Homeಮುಖಪುಟ'ಹಿಂದೂ ರಾಷ್ಟ್ರ' ಸಿದ್ದಾಂತವೇ ಖಲಿಸ್ಥಾನ್‌ ಪ್ರತ್ಯೇಕತೆ ಹೋರಾಟಕ್ಕೆ ಕಾರಣ: ಅಶೋಕ್ ಗೆಹ್ಲೋಟ್

‘ಹಿಂದೂ ರಾಷ್ಟ್ರ’ ಸಿದ್ದಾಂತವೇ ಖಲಿಸ್ಥಾನ್‌ ಪ್ರತ್ಯೇಕತೆ ಹೋರಾಟಕ್ಕೆ ಕಾರಣ: ಅಶೋಕ್ ಗೆಹ್ಲೋಟ್

- Advertisement -
- Advertisement -

ಪಂಜಾಬ್‌ನ ಆಡಳಿತಾರೂಢ ಬಿಜೆಪಿಯ ‘ಹಿಂದೂ ರಾಷ್ಟ್ರ’ ಸಿದ್ಧಾಂತವನ್ನು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಶುಕ್ರವಾರ ಕಟುವಾಗಿ ಟೀಕಿಸಿದ್ದಾರೆ. ನಿಮ್ಮ ಈ ‘ಹಿಂದೂ ರಾಷ್ಟ್ರ’ ಸಿದ್ಧಾಂತವೇ ಖಲಿಸ್ತಾನ್ ಚಳವಳಿಯ ಉದಯಕ್ಕೆ ಮತ್ತು ಪಂಜಾಬ್‌ನಲ್ಲಿ ಅಮೃತಪಾಲ್ ಸಿಂಗ್‌ರಂತಹ ಪ್ರತ್ಯೇಕತಾವಾದಿಗಳು ಹುಟ್ಟಿಕೊಳ್ಳಲು ಕಾರಣವಾಗಿದೆ ಎಂದು ಹೇಳಿದ್ದಾರೆ.

ಭರತ್‌ಪುರದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಗೆಹ್ಲೋಟ್, ಖಲಿಸ್ತಾನ್ ಪ್ರತ್ಯೇಕತಾವಾದಿ, ಬಂಡುಕೋರ ಅಮೃತಪಾಲ್ ಸಿಂಗ್ ಅವರ ಜನಪ್ರಿಯತೆಗೆ ಬಿಜೆಪಿ ಮತ್ತು ಆರೆಸ್ಸೆಸ್ ಸಿದ್ಧಾಂತಗಳೇ ಕಾರಣ ಎಂದು ದೂಷಿಸಿದ್ದಾರೆ.

”ಮೋಹನ್ ಭಾಗವತ್ ಮತ್ತು ನರೇಂದ್ರ ಮೋದಿ ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡಿದರೆ, ನಾನು ಖಲಿಸ್ತಾನ್ ಬಗ್ಗೆ ಏಕೆ ಮಾತನಾಡಬಾರದು? ಎಂದು ಅಮೃತಪಾಲ್ ಸಿಂಗ್ ಹೇಳುತ್ತಿದ್ದಾರೆ” ಇಂತಹ ಹೇಳಿಕೆ ನೀಡುವಲ್ಲಿ ಸಿಂಗ್ ಅವರ ದಿಟ್ಟತನದ ಹಿಂದಿನ ಕಾರಣವನ್ನು ಗೆಹ್ಲೋಟ್ ಪ್ರಶ್ನಿಸಿದರು. ದೇಶದಲ್ಲಿ ಧರ್ಮ ಮತ್ತು ರಾಜಕೀಯ ಬೆಸೆದುಕೊಂಡಿದೆ ಎಂದು ಹೇಳಿದರು.

ಇದನ್ನೂ ಓದಿ: ಎಲ್ಲ ನಾಗರಿಕರೂ ಹಿಂದೂಗಳು ಹಾಗಾಗಿ ಭಾರತ ಹಿಂದೂ ರಾಷ್ಟ್ರ: ಆದಿತ್ಯನಾಥ್ ವಿವಾದಾತ್ಮಕ ಹೇಳಿಕೆ

”ಧರ್ಮದ ಹೆಸರಿನಲ್ಲಿ ಜನರನ್ನು ಮೆಚ್ಚಿಸುವುದು ಸುಲಭ. ಆದರೆ ನಮ್ಮ ದೇಶದ ಬಗ್ಗೆ ಚಿಂತಿಸಬೇಕು,” ಎಂದು ಎಚ್ಚರಿಸಿದರು. ”ಇಂದಿರಾ ಗಾಂಧಿ ಅವರು ಖಲಿಸ್ತಾನ್ ರಚನೆಗೆ ಅವಕಾಶ ನೀಡಲಿಲ್ಲ, ಅದಕ್ಕಾಗಿಯೇ ಅವರನ್ನು ಕೊಲ್ಲಲಾಯಿತು” ಎಂದು ಸಿಎಂ ಗೆಹ್ಲೋಟ್ ಎಂದು ಹೇಳಿದರು.

ಪಂಜಾಬ್ ಪೊಲೀಸರು ಅಮೃತಪಾಲ್ ಸಿಂಗ್ ಮತ್ತು ಆತನ ಸಹಚರರನ್ನು ಬಂಧಿಸಲು ಹುಡುಕಾಟ ನಡೆಸಿದ್ದಾರೆ. ಮತ್ತೊಂದೆಡೆ ಪರಾರಿಯಾಗಿರುವ ವಾರಿಸ್ ಪಂಜಾಬ್ ಡಿ ಮುಖ್ಯಸ್ಥರು ಎರಡು ವೀಡಿಯೊ ಸಂದೇಶಗಳನ್ನು ಮತ್ತು ಒಂದು ಆಡಿಯೊ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಮಾರ್ಚ್ 18 ರಿಂದ ಪರಾರಿಯಾಗಿರುವ ಸಿಂಗ್ ಗುರುವಾರ ಫೇಸ್‌ಬುಕ್‌ನಲ್ಲಿ ಲೈವ್‌ಗೆ ಹೋಗಿ ತಾನು ಶರಣಾಗುವುದಿಲ್ಲ. ”ನಾನು ಪಲಾಯನಗೈದಿದ್ದೇನೆ ಮತ್ತು ನನ್ನ ಸಹಚರರನ್ನು ತೊರೆದಿದ್ದೇನೆ ಎಂದು ಭಾವಿಸುವವರು ಈ ಭ್ರಮೆಯನ್ನು ತಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಬಾರದು. ನನಗೆ ಸಾವಿಗೆ ಭಯವಿಲ್ಲ ಎಂದು ಪಂಜಾಬಿ ಭಾಷೆಯಲ್ಲಿ ವಿಡಿಯೋದಲ್ಲಿ ಘೋಷಿಸಿದರು.

ಗುರುವಾರದ ವೀಡಿಯೊದಲ್ಲಿ ಕಾಣಿಸಿಕೊಳ್ಳುವ ಮೊದಲು ಅಮೃತಪಾಲ್ ಸಿಂಗ್ ಆಡಿಯೊ ಸಂದೇಶ ಕಳುಹಿಸಿದ್ದು ಅದರಲ್ಲಿ, ಸಿಖ್ ನಾಯಕ ಅಕಾಲ್ ತಖ್ತ್‌ಗೆ ಸಭೆಯನ್ನು ಕರೆಯುವಂತೆ ಮತ್ತು ಅಕಾಲ್ ತಖ್ತ್ ಸಮುದಾಯದ ನಾಯಕ ಎಂದು ಸಾಬೀತುಪಡಿಸುವಂತೆ ಕೇಳಿಕೊಂಡಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...