Homeಕರ್ನಾಟಕ‘ಹಿಂದೂ’ ಪದ ವಿವಾದ: ಬಹಿರಂಗ ಚರ್ಚೆಗೆ ಸತೀಶ್‌ ಜಾರಕಿಹೊಳಿ ಪಂಥಾಹ್ವಾನ- ಏನಂದರು ಜನ?

‘ಹಿಂದೂ’ ಪದ ವಿವಾದ: ಬಹಿರಂಗ ಚರ್ಚೆಗೆ ಸತೀಶ್‌ ಜಾರಕಿಹೊಳಿ ಪಂಥಾಹ್ವಾನ- ಏನಂದರು ಜನ?

- Advertisement -
- Advertisement -

“ನಾನು ಅರೆಬರೆ ಓದಿದವನಲ್ಲ, 30 ವರ್ಷಗಳಿಂದ ಓದುತ್ತಲೇ ಇದ್ದೇನೆ. ಹಿಂದೂ ಪದದ ಬಗ್ಗೆ ನೀಡಿದ್ದ ಹೇಳಿಕೆ ಕುರಿತು ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ, ಹೇಳಿಕೆ ತಪ್ಪೆಂದು ಸಾಬೀತಾದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧನಿದ್ದೇನೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿರುವುದು ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾಗಿದೆ.

ಹಿಂದೂ ಪದದ ಹಿನ್ನೆಲೆಯ ಕುರಿತು ಉಂಟಾಗಿರುವ ವಿವಾದಕ್ಕೆ ಸಂಬಂಧಿಸಿದಂತೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ನನ್ನ ಹೇಳಿಕೆಯು ತಪ್ಪು ಎಂದಾದರೆ ಕ್ಷಮೆ ಯಾಚಿಸುವುದಷ್ಟೇ ಅಲ್ಲ, ರಾಜೀನಾಮೆಯನ್ನೂ ಕೊಡುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಹಿಂದೂ ಎಂಬುದು ಪರ್ಷಿಯನ್ ಭಾಷೆಯಿಂದ ಬಂದ ಶಬ್ದ. ಹಿಂದೂ ಪದದ ಬಗ್ಗೆ ಶಬ್ದಕೋಶದಲ್ಲಿ, ವಿಕಿಪಿಡಿಯಾದಲ್ಲಿ ಇರುವ ವಿವರಣೆಯನ್ನು ನಾನು ಹೇಳಿದ್ದೇನೆ. ಹಿಂದೂ ಪದದ ಬಗ್ಗೆ ಚರ್ಚೆಯಾಗಬೇಕು ಎಂದು ನಾನು ಹೇಳಿದ್ದೇನೆ. ಆದರೆ, ನಾನು ಏನು ಹೇಳಿದ್ದೇನೆಯೋ ಅದರ ಬಗ್ಗೆ ಅಥವಾ ಹಿಂದೂ ಪದದ ನಿಜವಾದ ಅರ್ಥದ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಬೇರೆ ಯಾವುದೋ ವಿಷಯಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಪದದ ಕುರಿತು ಬಹಿರಂಗ ಚರ್ಚೆಗೂ ನಾನು ಸಿದ್ಧ” ಎಂದು ಅವರು ತಿಳಿಸಿದ್ದಾರೆ.

ಸತೀಶ್ ಜಾರಕಿಹೊಳಿಯವರ ಹೇಳಿಕೆಗೆ ಅನೇಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಬಹಿರಂಗ ಚರ್ಚೆಗೆ ಆಹ್ವಾನಿಸಿರುವುದನ್ನು ಹೊಗಳಿದ್ದಾರೆ.

ಹಿರಿಯ ಪತ್ರಕರ್ತರಾದ ದಿನೇಶ್ ಅಮೀನ್‌ಮಟ್ಟು ಅವರು ಈ ಕುರಿತು ಪೋಸ್ಟ್ ಮಾಡಿದ್ದು, “ತಮ್ಮ ಹೇಳಿಕೆ ತಪ್ಪೆಂದು ಸಾಬೀತು ಪಡಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸತೀಶ್ ಜಾರಕಿಹೊಳಿ ಅವರು ತಮ್ಮ ರಾಜಕೀಯ ಜೀವನವನ್ನು ಪಣಕ್ಕಿಟ್ಟು ಸವಾಲು ಹಾಕಿದ್ದಾರೆ. ಹಿಂದೂ ಧರ್ಮ ರಕ್ಷಕರೆಂದು ಎದೆ ಬಡಿದುಕೊಳ್ಳುವವರು ಈಗ ಜಾರಕಿಹೊಳಿ ಅವರ ಸವಾಲನ್ನು ಸ್ವೀಕರಿಸುವ ಎದೆಗಾರಿಕೆ ತೋರಿಸಬೇಕು” ಎಂದು ಒತ್ತಾಯಿಸಿದ್ದಾರೆ.

“ಜಾರಕಿಹೊಳಿ ಅವರು ಹಿಂದೂ ಧರ್ಮವೇ ಅಶ್ಲೀಲ, ಇಲ್ಲವೇ ಹಿಂದೂಗಳೆಲ್ಲರೂ ಕಳ್ಳರು, ಗುಲಾಮರು ಎಂದು ಹೇಳಿಲ್ಲ. ತಾನು ಹಿಂದೂ ಅಲ್ಲ, ಹಿಂದೂ ಆಗಿ ಹುಟ್ಟಿದ್ದೇನೆ ಹಿಂದೂ ಆಗಿ ಸಾಯಲಾರೆ ಎಂದೂ ಹೇಳಿಲ್ಲ. ಜಾರಕಿಹೊಳಿ ಅವರು ಹಿಂದೂ ದೇವರು ಮತ್ತು ಧರ್ಮವನ್ನು ಪ್ರಚಾರದ ಪೋಸ್ಟರ್ ಮಾಡಿ ಚುನಾವಣೆಗಳಲ್ಲಿ ಮತವನ್ನೂ ಕೇಳಿಲ್ಲ. ಅವರು ಗೋಮಾಂಸ ರಫ್ತಿನ ಉದ್ಯಮವನ್ನೂ ನಡೆಸುತ್ತಿಲ್ಲ. ಮಂದಿರ ಕಟ್ಟುತ್ತೇವೆ ಎಂದು ಹೇಳಿ ಇಟ್ಟಿಗೆ ಮಾರಿ ಹಣ ತಿಂದೂ ಹಾಕಿಲ್ಲ. ಹಿಂದೂ ಮಹಿಳೆಯರನ್ನು ರೇಪ್ ಮಾಡಿದ ಹಿಂದೂ ಸ್ವಾಮಿಗಳನ್ನು ಸಮರ್ಥಿಸಿಕೊಂಡಿಲ್ಲ, ಅಸ್ಪಶ್ಯತೆಯನ್ನು ಆಚರಿಸಿಲ್ಲ, ಜಾತಿ ಆಧಾರದಲ್ಲಿ ತಾರತಮ್ಯವನ್ನೂ ಮಾಡಿಲ್ಲ. (ಇದನ್ನೆಲ್ಲ ಅವರು ಮಾಡಿದ್ದಾರೆಂದು ಯಾರಾದರೂ ಸಾಬೀತುಪಡಿಸಿದರೆ ನಾನೂ ಬರವಣಿಗೆಯನ್ನು ನಿಲ್ಲಿಸಿಬಿಡುತ್ತೇನೆ)” ಎಂದು ಬರೆದುಕೊಂಡಿದ್ದಾರೆ.

“ಅವರು ಬಹಳ ಸರಳವಾಗಿ ಹಿಂದೂ ಎಂಬ ಶಬ್ದಕ್ಕೆ ಪರ್ಷಿಯನ್ ಭಾಷೆಯಲ್ಲಿ ಇಂತಹದ್ದೊಂದು ಅರ್ಥ ಇದೆ ಎಂದು ಹೇಳಿದ್ದಾರೆ. ಅದು ಸುಳ್ಳು ಎಂದಾದರೆ ಅದನ್ನು ಸಾಬೀತುಪಡಿಸಿ ಜಾರಕಿಹೊಳಿ ಅವರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಬೇಕು. ಅದನ್ನು ಬಿಟ್ಟು ಕೈಕಾಲು ಬಡಿದುಕೊಂಡು ಕಿರುಚಾಡುವುದಲ್ಲ” ಎಂದು ಟೀಕಿಸಿದ್ದಾರೆ.

“ನಕಲಿ ಹಿಂದೂಗಳೇ ಕೇಳಿ, ಹಿಂದೂ ಧರ್ಮ ಉಳಿದುಕೊಂಡಿದ್ದು ಆಚಾರ್ಯರು, ಸ್ವಾಮಿಗಳಿಂದಲೂ ಅಲ್ಲ, ವೇದ, ಉಪನಿಷತ್, ಪುರಾಣಗಳಿಂದಲೂ ಅಲ್ಲ, ಅದು ಉಳಿದದ್ದು ಬೆಳೆದದ್ದು ಕಾಲಕಾಲಕ್ಕೆ ಬುದ್ದ, ಬಸವ, ನಾರಾಯಣ ಗುರು, ಪುಲೆ, ಅಂಬೇಡ್ಕರ್, ಪೆರಿಯಾರ್, ಗಾಂಧಿ, ಲೋಹಿಯಾರಂತಹವರು ಕೇಳಿದ ಪ್ರಶ್ನೆಗಳಿಂದ ಮತ್ತು ಹುಟ್ಟು ಹಾಕಿದ ಚರ್ಚೆಗಳಿಂದ. ಇವರಲ್ಲಿ ಕೆಲವರು ಹಿಂದೂ ಧರ್ಮವನ್ನೇ ವಿರೋಧಿಸಿದ್ದಾರೆ ನಿಜ, ಆ ವಿರೋಧದಿಂದಾಗಿ ಹಿಂದೂ ಧರ್ಮ ಅನಿವಾರ್ಯವಾಗಿ ಸುಧಾರಣೆಗೊಳಗಾಗಬೇಕಾಯಿತು” ಎಂದು ವಿವರಿಸಿದ್ದಾರೆ.

“ನಾರಾಯಣ ಗುರುಗಳು ಕೇರಳದಲ್ಲಿ ಧಾರ್ಮಿಕ ಸುಧಾರಣೆಗಳಿಗೆ ಕೈಹಾಕದಿದ್ದರೆ ಅಲ್ಲಿನ ಅರ್ಧ ಜನಸಂಖ್ಯೆ ಕ್ರಿಶ್ಚಿಯನರದಾಗುತ್ತಿತ್ತು. ಸತೀಶ್ ಜಾರಕಿಹೊಳಿ ಅವರ ಹೇಳಿಕೆ ಸುಳ್ಳು ಎಂದು ಸಾಬೀತು ಪಡಿಸಿ ಈ ಚರ್ಚೆಯನ್ನು ಬೇಗ ಮುಗಿಸಿಬಿಡಿ. ಈ ಚರ್ಚೆಯನ್ನು ಬೇಗ ಮುಗಿಸಿದರೆ ಹಿಂದೂಗಳ ಅಳಿವು ಉಳಿವಿನ ಬಹಳ ಮಹತ್ವದ ಪ್ರಶ್ನೆ ಬಗ್ಗೆ ಚರ್ಚೆ ನಡೆಸಲು ಅನುಕೂಲವಾಗುತ್ತದೆ. ಅದು ರಾಜ್ಯದ ಶೇಕಡಾ 80ರಷ್ಟು ಹಿಂದುಳಿದ ಜಾತಿಯ ಹಿಂದುಗಳಿಗೆ ಶೇಕಡಾ 50ರಷ್ಟು ಮೀಸಲಾತಿ ನೀಡಿ, ಶೇಕಡಾ ನಾಲ್ಕರಷ್ಟು ಮೇಲ್ಜಾತಿ ಹಿಂದೂಗಳಿಗೆ ಶೇಕಡಾ ಹತ್ತರಷ್ಟು ಮೀಸಲಾತಿ ಹೇಗೆ ನೀಡಲು ಸಾಧ್ಯ ಎನ್ನುವ ವಿಷಯದ ಮೇಲಿನ ಚರ್ಚೆ” ಎಂದು ಎಚ್ಚರಿಸಿದ್ದಾರೆ.

ನಟ ಚೇತನ್‌ ಅಹಿಂಸಾ ಪ್ರತಿಕ್ರಿಯಿಸಿ, “ಶಾಸಕ ಸತೀಶ್ ಜಾರಕಿಹೊಳಿ ಅವರ ಹೇಳಿಕೆಯು ಆರ್ಟಿಕಲ್ 19 – ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅನುಗುಣವಾಗಿದೆ. ಪರ್ಷಿಯನ್ ಪದವಾದ ‘ಹಿಂದೂ’ವಿನ ಪರ್ಯಾಯ ವ್ಯಾಖ್ಯಾನಗಳ ಕುರಿತು ಹೆಚ್ಚಿನ ಸಂಶೋಧನೆ ಮತ್ತು ಚರ್ಚೆಗಳ ಅಗತ್ಯವಿದೆ. ಭವಿಷ್ಯದಲ್ಲಿ, ಜಾರಕಿಹೊಳಿಅವರು ರಾಜಕೀಯ ಲಾಭಕ್ಕಾಗಿ ‘ಹಿಂದೂ’ ಕಾಂಗ್ರೆಸ್‌ ಜೊತೆ ನಿಲ್ಲುವುದರ ಬದಲಾಗಿ ಸಮಾನತಾವಾದಿಗಳಾದ ನಮ್ಮೊಂದಿಗೆ ಮತ್ತು ಸತ್ಯದೊಂದಿಗೆ ನಿಲ್ಲುತ್ತಾರೆ ಎಂದು ಭಾವಿಸುತ್ತೇವೆ” ಎಂದು ಪೋಸ್ಟ್ ಮಾಡಿದ್ದಾರೆ.

ಹಿರಿಯ ಪತ್ರಕರ್ತರಾದ ರಾಜರಾಮ್ ತಲ್ಲೂರು ಅವರು ಬರೆಯುತ್ತಾ, “ನಿನ್ನೆಯ ತನಕ ಎಲ್ಲವೂ ಸಮೃದ್ಧ-ಸುಂದರ-ಸುಲಲಿತವಾಗಿತ್ತು. ಆದರೆ, ಸತೀಶ್ ಜಾರಕಿಹೊಳಿ ಅವರ ಒಂದು ಭಾಷಣ, ಏಕಾಏಕಿ ದೇಶದ ಅತ್ಯಂತ ಮಹತ್ವದ ಸಮಸ್ಯೆಯೊಂದನ್ನು ಎತ್ತಿದೆ. ಈವತ್ತಿನ ಪತ್ರಿಕೆಗಳನ್ನು ಗಮನಿಸಿ. ಬಹುತೇಕ ಕನ್ನಡ ಪತ್ರಿಕೆಗಳಲ್ಲಿ ಒಂದರಿಂದ ಒಂದೂವರೆ ಪುಟ ಈ ಸಮಸ್ಯೆಗೆ ಮೀಸಲಾಗಿದೆ. ಇದು ಈ ದೇಶದ ರಾಜಕಾರಣದ ಗುಣಮಟ್ಟ, ನಮ್ಮ #ಡಿಯರ್_ಮೀಡಿಯಾ ದ ಗುಣಮಟ್ಟಗಳ ಬಗ್ಗೆ ಹಲವು ಒಳನೋಟಗಳನ್ನು ಕೊಡುತ್ತದೆ” ಎಂದು ವಿಷಾದಿಸಿದ್ದಾರೆ.

ಇದನ್ನೂ ಓದಿರಿ: ಹಿಂದೂ ಪದ ಉಲ್ಲೇಖ ವಿವಾದ: ಸ್ಪಷ್ಟನೆ ನೀಡಿದ ಸತೀಶ್ ಜಾರಕಿಹೊಳಿ

“ಕಳೆದ ಚುನಾವಣೆಗಳಲ್ಲಿ ಸಿದ್ಧರಾಮಯ್ಯನವರ ಮೀನೂಟ/ಬಾಡೂಟ, ಅವರ ಕಾರಿನ ಮೇಲೆ ಕುಳಿತ ಕಾಗೆ ಇವೆಲ್ಲ ಅದನ್ನು ಕಲಿಸಿಕೊಟ್ಟಿವೆ. ಚುನಾವಣೆಗಳಿಗೆ ಮೊದಲು ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಇಂತಹದೊಂದು “ಪ್ಯಾಟರ್ನ್”ನಿಂದ ಕಲಿಯಲು ಸಾಧ್ಯವಾಗಿಲ್ಲ, ಅಥವಾ ಕನಿಷ್ಟ ಪ್ಯಾಟರ್ನ್‌ಅನ್ನು ಗುರುತಿಸಿ ಅರ್ಥ ಮಾಡಿಕೊಳ್ಳಲು ಸಾಧ್ಯ ಆಗಿಲ್ಲ ಎಂದರೆ, ಅದಕ್ಕೆ ಅರ್ಥ ಆಗದವರೇ ಹೊಣೆ. ಕಾಂಗ್ರೆಸ್ಸಿನೊಳಗೆ ಬೇರೆ ನಾಯಕರಿಗಿಂತ ಸಿದ್ಧರಾಮಯ್ಯ, ಬಿ.ಕೆ.ಹರಿಪ್ರಸಾದ್, ಸತೀಶ್ ಜಾರಕಿಹೊಳಿಯಂತಹ ನಾಯಕರೇ ಯಾಕೆ ಹೆಚ್ಚಾಗಿ ಈ ರೀತಿಯ ದಾಳಿಗೆ ಗುರಿಯಾಗುತ್ತಿದ್ದಾರೆ ಎಂಬ ಪ್ಯಾಟರ್ನನ್ನಾದರೂ ಅರ್ಥ ಮಾಡಿಕೊಳ್ಳದಿದ್ದರೆ, ಈ ಯುದ್ಧ ರೈಫಲ್ ಹೊಂದಿರುವವರ ವಿರುದ್ಧ ಕಲ್ಲು ದೊಣ್ಣೆಗಳೊಂದಿಗೆ, ಯಾವುದೇ ವ್ಯೂಹವಿಲ್ಲದೆ ಹೋರಾಡುವ ಅಸಮ ಯುದ್ಧವೇ ಸೈ” ಎಂದಿದ್ದಾರೆ.

ವ್ಯಂಗ್ಯಚಿತ್ರಕಾರ ಪಂಜು ಗಂಗೊಳ್ಳಿ ಪ್ರತಿಕ್ರಿಯಿಸಿ, “ಹಿಂದೂ ಧರ್ಮ, ಹಿಂದೂ ಶಬ್ದಕ್ಕೆ ಈವರೆಗೂ ಯಾರಿಂದಲೂ ಸರಿಯಾದ ವ್ಯಾಖ್ಯಾನ ಮಾಡಲಾಗಿಲ್ಲ. ಇಷ್ಟು ವರ್ಷಗಳಿಂದ ಸಾಧ್ಯವಾಗಿಲ್ಲ ಅಂದರೆ ಮುಂದೆಯೂ ಸಾಧ್ಯವಾಗಲಿಕ್ಕಿಲ್ಲ. ಅಂತಹದರಲ್ಲಿ, ಇಡೀ ಸಮಾಜವೇ ಧರ್ಮದ ನಶೆಯಲ್ಲಿ ತೂರಾಡುವ ಈ ಹೊತ್ತಲ್ಲಿ ರಾಜಕಾರಣಿಯೊಬ್ಬ ಇವುಗಳಿಗೆ ಅಶ್ಲೀಲ ಅರ್ಥ ಇದೆ, ಮತ್ತೊಂದು ಮಗದೊಂದು ಅರ್ಥ ಇದೆ ಅಂತ ಸಾರ್ವಜನಿಕವಾಗಿ ಹೇಳುವುದು ರಾಜಕೀಯ ಆತ್ಮಹತ್ಯೆಯೇ ಸರಿ. ಮತ್ತು, ತಾನು ಹೇಳಿದ್ದಕ್ಕೆ ಬದ್ದ, ಧಮ್ಮಿದ್ದರೆ ತಾಕತ್ತಿದ್ದರೆ ಚರ್ಚೆಗೆ ಬನ್ನಿ ಅಂತ ಪಾಂಡಿತ್ಯದ ಸವಾಲು ಹಾಕಿದರೆ ಆ ಸವಾಲು ಸ್ವೀಕರಿಸಲು ಅವರೇನು ಧಾರ್ಮಿಕ ಪಂಡಿತರೇ? ಧರ್ಮವಂತರೇ? ಧರ್ಮಬೀರುಗಳೇ? ಅವರು ಜನರಿಗೆ ಧರ್ಮದ ನಶೆ ಏರಿಸಿ ರಾಜಕೀಯ ಲಾಭ ಮಾಡುವ ಝಾಂಬಿಗಳು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಮುಂದುವರಿದು, “ತಮ್ಮ ರಾಜಕೀಯ ವಿರೋಧಿಗಳು ಧರ್ಮದ ಬಗ್ಗೆ ಋಣಾತ್ಮಕವಾಗಿ ಮಾತಾಡಿದಷ್ಟೂ ಅವರಿಗೆ ಸಂತೋಷ. ಕಳೆದ ಕೆಲವು ದಶಕಗಳಿಂದ ಎಂತಹ ಸೋಷಿಯಲ್ ಎಂಜಿನಿಯರಿಂಗ್ ನಡೆದಿದೆಯೆಂದರೆ, ಶತಮಾನಗಳಿಂದ ಧಾರ್ಮಿಕ ಶೋಷಣೆಗೆ ಸಿಕ್ಕಿ ನರಳಿದ ಜನ ಸಮುದಾಯಗಳೂ ಇಂದು ಅದೇ ಧರ್ಮಕ್ಕಾಗಿ ಕೊಲೆ ಮಾಡಲೂ ತಯಾರಾಗಿದ್ದಾರೆ, ಕೊಲೆಯಾಗಲೂ ಸಿದ್ದರಾಗಿದ್ದಾರೆ. ಇಷ್ಟು ವರ್ಷಗಳಿಂದ ರಾಜಕಾರಣದಲ್ಲಿರುವವರಿಗೆ ಇದು ಅರ್ಥ ಆಗಿಲ್ಲವೆಂದರೆ ಅವರದ್ದು ಅದೆಂತಹ ಪಾಂಡಿತ್ಯ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹಿರಿಯ ಪತ್ರಕರ್ತರಾದ ಸತನ್‌ಕುಮಾರ್ ಬೆಳಗಲಿ ಪ್ರತಿಕ್ರಿಯಿಸಿ, “ಸತೀಶ ಜಾರಕಿಹೊಳಿ ಅವರು ಏನೋ ದೊಡ್ಡ ಅಪರಾಧ ಮಾಡಿದಂತೆ ಅವರನ್ನು ಇಕ್ಕಟ್ಟಿಗೆ ಸಿಲುಕಿಸಲು ಕೋಮುವಾದಿ ಶಕ್ತಿಗಳು ಯತ್ನಿಸುತ್ತಿವೆ. ಸತೀಶ ಹೇಳಿಕೆ ಬಗ್ಗೆ ಚರ್ಚೆಯಾಗಲಿ. ಸಂವಾದದ ಮೂಲಕ ಸತೀಶರನ್ನು ಎದುರಿಸಲಿ. ಚುನಾವಣೆ ಮುಂದಿರುವಾಗ ಸತೀಶ ಈ ಮಾತು ಆಡಿರುವದು ಅವರ ಸೈದ್ಧಾಂತಿಕ ಬದ್ಧತೆಗೆ ಸಾಕ್ಷಿ. ವಾಸ್ತವವಾಗಿ ಸತೀಶ ಹೇಳಿದ್ದು ಧರ್ಮದ ಬಗ್ಗೆ ಅಲ್ಲ. ಹಿಂದು ಪದದ ಬಗ್ಗೆ. ರಾಮಾಯಣ, ಮಹಾಭಾರತ, ಭಗವದ್ಗೀತೆ ಗಳಲ್ಲೂ ‘ ಹಿಂದೂ’ ಎಂಬ ಪದವಿಲ್ಲ.ಅದು ಪರ್ಷಿಯನ್ ಸೃಷ್ಟಿ ಎಂಬ ಸತೀಶ ಅಭಿಪ್ರಾಯದಲ್ಲಿ ಹುರುಳಿಲ್ಲದಿಲ್ಲ. ಅದೇನೇ ಇರಲಿ ಶಂ.ಬಾ.ಜೋಶಿಯವರು, ಗೌರೀಶ ಕಾಯ್ಕಿಣಿಯವರು ಸೇರಿದಂತೆ ಬೌದ್ಧಿಕ ವಲಯದಲ್ಲಿ ಆಗಾಗ ಇಂಥ ಚರ್ಚೆಗಳು ನಡೆದಿವೆ. ಈಗಲೂ ನಡೆಯಲಿ. ಅಪಪ್ರಚಾರ ಬೇಡ. ಸಂವಾದ ಈ ನೆಲಕ್ಕೆ ಹೊಸದಲ್ಲ. ಗಾಂಧೀಜಿ, ಅಂಬೇಡ್ಕರ್, ಮತ್ತು ಗಾಂಧೀಜಿ  ಗೋರಾ ನಡುವಿನ ವೈಚಾರಿಕ ಸಂವಾದ ಎಲ್ಲರಿಗೂ ತಿಳಿದಿದೆ. ಬಸವಣ್ಣನವರ ಅನುಭವ ಮಂಟಪವೂ ಕೂಡ ಸಂವಾದದ ಕೇಂದ್ರವಾಗಿತ್ತು. ವಚನಕಾರ್ತಿಯರು ಬಸವಣ್ಣನವರನ್ನೇ ತರಾಟೆಗೆ ತೆಗೆದುಕೊಂಡ ನಾಡಿದು” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಜಕಾರಣಿಗಳಿಗೆ ಓಟು ಹತ್ತಿರ ಬಂತೆಂದರೆ ಹಬ್ಬ ಹಾಗಾಗಿ ತಮ್ಮ ಎದುರಾಳಿಗಳು ಎಲ್ಲಿ ತಪ್ಪಿಗೆ ಸಿಕ್ಕಿ ಬೀಳುತ್ತಾರೆ ಎಂಬುದನ್ನೇ ಕಾಯ್ದಿರುತ್ತಾರೆ ಅದನ್ನೇ ಚಿಕ್ಕ ವಿಷಯವನ್ನು ಅಗಾಧ ಮಾಡಿಕೊಂಡು ಬರುವ ಚುನಾವಣೆಯಲ್ಲಿ ಲಾಭವಾಗುತ್ತೋ ಅಥವಾ ಬಹುಮತ ಬರುತ್ತೋ ಏನೋ ಅಂತ ಕಾಯುತ್ತಿರುತ್ತಾರೆ ತಾವುಗಳು ಸಾಧ್ಯ ಆದರೆ ಸನ್ಮಾನ್ಯರಾದ ಅಟಲ್ ಬಿಹಾರಿ ವಾಜಪೇಯಿ ಡಾಕ್ಟರ್ ಮನಮೋಹನ್ ಸಿಂಗ್ ಶ್ರೀಮತಿ ಇಂದಿರಾಗಾಂಧಿ ಇಂತಹ ಮೇಧಾವಿಗಳು ಮಾಡಿದಂತ ಅಮೋಘ ಕೆಲಸ ಕಾರ್ಯಗಳಂತೆ ಮಾಡಿ ಸೈಲೆಂಟಾಗಿ ಮತಗಳನ್ನ ಕೇಳದೆಯೇ ಜನತೆ ನೇರವಾಗಿ ತಮಗೆ ಮತ ಕೊಡುವಂತೆ ತಾವು ರಾಜಕಾರಣ ಅಥವಾ ಸಮಾಜ ಸೇವೆ ಮಾಡಿದರೆ ಮಾತ್ರ ಒಳ್ಳೆಯ ವ್ಯಕ್ತಿತ್ವ ಮತ್ತು ಘನತೆಗಳು ಬರುವುದು ಕಿರಿಚ್ ಆಟಗಳು ಅಗತ್ಯವೇ ಇರುವುದಿಲ್ಲ ಅಂತ ನನ್ನ ಅನಿಸಿಕೆ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...