Homeಕರ್ನಾಟಕ'ಹಿಂದೂ' ಎಂಬುವುದು ಅವಮಾನಕರ ಶಬ್ದ - ಚಿಂತಕ ಕೆ.ಎಸ್. ಭಗವಾನ್

‘ಹಿಂದೂ’ ಎಂಬುವುದು ಅವಮಾನಕರ ಶಬ್ದ – ಚಿಂತಕ ಕೆ.ಎಸ್. ಭಗವಾನ್

- Advertisement -
- Advertisement -

‘ಹಿಂದೂ’ ಎಂಬ ಪದ ಅವಮಾನಕರ ಶಬ್ದವಾಗಿದ್ದು, ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಎಂದು ಚಿಂತಕ ಕೆ.ಎಸ್. ಭಗವಾನ್ ಹೇಳಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ. ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಿಣಿ ಬ್ರಿಡ್ಜ್‌ನಲ್ಲಿ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿಂದೂ ಎಂಬುವುದು

ಹಿಂದೂ ಎಂಬ ಪದದ ಬಗ್ಗೆ ಮಾತನಾಡಿದ ಕೆ.ಎಸ್. ಭಗವಾನ್ ಅವರು, ಹಿಂದೂ ಶಬ್ದ ಬಂದಿದ್ದು 1030ನೇ ಇಸವಿಯಲ್ಲಿ. ಪರ್ಷಿಯನ್ ಲೇಖಕ‌ ಆಲ್ಬರೋನಿ ಭಾರತದ ಬಗ್ಗೆ ಬರೆಯುತ್ತಾ ಸಿಂಧೂ ನದಿಯನ್ನು ಹಿಂದೂ ಅಂತ ಕರೆದರು. ಪರ್ಷಿಯನ್ ಭಾಷೆಯಲ್ಲಿ ‘ಸ’ ಕಾರ ಇಲ್ವಂತೆ, ‘ಸ’ ಕಾರ ‘ಹ’ ಕಾರ ಆಗುತ್ತಂತೆ. ಮುಂದೆ ಅಕ್ಬರ್‌ನ ಕಾಲದಲ್ಲಿ ಈ ದೇಶಕ್ಕೆ ಹಿಂದೂಸ್ತಾನ ಎಂದು ಹೆಸರು ಬಂತು. ಹೀಗಾಗಿ ರಾಮಾಯಣ, ಮಹಾಭಾರತ, ಪುರಾಣ, ವೇದ ಗ್ರಂಥಗಳಲ್ಲಿ ಹಿಂದೂ ಅನ್ನೋ ಹೆಸರಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಾಶ್ಮೀರದ ಶೈವ ಗ್ರಂಥಗಳಲ್ಲಿ ಹಿಂದೂ ಪದಕ್ಕೆ ಯಾರೂ ಹೀನನಾಗಿದ್ದಾರೊ, ಯಾರು ದೂಷಣೆಗೆ ಒಳಗಾಗಿದ್ದಾರೋ ಅವನು ಹಿಂದೂ ಎಂದು ಇದೆ. ಹಾಗಾಗಿ ಹಿಂದೂ ಅನ್ನೋ ಶಬ್ದ ಬಹಳ ಅಪಮಾನಕರವಾಗಿದೆ. ಚಾತುರ್ವಣದಲ್ಲಿ ಶೂದ್ರ ಅನ್ನೋ ಶಬ್ದ ಸಹ ಮನುಸ್ಮೃತಿ ಪ್ರಕಾರ ಅಪಮಾನಕ್ಕೆ ಒಳಗಾಗಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಎಂಬುವುದು

ಸಂವಿಧಾನದಲ್ಲಿ ಸಮಾನತೆ ಸ್ವಾತಂತ್ರ್ಯ ಸೇರಿ ದೊಡ್ಡ ತತ್ವವನ್ನು ಬಾಬಾ ಸಾಹೇಬರು ಅಳವಡಿಸಿದ್ದಾರೆ. ಸಂವಿಧಾನ ತೆಗೆದು ಹಾಕಲು ‌ನಮ್ಮ ದೇಶದ ಜನ ಅವಕಾಶ ನೀಡಬಾರದು. ಮನುಸ್ಮೃತಿಯನ್ನು ವಾಪಸ್ ತರಬಾರದು. ಮನುಸ್ಮೃತಿಯನ್ನು ಬಾಬಾ ಸಾಹೇಬರು, ಪೆರಿಯಾರ್ ಸುಟ್ಟು ಹಾಕಿದರು. ಸಂವಿಧಾನದ ಪರ ಹೋರಾಡಬೇಕು ಮನುಸ್ಮೃತಿಯನ್ನು ತಿರಸ್ಕರಿಸಬೇಕು ಎಂದು ಭಗವಾನ್ ಹೇಳಿದ್ದಾರೆ.

ಒಂದೊಂದು ಮಠ ಒಂದೊಂದು ಸಮುದಾಯಕ್ಕೆ ಸೀಮಿತವಾಗಿವೆ. ಇದರಿಂದ ಜನರ ಮನಸ್ಸು ಬಹಳ ಸಂಕುಚಿತವಾಗುತ್ತಿದೆ. ಎಲ್ಲರೂ ಸಮಾನರು ಅನ್ನೋ ಭಾವನೆಗೆ ಅಡ್ಡಿ ಬರುತ್ತಿದೆ. ಜನರು ಇದನ್ನು ದಾಟಿ ಬರಬೇಕು. ದೇಶದಲ್ಲಿ ಬೌದ್ಧ ಧರ್ಮ 1,500 ವರ್ಷಕಾಲ ಹರಡಿತ್ತು. ಬುದ್ಧ ಈ ಮಣ್ಣಿನ ಮಗನಾಗಿದ್ದು, ಆತ ಒಬ್ಬ ರೈತನ ಮಗ. ಬೌದ್ಧ ಸ್ತೂಪಗಳು, ದೇವಾಲಯಗಳು ಸೇರಿದಂತೆ ಎಲ್ಲವನ್ನೂ ಒಡೆದು ಹಾಕಲಾಗಿದೆ. ಅದನ್ನು ಯಾರು ಮಾಡಿದ್ದು ಎಂದು ಪತ್ತೆ ಹಚ್ಚಿ ಮೂಲ ವ್ಯಕ್ತಿಗಳಿಗೆ ವಾಪಸ್ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂಓದಿ:  ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...