Homeಕರ್ನಾಟಕ'ಹಿಂದೂ' ಎಂಬುವುದು ಅವಮಾನಕರ ಶಬ್ದ - ಚಿಂತಕ ಕೆ.ಎಸ್. ಭಗವಾನ್

‘ಹಿಂದೂ’ ಎಂಬುವುದು ಅವಮಾನಕರ ಶಬ್ದ – ಚಿಂತಕ ಕೆ.ಎಸ್. ಭಗವಾನ್

- Advertisement -
- Advertisement -

‘ಹಿಂದೂ’ ಎಂಬ ಪದ ಅವಮಾನಕರ ಶಬ್ದವಾಗಿದ್ದು, ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಎಂದು ಚಿಂತಕ ಕೆ.ಎಸ್. ಭಗವಾನ್ ಹೇಳಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ. ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಿಣಿ ಬ್ರಿಡ್ಜ್‌ನಲ್ಲಿ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿಂದೂ ಎಂಬುವುದು

ಹಿಂದೂ ಎಂಬ ಪದದ ಬಗ್ಗೆ ಮಾತನಾಡಿದ ಕೆ.ಎಸ್. ಭಗವಾನ್ ಅವರು, ಹಿಂದೂ ಶಬ್ದ ಬಂದಿದ್ದು 1030ನೇ ಇಸವಿಯಲ್ಲಿ. ಪರ್ಷಿಯನ್ ಲೇಖಕ‌ ಆಲ್ಬರೋನಿ ಭಾರತದ ಬಗ್ಗೆ ಬರೆಯುತ್ತಾ ಸಿಂಧೂ ನದಿಯನ್ನು ಹಿಂದೂ ಅಂತ ಕರೆದರು. ಪರ್ಷಿಯನ್ ಭಾಷೆಯಲ್ಲಿ ‘ಸ’ ಕಾರ ಇಲ್ವಂತೆ, ‘ಸ’ ಕಾರ ‘ಹ’ ಕಾರ ಆಗುತ್ತಂತೆ. ಮುಂದೆ ಅಕ್ಬರ್‌ನ ಕಾಲದಲ್ಲಿ ಈ ದೇಶಕ್ಕೆ ಹಿಂದೂಸ್ತಾನ ಎಂದು ಹೆಸರು ಬಂತು. ಹೀಗಾಗಿ ರಾಮಾಯಣ, ಮಹಾಭಾರತ, ಪುರಾಣ, ವೇದ ಗ್ರಂಥಗಳಲ್ಲಿ ಹಿಂದೂ ಅನ್ನೋ ಹೆಸರಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಾಶ್ಮೀರದ ಶೈವ ಗ್ರಂಥಗಳಲ್ಲಿ ಹಿಂದೂ ಪದಕ್ಕೆ ಯಾರೂ ಹೀನನಾಗಿದ್ದಾರೊ, ಯಾರು ದೂಷಣೆಗೆ ಒಳಗಾಗಿದ್ದಾರೋ ಅವನು ಹಿಂದೂ ಎಂದು ಇದೆ. ಹಾಗಾಗಿ ಹಿಂದೂ ಅನ್ನೋ ಶಬ್ದ ಬಹಳ ಅಪಮಾನಕರವಾಗಿದೆ. ಚಾತುರ್ವಣದಲ್ಲಿ ಶೂದ್ರ ಅನ್ನೋ ಶಬ್ದ ಸಹ ಮನುಸ್ಮೃತಿ ಪ್ರಕಾರ ಅಪಮಾನಕ್ಕೆ ಒಳಗಾಗಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಎಂಬುವುದು

ಸಂವಿಧಾನದಲ್ಲಿ ಸಮಾನತೆ ಸ್ವಾತಂತ್ರ್ಯ ಸೇರಿ ದೊಡ್ಡ ತತ್ವವನ್ನು ಬಾಬಾ ಸಾಹೇಬರು ಅಳವಡಿಸಿದ್ದಾರೆ. ಸಂವಿಧಾನ ತೆಗೆದು ಹಾಕಲು ‌ನಮ್ಮ ದೇಶದ ಜನ ಅವಕಾಶ ನೀಡಬಾರದು. ಮನುಸ್ಮೃತಿಯನ್ನು ವಾಪಸ್ ತರಬಾರದು. ಮನುಸ್ಮೃತಿಯನ್ನು ಬಾಬಾ ಸಾಹೇಬರು, ಪೆರಿಯಾರ್ ಸುಟ್ಟು ಹಾಕಿದರು. ಸಂವಿಧಾನದ ಪರ ಹೋರಾಡಬೇಕು ಮನುಸ್ಮೃತಿಯನ್ನು ತಿರಸ್ಕರಿಸಬೇಕು ಎಂದು ಭಗವಾನ್ ಹೇಳಿದ್ದಾರೆ.

ಒಂದೊಂದು ಮಠ ಒಂದೊಂದು ಸಮುದಾಯಕ್ಕೆ ಸೀಮಿತವಾಗಿವೆ. ಇದರಿಂದ ಜನರ ಮನಸ್ಸು ಬಹಳ ಸಂಕುಚಿತವಾಗುತ್ತಿದೆ. ಎಲ್ಲರೂ ಸಮಾನರು ಅನ್ನೋ ಭಾವನೆಗೆ ಅಡ್ಡಿ ಬರುತ್ತಿದೆ. ಜನರು ಇದನ್ನು ದಾಟಿ ಬರಬೇಕು. ದೇಶದಲ್ಲಿ ಬೌದ್ಧ ಧರ್ಮ 1,500 ವರ್ಷಕಾಲ ಹರಡಿತ್ತು. ಬುದ್ಧ ಈ ಮಣ್ಣಿನ ಮಗನಾಗಿದ್ದು, ಆತ ಒಬ್ಬ ರೈತನ ಮಗ. ಬೌದ್ಧ ಸ್ತೂಪಗಳು, ದೇವಾಲಯಗಳು ಸೇರಿದಂತೆ ಎಲ್ಲವನ್ನೂ ಒಡೆದು ಹಾಕಲಾಗಿದೆ. ಅದನ್ನು ಯಾರು ಮಾಡಿದ್ದು ಎಂದು ಪತ್ತೆ ಹಚ್ಚಿ ಮೂಲ ವ್ಯಕ್ತಿಗಳಿಗೆ ವಾಪಸ್ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂಓದಿ:  ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...