Homeಮುಖಪುಟಹಿಂದೂ ಮಹಾಸಭಾ ನಾಯಕ ಕಮಲೇಶ್ ತಿವಾರಿ ಕೊಲೆ... ಪರಿಚಿತರಿಂದಲೇ ಕೃತ್ಯ ನಡೆದಿರುವ ಶಂಕೆ..

ಹಿಂದೂ ಮಹಾಸಭಾ ನಾಯಕ ಕಮಲೇಶ್ ತಿವಾರಿ ಕೊಲೆ… ಪರಿಚಿತರಿಂದಲೇ ಕೃತ್ಯ ನಡೆದಿರುವ ಶಂಕೆ..

- Advertisement -
- Advertisement -

ಅಖಿಲ ಭಾರತ ಹಿಂದೂ ಮಹಾಸಭಾದ (ಎಬಿಎಚ್‌ಎಂ) ಸ್ವಯಂ ಘೋಷಿತ ಕಾರ್ಯಕಾರಿ ಅಧ್ಯಕ್ಷ ಕಮಲೇಶ್ ತಿವಾರಿ ಅವರ ಮೇಲೆ ಗುಂಡುಹಾರಿಸಿ ಅವರ ಮನೆಯಲ್ಲಿಯೇ ಕೊಲೆ ಮಾಡಲಾಗಿದೆ.

ವೈಯಕ್ತಿಕ ವಿವಾದದಿಂದ ಕೊಲೆಯಾಗಿದ್ದು, ತಿವಾರಿ ಅವರ ಕುತ್ತಿಗೆಗೆ ಗಾಯದ ಗುರುತುಗಳು ಕಂಡುಬಂದಿವೆ ಎಂದು ಪೊಲೀಸರು ಹೇಳಿದ್ದಾರೆ. ಅಯೋಧ್ಯೆ ಮೊಕದ್ದಮೆಯ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದವರಲ್ಲಿ ತಿವಾರಿ ಕೂಡ ಒಬ್ಬರಾಗಿದ್ದಾರೆ.

ಅವರ ಸಾವಿನ ನಂತರ ಜನರ ಗುಂಪೊಂದು ಲಕ್ನೋದಲ್ಲಿ ಪ್ರತಿಭಟನೆ ನಡೆಸಿದೆ. ನಂತರ ಫತೇಗಂಜ್ ಮತ್ತು ಅಮಿನಾಬಾದ್ ಪ್ರದೇಶದ ಅನೇಕ ಅಂಗಡಿಗಳನ್ನು ಮುಚ್ಚಲಾಯಿತು. ಘರ್ಷಣೆ ತಪ್ಪಿಸಲು ಈ ಪ್ರದೇಶದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದ್ದು, ದೇಹದ ಮರಣೋತ್ತರ ಪರೀಕ್ಷೆ ಇನ್ನಷ್ಟೇ ನಡೆಯಬೇಕಿದೆ.

ಬೆಳಿಗ್ಗೆ 11.00 ರ ಸುಮಾರಿಗೆ ಇಬ್ಬರು ವ್ಯಕ್ತಿಗಳು ಅವರನ್ನು ಭೇಟಿಯಾಗಲು ಅವರ ಮನೆಗೆ ಬಂದಿದ್ದರು ಎಂದು ತಿವಾರಿ ಅವರ ಸಹವರ್ತಿ ಸ್ವತಂತ್ರದೀಪ್ ಸಿಂಗ್ ಹೇಳಿದ್ದಾರೆ. ತಿವಾರಿ ಅವರನ್ನು ಮನೆಯ ಮೊದಲ ಮಹಡಿಗೆ ಬರಲು ಕೇಳಿಕೊಂಡಿದ್ದರು ಎಂದು ಸಿಂಗ್ ಹೇಳಿದ್ದಾರೆ. “ಹಲ್ಲೆಕೋರರೊಬ್ಬರು ಸಿಗರೇಟ್ ತರಲು ನನ್ನನ್ನು ಕೇಳಿದರು. ಆದ್ದರಿಂದ, ನಾನು ಮಾರುಕಟ್ಟೆಗೆ ಹೋದೆ. ಆದರೆ ನಾನು ಕೋಣೆಗೆ ಹಿಂತಿರುಗಿದಾಗ ಕಮಲೇಶ್‌ರವರನ್ನು ಕೋಣೆಯಲ್ಲಿ ಸತ್ತ ಸ್ಥಿತಿಯಲ್ಲಿ ನಾನು ನೋಡಿದೆ” ಎಂದು ಅವರು ಹೇಳಿದರು. ಅದನ್ನು ನೋಡಿದ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ ಎಂದು ಸಿಂಗ್ ಹೇಳಿದ್ದಾರೆ.

ಲಕ್ನೋದ ಇನ್ಸ್‌ಪೆಕ್ಟರ್ ಜನರಲ್ ಎಸ್.ಕೆ. ಭಗತ್ ಮಾತನಾಡಿ, ಹಲ್ಲೆಕೋರರು ತಿವಾರಿ ಅವರಿಗೆ ಪರಿಚಿತರೆ ಆಗಿದ್ದಾರೆ, ಏಕೆಂದರೆ ಅವರು ಅವರೊಂದಿಗೆ ಮನೆಯಲ್ಲಿ ಸುಮಾರು ಅರ್ಧ ಘಂಟೆಯವರೆಗೆ ಇದ್ದರು. ಮನೆಯಿಂದ ಪಿಸ್ತೂಲ್ ಮತ್ತು ಖಾಲಿ ಕಾರ್ಟ್ರಿಡ್ಜ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತಿವಾರಿ ಅವರ ಕುತ್ತಿಗೆಗೆ ಗಾಯದ ಗುರುತುಗಳು ಕಂಡುಬಂದಿವೆ ಆದರೆ ಯಾವುದೇ ತೀರ್ಮಾನಕ್ಕೆ ಬರಲು ಅವರು ಮರಣೋತ್ತರ ವರದಿಗಾಗಿ ಕಾಯುತ್ತಿದ್ದೇವೆ ಎಂದು ಅವರು ಹೇಳಿದರು.

ಮುಸ್ಲಿಮರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಕಾರಣಕ್ಕಾಗಿ ತಿವಾರಿಯವರ ಮೇಲೆ ಕೇಸುಗಳು ಕೂಡ ದಾಖಲಾಗಿದ್ದವು. ಸೀತಾಪುರ ಮೂಲದ ತಿವಾರಿ 2012 ರ ಅಸೆಂಬ್ಲಿ ಚುನಾವಣೆಯಲ್ಲಿ ಸೆಂಟ್ರಲ್ ಲಕ್ನೋದಿಂದ ಎಬಿಎಚ್‌ಎಂ ಟಿಕೆಟ್‌ನಲ್ಲಿ ಸ್ಪರ್ಧಿಸಿ ಸೋತಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...