Homeಮುಖಪುಟ'ಹಿಂದೂ ರಾಷ್ಟ್ರ' ಸಿದ್ದಾಂತವೇ ಖಲಿಸ್ಥಾನ್‌ ಪ್ರತ್ಯೇಕತೆ ಹೋರಾಟಕ್ಕೆ ಕಾರಣ: ಅಶೋಕ್ ಗೆಹ್ಲೋಟ್

‘ಹಿಂದೂ ರಾಷ್ಟ್ರ’ ಸಿದ್ದಾಂತವೇ ಖಲಿಸ್ಥಾನ್‌ ಪ್ರತ್ಯೇಕತೆ ಹೋರಾಟಕ್ಕೆ ಕಾರಣ: ಅಶೋಕ್ ಗೆಹ್ಲೋಟ್

- Advertisement -
- Advertisement -

ಪಂಜಾಬ್‌ನ ಆಡಳಿತಾರೂಢ ಬಿಜೆಪಿಯ ‘ಹಿಂದೂ ರಾಷ್ಟ್ರ’ ಸಿದ್ಧಾಂತವನ್ನು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಶುಕ್ರವಾರ ಕಟುವಾಗಿ ಟೀಕಿಸಿದ್ದಾರೆ. ನಿಮ್ಮ ಈ ‘ಹಿಂದೂ ರಾಷ್ಟ್ರ’ ಸಿದ್ಧಾಂತವೇ ಖಲಿಸ್ತಾನ್ ಚಳವಳಿಯ ಉದಯಕ್ಕೆ ಮತ್ತು ಪಂಜಾಬ್‌ನಲ್ಲಿ ಅಮೃತಪಾಲ್ ಸಿಂಗ್‌ರಂತಹ ಪ್ರತ್ಯೇಕತಾವಾದಿಗಳು ಹುಟ್ಟಿಕೊಳ್ಳಲು ಕಾರಣವಾಗಿದೆ ಎಂದು ಹೇಳಿದ್ದಾರೆ.

ಭರತ್‌ಪುರದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಗೆಹ್ಲೋಟ್, ಖಲಿಸ್ತಾನ್ ಪ್ರತ್ಯೇಕತಾವಾದಿ, ಬಂಡುಕೋರ ಅಮೃತಪಾಲ್ ಸಿಂಗ್ ಅವರ ಜನಪ್ರಿಯತೆಗೆ ಬಿಜೆಪಿ ಮತ್ತು ಆರೆಸ್ಸೆಸ್ ಸಿದ್ಧಾಂತಗಳೇ ಕಾರಣ ಎಂದು ದೂಷಿಸಿದ್ದಾರೆ.

”ಮೋಹನ್ ಭಾಗವತ್ ಮತ್ತು ನರೇಂದ್ರ ಮೋದಿ ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡಿದರೆ, ನಾನು ಖಲಿಸ್ತಾನ್ ಬಗ್ಗೆ ಏಕೆ ಮಾತನಾಡಬಾರದು? ಎಂದು ಅಮೃತಪಾಲ್ ಸಿಂಗ್ ಹೇಳುತ್ತಿದ್ದಾರೆ” ಇಂತಹ ಹೇಳಿಕೆ ನೀಡುವಲ್ಲಿ ಸಿಂಗ್ ಅವರ ದಿಟ್ಟತನದ ಹಿಂದಿನ ಕಾರಣವನ್ನು ಗೆಹ್ಲೋಟ್ ಪ್ರಶ್ನಿಸಿದರು. ದೇಶದಲ್ಲಿ ಧರ್ಮ ಮತ್ತು ರಾಜಕೀಯ ಬೆಸೆದುಕೊಂಡಿದೆ ಎಂದು ಹೇಳಿದರು.

ಇದನ್ನೂ ಓದಿ: ಎಲ್ಲ ನಾಗರಿಕರೂ ಹಿಂದೂಗಳು ಹಾಗಾಗಿ ಭಾರತ ಹಿಂದೂ ರಾಷ್ಟ್ರ: ಆದಿತ್ಯನಾಥ್ ವಿವಾದಾತ್ಮಕ ಹೇಳಿಕೆ

”ಧರ್ಮದ ಹೆಸರಿನಲ್ಲಿ ಜನರನ್ನು ಮೆಚ್ಚಿಸುವುದು ಸುಲಭ. ಆದರೆ ನಮ್ಮ ದೇಶದ ಬಗ್ಗೆ ಚಿಂತಿಸಬೇಕು,” ಎಂದು ಎಚ್ಚರಿಸಿದರು. ”ಇಂದಿರಾ ಗಾಂಧಿ ಅವರು ಖಲಿಸ್ತಾನ್ ರಚನೆಗೆ ಅವಕಾಶ ನೀಡಲಿಲ್ಲ, ಅದಕ್ಕಾಗಿಯೇ ಅವರನ್ನು ಕೊಲ್ಲಲಾಯಿತು” ಎಂದು ಸಿಎಂ ಗೆಹ್ಲೋಟ್ ಎಂದು ಹೇಳಿದರು.

ಪಂಜಾಬ್ ಪೊಲೀಸರು ಅಮೃತಪಾಲ್ ಸಿಂಗ್ ಮತ್ತು ಆತನ ಸಹಚರರನ್ನು ಬಂಧಿಸಲು ಹುಡುಕಾಟ ನಡೆಸಿದ್ದಾರೆ. ಮತ್ತೊಂದೆಡೆ ಪರಾರಿಯಾಗಿರುವ ವಾರಿಸ್ ಪಂಜಾಬ್ ಡಿ ಮುಖ್ಯಸ್ಥರು ಎರಡು ವೀಡಿಯೊ ಸಂದೇಶಗಳನ್ನು ಮತ್ತು ಒಂದು ಆಡಿಯೊ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಮಾರ್ಚ್ 18 ರಿಂದ ಪರಾರಿಯಾಗಿರುವ ಸಿಂಗ್ ಗುರುವಾರ ಫೇಸ್‌ಬುಕ್‌ನಲ್ಲಿ ಲೈವ್‌ಗೆ ಹೋಗಿ ತಾನು ಶರಣಾಗುವುದಿಲ್ಲ. ”ನಾನು ಪಲಾಯನಗೈದಿದ್ದೇನೆ ಮತ್ತು ನನ್ನ ಸಹಚರರನ್ನು ತೊರೆದಿದ್ದೇನೆ ಎಂದು ಭಾವಿಸುವವರು ಈ ಭ್ರಮೆಯನ್ನು ತಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಬಾರದು. ನನಗೆ ಸಾವಿಗೆ ಭಯವಿಲ್ಲ ಎಂದು ಪಂಜಾಬಿ ಭಾಷೆಯಲ್ಲಿ ವಿಡಿಯೋದಲ್ಲಿ ಘೋಷಿಸಿದರು.

ಗುರುವಾರದ ವೀಡಿಯೊದಲ್ಲಿ ಕಾಣಿಸಿಕೊಳ್ಳುವ ಮೊದಲು ಅಮೃತಪಾಲ್ ಸಿಂಗ್ ಆಡಿಯೊ ಸಂದೇಶ ಕಳುಹಿಸಿದ್ದು ಅದರಲ್ಲಿ, ಸಿಖ್ ನಾಯಕ ಅಕಾಲ್ ತಖ್ತ್‌ಗೆ ಸಭೆಯನ್ನು ಕರೆಯುವಂತೆ ಮತ್ತು ಅಕಾಲ್ ತಖ್ತ್ ಸಮುದಾಯದ ನಾಯಕ ಎಂದು ಸಾಬೀತುಪಡಿಸುವಂತೆ ಕೇಳಿಕೊಂಡಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...