Homeಮುಖಪುಟಹಿಂದೂ ರಕ್ಷಾ ದಳದಿಂದ ಆಜಾನ್ ವಿರುದ್ಧ ರ್‍ಯಾಲಿ : ಪ್ರಚೋದನಕಾರಿ ಘೋಷಣೆ

ಹಿಂದೂ ರಕ್ಷಾ ದಳದಿಂದ ಆಜಾನ್ ವಿರುದ್ಧ ರ್‍ಯಾಲಿ : ಪ್ರಚೋದನಕಾರಿ ಘೋಷಣೆ

- Advertisement -
- Advertisement -

ಡೆಹ್ರಾಡೂನ್ : ಹಿಂದುತ್ವ ಸಂಘಟನೆ ಹಿಂದೂ ರಕ್ಷಾ ದಳ ಉತ್ತರಾಖಂಡದ ಡೆಹ್ರಾಡೂನ್ ನಗರದ ಸ್ಥಳೀಯ ಜಾಮಾ ಮಸೀದಿಯಿಂದ ಆಜಾನ್ (ಪ್ರಾರ್ಥನೆಗೆ ಕರೆ) ಕರೆಯುವುದರ ವಿರುದ್ಧ ರ್‍ಯಾಲಿ ನಡೆಸಿ, ಪ್ರಚೋದನಕಾರಿ ಘೋಷಣೆ ಕೂಗಿದ ಘಟನೆ ವರದಿಯಾಗಿದೆ.

ಕಳೆದ ಮಂಗಳವಾರ (ಫೆ.25) ಹಿಂದೂ ರಕ್ಷಾ ದಳದ ಸದಸ್ಯರು “ಅಯೋಧ್ಯೆ ಕೇವಲ ಒಂದು ಉದಾಹರಣೆ, ಮುಂದಿನ ಗುರಿ ಕಾಶಿ ಮತ್ತು ಮಥುರಾ” ಮತ್ತು “ಭಾರತದಲ್ಲಿ ವಾಸಿಸುವರೆಲ್ಲರೂ “ಜೈ ಶ್ರೀ ರಾಮ್” ಎಂದು ಜಪಿಸಬೇಕು” ಎಂಬಂತಹ ಪ್ರಚೋದನಕಾರಿ ಮತ್ತು ವಿವಾದಾತ್ಮಕ ಘೋಷಣೆಗಳನ್ನು ಕೂಗಿದ್ದಾರೆ. ಮಸೀದಿಯಲ್ಲಿ “ಹನುಮಾನ್ ಚಾಲೀಸಾ” ಪಠಿಸುವಂತೆ ಒತ್ತಾಯಿಸಿದ್ದಾರೆ. ಅದಾಗ್ಯೂ ಅವರಿಗೆ ಮಸೀದಿಯ ಹತ್ತಿರವೇ ಹೋಗಲು ಅವಕಾಶ ನೀಡಲಾಗಿದೆ.

“ಉತ್ತರಾಖಂಡದಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಹಿಂದೂ ರಕ್ಷಾ ದಳವು ಆಜಾನ್ ಧ್ವನಿ ಹೊರಬರುವ ಎಲ್ಲಾ ಮಸೀದಿಗಳ ಮುಂದೆ ‘ಹನುಮಾನ್ ಚಾಲೀಸಾ’ ಪಠಿಸುತ್ತದೆ. ಈಗ ನಾವು ಒಂದು ಜ್ಞಾಪಕ ಪತ್ರವನ್ನು ಸಲ್ಲಿಸಿದ್ದೇವೆ. ಧ್ವನಿವರ್ಧಕಗಳನ್ನು ಮುಚ್ಚದಿದ್ದರೆ, ನಾವು ಅವರ ವಿರುದ್ಧ ಇತರ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ” ಎಂದು ಹಿಂದೂತ್ವ ಮುಖಂಡರು ಸ್ಥಳೀಯ ವರದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಮಸೀದಿಯೊಳಗೆ ‘ಹನುಮಾನ್ ಚಾಲೀಸಾ’ ಪಠಿಸದಂತೆ ಪೊಲೀಸರು ತಮ್ಮನ್ನು ತಡೆದರು ಎಂದು ಅವರು ಹೇಳಿದ್ದಾರೆ. ಮುಂದಿನ ಬಾರಿ, ನಮ್ಮನ್ನು ತಡೆಯಲಾಗುವುದಿಲ್ಲ ಮತ್ತು ಯಾವುದೇ ಬೆಲೆ ತೆತ್ತಾದರೂ ಅದನ್ನು ಮಾಡುತ್ತೇವೆ ಎಂದಿದ್ದಾರೆ.

ಮಸೀದಿಯ ಬಳಿ ಹಿಂದುತ್ವ ರ್‍ಯಾಲಿಗೆ ಅವಕಾಶ ನೀಡದಿದ್ದಕ್ಕಾಗಿ ಮಸೀದಿಯ ಮುಖಂಡರೊಬ್ಬರು ಪೊಲೀಸರನ್ನು ಶ್ಲಾಘಿಸಿದರು, ಇದು ಪ್ರದೇಶದಲ್ಲಿ ಗಲಭೆಗೆ ಕಾರಣವಾಗಬಹುದಿತ್ತು ಎಂದು ಹೇಳಿದ್ದಾರೆ.

“ಜನಸಂದಣಿಯನ್ನು ತಡೆಯುವುದು ಪೊಲೀಸರ ಕರ್ತವ್ಯ. ಈ ವಿಷಯವನ್ನು ಕೋಮು ಗಲಭೆಯಾಗಿ ಪರಿವರ್ತಿಸಲು ಅವರು ಅವರಿಗೆ ಅವಕಾಶ ನೀಡಬಾರದು. ನಾವು ನಮ್ಮ ಪ್ರಾರ್ಥನೆಯಲ್ಲಿ ನಿರತರಾಗಿದ್ದೆವು” ಎಂದು ಅವರು ಹೇಳಿದರು.

ಮುಸ್ಲಿಂ ಮುಖಂಡರು ಶಾಂತಿಯುತರು ಮತ್ತು ಅಗತ್ಯವಿರುವಷ್ಟು ಆಜಾನ್ ಧ್ವನಿಯನ್ನು ಕಡಿಮೆ ಮಾಡಬಹುದು ಎಂದು ಹೇಳಿದರು.

“ಅವರಿಗೆ ಆಜಾನ್ ಧ್ವನಿಯಲ್ಲಿ ಯಾವುದೇ ಸಮಸ್ಯೆ ಇದ್ದರೆ, ನಾವು ಧ್ವನಿವರ್ಧಕಗಳನ್ನು ಕಡಿಮೆ ಮಾಡಬಹುದು. ಪವಿತ್ರ ರಂಜಾನ್ ತಿಂಗಳು ಹತ್ತಿರವಾಗಿರುವುದರಿಂದ ಈ ಸಮಸ್ಯೆಗಳನ್ನು ಸೃಷ್ಟಿಸಲಾಗುತ್ತಿದೆ. ನಾವು ಶಾಂತಿಯುತವಾಗಿ ಬದುಕಲು ಬಯಸುತ್ತೇವೆ. ಆದ್ದರಿಂದ ದೇಶಾದ್ಯಂತ ಶಾಂತಿ ಕದಡುವ ವಾತಾವರಣ ಸೃಷ್ಟಿಯಾಗಬಾರದು” ಎಂದು ಅವರು ತಿಳಿಸಿದರು.

ಹಿಂದುತ್ವ ರ್‍ಯಾಲಿಯನ್ನು ನಿಯಂತ್ರಿಸಿದ್ದಕ್ಕಾಗಿ ಮತ್ತು ಅದು ಮಸೀದಿಯ ಬಳಿ ಹೋಗಲು ಅವಕಾಶ ನೀಡದಿದ್ದಕ್ಕಾಗಿ ಅವರು ಪೊಲೀಸರಿಗೆ ಧನ್ಯವಾದ ಅರ್ಪಿಸಿದರು. ಉತ್ತರಾಖಂಡದಲ್ಲಿ ಹಿಂದುತ್ವ ಸಂಘಟನೆಯು ವಿವಿಧ ನೆಪಗಳ ಮೇಲೆ ಮಸೀದಿಗಳನ್ನು ಗುರಿಯಾಗಿಸಿಕೊಳ್ಳುತ್ತಿದೆ. ಇದು ಖಂಡನೀಯ ಎಂದಿದ್ದಾರೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹಿಂದುತ್ವ ಗುಂಪುಗಳ ಸದಸ್ಯರು ಮತ್ತು ಸ್ಥಳೀಯರು 55 ವರ್ಷ ಹಳೆಯ ಮಸೀದಿಯ ಹತ್ತಿರ ತಲುಪುವುದನ್ನು ತಡೆಯಲು ಪೊಲೀಸರು ಪ್ರಯತ್ನಿಸಿದಾಗ ಭುಗಿಲೆದ್ದ ಹಿಂಸಾಚಾರದ ಸಂದರ್ಭದಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದರು ಮತ್ತು ಮುಸ್ಲಿಮರ ಒಡೆತನದ ಹಲವಾರು ಅಂಗಡಿಗಳನ್ನು ದೋಚಲಾಗಿತ್ತು. ಜಿಲ್ಲಾಡಳಿತವು ಮಸೀದಿಯನ್ನು 1969ರಲ್ಲಿ ಕಾನೂನುಬದ್ಧವಾಗಿ ನೋಂದಾಯಿಸಲಾಗಿದೆ ಎಂದು ಘೋಷಿಸಿದ್ದರೂ ಮಸೀದಿಯನ್ನು “ಅಕ್ರಮವಾಗಿ ನಿರ್ಮಿಸಲಾಗಿದೆ” ಎಂದು ಪ್ರತಿಭಟನಾಕಾರರು ಆರೋಪಿಸುತ್ತಿದ್ದಾರೆ.

ಪ್ರತಿಭಟನಕಾರರು ಮಸೀದಿಯನ್ನು ತಲುಪಲು ಸಾಧ್ಯವಾಗದೆ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಪೊಲೀಸರು ಲಾಠಿಚಾರ್ಜ್ ಮಾಡಿದರು ಮತ್ತು ನಂತರ ಧ್ವಜ ಮೆರವಣಿಗೆ ನಡೆಸಬೇಕಾಯಿತು.

ಶ್ವೇತ ಭವನದಲ್ಲಿ ಟ್ರಂಪ್-ಝೆಲೆನ್‌ಸ್ಕಿ ವಾಗ್ವಾದ : ಮಹತ್ವದ ಸಭೆಯಲ್ಲಿ ಆಗಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...