Homeಮುಖಪುಟಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ಹಿಂದುತ್ವ ಎಂದರೆ ರಾಜಕೀಯ - ನಟಿ ರಮ್ಯಾ

ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ಹಿಂದುತ್ವ ಎಂದರೆ ರಾಜಕೀಯ – ನಟಿ ರಮ್ಯಾ

ಹಿಂದೂ ಧರ್ಮ ಎಂದರೆ ಒಳಗೊಳ್ಳುವಿಕೆ ಮತ್ತು ಎಲ್ಲರನ್ನು ಪ್ರೀತಿಸುವುದು, ಆದರೆ ಹಿಂದುತ್ವ ಇದಕ್ಕೆ ವಿರುದ್ಧವಾಗಿದೆ ಎಂದು ಅವರು ಬರೆದಿದ್ದಾರೆ.

- Advertisement -
- Advertisement -

ಸಕ್ರಿಯ ರಾಜಕಾರಣದಿಂದ ದೂರವಿರುದ ನಟಿ ರಮ್ಯಾ ದಿವ್ಯಸ್ಪಂದನ ಆಗಾಗ್ಗೆ ಸಮಾಜದ ಆಗು ಹೋಗುಗಳಿಗೆ ಪ್ರತಿಕ್ರಿಯಿಸುತ್ತಿರುತ್ತಾರೆ. ಅದರಂತೆ ಇಂದು ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ ಎಂದು ಪ್ರತಿಪಾದಿಸಿ ಚರ್ಚೆಗೆ ಕಾರಣರಾಗಿದ್ದಾರೆ.

ಹಿಂದೂ ಧರ್ಮ ಎಂದರೆ ಒಳಗೊಳ್ಳುವಿಕೆ ಮತ್ತು ಎಲ್ಲರನ್ನು ಪ್ರೀತಿಸುವುದು, ಆದರೆ ಹಿಂದುತ್ವ ಇದಕ್ಕೆ ವಿರುದ್ಧವಾಗಿದೆ ಎಂದು ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆಯುವ ಮೂಲಕ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದ್ದಾರೆ. ಅವರು ಒಟ್ಟಾರೆ ಹೇಳಿಕೆ ಈ ಕೆಳಗಿನಂತಿದೆ.

“ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ. ಹಿಂದೂ ಧರ್ಮ ರಾಜಕೀಯವಲ್ಲ, ಆದರೆ ಹಿಂದುತ್ವ ಪೂರ್ತಿ ರಾಜಕೀಯ. ಹಿಂದೂ ಧರ್ಮ ಎಂದರೆ ಒಳಗೊಳ್ಳುವಿಕೆ ಮತ್ತು ಎಲ್ಲರನ್ನು ಪ್ರೀತಿಸುವುದು. ಹಿಂದುತ್ವ ಇದಕ್ಕೆ ವಿರುದ್ಧವಾಗಿದೆ. ನಿಜವಾದ ಹಿಂದೂಗಳಿಗೆ ಈ ವ್ಯತ್ಯಾಸ ತಿಳಿಯುತ್ತದೆ” ಎಂದು ಅವರು ಬರೆದಿದ್ದಾರೆ.

 

View this post on Instagram

 

A post shared by Ramya/Divya Spandana (@divyaspandana)

ಎರಡು ದಿನಗಳ ಹಿಂದಷ್ಟೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹ ಇದೇ ರೀತಿಯ ಹೇಳಿಕೆ ನೀಡಿದ್ದರು. ಹಿಂದುತ್ವ ಮತ್ತು ಹಿಂದೂ ಧರ್ಮ ಎಂಬುದು ಎರಡು ವಿಭಿನ್ನ ಪರಿಕಲ್ಪನೆಗಳು ಎಂದು ಅವರು ಹೇಳಿದ್ದರು.

ಮಹರಾಷ್ಟ್ರದ ವಾರ್ಧದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ನಾಲ್ಕು ದಿನಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, “ಹಿಂದೂ ಧರ್ಮವು ಸಿಖ್ಖರನ್ನು ಅಥವಾ ಮುಸಲ್ಮಾನರನ್ನು ಹೊಡೆಯಿರಿ ಎಂದು ಹೇಳುತ್ತದೆಯೇ? ಹಾಗೆಂದು ಯಾವ ಪುಸ್ತಕದಲ್ಲಿ ಬರೆಯಲಾಗಿದೆ? ನಾನು ಉಪನಿಷತ್ತುಗಳನ್ನು ಓದಿದ್ದೇನೆ, ಎಲ್ಲಿಯೂ ಹಾಗೆ ಹೇಳಿಲ್ಲ. ಆದರೆ ಹಿಂದುತ್ವವು ಸಹಜವಾಗಿಯೇ ಏಕೆ ದ್ವೇಷಿಸಲು ಕರೆ ಕೊಡುತ್ತದೆ? ಹಿಂದುತ್ವ ಮತ್ತು ಹಿಂದೂ ಧರ್ಮದ ನಡುವೆ ವ್ಯತ್ಯಾಸವಿದೆ ಎಂದು ನಾವು ಹೇಳುತ್ತೇವೆ. ಇದು ಸರಳವಾದ ತರ್ಕ. ನೀವು ಹಿಂದೂ ಆಗಿದ್ದರೆ ನಿಮಗೆ ಹಿಂದುತ್ವ ಏಕೆ ಬೇಕು? ನಿಮಗೆ ಈ ಹೊಸ ಹೆಸರು ಏಕೆ ಬೇಕು?” ಎಂದು ಹೇಳಿದ್ದರು.


ಇದನ್ನೂ ಓದಿ: ಹಿಂದುತ್ವದಿಂದ ಬಂಧುತ್ವದೆಡೆಗೆ…: ಸುನಿಲ್ ಬಜಿಲಕೇರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಅಮೆರಿಕದ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಬಗ್ಗೆ ಸ್ಯಾಮ್ ಪಿತ್ರೋಡಾ ಕೊಟ್ಟಿದ್ದ ವಿವರಣೆಯನ್ನು ‘ರಾಜಕೀಯ ಅಸ್ತ್ರ’...

0
ಲೋಕಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ಮೋದಿ ಹಾದಿಯಾಗಿ ಬಿಜೆಪಿ ನಾಯಕರು ವಿವಾದಾತ್ಮಕ ಹೇಳಿಕೆ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಮತ್ತು ಕಾಂಗ್ರೆಸ್‌ನ ಪ್ರಣಾಳಿಕೆ ವಿರುದ್ಧ ವಾಗ್ಧಾಳಿ ನಡೆಸುತ್ತಾ ಬಂದಿದ್ದಾರೆ. ಈ ಮಧ್ಯೆ ಭಾರತೀಯ ಸಾಗರೋತ್ತರ...