Homeಕರ್ನಾಟಕ'ಹಿಂದೂ' ಎಂಬುವುದು ಅವಮಾನಕರ ಶಬ್ದ - ಚಿಂತಕ ಕೆ.ಎಸ್. ಭಗವಾನ್

‘ಹಿಂದೂ’ ಎಂಬುವುದು ಅವಮಾನಕರ ಶಬ್ದ – ಚಿಂತಕ ಕೆ.ಎಸ್. ಭಗವಾನ್

- Advertisement -
- Advertisement -

‘ಹಿಂದೂ’ ಎಂಬ ಪದ ಅವಮಾನಕರ ಶಬ್ದವಾಗಿದ್ದು, ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಎಂದು ಚಿಂತಕ ಕೆ.ಎಸ್. ಭಗವಾನ್ ಹೇಳಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ. ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಿಣಿ ಬ್ರಿಡ್ಜ್‌ನಲ್ಲಿ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿಂದೂ ಎಂಬುವುದು

ಹಿಂದೂ ಎಂಬ ಪದದ ಬಗ್ಗೆ ಮಾತನಾಡಿದ ಕೆ.ಎಸ್. ಭಗವಾನ್ ಅವರು, ಹಿಂದೂ ಶಬ್ದ ಬಂದಿದ್ದು 1030ನೇ ಇಸವಿಯಲ್ಲಿ. ಪರ್ಷಿಯನ್ ಲೇಖಕ‌ ಆಲ್ಬರೋನಿ ಭಾರತದ ಬಗ್ಗೆ ಬರೆಯುತ್ತಾ ಸಿಂಧೂ ನದಿಯನ್ನು ಹಿಂದೂ ಅಂತ ಕರೆದರು. ಪರ್ಷಿಯನ್ ಭಾಷೆಯಲ್ಲಿ ‘ಸ’ ಕಾರ ಇಲ್ವಂತೆ, ‘ಸ’ ಕಾರ ‘ಹ’ ಕಾರ ಆಗುತ್ತಂತೆ. ಮುಂದೆ ಅಕ್ಬರ್‌ನ ಕಾಲದಲ್ಲಿ ಈ ದೇಶಕ್ಕೆ ಹಿಂದೂಸ್ತಾನ ಎಂದು ಹೆಸರು ಬಂತು. ಹೀಗಾಗಿ ರಾಮಾಯಣ, ಮಹಾಭಾರತ, ಪುರಾಣ, ವೇದ ಗ್ರಂಥಗಳಲ್ಲಿ ಹಿಂದೂ ಅನ್ನೋ ಹೆಸರಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಾಶ್ಮೀರದ ಶೈವ ಗ್ರಂಥಗಳಲ್ಲಿ ಹಿಂದೂ ಪದಕ್ಕೆ ಯಾರೂ ಹೀನನಾಗಿದ್ದಾರೊ, ಯಾರು ದೂಷಣೆಗೆ ಒಳಗಾಗಿದ್ದಾರೋ ಅವನು ಹಿಂದೂ ಎಂದು ಇದೆ. ಹಾಗಾಗಿ ಹಿಂದೂ ಅನ್ನೋ ಶಬ್ದ ಬಹಳ ಅಪಮಾನಕರವಾಗಿದೆ. ಚಾತುರ್ವಣದಲ್ಲಿ ಶೂದ್ರ ಅನ್ನೋ ಶಬ್ದ ಸಹ ಮನುಸ್ಮೃತಿ ಪ್ರಕಾರ ಅಪಮಾನಕ್ಕೆ ಒಳಗಾಗಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಎಂಬುವುದು

ಸಂವಿಧಾನದಲ್ಲಿ ಸಮಾನತೆ ಸ್ವಾತಂತ್ರ್ಯ ಸೇರಿ ದೊಡ್ಡ ತತ್ವವನ್ನು ಬಾಬಾ ಸಾಹೇಬರು ಅಳವಡಿಸಿದ್ದಾರೆ. ಸಂವಿಧಾನ ತೆಗೆದು ಹಾಕಲು ‌ನಮ್ಮ ದೇಶದ ಜನ ಅವಕಾಶ ನೀಡಬಾರದು. ಮನುಸ್ಮೃತಿಯನ್ನು ವಾಪಸ್ ತರಬಾರದು. ಮನುಸ್ಮೃತಿಯನ್ನು ಬಾಬಾ ಸಾಹೇಬರು, ಪೆರಿಯಾರ್ ಸುಟ್ಟು ಹಾಕಿದರು. ಸಂವಿಧಾನದ ಪರ ಹೋರಾಡಬೇಕು ಮನುಸ್ಮೃತಿಯನ್ನು ತಿರಸ್ಕರಿಸಬೇಕು ಎಂದು ಭಗವಾನ್ ಹೇಳಿದ್ದಾರೆ.

ಒಂದೊಂದು ಮಠ ಒಂದೊಂದು ಸಮುದಾಯಕ್ಕೆ ಸೀಮಿತವಾಗಿವೆ. ಇದರಿಂದ ಜನರ ಮನಸ್ಸು ಬಹಳ ಸಂಕುಚಿತವಾಗುತ್ತಿದೆ. ಎಲ್ಲರೂ ಸಮಾನರು ಅನ್ನೋ ಭಾವನೆಗೆ ಅಡ್ಡಿ ಬರುತ್ತಿದೆ. ಜನರು ಇದನ್ನು ದಾಟಿ ಬರಬೇಕು. ದೇಶದಲ್ಲಿ ಬೌದ್ಧ ಧರ್ಮ 1,500 ವರ್ಷಕಾಲ ಹರಡಿತ್ತು. ಬುದ್ಧ ಈ ಮಣ್ಣಿನ ಮಗನಾಗಿದ್ದು, ಆತ ಒಬ್ಬ ರೈತನ ಮಗ. ಬೌದ್ಧ ಸ್ತೂಪಗಳು, ದೇವಾಲಯಗಳು ಸೇರಿದಂತೆ ಎಲ್ಲವನ್ನೂ ಒಡೆದು ಹಾಕಲಾಗಿದೆ. ಅದನ್ನು ಯಾರು ಮಾಡಿದ್ದು ಎಂದು ಪತ್ತೆ ಹಚ್ಚಿ ಮೂಲ ವ್ಯಕ್ತಿಗಳಿಗೆ ವಾಪಸ್ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂಓದಿ:  ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...