Homeಮುಖಪುಟಇಂಗ್ಲೆಡ್‌ನಲ್ಲಿ ಹಿಂದೂ ಪ್ರಧಾನಿ: ಭಾರತದಲ್ಲಿ ‘ಮುಸ್ಲಿಂPM’, ‘ದಲಿತPM' ಚರ್ಚೆ ಮುನ್ನೆಲೆಗೆ

ಇಂಗ್ಲೆಡ್‌ನಲ್ಲಿ ಹಿಂದೂ ಪ್ರಧಾನಿ: ಭಾರತದಲ್ಲಿ ‘ಮುಸ್ಲಿಂPM’, ‘ದಲಿತPM’ ಚರ್ಚೆ ಮುನ್ನೆಲೆಗೆ

- Advertisement -
- Advertisement -

ಯುಕೆಯ ಕನ್ಸರ್‌ವೇಟಿವ್‌ ಪಕ್ಷದಲ್ಲಿ ಭಾರತ ಮೂಲದ ಬ್ರಿಟಿಷ್ ನಾಯಕ ರಿಷಿ ಸುನಕ್ ಪ್ರಧಾನಿಯಾದ ಬಳಿಕ ಭಾರತದಲ್ಲಿ ವಿವಾದಾತ್ಮಕ ಕಾನೂನುಗಳಾದ ಪೌರತ್ವ (ತಿದ್ದುಪಡಿ) ಕಾಯಿದೆ, ಎನ್‌ಆರ್‌ಸಿ ಕುರಿತು ಚರ್ಚೆಯಾಗುತ್ತಿದೆ. ಜೊತೆಗೆ ದಲಿತ ಪಿಎಂ, ಮುಸ್ಲಿಂ ಪಿಎಂ ಚರ್ಚೆ ಮುನ್ನೆಲೆಗೆ ಬಂದಿದೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿ, “ಭಾರತೀಯ ಮೂಲದವರು ಯುಕೆ ಪ್ರಧಾನಿಯಾಗಿರುವುದು ಹೆಮ್ಮೆಯ ಕ್ಷಣವಾಗಿದೆ. ಆದರೆ ಭಾರತವು ಎನ್‌ಆರ್‌ಸಿ, ಸಿಎಎಯಂತಹ ವಿಭಜಕ ಮತ್ತು ತಾರತಮ್ಯ ಕಾನೂನುಗಳಿಂದ ಇನ್ನೂ ಸಂಕೋಲೆಯಲ್ಲಿದೆ” ಎಂದಿದ್ದಾರೆ.

ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಟ್ವೀಟ್ ಮಾಡಿ, “ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಅಲ್ಪಸಂಖ್ಯಾತರನ್ನು ಒಪ್ಪಿಕೊಳ್ಳುತ್ತೀರಾ?” ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥರನ್ನು ಪ್ರಶ್ನಿಸಿದ್ದಾರೆ.

ರಿಷಿ ಸುನಕ್‌ ಪ್ರಧಾನಿಯಾದ ಬೆನ್ನಲ್ಲೇ ಭಾರತದಲ್ಲಿ ಸಂಭ್ರಮಾಚರಣೆಗಳು ನಡೆಯುತ್ತಿವೆ. ಇದರ ನಡುವೆ ಗಂಭೀರ ಚರ್ಚೆಗಳು ಶುರುವಾಗಿವೆ. ಭಾರತದಲ್ಲಿ ಇದುವರೆಗೆ ಒಬ್ಬರೇ ಒಬ್ಬರು ಮುಸ್ಲಿಂ ಮತ್ತು ದಲಿತ ವ್ಯಕ್ತಿ ಪ್ರಧಾನಿ ಯಾಕೆ ಆಗಿಲ್ಲ ಎಂದು ಹಲವು ಟ್ವಿಟರ್‌ ಬಳಕೆದಾರರು ಪ್ರಶ್ನಿಸಿದ್ದಾರೆ.

#MuslimPM ಹ್ಯಾಶ್‌ಟ್ಯಾಗ್‌ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದ್ದು, ಸದ್ಯ ಸ್ವೀಡನ್‌ನಲ್ಲಿರುವ ಖ್ಯಾತ ಅಂಕಣಕಾರ ಅಶೋಕ್‌ ಸ್ವೈನ್‌, “ಓರ್ವ ಹಿಂದೂ ಇಂಗ್ಲೆಂಡ್‌ ದೇಶದ ಪ್ರಧಾನಿಯಾಗುವುದಾದರೆ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್‌ ಅಥವಾ ದಲಿತರೊಬ್ಬರು ದೇಶದ ಪ್ರಧಾನಿ ಯಾಕಾಗಬಾರದು?” ಎಂದು ಟ್ವೀಟ್‌ ಮಾಡಿದ್ದಾರೆ. ಈ ಟ್ವೀಟನ್ನು ಸುಮಾರು 45,000ಕ್ಕೂ ಹೆಚ್ಚು ಮಂದಿ ಇಷ್ಟಪಟ್ಟಿದ್ದು, 7000ಕ್ಕೂ ಹೆಚ್ಚು ಮಂದಿ ರೀಟ್ವೀಟ್‌ ಮಾಡಿದ್ದಾರೆ.

“ಜಾಸ್ಮಿನ್‌ ಫೆರ್ನಾಂಡೋ ಎಂಬುವವರು ಈ ಕುರಿತು ಟ್ವೀಟ್‌ ಮಾಡಿದ್ದು, ನಾವು ಮುಸ್ಲಿಂ ಪ್ರಧಾನಿಯ ಬೇಡಿಕೆ ಇಡೋದಿಲ್ಲ. ಯಾಕೆಂದರೆ ನಿಮ್ಮ ಮೈಂಡ್‌ ಸೆಟ್‌ ಅದಕ್ಕೆ ಒಪ್ಪಿಗೆ ನೀಡುವುದಿಲ್ಲ. ದಯವಿಟ್ಟು ಭಾರತದಲ್ಲಿ ಅಲ್ಪಸಂಖ್ಯಾತರನ್ನು ನೆಮ್ಮದಿಯಾಗಿ ಬದುಕಲು ಬಿಡಿ. ಭಾರತದಲ್ಲಿ ಒಬ್ಬ ದಲಿತ ಪ್ರಧಾನಿಯೂ ಆಗುವ ಸಾಧ್ಯತೆ ಇಲ್ಲ. ಯಾಕೆಂದರೆ ಹಿಂದೂ ಧಾರ್ಮಿಕ ಪುಸ್ತಕಗಳು ದಲಿತರನ್ನು ಆಡಳಿತಗಾರನ್ನಾಗಿಸಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಇಂಗ್ಲೆಂಡ್‌ ನಲ್ಲಿ ಕೇವಲ 1.5% ಹಿಂದೂಗಳಿದ್ದಾರೆ. ಕ್ರಿಶ್ಚಿಯನ್‌ ಮೆಜಾರಿಟಿ ಇರುವ ಆ ದೇಶದಲ್ಲಿ ಒಬ್ಬ ಹಿಂದೂ ವ್ಯಕ್ತಿಯನ್ನು ಪ್ರಧಾನಿಯನ್ನಾಗಿ ಮಾಡಲಾಗುತ್ತಿದೆ. ಭಾರತದಲ್ಲಿ ಶೇ.15ರಷ್ಟು ಮಂದಿ ಮುಸ್ಲಿಮರಿದ್ದಾರೆ. ಮುಸ್ಲಿಂ ಪ್ರಧಾನಿಯ ವಿಷಯ ಹಾಗಿರಲಿ, ಲೋಕಸಭೆಯ 543 ಸದಸ್ಯ ಸ್ಥಾನ ಗಳಲ್ಲಿ ಮುಸ್ಲಿಮರ ಸಂಖ್ಯೆ ಕೇವಲ 27. (ಶೇ.5) ಎಂದು ಪತ್ರಕರ್ತ ಸಂದೀಪ್‌ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

“ನಮ್ಮ ಭಾರತವು ಮುಸ್ಲಿಂ ಪ್ರಧಾನಿಯನ್ನು ಆಯ್ಕೆ ಮಾಡಬೇಕೇ? ಪ್ರಧಾನಿಯ ಧರ್ಮ ಅಥವಾ ಲಿಂಗವನ್ನು ಲೆಕ್ಕಿಸದೆ ಭಾರತವು ಸಮರ್ಥ ಪ್ರಧಾನಿಯನ್ನು ಆಯ್ಕೆ ಮಾಡಬೇಕಾಗಿದೆ! ನಮ್ಮ ಪ್ರಧಾನಿ ಹಿಂದೂ, ಮುಸ್ಲಿಂ, ಜೈನ, ನಾಸ್ತಿಕ, ಉಭಯಲಿಂಗಿ, ಸಲಿಂಗಿ, ಅಲೈಂಗಿಕ, ಪುರುಷ, ಮಹಿಳೆ, ಟ್ಯಾನ್ಸ್ಜೆಂಡರ್ ಆಗಿದ್ದರೂ ಪರವಾಗಿಲ್ಲ ನಮ್ಮ ಭಾರತೀಯ ಪ್ರಧಾನಿಗೆ ದೂರದೃಷ್ಟಿ ಇರಬೇಕು” ಎಂದು ರಾಜಕೀಯ ವಿಶ್ಲೇಷಕ ತಹಸೀನ್‌ ಪೂನಾವಾಲ್ಲಾ ಅಭಿಪ್ರಾಯಪಟ್ಟಿದ್ದಾರೆ.

“ಮುಸ್ಲಿಂ ಪ್ರಧಾನಿ ಆಯ್ಕೆ ವಿಚಾರ ಅಪ್ರಸ್ತುತವಾಗಿದೆ. ಏಕೆಂದರೆ ನಮ್ಮ ಭಾರತವು ಸಂಸದೀಯ ಪ್ರಜಾಪ್ರಭುತ್ವವನ್ನು ಹೊಂದಿದೆ ಹೊರತು ಅಧ್ಯಕ್ಷೀಯ ಮಾದರಿಯಲ್ಲ. ಜನರು ರಾಜಕೀಯ ಪಕ್ಷವನ್ನು ಆಯ್ಕೆ ಮಾಡುತ್ತಾರೆ. ಅದರ ಸಂಸದರು ನಂತರ ಪ್ರಧಾನಿಯನ್ನು ಆಯ್ಕೆ ಮಾಡುತ್ತಾರೆ. ಯಾರಿಗಾದರೂ ಬಹುಪಾಲು ಸಂಸದರ ಬೆಂಬಲವಿದ್ದರೆ, ಪ್ರಧಾನಿಯಾಗಲು ಯಾವುದೇ ಸಾಂವಿಧಾನಿಕ ಅಡ್ಡಿಯಿಲ್ಲ! ಉದಾ: ಡಾ ಎಂಎಂಎಸ್!” ಎಂದು ಮತ್ತೊಂದು ಟ್ವೀಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...