Homeಮುಖಪುಟಇಂಗ್ಲೆಡ್‌ನಲ್ಲಿ ಹಿಂದೂ ಪ್ರಧಾನಿ: ಭಾರತದಲ್ಲಿ ‘ಮುಸ್ಲಿಂPM’, ‘ದಲಿತPM' ಚರ್ಚೆ ಮುನ್ನೆಲೆಗೆ

ಇಂಗ್ಲೆಡ್‌ನಲ್ಲಿ ಹಿಂದೂ ಪ್ರಧಾನಿ: ಭಾರತದಲ್ಲಿ ‘ಮುಸ್ಲಿಂPM’, ‘ದಲಿತPM’ ಚರ್ಚೆ ಮುನ್ನೆಲೆಗೆ

- Advertisement -
- Advertisement -

ಯುಕೆಯ ಕನ್ಸರ್‌ವೇಟಿವ್‌ ಪಕ್ಷದಲ್ಲಿ ಭಾರತ ಮೂಲದ ಬ್ರಿಟಿಷ್ ನಾಯಕ ರಿಷಿ ಸುನಕ್ ಪ್ರಧಾನಿಯಾದ ಬಳಿಕ ಭಾರತದಲ್ಲಿ ವಿವಾದಾತ್ಮಕ ಕಾನೂನುಗಳಾದ ಪೌರತ್ವ (ತಿದ್ದುಪಡಿ) ಕಾಯಿದೆ, ಎನ್‌ಆರ್‌ಸಿ ಕುರಿತು ಚರ್ಚೆಯಾಗುತ್ತಿದೆ. ಜೊತೆಗೆ ದಲಿತ ಪಿಎಂ, ಮುಸ್ಲಿಂ ಪಿಎಂ ಚರ್ಚೆ ಮುನ್ನೆಲೆಗೆ ಬಂದಿದೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿ, “ಭಾರತೀಯ ಮೂಲದವರು ಯುಕೆ ಪ್ರಧಾನಿಯಾಗಿರುವುದು ಹೆಮ್ಮೆಯ ಕ್ಷಣವಾಗಿದೆ. ಆದರೆ ಭಾರತವು ಎನ್‌ಆರ್‌ಸಿ, ಸಿಎಎಯಂತಹ ವಿಭಜಕ ಮತ್ತು ತಾರತಮ್ಯ ಕಾನೂನುಗಳಿಂದ ಇನ್ನೂ ಸಂಕೋಲೆಯಲ್ಲಿದೆ” ಎಂದಿದ್ದಾರೆ.

ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಟ್ವೀಟ್ ಮಾಡಿ, “ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಅಲ್ಪಸಂಖ್ಯಾತರನ್ನು ಒಪ್ಪಿಕೊಳ್ಳುತ್ತೀರಾ?” ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥರನ್ನು ಪ್ರಶ್ನಿಸಿದ್ದಾರೆ.

ರಿಷಿ ಸುನಕ್‌ ಪ್ರಧಾನಿಯಾದ ಬೆನ್ನಲ್ಲೇ ಭಾರತದಲ್ಲಿ ಸಂಭ್ರಮಾಚರಣೆಗಳು ನಡೆಯುತ್ತಿವೆ. ಇದರ ನಡುವೆ ಗಂಭೀರ ಚರ್ಚೆಗಳು ಶುರುವಾಗಿವೆ. ಭಾರತದಲ್ಲಿ ಇದುವರೆಗೆ ಒಬ್ಬರೇ ಒಬ್ಬರು ಮುಸ್ಲಿಂ ಮತ್ತು ದಲಿತ ವ್ಯಕ್ತಿ ಪ್ರಧಾನಿ ಯಾಕೆ ಆಗಿಲ್ಲ ಎಂದು ಹಲವು ಟ್ವಿಟರ್‌ ಬಳಕೆದಾರರು ಪ್ರಶ್ನಿಸಿದ್ದಾರೆ.

#MuslimPM ಹ್ಯಾಶ್‌ಟ್ಯಾಗ್‌ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದ್ದು, ಸದ್ಯ ಸ್ವೀಡನ್‌ನಲ್ಲಿರುವ ಖ್ಯಾತ ಅಂಕಣಕಾರ ಅಶೋಕ್‌ ಸ್ವೈನ್‌, “ಓರ್ವ ಹಿಂದೂ ಇಂಗ್ಲೆಂಡ್‌ ದೇಶದ ಪ್ರಧಾನಿಯಾಗುವುದಾದರೆ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್‌ ಅಥವಾ ದಲಿತರೊಬ್ಬರು ದೇಶದ ಪ್ರಧಾನಿ ಯಾಕಾಗಬಾರದು?” ಎಂದು ಟ್ವೀಟ್‌ ಮಾಡಿದ್ದಾರೆ. ಈ ಟ್ವೀಟನ್ನು ಸುಮಾರು 45,000ಕ್ಕೂ ಹೆಚ್ಚು ಮಂದಿ ಇಷ್ಟಪಟ್ಟಿದ್ದು, 7000ಕ್ಕೂ ಹೆಚ್ಚು ಮಂದಿ ರೀಟ್ವೀಟ್‌ ಮಾಡಿದ್ದಾರೆ.

“ಜಾಸ್ಮಿನ್‌ ಫೆರ್ನಾಂಡೋ ಎಂಬುವವರು ಈ ಕುರಿತು ಟ್ವೀಟ್‌ ಮಾಡಿದ್ದು, ನಾವು ಮುಸ್ಲಿಂ ಪ್ರಧಾನಿಯ ಬೇಡಿಕೆ ಇಡೋದಿಲ್ಲ. ಯಾಕೆಂದರೆ ನಿಮ್ಮ ಮೈಂಡ್‌ ಸೆಟ್‌ ಅದಕ್ಕೆ ಒಪ್ಪಿಗೆ ನೀಡುವುದಿಲ್ಲ. ದಯವಿಟ್ಟು ಭಾರತದಲ್ಲಿ ಅಲ್ಪಸಂಖ್ಯಾತರನ್ನು ನೆಮ್ಮದಿಯಾಗಿ ಬದುಕಲು ಬಿಡಿ. ಭಾರತದಲ್ಲಿ ಒಬ್ಬ ದಲಿತ ಪ್ರಧಾನಿಯೂ ಆಗುವ ಸಾಧ್ಯತೆ ಇಲ್ಲ. ಯಾಕೆಂದರೆ ಹಿಂದೂ ಧಾರ್ಮಿಕ ಪುಸ್ತಕಗಳು ದಲಿತರನ್ನು ಆಡಳಿತಗಾರನ್ನಾಗಿಸಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಇಂಗ್ಲೆಂಡ್‌ ನಲ್ಲಿ ಕೇವಲ 1.5% ಹಿಂದೂಗಳಿದ್ದಾರೆ. ಕ್ರಿಶ್ಚಿಯನ್‌ ಮೆಜಾರಿಟಿ ಇರುವ ಆ ದೇಶದಲ್ಲಿ ಒಬ್ಬ ಹಿಂದೂ ವ್ಯಕ್ತಿಯನ್ನು ಪ್ರಧಾನಿಯನ್ನಾಗಿ ಮಾಡಲಾಗುತ್ತಿದೆ. ಭಾರತದಲ್ಲಿ ಶೇ.15ರಷ್ಟು ಮಂದಿ ಮುಸ್ಲಿಮರಿದ್ದಾರೆ. ಮುಸ್ಲಿಂ ಪ್ರಧಾನಿಯ ವಿಷಯ ಹಾಗಿರಲಿ, ಲೋಕಸಭೆಯ 543 ಸದಸ್ಯ ಸ್ಥಾನ ಗಳಲ್ಲಿ ಮುಸ್ಲಿಮರ ಸಂಖ್ಯೆ ಕೇವಲ 27. (ಶೇ.5) ಎಂದು ಪತ್ರಕರ್ತ ಸಂದೀಪ್‌ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

“ನಮ್ಮ ಭಾರತವು ಮುಸ್ಲಿಂ ಪ್ರಧಾನಿಯನ್ನು ಆಯ್ಕೆ ಮಾಡಬೇಕೇ? ಪ್ರಧಾನಿಯ ಧರ್ಮ ಅಥವಾ ಲಿಂಗವನ್ನು ಲೆಕ್ಕಿಸದೆ ಭಾರತವು ಸಮರ್ಥ ಪ್ರಧಾನಿಯನ್ನು ಆಯ್ಕೆ ಮಾಡಬೇಕಾಗಿದೆ! ನಮ್ಮ ಪ್ರಧಾನಿ ಹಿಂದೂ, ಮುಸ್ಲಿಂ, ಜೈನ, ನಾಸ್ತಿಕ, ಉಭಯಲಿಂಗಿ, ಸಲಿಂಗಿ, ಅಲೈಂಗಿಕ, ಪುರುಷ, ಮಹಿಳೆ, ಟ್ಯಾನ್ಸ್ಜೆಂಡರ್ ಆಗಿದ್ದರೂ ಪರವಾಗಿಲ್ಲ ನಮ್ಮ ಭಾರತೀಯ ಪ್ರಧಾನಿಗೆ ದೂರದೃಷ್ಟಿ ಇರಬೇಕು” ಎಂದು ರಾಜಕೀಯ ವಿಶ್ಲೇಷಕ ತಹಸೀನ್‌ ಪೂನಾವಾಲ್ಲಾ ಅಭಿಪ್ರಾಯಪಟ್ಟಿದ್ದಾರೆ.

“ಮುಸ್ಲಿಂ ಪ್ರಧಾನಿ ಆಯ್ಕೆ ವಿಚಾರ ಅಪ್ರಸ್ತುತವಾಗಿದೆ. ಏಕೆಂದರೆ ನಮ್ಮ ಭಾರತವು ಸಂಸದೀಯ ಪ್ರಜಾಪ್ರಭುತ್ವವನ್ನು ಹೊಂದಿದೆ ಹೊರತು ಅಧ್ಯಕ್ಷೀಯ ಮಾದರಿಯಲ್ಲ. ಜನರು ರಾಜಕೀಯ ಪಕ್ಷವನ್ನು ಆಯ್ಕೆ ಮಾಡುತ್ತಾರೆ. ಅದರ ಸಂಸದರು ನಂತರ ಪ್ರಧಾನಿಯನ್ನು ಆಯ್ಕೆ ಮಾಡುತ್ತಾರೆ. ಯಾರಿಗಾದರೂ ಬಹುಪಾಲು ಸಂಸದರ ಬೆಂಬಲವಿದ್ದರೆ, ಪ್ರಧಾನಿಯಾಗಲು ಯಾವುದೇ ಸಾಂವಿಧಾನಿಕ ಅಡ್ಡಿಯಿಲ್ಲ! ಉದಾ: ಡಾ ಎಂಎಂಎಸ್!” ಎಂದು ಮತ್ತೊಂದು ಟ್ವೀಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...