Homeಮುಖಪುಟಹಿಂದೂ ಮಹಿಳೆಯರೇ, ಬುರ್ಖಾ ಧರಿಸುವವರೊಂದಿಗೆ ಸ್ನೇಹ ಬೆಳೆಸಬೇಡಿ: ದ್ವೇ‍ಷದ ಹೇಳಿಕೆ ಮುಂದುವರೆಸಿದ ಬಿಜೆಪಿ ನಾಯಕ ರಾಜಾ...

ಹಿಂದೂ ಮಹಿಳೆಯರೇ, ಬುರ್ಖಾ ಧರಿಸುವವರೊಂದಿಗೆ ಸ್ನೇಹ ಬೆಳೆಸಬೇಡಿ: ದ್ವೇ‍ಷದ ಹೇಳಿಕೆ ಮುಂದುವರೆಸಿದ ಬಿಜೆಪಿ ನಾಯಕ ರಾಜಾ ಸಿಂಗ್

- Advertisement -
- Advertisement -

ಬುರ್ಖಾ ಧರಿಸುವ ಮಹಿಳೆಯರೊಂದಿಗೆ ಹಿಂದೂ ಹೆಣ್ಣುಮಕ್ಕಳು ಸ್ನೇಹ ಬೆಳೆಸಬಾರದು ಎಂದು ಮುಸ್ಲಿಂರ ವರುದ್ಧ ದ್ವೇಷ ಬಿತ್ತು ಹೇಳಿಕೆ ನೀಡುವ ಮೂಲಕ ತೆಲಂಗಾಣದ ಬಿಜೆಪಿಯ ಅಮಾನತುಗೊಂಡ ಶಾಸಕ ಟಿ. ರಾಜಾ ಸಿಂಗ್ ಮತ್ತೊಮ್ಮೆ ವಿವಾದಕ್ಕೀಡಾಗಿದ್ದಾರೆ.

ಟಿ. ರಾಜಾ ಸಿಂಗ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ತೆಲಂಗಾಣ ಹೈಕೋರ್ಟ್, ಉದ್ರೇಕಕಾರಿ ಹೇಳಿಕೆಗಳನ್ನು ನೀಡದಂತೆ ನಿರ್ದೇಶನ ನೀಡಿದೆ, ಆದರೆ ಅವರು ಅದನ್ನೇ ಮುಂದುವರೆಸಿದ್ದಾರೆ. ಹಲವಾರು ಸಂದರ್ಭಗಳಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷವನ್ನು ಹರಡಿದ್ದಾರೆ. ಆಗಸ್ಟ್ 2022ರಲ್ಲಿ ಪ್ರವಾದಿ ಮೊಹಮ್ಮದ್ ಅವರನ್ನು ಅವಮಾನಿಸುವ ಹೇಳಿಕೆಗಳಿಗಾಗಿ ಅವರನ್ನು 75 ದಿನಗಳ ಕಾಲ ಜೈಲಿಗೆ ಕಳುಹಿಸಲಾಗಿತ್ತು.

ತೆಲಂಗಾಣದ ಆದಿಲಾಬಾದ್ ಪಟ್ಟಣದಲ್ಲಿ ರವಿವಾರ ಮಾತನಾಡಿದ ಅವರು, ”ಯಾರ ಹಣೆಯ ಮೇಲೆ ತಿಲಕವಿದೆಯೋ ಅವರು ನನ್ನ ಸಹೋದರರು ಮತ್ತು ಅವರು ಹಿಂದೂಗಳು. ತಿಲಕವಿಡುವ ಜನರೊಂದಿಗೆ ಮಾತ್ರ ನಾನು ಸ್ನೇಹ ಬೆಳೆಸುತ್ತೇನೆ.

”ಹಿಂದೂಗಳು ಈಗ ಮುಸ್ಲಿಂ ಪುರುಷರು ಮತ್ತು ಮಹಿಳೆಯರಿಂದ ಅಪಾಯವನ್ನು ಎದುರಿಸುತ್ತಿದ್ದಾರೆ. ಒಂದು ಕಾಲದಲ್ಲಿ ನಾವು ಅಫ್ತಾಬ್‌ನಿಂದ ಅಪಾಯವನ್ನು ಎದುರಿಸಿದ್ದೇವೆ, ಆದರೆ ಈಗ ಆಯೇಷಾ ಅವರಿಂದಲೂ ಅಪಾಯವಿದೆ. ಅಫ್ತಾಬ್‌ಗೆ [ಹಿಂದೂ ಮಹಿಳೆಯರನ್ನು] ಪರಿಚಯಿಸಿದ್ದು ಇದೇ ಆಯೇಷಾ. ಇದನ್ನೇ [2022 ಹಿಂದಿ ಚಲನಚಿತ್ರ] ದಿ ಕಾಶ್ಮೀರ್ ಫೈಲ್ಸ್‌ನಲ್ಲಿ ತೋರಿಸಲಾಗಿದೆ” ಎಂದರು.

ಅವರ ಭಾಷಣದಲ್ಲಿ ಅಫ್ತಾಬ್ಸ್ ಮತ್ತು ಆಯೇಷಾಗಳ ಉಲ್ಲೇಖಗಳು ವಿವಾದಾತ್ಮಕ ಚಲನಚಿತ್ರ ದಿ ಕೇರಳ ಸ್ಟೋರಿಗೆ ಸಂಬಂಧಿಸಿವೆ. ಇದು ಹಲವಾರು ಮಲಯಾಳಿ ಮಹಿಳೆಯರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲಾಗಿದೆ ಮತ್ತು ಭಯೋತ್ಪಾದಕ ಗುಂಪು ISIS ಗೆ ಸೇರಿದೆ ಎಂದು ಹೇಳುತ್ತದೆ.

ಚಲನಚಿತ್ರದ ಹಕ್ಕುಗಳನ್ನು ಪ್ರಶ್ನಿಸಲಾಗಿದ್ದರೂ, ಬಿಜೆಪಿ ಇದನ್ನು “ಲವ್ ಜಿಹಾದ್” ಪಿತೂರಿ ಸಿದ್ಧಾಂತವನ್ನು ಮತ್ತಷ್ಟು ಹೆಚ್ಚಿಸಲು ಬಳಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಕರ್ನಾಟಕದಲ್ಲಿ ಚುನಾವಣಾ ಭಾಷಣದಲ್ಲಿ ಚಲನಚಿತ್ರವನ್ನು ಉಲ್ಲೇಖಿಸಿದ್ದಾರೆ. ಇದು ಪ್ರತಿಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ: ಉತ್ತರಾಖಂಡ: ಮುಸ್ಲಿಂ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚಬೇಕು; ಬೆದರಿಕೆಯ ಪೋಸ್ಟರ್‌ ಅಂಟಿಸಿದ ಕಿಡಿಗೇಡಿಗಳು

ಕಾಶ್ಮೀರ ಫೈಲ್ಸ್ 1990ರ ದಶಕದಲ್ಲಿ ಕಾಶ್ಮೀರದಿಂದ ಪಂಡಿತರ ನಿರ್ಗಮನವನ್ನು ಪರಿಶೋಧಿಸುತ್ತದೆ. ಆಡಳಿತಾರೂಢ ಬಿಜೆಪಿಯು ಚಲನಚಿತ್ರವನ್ನು ಬಲವಾಗಿ ಬೆಂಬಲಿಸಿದರೆ, ವಿಮರ್ಶಕರು ಇದು ಸತ್ಯಗಳನ್ನು ತಪ್ಪಾಗಿ ಪ್ರತಿನಿಧಿಸುತ್ತದೆ ಮತ್ತು ಮುಸ್ಲಿಮರನ್ನು ರಾಕ್ಷಸರನ್ನಾಗಿಸಿದೆ ಎಂದು ಆರೋಪಿಸಿದ್ದಾರೆ.

ಹೈದರಾಬಾದ್‌ನ ಗೋಶಾಮಹಲ್‌ನ ಶಾಸಕ ಸಿಂಗ್, ಜಾಮೀನು ನೀಡುವಾಗ ತೆಲಂಗಾಣ ಹೈಕೋರ್ಟ್‌ನಿಂದ ಇಂತಹ ನಡವಳಿಕೆಯ ವಿರುದ್ಧ ಎಚ್ಚರಿಕೆ ನೀಡಿದ್ದರೂ ಸಹ, ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಪ್ರಚೋದನಕಾರಿ ಭಾಷಣಗಳನ್ನು ಮಾಡುವುದನ್ನು ಮುಂದುವರೆಸಿದ್ದಾರೆ. ಯಾವುದೇ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಮಾಡದಂತೆ ನ್ಯಾಯಾಲಯ ಅವರಿಗೆ ಸೂಚನೆ ನೀಡಿದೆ. ಆದರೂ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿ ಹೇಳಿಕೆ ನೀಡುತ್ತಲೇ ಇದ್ದಾರೆ.

ರಾಜಾ ಸಿಂಗ್ ಅವರು ಮಹಾರಾಷ್ಟ್ರದಲ್ಲಿ ಹಿಂದುತ್ವ ಸಂಘಟನೆಗಳು ಆಯೋಜಿಸಿದ್ದ ಹಲವಾರು ರ್ಯಾಲಿಗಳಲ್ಲಿ ಭಾಗವಹಿಸಿದ್ದರು ಮತ್ತು ಮುಸ್ಲಿಮರನ್ನು ಬಹಿಷ್ಕರಿಸುವಂತೆ ಬಹಿರಂಗಾವಾಗಿಯೇ ಕರೆಗಳನ್ನು ನೀಡುತ್ತಿದ್ದರು. ಮುಸ್ಲಿಮರ ವಿರುದ್ಧ ಹಿಂಸಾಚಾರ ನಡೆಸಲು ಹಿಂದೂ ಯುವಕರಿಗೆ ಪ್ರಚೋದಿಸುತ್ತಿದ್ದರು. ಈ ವರ್ಷದ ಜನವರಿಯಲ್ಲಿ, ಮುಂಬೈನಲ್ಲಿ ಸಕಲ್ ಹಿಂದೂ ಸಮಾಜ ಆಯೋಜಿಸಿದ್ದ ಹಿಂದೂ ಜನಕ್ರೋಶ್ ಮೋರ್ಚಾದಲ್ಲಿ, ಮಹಾರಾಷ್ಟ್ರ ರಾಜ್ಯ ಸರ್ಕಾರವು ಮತಾಂತರ ವಿರೋಧಿ ಕಾನೂನನ್ನು ತರದಿದ್ದರೆ, ಹಿಂದೂಗಳು ಶೀಘ್ರದಲ್ಲೇ ಶಸ್ತ್ರಸಜ್ಜಿತರಾಗುತ್ತಾರೆ ಎಂದು ಸಿಂಗ್ ಘೋಷಿಸಿದ್ದರು. ಅವರು ನಿಂದನೀಯ, ಅವಹೇಳನಕಾರಿ ಪದಗಳನ್ನು ಬಳಸಿದ್ದರು ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ನೇರ ಹಿಂಸಾಚಾರಕ್ಕೆ ಕರೆ ನೀಡಿದ್ದರು. ಅವರು ಮಹಾರಾಷ್ಟ್ರದಲ್ಲಿ ಭಾಷಣ ಮಾಡಿದ ನಂತರ ಹೈದರಾಬಾದ್ ನಗರದ ಮಂಗಲ್‌ಹಟ್ ಪೊಲೀಸರು ಕೂಡ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದರು.

ಈ ವರ್ಷ ಮಾರ್ಚ್‌ನಲ್ಲಿ, ಹೈದರಾಬಾದ್‌ನಲ್ಲಿ ನಡೆದ ರಾಮನವಮಿ ಶೋಭಾ ಯಾತ್ರೆಯ ಮೆರವಣಿಗೆಯಲ್ಲಿ, ಭಾರತವನ್ನು ಏಕೀಕೃತ ಹಿಂದೂ ರಾಜ್ಯ (ಅಖಂಡ ಹಿಂದೂ ರಾಷ್ಟ್ರ) ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಹಿಂದೂ ಸಮುದಾಯಕ್ಕೆ ಕರೆ ಕೊಟ್ಟಿದ್ದರು.

”ಇಂದು ಭಾರತದಲ್ಲಿ 100 ಕೋಟಿ ಹಿಂದೂಗಳಿದ್ದಾರೆ. ಹಾಗಾದರೆ ಭಾರತವನ್ನು ಹಿಂದೂ ರಾಷ್ಟ್ರವೆಂದು ಏಕೆ ಘೋಷಿಸಬಾರದು? ಇಂದು, ನಾವು 50 ಕ್ಕೂ ಹೆಚ್ಚು ಇಸ್ಲಾಮಿಕ್ ದೇಶಗಳನ್ನು ಮತ್ತು 150 ಕ್ರಿಶ್ಚಿಯನ್ ದೇಶಗಳನ್ನು ಹೊಂದಿದ್ದೇವೆ. ಹಾಗಾಗಿ ಇಂದು ನಾನು ಅಖಂಡ ಹಿಂದೂ ರಾಷ್ಟ್ರದ ವಿರುದ್ಧ ಇರುವ ಆ ‘ಅಶಕ್ತ’ ನಾಯಕರನ್ನು ಕೇಳಲು ಬಯಸುತ್ತೇನೆ, ನೀವು ಅದನ್ನು ಏಕೆ ವಿರೋಧಿಸುತ್ತೀರಿ?” ರಾಜಾ ಸಿಂಗ್ ಸವಾಲು ಹಾಕಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...