರದು. ಮನುಸ್ಮೃತಿಯನ್ನು ಬಾಬಾ ಸಾಹೇಬರು, ಪೆರಿಯಾರ್ ಸುಟ್ಟು ಹಾಕಿದರು. ಸಂವಿಧಾನದ ಪರ ಹೋರಾಡಬೇಕು ಮನುಸ್ಮೃತಿಯನ್ನು ತಿರಸ್ಕರಿಸಬೇಕು ಎಂದು ಭಗವಾನ್ ಹೇಳಿದ್ದಾರೆ.
ಒಂದೊಂದು ಮಠ ಒಂದೊಂದು ಸಮುದಾಯಕ್ಕೆ ಸೀಮಿತವಾಗಿವೆ. ಇದರಿಂದ ಜನರ ಮನಸ್ಸು ಬಹಳ ಸಂಕುಚಿತವಾಗುತ್ತಿದೆ. ಎಲ್ಲರೂ ಸಮಾನರು ಅನ್ನೋ ಭಾವನೆಗೆ ಅಡ್ಡಿ ಬರುತ್ತಿದೆ. ಜನರು ಇದನ್ನು ದಾಟಿ ಬರಬೇಕು. ದೇಶದಲ್ಲಿ ಬೌದ್ಧ ಧರ್ಮ 1,500 ವರ್ಷಕಾಲ ಹರಡಿತ್ತು. ಬುದ್ಧ ಈ ಮಣ್ಣಿನ ಮಗನಾಗಿದ್ದು, ಆತ ಒಬ್ಬ ರೈತನ ಮಗ. ಬೌದ್ಧ ಸ್ತೂಪಗಳು, ದೇವಾಲಯಗಳು ಸೇರಿದಂತೆ ಎಲ್ಲವನ್ನೂ ಒಡೆದು ಹಾಕಲಾಗಿದೆ. ಅದನ್ನು ಯಾರು ಮಾಡಿದ್ದು ಎಂದು ಪತ್ತೆ ಹಚ್ಚಿ ಮೂಲ ವ್ಯಕ್ತಿಗಳಿಗೆ ವಾಪಸ್ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇದನ್ನೂಓದಿ: ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ
ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ


