Homeಮುಖಪುಟಇಂಗ್ಲೆಡ್‌ನಲ್ಲಿ ಹಿಂದೂ ಪ್ರಧಾನಿ: ಭಾರತದಲ್ಲಿ ‘ಮುಸ್ಲಿಂPM’, ‘ದಲಿತPM' ಚರ್ಚೆ ಮುನ್ನೆಲೆಗೆ

ಇಂಗ್ಲೆಡ್‌ನಲ್ಲಿ ಹಿಂದೂ ಪ್ರಧಾನಿ: ಭಾರತದಲ್ಲಿ ‘ಮುಸ್ಲಿಂPM’, ‘ದಲಿತPM’ ಚರ್ಚೆ ಮುನ್ನೆಲೆಗೆ

- Advertisement -
- Advertisement -

ಯುಕೆಯ ಕನ್ಸರ್‌ವೇಟಿವ್‌ ಪಕ್ಷದಲ್ಲಿ ಭಾರತ ಮೂಲದ ಬ್ರಿಟಿಷ್ ನಾಯಕ ರಿಷಿ ಸುನಕ್ ಪ್ರಧಾನಿಯಾದ ಬಳಿಕ ಭಾರತದಲ್ಲಿ ವಿವಾದಾತ್ಮಕ ಕಾನೂನುಗಳಾದ ಪೌರತ್ವ (ತಿದ್ದುಪಡಿ) ಕಾಯಿದೆ, ಎನ್‌ಆರ್‌ಸಿ ಕುರಿತು ಚರ್ಚೆಯಾಗುತ್ತಿದೆ. ಜೊತೆಗೆ ದಲಿತ ಪಿಎಂ, ಮುಸ್ಲಿಂ ಪಿಎಂ ಚರ್ಚೆ ಮುನ್ನೆಲೆಗೆ ಬಂದಿದೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿ, “ಭಾರತೀಯ ಮೂಲದವರು ಯುಕೆ ಪ್ರಧಾನಿಯಾಗಿರುವುದು ಹೆಮ್ಮೆಯ ಕ್ಷಣವಾಗಿದೆ. ಆದರೆ ಭಾರತವು ಎನ್‌ಆರ್‌ಸಿ, ಸಿಎಎಯಂತಹ ವಿಭಜಕ ಮತ್ತು ತಾರತಮ್ಯ ಕಾನೂನುಗಳಿಂದ ಇನ್ನೂ ಸಂಕೋಲೆಯಲ್ಲಿದೆ” ಎಂದಿದ್ದಾರೆ.

ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಟ್ವೀಟ್ ಮಾಡಿ, “ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಅಲ್ಪಸಂಖ್ಯಾತರನ್ನು ಒಪ್ಪಿಕೊಳ್ಳುತ್ತೀರಾ?” ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥರನ್ನು ಪ್ರಶ್ನಿಸಿದ್ದಾರೆ.

ರಿಷಿ ಸುನಕ್‌ ಪ್ರಧಾನಿಯಾದ ಬೆನ್ನಲ್ಲೇ ಭಾರತದಲ್ಲಿ ಸಂಭ್ರಮಾಚರಣೆಗಳು ನಡೆಯುತ್ತಿವೆ. ಇದರ ನಡುವೆ ಗಂಭೀರ ಚರ್ಚೆಗಳು ಶುರುವಾಗಿವೆ. ಭಾರತದಲ್ಲಿ ಇದುವರೆಗೆ ಒಬ್ಬರೇ ಒಬ್ಬರು ಮುಸ್ಲಿಂ ಮತ್ತು ದಲಿತ ವ್ಯಕ್ತಿ ಪ್ರಧಾನಿ ಯಾಕೆ ಆಗಿಲ್ಲ ಎಂದು ಹಲವು ಟ್ವಿಟರ್‌ ಬಳಕೆದಾರರು ಪ್ರಶ್ನಿಸಿದ್ದಾರೆ.

#MuslimPM ಹ್ಯಾಶ್‌ಟ್ಯಾಗ್‌ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದ್ದು, ಸದ್ಯ ಸ್ವೀಡನ್‌ನಲ್ಲಿರುವ ಖ್ಯಾತ ಅಂಕಣಕಾರ ಅಶೋಕ್‌ ಸ್ವೈನ್‌, “ಓರ್ವ ಹಿಂದೂ ಇಂಗ್ಲೆಂಡ್‌ ದೇಶದ ಪ್ರಧಾನಿಯಾಗುವುದಾದರೆ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್‌ ಅಥವಾ ದಲಿತರೊಬ್ಬರು ದೇಶದ ಪ್ರಧಾನಿ ಯಾಕಾಗಬಾರದು?” ಎಂದು ಟ್ವೀಟ್‌ ಮಾಡಿದ್ದಾರೆ. ಈ ಟ್ವೀಟನ್ನು ಸುಮಾರು 45,000ಕ್ಕೂ ಹೆಚ್ಚು ಮಂದಿ ಇಷ್ಟಪಟ್ಟಿದ್ದು, 7000ಕ್ಕೂ ಹೆಚ್ಚು ಮಂದಿ ರೀಟ್ವೀಟ್‌ ಮಾಡಿದ್ದಾರೆ.

“ಜಾಸ್ಮಿನ್‌ ಫೆರ್ನಾಂಡೋ ಎಂಬುವವರು ಈ ಕುರಿತು ಟ್ವೀಟ್‌ ಮಾಡಿದ್ದು, ನಾವು ಮುಸ್ಲಿಂ ಪ್ರಧಾನಿಯ ಬೇಡಿಕೆ ಇಡೋದಿಲ್ಲ. ಯಾಕೆಂದರೆ ನಿಮ್ಮ ಮೈಂಡ್‌ ಸೆಟ್‌ ಅದಕ್ಕೆ ಒಪ್ಪಿಗೆ ನೀಡುವುದಿಲ್ಲ. ದಯವಿಟ್ಟು ಭಾರತದಲ್ಲಿ ಅಲ್ಪಸಂಖ್ಯಾತರನ್ನು ನೆಮ್ಮದಿಯಾಗಿ ಬದುಕಲು ಬಿಡಿ. ಭಾರತದಲ್ಲಿ ಒಬ್ಬ ದಲಿತ ಪ್ರಧಾನಿಯೂ ಆಗುವ ಸಾಧ್ಯತೆ ಇಲ್ಲ. ಯಾಕೆಂದರೆ ಹಿಂದೂ ಧಾರ್ಮಿಕ ಪುಸ್ತಕಗಳು ದಲಿತರನ್ನು ಆಡಳಿತಗಾರನ್ನಾಗಿಸಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಇಂಗ್ಲೆಂಡ್‌ ನಲ್ಲಿ ಕೇವಲ 1.5% ಹಿಂದೂಗಳಿದ್ದಾರೆ. ಕ್ರಿಶ್ಚಿಯನ್‌ ಮೆಜಾರಿಟಿ ಇರುವ ಆ ದೇಶದಲ್ಲಿ ಒಬ್ಬ ಹಿಂದೂ ವ್ಯಕ್ತಿಯನ್ನು ಪ್ರಧಾನಿಯನ್ನಾಗಿ ಮಾಡಲಾಗುತ್ತಿದೆ. ಭಾರತದಲ್ಲಿ ಶೇ.15ರಷ್ಟು ಮಂದಿ ಮುಸ್ಲಿಮರಿದ್ದಾರೆ. ಮುಸ್ಲಿಂ ಪ್ರಧಾನಿಯ ವಿಷಯ ಹಾಗಿರಲಿ, ಲೋಕಸಭೆಯ 543 ಸದಸ್ಯ ಸ್ಥಾನ ಗಳಲ್ಲಿ ಮುಸ್ಲಿಮರ ಸಂಖ್ಯೆ ಕೇವಲ 27. (ಶೇ.5) ಎಂದು ಪತ್ರಕರ್ತ ಸಂದೀಪ್‌ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

“ನಮ್ಮ ಭಾರತವು ಮುಸ್ಲಿಂ ಪ್ರಧಾನಿಯನ್ನು ಆಯ್ಕೆ ಮಾಡಬೇಕೇ? ಪ್ರಧಾನಿಯ ಧರ್ಮ ಅಥವಾ ಲಿಂಗವನ್ನು ಲೆಕ್ಕಿಸದೆ ಭಾರತವು ಸಮರ್ಥ ಪ್ರಧಾನಿಯನ್ನು ಆಯ್ಕೆ ಮಾಡಬೇಕಾಗಿದೆ! ನಮ್ಮ ಪ್ರಧಾನಿ ಹಿಂದೂ, ಮುಸ್ಲಿಂ, ಜೈನ, ನಾಸ್ತಿಕ, ಉಭಯಲಿಂಗಿ, ಸಲಿಂಗಿ, ಅಲೈಂಗಿಕ, ಪುರುಷ, ಮಹಿಳೆ, ಟ್ಯಾನ್ಸ್ಜೆಂಡರ್ ಆಗಿದ್ದರೂ ಪರವಾಗಿಲ್ಲ ನಮ್ಮ ಭಾರತೀಯ ಪ್ರಧಾನಿಗೆ ದೂರದೃಷ್ಟಿ ಇರಬೇಕು” ಎಂದು ರಾಜಕೀಯ ವಿಶ್ಲೇಷಕ ತಹಸೀನ್‌ ಪೂನಾವಾಲ್ಲಾ ಅಭಿಪ್ರಾಯಪಟ್ಟಿದ್ದಾರೆ.

“ಮುಸ್ಲಿಂ ಪ್ರಧಾನಿ ಆಯ್ಕೆ ವಿಚಾರ ಅಪ್ರಸ್ತುತವಾಗಿದೆ. ಏಕೆಂದರೆ ನಮ್ಮ ಭಾರತವು ಸಂಸದೀಯ ಪ್ರಜಾಪ್ರಭುತ್ವವನ್ನು ಹೊಂದಿದೆ ಹೊರತು ಅಧ್ಯಕ್ಷೀಯ ಮಾದರಿಯಲ್ಲ. ಜನರು ರಾಜಕೀಯ ಪಕ್ಷವನ್ನು ಆಯ್ಕೆ ಮಾಡುತ್ತಾರೆ. ಅದರ ಸಂಸದರು ನಂತರ ಪ್ರಧಾನಿಯನ್ನು ಆಯ್ಕೆ ಮಾಡುತ್ತಾರೆ. ಯಾರಿಗಾದರೂ ಬಹುಪಾಲು ಸಂಸದರ ಬೆಂಬಲವಿದ್ದರೆ, ಪ್ರಧಾನಿಯಾಗಲು ಯಾವುದೇ ಸಾಂವಿಧಾನಿಕ ಅಡ್ಡಿಯಿಲ್ಲ! ಉದಾ: ಡಾ ಎಂಎಂಎಸ್!” ಎಂದು ಮತ್ತೊಂದು ಟ್ವೀಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...