Homeಮುಖಪುಟಮುಸ್ಲಿಮರ ಮೇಲೆ ದೂರು ನೀಡಲು ಹಸು ಕೊಂದು ಸಿಕ್ಕಿಬಿದ್ದ ಹಿಂದೂ ಮಹಾಸಭಾ ಸದಸ್ಯರು

ಮುಸ್ಲಿಮರ ಮೇಲೆ ದೂರು ನೀಡಲು ಹಸು ಕೊಂದು ಸಿಕ್ಕಿಬಿದ್ದ ಹಿಂದೂ ಮಹಾಸಭಾ ಸದಸ್ಯರು

- Advertisement -
- Advertisement -

ರಾಮನವಮಿ ಹಬ್ಬಕ್ಕೆ ಮುನ್ನ ಮೂವರು ಮುಸ್ಲಿಂ ವ್ಯಕ್ತಿಗಳನ್ನು ಬಂಧಿಸುವ ಸಲುವಾಗಿ ಅಖಿಲ ಭಾರತ ಹಿಂದೂ ಮಹಾಸಭಾದ ಸದಸ್ಯರು ಹಸುವನ್ನು ಕೊಂದಿರುವ ಘಟನೆ ಆಗ್ರಾದಲ್ಲಿ ನಡೆದಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ನಕಿಮ್, ಮೊಹಮ್ಮದ್ ಶಾನು ಮತ್ತು ಇಮ್ರಾನ್ ಖುರೇಷಿ ಎಂಬ ನಾಲ್ವರ ವಿರುದ್ಧ ಆಗ್ರಾ ಪೊಲೀಸರು ಗೋಹತ್ಯೆ ಆರೋಪದ ಮೇಲೆ ದೂರು ದಾಖಲಿಸಿದ್ದರು. ಆದರೆ, ನಾಲ್ವರು ವ್ಯಕ್ತಿಗಳಿಗೂ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸ್ ತನಿಖೆಯ ನಂತರ ತಿಳಿದುಬಂದಿದೆ.

“ಹಿಂದೂ ಮಹಾಸಭಾ ನಾಯಕ ಸಂಜಯ್ ಜಾಟ್ ಮುಖ್ಯ ಸಂಚುಕೋರನಾಗಿದ್ದೇನೆ” ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ ಆರ್.ಕೆ.ಸಿಂಗ್ ಅವರು ‘ದಿ ಟೆಲಿಗ್ರಾಫ್‌’ಗೆ ತಿಳಿಸಿದ್ದಾರೆ.

“ಈತನ ಫಾಲೋವರ್ಸ್ ಮತ್ತು ಸ್ನೇಹಿತರು ಮಾರ್ಚ್ 29 ರ ರಾತ್ರಿ ಮೆಹ್ತಾಬ್ ಬಾಗ್ ಪ್ರದೇಶದಲ್ಲಿ ಹಸುವನ್ನು ಕೊಂದಿದ್ದರು. ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ನಕಿಮ್ ಮತ್ತು ಮೊಹಮ್ಮದ್ ಶಾನು ವಿರುದ್ಧ ಪ್ರಕರಣ ದಾಖಲಿಸುವಂತೆ ಪಕ್ಷದ ಸದಸ್ಯ ಜಿತೇಂದ್ರ ಕುಶ್ವಾಹಾ ಎಂಬಾತನಿಗೆ ಹೇಳಿದ್ದರು” ಎಂಬುದು ಬಯಲಾಗಿದೆ.

ಮರುದಿನ ಖುರೇಷಿ ಮತ್ತು ಶಾನು ಅವರನ್ನು ಬಂಧಿಸಲಾಯಿತು. ಆದರೆ ಹಿಂದೂ ಮಹಾಸಭಾದ ವಕ್ತಾರನಾದ ಸಂಜಯ್‌ ಜಾಟ್‌‌ನಿಗೆ ಇವರ ಮೇಲೆ ದ್ವೇಷವಿತ್ತು. ಆ ಕಾರಣದಿಂದಾಗಿ ಈ ವ್ಯಕ್ತಿಗಳ ಗುಂಪನ್ನು ಪ್ರಕರಣದಲ್ಲಿ ಸಿಲುಕಿಸಲು ಬಯಸಿದ್ದನು ಎಂಬುದು ನಂತರದ ತನಿಖೆಗಳಿಂದ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ವಿಚಾರಣೆಯ ಸಮಯದಲ್ಲಿ ಜಿತೇಂದ್ರ [ಕುಶ್ವಾಹ] ನಮಗೆ ಸುಳ್ಳು ಹೇಳಿರುವುದು ತಿಳಿದುಬಂದಿದೆ” ಎಂದು ಆರ್.ಕೆ.ಸಿಂಗ್‌ ಅವರು ದಿ ಟೆಲಿಗ್ರಾಫ್‌ನೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

“ಆತ ಮತ್ತು ಸಂಜಯ್, ಇನ್ನೂ ಕೆಲವರು ಗೋಹತ್ಯೆಯ ಸ್ಥಳದ ಸಮೀಪದಲ್ಲಿದ್ದರು ಎಂಬುದು ಫೋನ್‌ ಕರೆಗಳ ದಾಖಲೆಗಳಿಂದ ತಿಳಿದುಬಂದಿದೆ. ಇವರು ದೂರಿನಲ್ಲಿ ಹೆಸರಿಸಿದ ಆರೋಪಿಗಳು ಒಂದು ತಿಂಗಳಿನಿಂದ ಆ ಸ್ಥಳಕ್ಕೆ ಹೋಗಿಲ್ಲ ಎಂಬುದು ಫೋನ್‌ ಕರೆಯ ದಾಖಲೆಗಳಿಂದ ಸ್ಪಷ್ಟವಾಗಿದೆ” ಎಂದಿದ್ದಾರೆ.

ಖುರೇಷಿ ಮತ್ತು ಶಾನು ಶೀಘ್ರದಲ್ಲೇ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಇದರ ನಡುವೆ ಪ್ರತಿಕ್ರಿಯೆ ನೀಡಿರುವ ಸಂಜಯ್‌, “ಪೊಲೀಸರು ನಮ್ಮನ್ನು ಈ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿದ್ದಾರೆ” ಎಂದು ವಾದಿಸಿದ್ದಾನೆ. “ಪ್ರಕರಣವನ್ನು ಸರಿಯಾಗಿ ತನಿಖೆ ಮಾಡದಿದ್ದರೆ ನಾವು ಪ್ರತಿಭಟನೆ ನಡೆಸುತ್ತೇವೆ” ಎಂದು ಹೇಳಿಕೆ ನೀಡಿದ್ದಾನೆ.

ಇದನ್ನೂ ಓದಿರಿ: ‘ರಾತ್ರಿ ಹೊತ್ತು ರಸ್ತೆಯಲ್ಲಿ ಬ್ಯಾಟ್‌ ಹಿಡಿದು ತಿರುಗುವವರಿಗೆ ಪೊಲೀಸರ ಅನುಮತಿ ಇತ್ತೇ?’: ಇದ್ರೀಶ್ ಹತ್ಯೆಗೆ ಎಚ್‌ಡಿಕೆ ಖಂಡನೆ

ಸುಲಿಗೆ ಪ್ರಕರಣದಲ್ಲಿ ಸಿಲುಕಿದ್ದ ಸಂಜಯ್‌ ಪ್ರಸ್ತುತ ಜಾಮೀನಿನ ಮೇಲೆ ಹೊರಗಿದ್ದಾನೆ. ಆತ ಮತ್ತು ಆತನ ಬೆಂಬಲಿಗರು ಆಗಾಗ್ಗೆ ಗೋಮಾಂಸ ಸಾಗಿಸುವ ವಾಹನಗಳನ್ನು ತಡೆದು ನಿಲ್ಲಿಸಿ ಬೆದರಿಸುತ್ತಾರೆಂಬುದು ತಿಳಿದುಬಂದಿದೆ. ಹಣ ಕೊಡದಿದ್ದರೆ ಪೊಲೀಸ್ ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಸಿ ಸುಲಿಗೆ ಮಾಡುವ ದಂಧೆಯಲ್ಲಿ ಇವರು ತೊಡಗಿದ್ದಾರೆಂದು ಪೊಲೀಸರು ಹೇಳಿರುವುದಾಗಿ ‘ದಿ ಟೆಲಿಗ್ರಾಫ್‌’ ವರದಿ ಮಾಡಿದೆ.

ಇಂತಹದ್ದೇ ಪ್ರಕರಣ ಇತ್ತೀಚೆಗೆ ರಾಜ್ಯದ ರಾಮನಗರ ಜಿಲ್ಲೆಯ ಸಾತನೂರಿನ ಬಳಿ ನಡೆದಿತ್ತು. ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ ಮತ್ತು ಆತನ ಸಂಗಡಿಗರು ಗೋರಕ್ಷಣೆಯ ಹೆಸರಿನಲ್ಲಿ ಮಂಡ್ಯ ನಿವಾಸಿ ಇದ್ರೀಶ್ ಪಾಶಾ ಎಂಬವರನ್ನು ಕೊಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಜೊತೆಗೆ ಎರಡು ಲಕ್ಷ ರೂ.ಗಳ ಬೇಡಿಕೆಯನ್ನು ಪುನೀತ್‌ ಕೆರೆಹಳ್ಳಿ ಗ್ಯಾಂಗ್‌ ಇಟ್ಟಿತ್ತು ಎಂಬ ಆರೋಪಗಳು ಬಂದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...