Homeಮುಖಪುಟಇಂಗ್ಲೆಡ್‌ನಲ್ಲಿ ಹಿಂದೂ ಪ್ರಧಾನಿ: ಭಾರತದಲ್ಲಿ ‘ಮುಸ್ಲಿಂPM’, ‘ದಲಿತPM' ಚರ್ಚೆ ಮುನ್ನೆಲೆಗೆ

ಇಂಗ್ಲೆಡ್‌ನಲ್ಲಿ ಹಿಂದೂ ಪ್ರಧಾನಿ: ಭಾರತದಲ್ಲಿ ‘ಮುಸ್ಲಿಂPM’, ‘ದಲಿತPM’ ಚರ್ಚೆ ಮುನ್ನೆಲೆಗೆ

- Advertisement -
- Advertisement -

ಯುಕೆಯ ಕನ್ಸರ್‌ವೇಟಿವ್‌ ಪಕ್ಷದಲ್ಲಿ ಭಾರತ ಮೂಲದ ಬ್ರಿಟಿಷ್ ನಾಯಕ ರಿಷಿ ಸುನಕ್ ಪ್ರಧಾನಿಯಾದ ಬಳಿಕ ಭಾರತದಲ್ಲಿ ವಿವಾದಾತ್ಮಕ ಕಾನೂನುಗಳಾದ ಪೌರತ್ವ (ತಿದ್ದುಪಡಿ) ಕಾಯಿದೆ, ಎನ್‌ಆರ್‌ಸಿ ಕುರಿತು ಚರ್ಚೆಯಾಗುತ್ತಿದೆ. ಜೊತೆಗೆ ದಲಿತ ಪಿಎಂ, ಮುಸ್ಲಿಂ ಪಿಎಂ ಚರ್ಚೆ ಮುನ್ನೆಲೆಗೆ ಬಂದಿದೆ.

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪ್ರತಿಕ್ರಿಯಿಸಿ, “ಭಾರತೀಯ ಮೂಲದವರು ಯುಕೆ ಪ್ರಧಾನಿಯಾಗಿರುವುದು ಹೆಮ್ಮೆಯ ಕ್ಷಣವಾಗಿದೆ. ಆದರೆ ಭಾರತವು ಎನ್‌ಆರ್‌ಸಿ, ಸಿಎಎಯಂತಹ ವಿಭಜಕ ಮತ್ತು ತಾರತಮ್ಯ ಕಾನೂನುಗಳಿಂದ ಇನ್ನೂ ಸಂಕೋಲೆಯಲ್ಲಿದೆ” ಎಂದಿದ್ದಾರೆ.

ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಟ್ವೀಟ್ ಮಾಡಿ, “ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಯಾಗಿ ಅಲ್ಪಸಂಖ್ಯಾತರನ್ನು ಒಪ್ಪಿಕೊಳ್ಳುತ್ತೀರಾ?” ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥರನ್ನು ಪ್ರಶ್ನಿಸಿದ್ದಾರೆ.

ರಿಷಿ ಸುನಕ್‌ ಪ್ರಧಾನಿಯಾದ ಬೆನ್ನಲ್ಲೇ ಭಾರತದಲ್ಲಿ ಸಂಭ್ರಮಾಚರಣೆಗಳು ನಡೆಯುತ್ತಿವೆ. ಇದರ ನಡುವೆ ಗಂಭೀರ ಚರ್ಚೆಗಳು ಶುರುವಾಗಿವೆ. ಭಾರತದಲ್ಲಿ ಇದುವರೆಗೆ ಒಬ್ಬರೇ ಒಬ್ಬರು ಮುಸ್ಲಿಂ ಮತ್ತು ದಲಿತ ವ್ಯಕ್ತಿ ಪ್ರಧಾನಿ ಯಾಕೆ ಆಗಿಲ್ಲ ಎಂದು ಹಲವು ಟ್ವಿಟರ್‌ ಬಳಕೆದಾರರು ಪ್ರಶ್ನಿಸಿದ್ದಾರೆ.

#MuslimPM ಹ್ಯಾಶ್‌ಟ್ಯಾಗ್‌ ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿದ್ದು, ಸದ್ಯ ಸ್ವೀಡನ್‌ನಲ್ಲಿರುವ ಖ್ಯಾತ ಅಂಕಣಕಾರ ಅಶೋಕ್‌ ಸ್ವೈನ್‌, “ಓರ್ವ ಹಿಂದೂ ಇಂಗ್ಲೆಂಡ್‌ ದೇಶದ ಪ್ರಧಾನಿಯಾಗುವುದಾದರೆ ಒಬ್ಬ ಮುಸ್ಲಿಂ ಅಥವಾ ಕ್ರಿಶ್ಚಿಯನ್‌ ಅಥವಾ ದಲಿತರೊಬ್ಬರು ದೇಶದ ಪ್ರಧಾನಿ ಯಾಕಾಗಬಾರದು?” ಎಂದು ಟ್ವೀಟ್‌ ಮಾಡಿದ್ದಾರೆ. ಈ ಟ್ವೀಟನ್ನು ಸುಮಾರು 45,000ಕ್ಕೂ ಹೆಚ್ಚು ಮಂದಿ ಇಷ್ಟಪಟ್ಟಿದ್ದು, 7000ಕ್ಕೂ ಹೆಚ್ಚು ಮಂದಿ ರೀಟ್ವೀಟ್‌ ಮಾಡಿದ್ದಾರೆ.

“ಜಾಸ್ಮಿನ್‌ ಫೆರ್ನಾಂಡೋ ಎಂಬುವವರು ಈ ಕುರಿತು ಟ್ವೀಟ್‌ ಮಾಡಿದ್ದು, ನಾವು ಮುಸ್ಲಿಂ ಪ್ರಧಾನಿಯ ಬೇಡಿಕೆ ಇಡೋದಿಲ್ಲ. ಯಾಕೆಂದರೆ ನಿಮ್ಮ ಮೈಂಡ್‌ ಸೆಟ್‌ ಅದಕ್ಕೆ ಒಪ್ಪಿಗೆ ನೀಡುವುದಿಲ್ಲ. ದಯವಿಟ್ಟು ಭಾರತದಲ್ಲಿ ಅಲ್ಪಸಂಖ್ಯಾತರನ್ನು ನೆಮ್ಮದಿಯಾಗಿ ಬದುಕಲು ಬಿಡಿ. ಭಾರತದಲ್ಲಿ ಒಬ್ಬ ದಲಿತ ಪ್ರಧಾನಿಯೂ ಆಗುವ ಸಾಧ್ಯತೆ ಇಲ್ಲ. ಯಾಕೆಂದರೆ ಹಿಂದೂ ಧಾರ್ಮಿಕ ಪುಸ್ತಕಗಳು ದಲಿತರನ್ನು ಆಡಳಿತಗಾರನ್ನಾಗಿಸಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಇಂಗ್ಲೆಂಡ್‌ ನಲ್ಲಿ ಕೇವಲ 1.5% ಹಿಂದೂಗಳಿದ್ದಾರೆ. ಕ್ರಿಶ್ಚಿಯನ್‌ ಮೆಜಾರಿಟಿ ಇರುವ ಆ ದೇಶದಲ್ಲಿ ಒಬ್ಬ ಹಿಂದೂ ವ್ಯಕ್ತಿಯನ್ನು ಪ್ರಧಾನಿಯನ್ನಾಗಿ ಮಾಡಲಾಗುತ್ತಿದೆ. ಭಾರತದಲ್ಲಿ ಶೇ.15ರಷ್ಟು ಮಂದಿ ಮುಸ್ಲಿಮರಿದ್ದಾರೆ. ಮುಸ್ಲಿಂ ಪ್ರಧಾನಿಯ ವಿಷಯ ಹಾಗಿರಲಿ, ಲೋಕಸಭೆಯ 543 ಸದಸ್ಯ ಸ್ಥಾನ ಗಳಲ್ಲಿ ಮುಸ್ಲಿಮರ ಸಂಖ್ಯೆ ಕೇವಲ 27. (ಶೇ.5) ಎಂದು ಪತ್ರಕರ್ತ ಸಂದೀಪ್‌ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

“ನಮ್ಮ ಭಾರತವು ಮುಸ್ಲಿಂ ಪ್ರಧಾನಿಯನ್ನು ಆಯ್ಕೆ ಮಾಡಬೇಕೇ? ಪ್ರಧಾನಿಯ ಧರ್ಮ ಅಥವಾ ಲಿಂಗವನ್ನು ಲೆಕ್ಕಿಸದೆ ಭಾರತವು ಸಮರ್ಥ ಪ್ರಧಾನಿಯನ್ನು ಆಯ್ಕೆ ಮಾಡಬೇಕಾಗಿದೆ! ನಮ್ಮ ಪ್ರಧಾನಿ ಹಿಂದೂ, ಮುಸ್ಲಿಂ, ಜೈನ, ನಾಸ್ತಿಕ, ಉಭಯಲಿಂಗಿ, ಸಲಿಂಗಿ, ಅಲೈಂಗಿಕ, ಪುರುಷ, ಮಹಿಳೆ, ಟ್ಯಾನ್ಸ್ಜೆಂಡರ್ ಆಗಿದ್ದರೂ ಪರವಾಗಿಲ್ಲ ನಮ್ಮ ಭಾರತೀಯ ಪ್ರಧಾನಿಗೆ ದೂರದೃಷ್ಟಿ ಇರಬೇಕು” ಎಂದು ರಾಜಕೀಯ ವಿಶ್ಲೇಷಕ ತಹಸೀನ್‌ ಪೂನಾವಾಲ್ಲಾ ಅಭಿಪ್ರಾಯಪಟ್ಟಿದ್ದಾರೆ.

“ಮುಸ್ಲಿಂ ಪ್ರಧಾನಿ ಆಯ್ಕೆ ವಿಚಾರ ಅಪ್ರಸ್ತುತವಾಗಿದೆ. ಏಕೆಂದರೆ ನಮ್ಮ ಭಾರತವು ಸಂಸದೀಯ ಪ್ರಜಾಪ್ರಭುತ್ವವನ್ನು ಹೊಂದಿದೆ ಹೊರತು ಅಧ್ಯಕ್ಷೀಯ ಮಾದರಿಯಲ್ಲ. ಜನರು ರಾಜಕೀಯ ಪಕ್ಷವನ್ನು ಆಯ್ಕೆ ಮಾಡುತ್ತಾರೆ. ಅದರ ಸಂಸದರು ನಂತರ ಪ್ರಧಾನಿಯನ್ನು ಆಯ್ಕೆ ಮಾಡುತ್ತಾರೆ. ಯಾರಿಗಾದರೂ ಬಹುಪಾಲು ಸಂಸದರ ಬೆಂಬಲವಿದ್ದರೆ, ಪ್ರಧಾನಿಯಾಗಲು ಯಾವುದೇ ಸಾಂವಿಧಾನಿಕ ಅಡ್ಡಿಯಿಲ್ಲ! ಉದಾ: ಡಾ ಎಂಎಂಎಸ್!” ಎಂದು ಮತ್ತೊಂದು ಟ್ವೀಟ್‌ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....