Homeಮುಖಪುಟಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ: ತೀರ್ಪು ಪ್ರಶ್ನಿಸಿದ್ದ ಅರ್ಜಿ ವಜಾ

ಜ್ಞಾನವಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ: ತೀರ್ಪು ಪ್ರಶ್ನಿಸಿದ್ದ ಅರ್ಜಿ ವಜಾ

- Advertisement -
- Advertisement -

ಜ್ಞಾನವಾಪಿ ಮಸೀದಿಯ ನೆಲ ಮಾಳಿಗೆಯಲ್ಲಿ ಹಿಂದೂ ಅರ್ಜಿದಾರರಿಗೆ ಪೂಜೆಗೆ ಅವಕಾಶ ಮಾಡಿಕೊಟ್ಟ ವಾರಣಾಸಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಕಡೆಯವರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದ್ದು, ಹಿಂದೂ ಪರರಿಗೆ ವ್ಯಾಸ್ ತೈಖಾನಾದಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಮಾಡಿಕೊಟ್ಟಿದೆ.

ವಾರಣಾಸಿ ನ್ಯಾಯಾಲಯವು ಜನವರಿ 31ರಂದು ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿರುವ ವಿಗ್ರಹಗಳ ಮುಂದೆ ಅರ್ಚಕರು ಪ್ರಾರ್ಥನೆ ಮಾಡಬಹುದು ಎಂದು ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿ ಅಲಹಬಾದ್‌ ಹೈಕೋರ್ಟ್‌ ಮೊರೆ ಹೋಗಿತ್ತು. ಈ ಕುರಿತು ಫೆ. 15ರಂದು ಹೈಕೋರ್ಟ್‌ ವಿಚಾರಣೆ ನಡೆದಿದ್ದು, ಇಂದು ನ್ಯಾಯಮೂರ್ತಿ ರೋಹಿತ್‌ ರಂಜನ್‌ ಅಗರ್ವಾಲ್‌ ಅವರ ಪೀಠವು ತೀರ್ಪನ್ನು ನೀಡಿದೆ.

ಜ್ಞಾನವಾಪಿ ಮಸೀದಿಯ ನೆಲ ಮಾಳಿಗೆಯಲ್ಲಿ ಪೂಜೆ, ಧಾರ್ಮಿಕ ವಿಧಿವಿಧಾನಗಳು ನಡೆಯುತ್ತಿದ್ದುದನ್ನು ಹೈಕೋರ್ಟ್ ಕೂಡ ಒಪ್ಪಿಕೊಂಡು ಜಿಲ್ಲಾ ನ್ಯಾಯಾಲಯದ ಆದೇಶವನ್ನು ಇಂದು ಎತ್ತಿ ಹಿಡಿಯಲಾಗಿದೆ. ನ್ಯಾಯಾಲಯವು ನಮ್ಮ ಪರವಾಗಿ ತೀರ್ಪು ನೀಡಿದೆ. ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯ ಆಕ್ಷೇಪಣೆಯನ್ನು ಹೈಕೋರ್ಟ್ ವಜಾಗೊಳಿಸಿದೆ ಎಂದು ವಕೀಲ ಸುಭಾಷ್ ನಂದನ್ ಚತುರ್ವೇದಿ ಹೇಳಿದ್ದಾರೆ.

ಇದು ಸ್ವಾಗತಾರ್ಹ ನಿರ್ಧಾರ, ಹಿಂದೂಗಳು ಪೂಜೆ ಮಾಡುವ ಹಕ್ಕನ್ನು ಹೈಕೋರ್ಟ್ ಉಳಿಸಿಕೊಂಡಿದೆ. ಹಿಂದೂಗಳು 1993ರವರೆಗೆ ವ್ಯಾಸ್ ತೆಹಖಾನಾದಲ್ಲಿ ಪೂಜೆ ಸಲ್ಲಿಸುತ್ತಿದ್ದರು, ಆದರೆ ಅದನ್ನು ಕಾನೂನುಬಾಹಿರವಾಗಿ ನಿಲ್ಲಿಸಲಾಯಿತು. ಮುಸ್ಲಿಂ ಕಡೆಯವರು ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಬಹುದು ಎಂದು ತೀರ್ಪಿನ ಬಗ್ಗೆ ವಕೀಲ ಹರಿಶಂಕರ್ ಜೈನ್ ಹೇಳಿದ್ದಾರೆ.

ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯನ್ನು ಪ್ರತಿನಿಧಿಸಿದ ಹಿರಿಯ ವಕೀಲರಾದ ಎಸ್‌ಎಫ್‌ಎ ನಖ್ವಿ ಮತ್ತು ಪುನೀತ್ ಗುಪ್ತಾ ಅವರು ವಾದವನ್ನು ಮಂಡಿಸಿದ್ದು, ಪೂಜಿಸುವ ಹಕ್ಕನ್ನು ಕೋರಿ ಸಲ್ಲಿಸಲಾದ ಸಿವಿಲ್ ಮೊಕದ್ದಮೆಯಲ್ಲಿ ಮಧ್ಯಂತರ ಆದೇಶದ ಮೂಲಕ ಅಂತಿಮ ಪರಿಹಾರವನ್ನು ನೀಡುವುದು ಕಾನೂನು ಕಾರ್ಯವಿಧಾನದ ಉಲ್ಲಂಘನೆಯಾಗಿದೆ ಎಂದು ವಾದಿಸಿದ್ದರು. ಹಿಂದೂಗಳ ಪರವಾಗಿ ಸುಪ್ರೀಂಕೋರ್ಟ್‌ನ ಹಿರಿಯ ವಕೀಲರಾದ ಸಿಎಸ್ ವೈದ್ಯನಾಥನ್ ಮತ್ತು ವಿಷ್ಣು ಶಂಕರ್ ಜೈನ್ ವಾದ ಮಂಡಿಸಿದ್ದರು.

ಮಸೀದಿ ಸಂಕೀರ್ಣ ಕುರಿತಂತೆ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ವರದಿ ಹೊರಬಿದ್ದ ನಂತರ ವಾರಣಾಸಿ ನ್ಯಾಯಾಲಯದ ತೀರ್ಪು ಪ್ರಕಟವಾಗಿತ್ತು. ಈ ಮಸೀದಿಯನ್ನು ಔರಂಗಜೇಬ್‌ ಆಡಳಿತದ ವೇಳೆ ಹಿಂದು ದೇವಳದ ಅವಶೇಷಗಳ ಮೇಲೆ ನಿರ್ಮಿಸಲಾಗಿತ್ತು ಎಂದು ವರದಿ ಹೇಳಿತ್ತು. ಆದರೆ ಅರ್ಜಿದಾರರ ವಾದವನ್ನು ಮಸೀದಿ ಸಮಿತಿ ಅಲ್ಲಗಳೆದಿತ್ತು ಹಾಗೂ ನೆಲಮಾಳಿಗೆಯಲ್ಲಿ ಯಾವುದೇ ಮೂರ್ತಿಗಳಿಲ್ಲ, ಆದ್ದರಿಂದ ಅಲ್ಲಿ 1993ರ ತನಕ ಯಾವುದೇ ಪೂಜೆ ಸಲ್ಲಿಸಲಾಗಿಲ್ಲ ಎಂದು ಹೇಳಿತ್ತು. ವಾರಣಾಸಿ ಕೋರ್ಟಿನ ತೀರ್ಪನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಲು ಸುಪ್ರೀಂಕೋರ್ಟ್‌ ನಿರಾಕರಿಸಿದ ಬೆನ್ನಲ್ಲೇ ಸಮಿತಿ ಫೆಬ್ರವರಿ 2ರಂದು ಹೈಕೋರ್ಟ್‌ ಕದ ತಟ್ಟಿತ್ತು.

ಇದನ್ನು ಓದಿ: ದೇವಾಲಯಗಳ ಹಣ ಚರ್ಚ್, ಮಸೀದಿಗಳಿಗೆ ಹೋಗುತ್ತಿಲ್ಲ: ಬಿಜೆಪಿಯ ಸುಳ್ಳನ್ನು ಬಯಲು ಮಾಡಿದ ಅರ್ಚಕರ ಒಕ್ಕೂಟ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...