Homeಕರ್ನಾಟಕ'ಹಿಂದೂ' ಎಂಬುವುದು ಅವಮಾನಕರ ಶಬ್ದ - ಚಿಂತಕ ಕೆ.ಎಸ್. ಭಗವಾನ್

‘ಹಿಂದೂ’ ಎಂಬುವುದು ಅವಮಾನಕರ ಶಬ್ದ – ಚಿಂತಕ ಕೆ.ಎಸ್. ಭಗವಾನ್

- Advertisement -
- Advertisement -

‘ಹಿಂದೂ’ ಎಂಬ ಪದ ಅವಮಾನಕರ ಶಬ್ದವಾಗಿದ್ದು, ಯಾರು ಹೀನನಾಗಿದ್ದಾನೋ, ಯಾರು ದೂಷಣೆಗೆ ಒಳಗಾಗಿದ್ದಾನೋ ಅವನೇ ಹಿಂದೂ ಎಂದು ಚಿಂತಕ ಕೆ.ಎಸ್. ಭಗವಾನ್ ಹೇಳಿದ್ದಾರೆ ಎಂದು ಈದಿನ.ಕಾಂ ವರದಿ ಮಾಡಿದೆ. ರಾಯಚೂರಿನ ದೇವದುರ್ಗದ ಕನಕಗುರುಪೀಠ ತಿಂಥಿಣಿ ಬ್ರಿಡ್ಜ್‌ನಲ್ಲಿ ನಡೆಯುತ್ತಿರುವ ಹಾಲುಮತ ಉತ್ಸವಕ್ಕೆ ಆಗಮಿಸಿದ್ದ ವೇಳೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿಂದೂ ಎಂಬುವುದು

ಹಿಂದೂ ಎಂಬ ಪದದ ಬಗ್ಗೆ ಮಾತನಾಡಿದ ಕೆ.ಎಸ್. ಭಗವಾನ್ ಅವರು, ಹಿಂದೂ ಶಬ್ದ ಬಂದಿದ್ದು 1030ನೇ ಇಸವಿಯಲ್ಲಿ. ಪರ್ಷಿಯನ್ ಲೇಖಕ‌ ಆಲ್ಬರೋನಿ ಭಾರತದ ಬಗ್ಗೆ ಬರೆಯುತ್ತಾ ಸಿಂಧೂ ನದಿಯನ್ನು ಹಿಂದೂ ಅಂತ ಕರೆದರು. ಪರ್ಷಿಯನ್ ಭಾಷೆಯಲ್ಲಿ ‘ಸ’ ಕಾರ ಇಲ್ವಂತೆ, ‘ಸ’ ಕಾರ ‘ಹ’ ಕಾರ ಆಗುತ್ತಂತೆ. ಮುಂದೆ ಅಕ್ಬರ್‌ನ ಕಾಲದಲ್ಲಿ ಈ ದೇಶಕ್ಕೆ ಹಿಂದೂಸ್ತಾನ ಎಂದು ಹೆಸರು ಬಂತು. ಹೀಗಾಗಿ ರಾಮಾಯಣ, ಮಹಾಭಾರತ, ಪುರಾಣ, ವೇದ ಗ್ರಂಥಗಳಲ್ಲಿ ಹಿಂದೂ ಅನ್ನೋ ಹೆಸರಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಾಶ್ಮೀರದ ಶೈವ ಗ್ರಂಥಗಳಲ್ಲಿ ಹಿಂದೂ ಪದಕ್ಕೆ ಯಾರೂ ಹೀನನಾಗಿದ್ದಾರೊ, ಯಾರು ದೂಷಣೆಗೆ ಒಳಗಾಗಿದ್ದಾರೋ ಅವನು ಹಿಂದೂ ಎಂದು ಇದೆ. ಹಾಗಾಗಿ ಹಿಂದೂ ಅನ್ನೋ ಶಬ್ದ ಬಹಳ ಅಪಮಾನಕರವಾಗಿದೆ. ಚಾತುರ್ವಣದಲ್ಲಿ ಶೂದ್ರ ಅನ್ನೋ ಶಬ್ದ ಸಹ ಮನುಸ್ಮೃತಿ ಪ್ರಕಾರ ಅಪಮಾನಕ್ಕೆ ಒಳಗಾಗಿದೆ ಎಂದು ಅವರು ಹೇಳಿದ್ದಾರೆ. ಹಿಂದೂ ಎಂಬುವುದು

ಸಂವಿಧಾನದಲ್ಲಿ ಸಮಾನತೆ ಸ್ವಾತಂತ್ರ್ಯ ಸೇರಿ ದೊಡ್ಡ ತತ್ವವನ್ನು ಬಾಬಾ ಸಾಹೇಬರು ಅಳವಡಿಸಿದ್ದಾರೆ. ಸಂವಿಧಾನ ತೆಗೆದು ಹಾಕಲು ‌ನಮ್ಮ ದೇಶದ ಜನ ಅವಕಾಶ ನೀಡಬಾರದು. ಮನುಸ್ಮೃತಿಯನ್ನು ವಾಪಸ್ ತರಬಾರದು. ಮನುಸ್ಮೃತಿಯನ್ನು ಬಾಬಾ ಸಾಹೇಬರು, ಪೆರಿಯಾರ್ ಸುಟ್ಟು ಹಾಕಿದರು. ಸಂವಿಧಾನದ ಪರ ಹೋರಾಡಬೇಕು ಮನುಸ್ಮೃತಿಯನ್ನು ತಿರಸ್ಕರಿಸಬೇಕು ಎಂದು ಭಗವಾನ್ ಹೇಳಿದ್ದಾರೆ.

ಒಂದೊಂದು ಮಠ ಒಂದೊಂದು ಸಮುದಾಯಕ್ಕೆ ಸೀಮಿತವಾಗಿವೆ. ಇದರಿಂದ ಜನರ ಮನಸ್ಸು ಬಹಳ ಸಂಕುಚಿತವಾಗುತ್ತಿದೆ. ಎಲ್ಲರೂ ಸಮಾನರು ಅನ್ನೋ ಭಾವನೆಗೆ ಅಡ್ಡಿ ಬರುತ್ತಿದೆ. ಜನರು ಇದನ್ನು ದಾಟಿ ಬರಬೇಕು. ದೇಶದಲ್ಲಿ ಬೌದ್ಧ ಧರ್ಮ 1,500 ವರ್ಷಕಾಲ ಹರಡಿತ್ತು. ಬುದ್ಧ ಈ ಮಣ್ಣಿನ ಮಗನಾಗಿದ್ದು, ಆತ ಒಬ್ಬ ರೈತನ ಮಗ. ಬೌದ್ಧ ಸ್ತೂಪಗಳು, ದೇವಾಲಯಗಳು ಸೇರಿದಂತೆ ಎಲ್ಲವನ್ನೂ ಒಡೆದು ಹಾಕಲಾಗಿದೆ. ಅದನ್ನು ಯಾರು ಮಾಡಿದ್ದು ಎಂದು ಪತ್ತೆ ಹಚ್ಚಿ ಮೂಲ ವ್ಯಕ್ತಿಗಳಿಗೆ ವಾಪಸ್ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇದನ್ನೂಓದಿ:  ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ಡಿಯಾಗೋ ಗಾರ್ಸಿಯಾ ದ್ವೀಪದ ಬಳಿ ಭಾರತೀಯ ಮೀನುಗಾರರನ್ನು ಬಂಧಿಸಿದ ಬ್ರಿಟಿಷ್ ನೌಕಾಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...