Homeಮುಖಪುಟಜ್ಞಾನವಾಪಿ ಮಸೀದಿ ನೆಲಮಹಡಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆಗೆ ಅವಕಾಶ ನೀಡಿದ ಕೋರ್ಟ್‌

ಜ್ಞಾನವಾಪಿ ಮಸೀದಿ ನೆಲಮಹಡಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆಗೆ ಅವಕಾಶ ನೀಡಿದ ಕೋರ್ಟ್‌

- Advertisement -
- Advertisement -

ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದು ಎಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ಇಂದು ಆದೇಶ ನೀಡಿದೆ.

ವಾರಣಾಸಿ ಮಸೀದಿಯ ಬೀಗ ಮುದ್ರೆ ಹಾಕಿರುವ ನೆಲ ಮಹಡಿ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸುವುದಕ್ಕಾಗಿ ಇನ್ನು ಒಂದು ವಾರದೊಳಗಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ನ್ಯಾಯಾಲಯವು ತನ್ನ ವಿಚಾರಣೆಯ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಬ್ಯಾರಿಕೇಡ್‌ಗಳನ್ನು ತೆಗೆಯುವುದು ಸೇರಿದಂತೆ ವ್ಯವಸ್ಥೆಗಳನ್ನು ಒಂದು ವಾರದಲ್ಲಿ ಪೂರ್ಣಗೊಳಿಸಬೇಕು ಎಂದು ನ್ಯಾಯಾಧೀಶರು ಹೇಳಿದ್ದಾರೆ. ಕಾಶಿ ವಿಶ್ವನಾಥ ದೇಗುಲದ ಅರ್ಚಕರಿಂದ ಪ್ರಾರ್ಥನೆ ನಡೆಸಬೇಕು ಎಂದು ನ್ಯಾಯಾಲಯ ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಹಿಂದೂ ಮಹಿಳಾ ಅರ್ಜಿದಾರರ ಪರ ವಕೀಲ ವಿಷ್ಣು ಶಂಕರ್ ಜೈನ್, ಎಲ್ಲರಿಗೂ ಅಲ್ಲಿ ಪ್ರಾರ್ಥನೆ ಮಾಡುವ ಹಕ್ಕು ಇದೆ, ಇದೊಂದು ಮಹತ್ವದ ಆದೇಶವಾಗಿದೆ. ಆದೇಶದಂತೆಯೇ ವಾರದೊಳಗೆ ಅಲ್ಲಿ ನಾವು ಪೂಜೆ ಮಾಡಲಿದ್ದೇವೆ ಎಂದು  ಹೇಳಿದ್ದಾರೆ.

ಮಸೀದಿಯಲ್ಲಿ ಒಟ್ಟು 4 ನೆಲಮಾಳಿಗೆಗಳಿದೆ. ಅವುಗಳ ಪೈಕಿ ಒಂದು ಇಲ್ಲಿ ವಾಸಿಸುತ್ತಿದ್ದ ಹಿಂದೂ ಕುಟುಂಬವೊಂದರ ವಶದಲ್ಲಿದೆ. ಹಾಗಾಗಿ, ಇದರಲ್ಲಿರುವ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿದೆ. ಈ ಆದೇಶವನ್ನು ಮಸೀದಿ ಸಮಿತಿಯು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸುವ ನಿರೀಕ್ಷೆಯಿದೆ.

ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಸಮೀಕ್ಷಾ ವರದಿಯನ್ನು ಭಾರತೀಯ ಪುರಾತತ್ವ ಇಲಾಖೆ ಇತ್ತೀಚೆಗೆ ಬಹಿರಂಗಪಡಿಸಿತ್ತು. ಹಿಂದೂ ದೇವಾಲಯದ ಅವಶೇಷಗಳ ಮೇಲೆ ಮಸೀದಿ ನಿರ್ಮಿಸಲಾಗಿದೆ. ಮಸೀದಿಗೂ ಮುನ್ನ ಅಲ್ಲೊಂದು ದೊಡ್ಡ ಹಿಂದೂ ದೇವಾಲಯವಿತ್ತು ಎಂದು 839 ಪುಟಗಳ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸುತ್ತಿರುವ ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ಅವರು ಕಳೆದ ವರ್ಷ ಜುಲೈ 21 ರಂದು ಎಎಸ್‌ಐಗೆ ಜ್ಞಾನವಾಪಿ ಆವರಣದ ವೈಜ್ಞಾನಿಕ ಸಮೀಕ್ಷೆಯನ್ನು ಮಾಡಿ, ಮಸೀದಿಯು ಹಳೆಯ ರಚನೆಯ ಮೇಲೆ ನಿಂತಿದೆಯೇ ಎಂದು ನಿರ್ಧರಿಸಲು ಸೂಚಿಸಿದ್ದರು. ಅದರಂತೆ ಸಮೀಕ್ಷೆ ನಡೆಸಿದ ಪುರಾತತ್ವ ಇಲಾಖೆಯು ಒಂದು ತಿಂಗಳ ಹಿಂದೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ಕಳೆದ ಬುಧವಾರ, ವಾರಣಾಸಿ ನ್ಯಾಯಾಲಯವು ಎರಡೂ ಕಡೆಯವರಿಗೆ ವರದಿಯನ್ನು ನೀಡುವಂತೆ ಆದೇಶಿಸಿತ್ತು.

ಇದನ್ನು ಓದಿ: ಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ ಒಪ್ಪಂದವನ್ನು ತಡೆ ಹಿಡಿದ ಅಮೆರಿಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...