Homeಮುಖಪುಟಜ್ಞಾನವಾಪಿ ಮಸೀದಿ ನೆಲಮಹಡಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆಗೆ ಅವಕಾಶ ನೀಡಿದ ಕೋರ್ಟ್‌

ಜ್ಞಾನವಾಪಿ ಮಸೀದಿ ನೆಲಮಹಡಿಯಲ್ಲಿ ಹಿಂದೂಗಳಿಗೆ ಪ್ರಾರ್ಥನೆಗೆ ಅವಕಾಶ ನೀಡಿದ ಕೋರ್ಟ್‌

- Advertisement -
- Advertisement -

ವಾರಣಾಸಿಯಲ್ಲಿರುವ ಜ್ಞಾನವಾಪಿ ಮಸೀದಿಯ ನೆಲಮಹಡಿಯಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದು ಎಂದು ವಾರಣಾಸಿ ಜಿಲ್ಲಾ ನ್ಯಾಯಾಲಯ ಇಂದು ಆದೇಶ ನೀಡಿದೆ.

ವಾರಣಾಸಿ ಮಸೀದಿಯ ಬೀಗ ಮುದ್ರೆ ಹಾಕಿರುವ ನೆಲ ಮಹಡಿ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸುವುದಕ್ಕಾಗಿ ಇನ್ನು ಒಂದು ವಾರದೊಳಗಾಗಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ನ್ಯಾಯಾಲಯವು ತನ್ನ ವಿಚಾರಣೆಯ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ. ಬ್ಯಾರಿಕೇಡ್‌ಗಳನ್ನು ತೆಗೆಯುವುದು ಸೇರಿದಂತೆ ವ್ಯವಸ್ಥೆಗಳನ್ನು ಒಂದು ವಾರದಲ್ಲಿ ಪೂರ್ಣಗೊಳಿಸಬೇಕು ಎಂದು ನ್ಯಾಯಾಧೀಶರು ಹೇಳಿದ್ದಾರೆ. ಕಾಶಿ ವಿಶ್ವನಾಥ ದೇಗುಲದ ಅರ್ಚಕರಿಂದ ಪ್ರಾರ್ಥನೆ ನಡೆಸಬೇಕು ಎಂದು ನ್ಯಾಯಾಲಯ ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಹಿಂದೂ ಮಹಿಳಾ ಅರ್ಜಿದಾರರ ಪರ ವಕೀಲ ವಿಷ್ಣು ಶಂಕರ್ ಜೈನ್, ಎಲ್ಲರಿಗೂ ಅಲ್ಲಿ ಪ್ರಾರ್ಥನೆ ಮಾಡುವ ಹಕ್ಕು ಇದೆ, ಇದೊಂದು ಮಹತ್ವದ ಆದೇಶವಾಗಿದೆ. ಆದೇಶದಂತೆಯೇ ವಾರದೊಳಗೆ ಅಲ್ಲಿ ನಾವು ಪೂಜೆ ಮಾಡಲಿದ್ದೇವೆ ಎಂದು  ಹೇಳಿದ್ದಾರೆ.

ಮಸೀದಿಯಲ್ಲಿ ಒಟ್ಟು 4 ನೆಲಮಾಳಿಗೆಗಳಿದೆ. ಅವುಗಳ ಪೈಕಿ ಒಂದು ಇಲ್ಲಿ ವಾಸಿಸುತ್ತಿದ್ದ ಹಿಂದೂ ಕುಟುಂಬವೊಂದರ ವಶದಲ್ಲಿದೆ. ಹಾಗಾಗಿ, ಇದರಲ್ಲಿರುವ ‘ವ್ಯಾಸ್ ಕಾ ಠಿಕಾಣಾ’ದಲ್ಲಿ ಹಿಂದೂ ಭಕ್ತರು ಪ್ರಾರ್ಥನೆ ಸಲ್ಲಿಸಬಹುದು ಎಂದು ನ್ಯಾಯಾಲಯ ಹೇಳಿದೆ. ಈ ಆದೇಶವನ್ನು ಮಸೀದಿ ಸಮಿತಿಯು ಉನ್ನತ ನ್ಯಾಯಾಲಯದಲ್ಲಿ ಪ್ರಶ್ನಿಸುವ ನಿರೀಕ್ಷೆಯಿದೆ.

ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿಗೆ ಸಂಬಂಧಿಸಿದ ಸಮೀಕ್ಷಾ ವರದಿಯನ್ನು ಭಾರತೀಯ ಪುರಾತತ್ವ ಇಲಾಖೆ ಇತ್ತೀಚೆಗೆ ಬಹಿರಂಗಪಡಿಸಿತ್ತು. ಹಿಂದೂ ದೇವಾಲಯದ ಅವಶೇಷಗಳ ಮೇಲೆ ಮಸೀದಿ ನಿರ್ಮಿಸಲಾಗಿದೆ. ಮಸೀದಿಗೂ ಮುನ್ನ ಅಲ್ಲೊಂದು ದೊಡ್ಡ ಹಿಂದೂ ದೇವಾಲಯವಿತ್ತು ಎಂದು 839 ಪುಟಗಳ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸುತ್ತಿರುವ ವಾರಣಾಸಿ ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ಅವರು ಕಳೆದ ವರ್ಷ ಜುಲೈ 21 ರಂದು ಎಎಸ್‌ಐಗೆ ಜ್ಞಾನವಾಪಿ ಆವರಣದ ವೈಜ್ಞಾನಿಕ ಸಮೀಕ್ಷೆಯನ್ನು ಮಾಡಿ, ಮಸೀದಿಯು ಹಳೆಯ ರಚನೆಯ ಮೇಲೆ ನಿಂತಿದೆಯೇ ಎಂದು ನಿರ್ಧರಿಸಲು ಸೂಚಿಸಿದ್ದರು. ಅದರಂತೆ ಸಮೀಕ್ಷೆ ನಡೆಸಿದ ಪುರಾತತ್ವ ಇಲಾಖೆಯು ಒಂದು ತಿಂಗಳ ಹಿಂದೆ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಿತ್ತು. ಕಳೆದ ಬುಧವಾರ, ವಾರಣಾಸಿ ನ್ಯಾಯಾಲಯವು ಎರಡೂ ಕಡೆಯವರಿಗೆ ವರದಿಯನ್ನು ನೀಡುವಂತೆ ಆದೇಶಿಸಿತ್ತು.

ಇದನ್ನು ಓದಿ: ಪನ್ನುನ್ ಹತ್ಯೆ ಸಂಚು ಆರೋಪ: ಭಾರತದ ಜೊತೆಗಿನ 3 ಬಿಲಿಯನ್ ಡಾಲರ್‌ ವೆಚ್ಚದ ಡ್ರೋನ್‌ ಮಾರಾಟ ಒಪ್ಪಂದವನ್ನು ತಡೆ ಹಿಡಿದ ಅಮೆರಿಕ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...