Homeಮುಖಪುಟಮುಸ್ಲಿಮರ ಮೇಲೆ ದೂರು ನೀಡಲು ಹಸು ಕೊಂದು ಸಿಕ್ಕಿಬಿದ್ದ ಹಿಂದೂ ಮಹಾಸಭಾ ಸದಸ್ಯರು

ಮುಸ್ಲಿಮರ ಮೇಲೆ ದೂರು ನೀಡಲು ಹಸು ಕೊಂದು ಸಿಕ್ಕಿಬಿದ್ದ ಹಿಂದೂ ಮಹಾಸಭಾ ಸದಸ್ಯರು

- Advertisement -
- Advertisement -

ರಾಮನವಮಿ ಹಬ್ಬಕ್ಕೆ ಮುನ್ನ ಮೂವರು ಮುಸ್ಲಿಂ ವ್ಯಕ್ತಿಗಳನ್ನು ಬಂಧಿಸುವ ಸಲುವಾಗಿ ಅಖಿಲ ಭಾರತ ಹಿಂದೂ ಮಹಾಸಭಾದ ಸದಸ್ಯರು ಹಸುವನ್ನು ಕೊಂದಿರುವ ಘಟನೆ ಆಗ್ರಾದಲ್ಲಿ ನಡೆದಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ನಕಿಮ್, ಮೊಹಮ್ಮದ್ ಶಾನು ಮತ್ತು ಇಮ್ರಾನ್ ಖುರೇಷಿ ಎಂಬ ನಾಲ್ವರ ವಿರುದ್ಧ ಆಗ್ರಾ ಪೊಲೀಸರು ಗೋಹತ್ಯೆ ಆರೋಪದ ಮೇಲೆ ದೂರು ದಾಖಲಿಸಿದ್ದರು. ಆದರೆ, ನಾಲ್ವರು ವ್ಯಕ್ತಿಗಳಿಗೂ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸ್ ತನಿಖೆಯ ನಂತರ ತಿಳಿದುಬಂದಿದೆ.

“ಹಿಂದೂ ಮಹಾಸಭಾ ನಾಯಕ ಸಂಜಯ್ ಜಾಟ್ ಮುಖ್ಯ ಸಂಚುಕೋರನಾಗಿದ್ದೇನೆ” ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ ಆರ್.ಕೆ.ಸಿಂಗ್ ಅವರು ‘ದಿ ಟೆಲಿಗ್ರಾಫ್‌’ಗೆ ತಿಳಿಸಿದ್ದಾರೆ.

“ಈತನ ಫಾಲೋವರ್ಸ್ ಮತ್ತು ಸ್ನೇಹಿತರು ಮಾರ್ಚ್ 29 ರ ರಾತ್ರಿ ಮೆಹ್ತಾಬ್ ಬಾಗ್ ಪ್ರದೇಶದಲ್ಲಿ ಹಸುವನ್ನು ಕೊಂದಿದ್ದರು. ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ನಕಿಮ್ ಮತ್ತು ಮೊಹಮ್ಮದ್ ಶಾನು ವಿರುದ್ಧ ಪ್ರಕರಣ ದಾಖಲಿಸುವಂತೆ ಪಕ್ಷದ ಸದಸ್ಯ ಜಿತೇಂದ್ರ ಕುಶ್ವಾಹಾ ಎಂಬಾತನಿಗೆ ಹೇಳಿದ್ದರು” ಎಂಬುದು ಬಯಲಾಗಿದೆ.

ಮರುದಿನ ಖುರೇಷಿ ಮತ್ತು ಶಾನು ಅವರನ್ನು ಬಂಧಿಸಲಾಯಿತು. ಆದರೆ ಹಿಂದೂ ಮಹಾಸಭಾದ ವಕ್ತಾರನಾದ ಸಂಜಯ್‌ ಜಾಟ್‌‌ನಿಗೆ ಇವರ ಮೇಲೆ ದ್ವೇಷವಿತ್ತು. ಆ ಕಾರಣದಿಂದಾಗಿ ಈ ವ್ಯಕ್ತಿಗಳ ಗುಂಪನ್ನು ಪ್ರಕರಣದಲ್ಲಿ ಸಿಲುಕಿಸಲು ಬಯಸಿದ್ದನು ಎಂಬುದು ನಂತರದ ತನಿಖೆಗಳಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ವಿಚಾರಣೆಯ ಸಮಯದಲ್ಲಿ ಜಿತೇಂದ್ರ [ಕುಶ್ವಾಹ] ನಮಗೆ ಸುಳ್ಳು ಹೇಳಿರುವುದು ತಿಳಿದುಬಂದಿದೆ” ಎಂದು ಆರ್.ಕೆ.ಸಿಂಗ್‌ ಅವರು ದಿ ಟೆಲಿಗ್ರಾಫ್‌ನೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

“ಆತ ಮತ್ತು ಸಂಜಯ್, ಇನ್ನೂ ಕೆಲವರು ಗೋಹತ್ಯೆಯ ಸ್ಥಳದ ಸಮೀಪದಲ್ಲಿದ್ದರು ಎಂಬುದು ಫೋನ್‌ ಕರೆಗಳ ದಾಖಲೆಗಳಿಂದ ತಿಳಿದುಬಂದಿದೆ. ಇವರು ದೂರಿನಲ್ಲಿ ಹೆಸರಿಸಿದ ಆರೋಪಿಗಳು ಒಂದು ತಿಂಗಳಿನಿಂದ ಆ ಸ್ಥಳಕ್ಕೆ ಹೋಗಿಲ್ಲ ಎಂಬುದು ಫೋನ್‌ ಕರೆಯ ದಾಖಲೆಗಳಿಂದ ಸ್ಪಷ್ಟವಾಗಿದೆ” ಎಂದಿದ್ದಾರೆ.

ಖುರೇಷಿ ಮತ್ತು ಶಾನು ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಇದರ ನಡುವೆ ಪ್ರತಿಕ್ರಿಯೆ ನೀಡಿರುವ ಸಂಜಯ್‌, “ಪೊಲೀಸರು ನಮ್ಮನ್ನು ಈ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿದ್ದಾರೆ” ಎಂದು ವಾದಿಸಿದ್ದಾನೆ. “ಪ್ರಕರಣವನ್ನು ಸರಿಯಾಗಿ ತನಿಖೆ ಮಾಡದಿದ್ದರೆ ನಾವು ಪ್ರತಿಭಟನೆ ನಡೆಸುತ್ತೇವೆ” ಎಂದು ಹೇಳಿಕೆ ನೀಡಿದ್ದಾನೆ.

ಇದನ್ನೂ ಓದಿರಿ: ‘ರಾತ್ರಿ ಹೊತ್ತು ರಸ್ತೆಯಲ್ಲಿ ಬ್ಯಾಟ್‌ ಹಿಡಿದು ತಿರುಗುವವರಿಗೆ ಪೊಲೀಸರ ಅನುಮತಿ ಇತ್ತೇ?’: ಇದ್ರೀಶ್ ಹತ್ಯೆಗೆ ಎಚ್‌ಡಿಕೆ ಖಂಡನೆ

ಸುಲಿಗೆ ಪ್ರಕರಣದಲ್ಲಿ ಸಿಲುಕಿದ್ದ ಸಂಜಯ್‌ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾನೆ. ಆತ ಮತ್ತು ಆತನ ಬೆಂಬಲಿಗರು ಆಗಾಗ್ಗೆ ಗೋಮಾಂಸ ಸಾಗಿಸುವ ವಾಹನಗಳನ್ನು ತಡೆದು ನಿಲ್ಲಿಸಿ ಬೆದರಿಸುತ್ತಾರೆಂಬುದು ತಿಳಿದುಬಂದಿದೆ. ಹಣ ಕೊಡದಿದ್ದರೆ ಪೊಲೀಸ್ ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಸಿ ಸುಲಿಗೆ ಮಾಡುವ ದಂಧೆಯಲ್ಲಿ ಇವರು ತೊಡಗಿದ್ದಾರೆಂದು ಪೊಲೀಸರು ಹೇಳಿರುವುದಾಗಿ ‘ದಿ ಟೆಲಿಗ್ರಾಫ್‌’ ವರದಿ ಮಾಡಿದೆ.

ಇಂತಹದ್ದೇ ಪ್ರಕರಣ ಇತ್ತೀಚೆಗೆ ರಾಜ್ಯದ ರಾಮನಗರ ಜಿಲ್ಲೆಯ ಸಾತನೂರಿನ ಬಳಿ ನಡೆದಿತ್ತು. ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಮತ್ತು ಆತನ ಸಂಗಡಿಗರು ಗೋರಕ್ಷಣೆಯ ಹೆಸರಿನಲ್ಲಿ ಮಂಡ್ಯ ನಿವಾಸಿ ಇದ್ರೀಶ್ ಪಾಶಾ ಎಂಬವರನ್ನು ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಜೊತೆಗೆ ಎರಡು ಲಕ್ಷ ರೂ.ಗಳ ಬೇಡಿಕೆಯನ್ನು ಪುನೀತ್‌ ಕೆರೆಹಳ್ಳಿ ಗ್ಯಾಂಗ್‌ ಇಟ್ಟಿತ್ತು ಎಂಬ ಆರೋಪಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...