Homeಮುಖಪುಟಹಿಂದೂ ಮಹಿಳೆಯರೇ, ಬುರ್ಖಾ ಧರಿಸುವವರೊಂದಿಗೆ ಸ್ನೇಹ ಬೆಳೆಸಬೇಡಿ: ದ್ವೇ‍ಷದ ಹೇಳಿಕೆ ಮುಂದುವರೆಸಿದ ಬಿಜೆಪಿ ನಾಯಕ ರಾಜಾ...

ಹಿಂದೂ ಮಹಿಳೆಯರೇ, ಬುರ್ಖಾ ಧರಿಸುವವರೊಂದಿಗೆ ಸ್ನೇಹ ಬೆಳೆಸಬೇಡಿ: ದ್ವೇ‍ಷದ ಹೇಳಿಕೆ ಮುಂದುವರೆಸಿದ ಬಿಜೆಪಿ ನಾಯಕ ರಾಜಾ ಸಿಂಗ್

- Advertisement -
- Advertisement -

ಬುರ್ಖಾ ಧರಿಸುವ ಮಹಿಳೆಯರೊಂದಿಗೆ ಹಿಂದೂ ಹೆಣ್ಣುಮಕ್ಕಳು ಸ್ನೇಹ ಬೆಳೆಸಬಾರದು ಎಂದು ಮುಸ್ಲಿಂರ ವರುದ್ಧ ದ್ವೇಷ ಬಿತ್ತು ಹೇಳಿಕೆ ನೀಡುವ ಮೂಲಕ ತೆಲಂಗಾಣದ ಬಿಜೆಪಿಯ ಅಮಾನತುಗೊಂಡ ಶಾಸಕ ಟಿ. ರಾಜಾ ಸಿಂಗ್ ಮತ್ತೊಮ್ಮೆ ವಿವಾದಕ್ಕೀಡಾಗಿದ್ದಾರೆ.

ಟಿ. ರಾಜಾ ಸಿಂಗ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ತೆಲಂಗಾಣ ಹೈಕೋರ್ಟ್, ಉದ್ರೇಕಕಾರಿ ಹೇಳಿಕೆಗಳನ್ನು ನೀಡದಂತೆ ನಿರ್ದೇಶನ ನೀಡಿದೆ, ಆದರೆ ಅವರು ಅದನ್ನೇ ಮುಂದುವರೆಸಿದ್ದಾರೆ. ಹಲವಾರು ಸಂದರ್ಭಗಳಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷವನ್ನು ಹರಡಿದ್ದಾರೆ. ಆಗಸ್ಟ್ 2022ರಲ್ಲಿ ಪ್ರವಾದಿ ಮೊಹಮ್ಮದ್ ಅವರನ್ನು ಅವಮಾನಿಸುವ ಹೇಳಿಕೆಗಳಿಗಾಗಿ ಅವರನ್ನು 75 ದಿನಗಳ ಕಾಲ ಜೈಲಿಗೆ ಕಳುಹಿಸಲಾಗಿತ್ತು.

ತೆಲಂಗಾಣದ ಆದಿಲಾಬಾದ್ ಪಟ್ಟಣದಲ್ಲಿ ರವಿವಾರ ಮಾತನಾಡಿದ ಅವರು, ”ಯಾರ ಹಣೆಯ ಮೇಲೆ ತಿಲಕವಿದೆಯೋ ಅವರು ನನ್ನ ಸಹೋದರರು ಮತ್ತು ಅವರು ಹಿಂದೂಗಳು. ತಿಲಕವಿಡುವ ಜನರೊಂದಿಗೆ ಮಾತ್ರ ನಾನು ಸ್ನೇಹ ಬೆಳೆಸುತ್ತೇನೆ.

”ಹಿಂದೂಗಳು ಈಗ ಮುಸ್ಲಿಂ ಪುರುಷರು ಮತ್ತು ಮಹಿಳೆಯರಿಂದ ಅಪಾಯವನ್ನು ಎದುರಿಸುತ್ತಿದ್ದಾರೆ. ಒಂದು ಕಾಲದಲ್ಲಿ ನಾವು ಅಫ್ತಾಬ್‌ನಿಂದ ಅಪಾಯವನ್ನು ಎದುರಿಸಿದ್ದೇವೆ, ಆದರೆ ಈಗ ಆಯೇಷಾ ಅವರಿಂದಲೂ ಅಪಾಯವಿದೆ. ಅಫ್ತಾಬ್‌ಗೆ [ಹಿಂದೂ ಮಹಿಳೆಯರನ್ನು] ಪರಿಚಯಿಸಿದ್ದು ಇದೇ ಆಯೇಷಾ. ಇದನ್ನೇ [2022 ಹಿಂದಿ ಚಲನಚಿತ್ರ] ದಿ ಕಾಶ್ಮೀರ್ ಫೈಲ್ಸ್‌ನಲ್ಲಿ ತೋರಿಸಲಾಗಿದೆ” ಎಂದರು.

ಅವರ ಭಾಷಣದಲ್ಲಿ ಅಫ್ತಾಬ್ಸ್ ಮತ್ತು ಆಯೇಷಾಗಳ ಉಲ್ಲೇಖಗಳು ವಿವಾದಾತ್ಮಕ ಚಲನಚಿತ್ರ ದಿ ಕೇರಳ ಸ್ಟೋರಿಗೆ ಸಂಬಂಧಿಸಿವೆ. ಇದು ಹಲವಾರು ಮಲಯಾಳಿ ಮಹಿಳೆಯರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲಾಗಿದೆ ಮತ್ತು ಭಯೋತ್ಪಾದಕ ಗುಂಪು ISIS ಗೆ ಸೇರಿದೆ ಎಂದು ಹೇಳುತ್ತದೆ.

ಚಲನಚಿತ್ರದ ಹಕ್ಕುಗಳನ್ನು ಪ್ರಶ್ನಿಸಲಾಗಿದ್ದರೂ, ಬಿಜೆಪಿ ಇದನ್ನು “ಲವ್ ಜಿಹಾದ್” ಪಿತೂರಿ ಸಿದ್ಧಾಂತವನ್ನು ಮತ್ತಷ್ಟು ಹೆಚ್ಚಿಸಲು ಬಳಸಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಕರ್ನಾಟಕದಲ್ಲಿ ಚುನಾವಣಾ ಭಾಷಣದಲ್ಲಿ ಚಲನಚಿತ್ರವನ್ನು ಉಲ್ಲೇಖಿಸಿದ್ದಾರೆ. ಇದು ಪ್ರತಿಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ.

ಇದನ್ನೂ ಓದಿ: ಉತ್ತರಾಖಂಡ: ಮುಸ್ಲಿಂ ವ್ಯಾಪಾರಿಗಳು ಅಂಗಡಿಗಳನ್ನು ಮುಚ್ಚಬೇಕು; ಬೆದರಿಕೆಯ ಪೋಸ್ಟರ್‌ ಅಂಟಿಸಿದ ಕಿಡಿಗೇಡಿಗಳು

ಕಾಶ್ಮೀರ ಫೈಲ್ಸ್ 1990ರ ದಶಕದಲ್ಲಿ ಕಾಶ್ಮೀರದಿಂದ ಪಂಡಿತರ ನಿರ್ಗಮನವನ್ನು ಪರಿಶೋಧಿಸುತ್ತದೆ. ಆಡಳಿತಾರೂಢ ಬಿಜೆಪಿಯು ಚಲನಚಿತ್ರವನ್ನು ಬಲವಾಗಿ ಬೆಂಬಲಿಸಿದರೆ, ವಿಮರ್ಶಕರು ಇದು ಸತ್ಯಗಳನ್ನು ತಪ್ಪಾಗಿ ಪ್ರತಿನಿಧಿಸುತ್ತದೆ ಮತ್ತು ಮುಸ್ಲಿಮರನ್ನು ರಾಕ್ಷಸರನ್ನಾಗಿಸಿದೆ ಎಂದು ಆರೋಪಿಸಿದ್ದಾರೆ.

ಹೈದರಾಬಾದ್‌ನ ಗೋಶಾಮಹಲ್‌ನ ಶಾಸಕ ಸಿಂಗ್, ಜಾಮೀನು ನೀಡುವಾಗ ತೆಲಂಗಾಣ ಹೈಕೋರ್ಟ್‌ನಿಂದ ಇಂತಹ ನಡವಳಿಕೆಯ ವಿರುದ್ಧ ಎಚ್ಚರಿಕೆ ನೀಡಿದ್ದರೂ ಸಹ, ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಪ್ರಚೋದನಕಾರಿ ಭಾಷಣಗಳನ್ನು ಮಾಡುವುದನ್ನು ಮುಂದುವರೆಸಿದ್ದಾರೆ. ಯಾವುದೇ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಮಾಡದಂತೆ ನ್ಯಾಯಾಲಯ ಅವರಿಗೆ ಸೂಚನೆ ನೀಡಿದೆ. ಆದರೂ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿ ಹೇಳಿಕೆ ನೀಡುತ್ತಲೇ ಇದ್ದಾರೆ.

ರಾಜಾ ಸಿಂಗ್ ಅವರು ಮಹಾರಾಷ್ಟ್ರದಲ್ಲಿ ಹಿಂದುತ್ವ ಸಂಘಟನೆಗಳು ಆಯೋಜಿಸಿದ್ದ ಹಲವಾರು ರ್ಯಾಲಿಗಳಲ್ಲಿ ಭಾಗವಹಿಸಿದ್ದರು ಮತ್ತು ಮುಸ್ಲಿಮರನ್ನು ಬಹಿಷ್ಕರಿಸುವಂತೆ ಬಹಿರಂಗಾವಾಗಿಯೇ ಕರೆಗಳನ್ನು ನೀಡುತ್ತಿದ್ದರು. ಮುಸ್ಲಿಮರ ವಿರುದ್ಧ ಹಿಂಸಾಚಾರ ನಡೆಸಲು ಹಿಂದೂ ಯುವಕರಿಗೆ ಪ್ರಚೋದಿಸುತ್ತಿದ್ದರು. ಈ ವರ್ಷದ ಜನವರಿಯಲ್ಲಿ, ಮುಂಬೈನಲ್ಲಿ ಸಕಲ್ ಹಿಂದೂ ಸಮಾಜ ಆಯೋಜಿಸಿದ್ದ ಹಿಂದೂ ಜನಕ್ರೋಶ್ ಮೋರ್ಚಾದಲ್ಲಿ, ಮಹಾರಾಷ್ಟ್ರ ರಾಜ್ಯ ಸರ್ಕಾರವು ಮತಾಂತರ ವಿರೋಧಿ ಕಾನೂನನ್ನು ತರದಿದ್ದರೆ, ಹಿಂದೂಗಳು ಶೀಘ್ರದಲ್ಲೇ ಶಸ್ತ್ರಸಜ್ಜಿತರಾಗುತ್ತಾರೆ ಎಂದು ಸಿಂಗ್ ಘೋಷಿಸಿದ್ದರು. ಅವರು ನಿಂದನೀಯ, ಅವಹೇಳನಕಾರಿ ಪದಗಳನ್ನು ಬಳಸಿದ್ದರು ಮತ್ತು ಮುಸ್ಲಿಂ ಸಮುದಾಯದ ವಿರುದ್ಧ ನೇರ ಹಿಂಸಾಚಾರಕ್ಕೆ ಕರೆ ನೀಡಿದ್ದರು. ಅವರು ಮಹಾರಾಷ್ಟ್ರದಲ್ಲಿ ಭಾಷಣ ಮಾಡಿದ ನಂತರ ಹೈದರಾಬಾದ್ ನಗರದ ಮಂಗಲ್‌ಹಟ್ ಪೊಲೀಸರು ಕೂಡ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದರು.

ಈ ವರ್ಷ ಮಾರ್ಚ್‌ನಲ್ಲಿ, ಹೈದರಾಬಾದ್‌ನಲ್ಲಿ ನಡೆದ ರಾಮನವಮಿ ಶೋಭಾ ಯಾತ್ರೆಯ ಮೆರವಣಿಗೆಯಲ್ಲಿ, ಭಾರತವನ್ನು ಏಕೀಕೃತ ಹಿಂದೂ ರಾಜ್ಯ (ಅಖಂಡ ಹಿಂದೂ ರಾಷ್ಟ್ರ) ಮಾಡುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಹಿಂದೂ ಸಮುದಾಯಕ್ಕೆ ಕರೆ ಕೊಟ್ಟಿದ್ದರು.

”ಇಂದು ಭಾರತದಲ್ಲಿ 100 ಕೋಟಿ ಹಿಂದೂಗಳಿದ್ದಾರೆ. ಹಾಗಾದರೆ ಭಾರತವನ್ನು ಹಿಂದೂ ರಾಷ್ಟ್ರವೆಂದು ಏಕೆ ಘೋಷಿಸಬಾರದು? ಇಂದು, ನಾವು 50 ಕ್ಕೂ ಹೆಚ್ಚು ಇಸ್ಲಾಮಿಕ್ ದೇಶಗಳನ್ನು ಮತ್ತು 150 ಕ್ರಿಶ್ಚಿಯನ್ ದೇಶಗಳನ್ನು ಹೊಂದಿದ್ದೇವೆ. ಹಾಗಾಗಿ ಇಂದು ನಾನು ಅಖಂಡ ಹಿಂದೂ ರಾಷ್ಟ್ರದ ವಿರುದ್ಧ ಇರುವ ಆ ‘ಅಶಕ್ತ’ ನಾಯಕರನ್ನು ಕೇಳಲು ಬಯಸುತ್ತೇನೆ, ನೀವು ಅದನ್ನು ಏಕೆ ವಿರೋಧಿಸುತ್ತೀರಿ?” ರಾಜಾ ಸಿಂಗ್ ಸವಾಲು ಹಾಕಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...