Homeಮುಖಪುಟಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ಹಿಂದುತ್ವ ಎಂದರೆ ರಾಜಕೀಯ - ನಟಿ ರಮ್ಯಾ

ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ಹಿಂದುತ್ವ ಎಂದರೆ ರಾಜಕೀಯ – ನಟಿ ರಮ್ಯಾ

ಹಿಂದೂ ಧರ್ಮ ಎಂದರೆ ಒಳಗೊಳ್ಳುವಿಕೆ ಮತ್ತು ಎಲ್ಲರನ್ನು ಪ್ರೀತಿಸುವುದು, ಆದರೆ ಹಿಂದುತ್ವ ಇದಕ್ಕೆ ವಿರುದ್ಧವಾಗಿದೆ ಎಂದು ಅವರು ಬರೆದಿದ್ದಾರೆ.

- Advertisement -
- Advertisement -

ಸಕ್ರಿಯ ರಾಜಕಾರಣದಿಂದ ದೂರವಿರುದ ನಟಿ ರಮ್ಯಾ ದಿವ್ಯಸ್ಪಂದನ ಆಗಾಗ್ಗೆ ಸಮಾಜದ ಆಗು ಹೋಗುಗಳಿಗೆ ಪ್ರತಿಕ್ರಿಯಿಸುತ್ತಿರುತ್ತಾರೆ. ಅದರಂತೆ ಇಂದು ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ ಎಂದು ಪ್ರತಿಪಾದಿಸಿ ಚರ್ಚೆಗೆ ಕಾರಣರಾಗಿದ್ದಾರೆ.

ಹಿಂದೂ ಧರ್ಮ ಎಂದರೆ ಒಳಗೊಳ್ಳುವಿಕೆ ಮತ್ತು ಎಲ್ಲರನ್ನು ಪ್ರೀತಿಸುವುದು, ಆದರೆ ಹಿಂದುತ್ವ ಇದಕ್ಕೆ ವಿರುದ್ಧವಾಗಿದೆ ಎಂದು ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆಯುವ ಮೂಲಕ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದ್ದಾರೆ. ಅವರು ಒಟ್ಟಾರೆ ಹೇಳಿಕೆ ಈ ಕೆಳಗಿನಂತಿದೆ.

“ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ. ಹಿಂದೂ ಧರ್ಮ ರಾಜಕೀಯವಲ್ಲ, ಆದರೆ ಹಿಂದುತ್ವ ಪೂರ್ತಿ ರಾಜಕೀಯ. ಹಿಂದೂ ಧರ್ಮ ಎಂದರೆ ಒಳಗೊಳ್ಳುವಿಕೆ ಮತ್ತು ಎಲ್ಲರನ್ನು ಪ್ರೀತಿಸುವುದು. ಹಿಂದುತ್ವ ಇದಕ್ಕೆ ವಿರುದ್ಧವಾಗಿದೆ. ನಿಜವಾದ ಹಿಂದೂಗಳಿಗೆ ಈ ವ್ಯತ್ಯಾಸ ತಿಳಿಯುತ್ತದೆ” ಎಂದು ಅವರು ಬರೆದಿದ್ದಾರೆ.

 

View this post on Instagram

 

A post shared by Ramya/Divya Spandana (@divyaspandana)

ಎರಡು ದಿನಗಳ ಹಿಂದಷ್ಟೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಇದೇ ರೀತಿಯ ಹೇಳಿಕೆ ನೀಡಿದ್ದರು. ಹಿಂದುತ್ವ ಮತ್ತು ಹಿಂದೂ ಧರ್ಮ ಎಂಬುದು ಎರಡು ವಿಭಿನ್ನ ಪರಿಕಲ್ಪನೆಗಳು ಎಂದು ಅವರು ಹೇಳಿದ್ದರು.

ಮಹರಾಷ್ಟ್ರದ ವಾರ್ಧದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ನಾಲ್ಕು ದಿನಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, “ಹಿಂದೂ ಧರ್ಮವು ಸಿಖ್ಖರನ್ನು ಅಥವಾ ಮುಸಲ್ಮಾನರನ್ನು ಹೊಡೆಯಿರಿ ಎಂದು ಹೇಳುತ್ತದೆಯೇ? ಹಾಗೆಂದು ಯಾವ ಪುಸ್ತಕದಲ್ಲಿ ಬರೆಯಲಾಗಿದೆ? ನಾನು ಉಪನಿಷತ್ತುಗಳನ್ನು ಓದಿದ್ದೇನೆ, ಎಲ್ಲಿಯೂ ಹಾಗೆ ಹೇಳಿಲ್ಲ. ಆದರೆ ಹಿಂದುತ್ವವು ಸಹಜವಾಗಿಯೇ ಏಕೆ ದ್ವೇಷಿಸಲು ಕರೆ ಕೊಡುತ್ತದೆ? ಹಿಂದುತ್ವ ಮತ್ತು ಹಿಂದೂ ಧರ್ಮದ ನಡುವೆ ವ್ಯತ್ಯಾಸವಿದೆ ಎಂದು ನಾವು ಹೇಳುತ್ತೇವೆ. ಇದು ಸರಳವಾದ ತರ್ಕ. ನೀವು ಹಿಂದೂ ಆಗಿದ್ದರೆ ನಿಮಗೆ ಹಿಂದುತ್ವ ಏಕೆ ಬೇಕು? ನಿಮಗೆ ಈ ಹೊಸ ಹೆಸರು ಏಕೆ ಬೇಕು?” ಎಂದು ಹೇಳಿದ್ದರು.


ಇದನ್ನೂ ಓದಿ: ಹಿಂದುತ್ವದಿಂದ ಬಂಧುತ್ವದೆಡೆಗೆ…: ಸುನಿಲ್ ಬಜಿಲಕೇರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...