Homeಮುಖಪುಟಹಿಂದೂ ರಕ್ಷಾ ದಳದಿಂದ ಆಜಾನ್ ವಿರುದ್ಧ ರ್‍ಯಾಲಿ : ಪ್ರಚೋದನಕಾರಿ ಘೋಷಣೆ

ಹಿಂದೂ ರಕ್ಷಾ ದಳದಿಂದ ಆಜಾನ್ ವಿರುದ್ಧ ರ್‍ಯಾಲಿ : ಪ್ರಚೋದನಕಾರಿ ಘೋಷಣೆ

- Advertisement -
- Advertisement -

ಡೆಹ್ರಾಡೂನ್ : ಹಿಂದುತ್ವ ಸಂಘಟನೆ ಹಿಂದೂ ರಕ್ಷಾ ದಳ ಉತ್ತರಾಖಂಡದ ಡೆಹ್ರಾಡೂನ್ ನಗರದ ಸ್ಥಳೀಯ ಜಾಮಾ ಮಸೀದಿಯಿಂದ ಆಜಾನ್ (ಪ್ರಾರ್ಥನೆಗೆ ಕರೆ) ಕರೆಯುವುದರ ವಿರುದ್ಧ ರ್‍ಯಾಲಿ ನಡೆಸಿ, ಪ್ರಚೋದನಕಾರಿ ಘೋಷಣೆ ಕೂಗಿದ ಘಟನೆ ವರದಿಯಾಗಿದೆ.

ಕಳೆದ ಮಂಗಳವಾರ (ಫೆ.25) ಹಿಂದೂ ರಕ್ಷಾ ದಳದ ಸದಸ್ಯರು “ಅಯೋಧ್ಯೆ ಕೇವಲ ಒಂದು ಉದಾಹರಣೆ, ಮುಂದಿನ ಗುರಿ ಕಾಶಿ ಮತ್ತು ಮಥುರಾ” ಮತ್ತು “ಭಾರತದಲ್ಲಿ ವಾಸಿಸುವರೆಲ್ಲರೂ “ಜೈ ಶ್ರೀ ರಾಮ್” ಎಂದು ಜಪಿಸಬೇಕು” ಎಂಬಂತಹ ಪ್ರಚೋದನಕಾರಿ ಮತ್ತು ವಿವಾದಾತ್ಮಕ ಘೋಷಣೆಗಳನ್ನು ಕೂಗಿದ್ದಾರೆ. ಮಸೀದಿಯಲ್ಲಿ “ಹನುಮಾನ್ ಚಾಲೀಸಾ” ಪಠಿಸುವಂತೆ ಒತ್ತಾಯಿಸಿದ್ದಾರೆ. ಅದಾಗ್ಯೂ ಅವರಿಗೆ ಮಸೀದಿಯ ಹತ್ತಿರವೇ ಹೋಗಲು ಅವಕಾಶ ನೀಡಲಾಗಿದೆ.

“ಉತ್ತರಾಖಂಡದಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಹಿಂದೂ ರಕ್ಷಾ ದಳವು ಆಜಾನ್ ಧ್ವನಿ ಹೊರಬರುವ ಎಲ್ಲಾ ಮಸೀದಿಗಳ ಮುಂದೆ ‘ಹನುಮಾನ್ ಚಾಲೀಸಾ’ ಪಠಿಸುತ್ತದೆ. ಈಗ ನಾವು ಒಂದು ಜ್ಞಾಪಕ ಪತ್ರವನ್ನು ಸಲ್ಲಿಸಿದ್ದೇವೆ. ಧ್ವನಿವರ್ಧಕಗಳನ್ನು ಮುಚ್ಚದಿದ್ದರೆ, ನಾವು ಅವರ ವಿರುದ್ಧ ಇತರ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ಹಿಂದೂತ್ವ ಮುಖಂಡರು ಸ್ಥಳೀಯ ವರದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಮಸೀದಿಯೊಳಗೆ ‘ಹನುಮಾನ್ ಚಾಲೀಸಾ’ ಪಠಿಸದಂತೆ ಪೊಲೀಸರು ತಮ್ಮನ್ನು ತಡೆದರು ಎಂದು ಅವರು ಹೇಳಿದ್ದಾರೆ. ಮುಂದಿನ ಬಾರಿ, ನಮ್ಮನ್ನು ತಡೆಯಲಾಗುವುದಿಲ್ಲ ಮತ್ತು ಯಾವುದೇ ಬೆಲೆ ತೆತ್ತಾದರೂ ಅದನ್ನು ಮಾಡುತ್ತೇವೆ ಎಂದಿದ್ದಾರೆ.

ಮಸೀದಿಯ ಬಳಿ ಹಿಂದುತ್ವ ರ್‍ಯಾಲಿಗೆ ಅವಕಾಶ ನೀಡದಿದ್ದಕ್ಕಾಗಿ ಮಸೀದಿಯ ಮುಖಂಡರೊಬ್ಬರು ಪೊಲೀಸರನ್ನು ಶ್ಲಾಘಿಸಿದರು, ಇದು ಪ್ರದೇಶದಲ್ಲಿ ಗಲಭೆಗೆ ಕಾರಣವಾಗಬಹುದಿತ್ತು ಎಂದು ಹೇಳಿದ್ದಾರೆ.

“ಜನಸಂದಣಿಯನ್ನು ತಡೆಯುವುದು ಪೊಲೀಸರ ಕರ್ತವ್ಯ. ಈ ವಿಷಯವನ್ನು ಕೋಮು ಗಲಭೆಯಾಗಿ ಪರಿವರ್ತಿಸಲು ಅವರು ಅವರಿಗೆ ಅವಕಾಶ ನೀಡಬಾರದು. ನಾವು ನಮ್ಮ ಪ್ರಾರ್ಥನೆಯಲ್ಲಿ ನಿರತರಾಗಿದ್ದೆವು” ಎಂದು ಅವರು ಹೇಳಿದರು.

ಮುಸ್ಲಿಂ ಮುಖಂಡರು ಶಾಂತಿಯುತರು ಮತ್ತು ಅಗತ್ಯವಿರುವಷ್ಟು ಆಜಾನ್ ಧ್ವನಿಯನ್ನು ಕಡಿಮೆ ಮಾಡಬಹುದು ಎಂದು ಹೇಳಿದರು.

“ಅವರಿಗೆ ಆಜಾನ್ ಧ್ವನಿಯಲ್ಲಿ ಯಾವುದೇ ಸಮಸ್ಯೆ ಇದ್ದರೆ, ನಾವು ಧ್ವನಿವರ್ಧಕಗಳನ್ನು ಕಡಿಮೆ ಮಾಡಬಹುದು. ಪವಿತ್ರ ರಂಜಾನ್ ತಿಂಗಳು ಹತ್ತಿರವಾಗಿರುವುದರಿಂದ ಈ ಸಮಸ್ಯೆಗಳನ್ನು ಸೃಷ್ಟಿಸಲಾಗುತ್ತಿದೆ. ನಾವು ಶಾಂತಿಯುತವಾಗಿ ಬದುಕಲು ಬಯಸುತ್ತೇವೆ. ಆದ್ದರಿಂದ ದೇಶಾದ್ಯಂತ ಶಾಂತಿ ಕದಡುವ ವಾತಾವರಣ ಸೃಷ್ಟಿಯಾಗಬಾರದು” ಎಂದು ಅವರು ತಿಳಿಸಿದರು.

ಹಿಂದುತ್ವ ರ್‍ಯಾಲಿಯನ್ನು ನಿಯಂತ್ರಿಸಿದ್ದಕ್ಕಾಗಿ ಮತ್ತು ಅದು ಮಸೀದಿಯ ಬಳಿ ಹೋಗಲು ಅವಕಾಶ ನೀಡದಿದ್ದಕ್ಕಾಗಿ ಅವರು ಪೊಲೀಸರಿಗೆ ಧನ್ಯವಾದ ಅರ್ಪಿಸಿದರು. ಉತ್ತರಾಖಂಡದಲ್ಲಿ ಹಿಂದುತ್ವ ಸಂಘಟನೆಯು ವಿವಿಧ ನೆಪಗಳ ಮೇಲೆ ಮಸೀದಿಗಳನ್ನು ಗುರಿಯಾಗಿಸಿಕೊಳ್ಳುತ್ತಿದೆ. ಇದು ಖಂಡನೀಯ ಎಂದಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹಿಂದುತ್ವ ಗುಂಪುಗಳ ಸದಸ್ಯರು ಮತ್ತು ಸ್ಥಳೀಯರು 55 ವರ್ಷ ಹಳೆಯ ಮಸೀದಿಯ ಹತ್ತಿರ ತಲುಪುವುದನ್ನು ತಡೆಯಲು ಪೊಲೀಸರು ಪ್ರಯತ್ನಿಸಿದಾಗ ಭುಗಿಲೆದ್ದ ಹಿಂಸಾಚಾರದ ಸಂದರ್ಭದಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದರು ಮತ್ತು ಮುಸ್ಲಿಮರ ಒಡೆತನದ ಹಲವಾರು ಅಂಗಡಿಗಳನ್ನು ದೋಚಲಾಗಿತ್ತು. ಜಿಲ್ಲಾಡಳಿತವು ಮಸೀದಿಯನ್ನು 1969ರಲ್ಲಿ ಕಾನೂನುಬದ್ಧವಾಗಿ ನೋಂದಾಯಿಸಲಾಗಿದೆ ಎಂದು ಘೋಷಿಸಿದ್ದರೂ ಮಸೀದಿಯನ್ನು “ಅಕ್ರಮವಾಗಿ ನಿರ್ಮಿಸಲಾಗಿದೆ” ಎಂದು ಪ್ರತಿಭಟನಾಕಾರರು ಆರೋಪಿಸುತ್ತಿದ್ದಾರೆ.

ಪ್ರತಿಭಟನಕಾರರು ಮಸೀದಿಯನ್ನು ತಲುಪಲು ಸಾಧ್ಯವಾಗದೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಪೊಲೀಸರು ಲಾಠಿಚಾರ್ಜ್ ಮಾಡಿದರು ಮತ್ತು ನಂತರ ಧ್ವಜ ಮೆರವಣಿಗೆ ನಡೆಸಬೇಕಾಯಿತು.

ಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...