Homeಫ್ಯಾಕ್ಟ್‌ಚೆಕ್"ಹಿಂದೂಗಳೇ ಮುಸಲ್ಮಾನರಿಗಿಂದ ಹೆಚ್ಚು ಐಎಸ್‌ಐ ಏಜೆಂಟ್‌ಗಳು"...ಅಜಿತ್‌ ದೋವಲ್ ಹೇಳಿಕೆ ಧೃಡ

“ಹಿಂದೂಗಳೇ ಮುಸಲ್ಮಾನರಿಗಿಂದ ಹೆಚ್ಚು ಐಎಸ್‌ಐ ಏಜೆಂಟ್‌ಗಳು”…ಅಜಿತ್‌ ದೋವಲ್ ಹೇಳಿಕೆ ಧೃಡ

- Advertisement -
- Advertisement -

ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪು ಕೋಟೆ ಬಳಿ ನವೆಂಬರ್ 10ರಂದು ಸ್ಪೋಟ ಸಂಭವಿಸಿ 13 ಜನರು ಸಾವನ್ನಪ್ಪಿದ ಬಳಿಕ, ದೇಶದಲ್ಲಿ ಇಡೀ ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರು ಎಂದು ಕಟಕಟೆಯಲ್ಲಿ ನಿಲ್ಲಿಸುವ ಪ್ರಯತ್ನಗಳು ಜೋರಾಗಿಯೇ ನಡೆಯುತ್ತಿದೆ. ಬಹುತೇಕ ಮುಖ್ಯವಾಹಿನಿ ಮಾಧ್ಯಮಗಳು ಕೂಡ ದೃಢೀಕರಿಸಿದ, ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸಿ ಜನರನ್ನು ಪ್ರಚೋದಿಸುವ ಮೂಲಕ ಈ ಪ್ರಯತ್ನಕ್ಕೆ ಏಣಿ ಇಟ್ಟು ಕೊಡುತ್ತಿವೆ.

ಈ ನಡುವೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರ (ಎನ್‌ಎಸ್‌ಎ) ಅಜಿತ ದೋವಲ್ ಅವರು “ಭಾರತದಲ್ಲಿ ಐಎಸ್‌ಐ (ಪಾಕಿಸ್ತಾನದ ಗುಪ್ತಚರ ಏಜೆನ್ಸಿ) ಕಾರ್ಯಗಳಿಗಾಗಿ ಮುಸ್ಲಿಮರಿಗಿಂತ ಹೆಚ್ಚಿನ ಹಿಂದೂಗಳನ್ನು ನೇಮಕ ಮಾಡಿಕೊಳ್ಳಲಾಗಿದೆ” ಎಂದು ಹೇಳಿರುವ 35 ಸೆಕೆಂಡ್‌ಗಳ ವಿಡಿಯೋ ಕ್ಲಿಪ್ ಒಂದು ವ್ಯಾಪಕವಾಗಿ ವೈರಲ್ ಆಗುತ್ತಿದೆ. ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ಮುಸ್ಲಿಮರ ವಿರುದ್ದದ ಆರೋಪಗಳಿಗೆ ತಿರುಗೇಟು ನೀಡಲು ದೋವಲ್ ಅವರ ಈ ವಿಡಿಯೋ ಕ್ಲಿಪ್ ಬಳಿಸಿಕೊಂಡಿದ್ದಾರೆ.

“ಐಎಸ್‌ಐ ಏಜೆಂಟ್‌ಗಳಾಗಿ ಮುಸಲ್ಮಾನರಿಗಿಂತ ಹಿಂದೂಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಭಯೋತ್ಪಾದನೆಯನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸಿ ನೋಡಬಾರದು. ಭಾರತದ ಮುಸ್ಲಿಂ ವಿದ್ವಾಂಸರು ಭಯೋತ್ಪಾದನೆಯ ವಿರುದ್ದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ಫತ್ವಾ ಹೊರಡಿಸಿದ್ದಾರೆ. ಆದರೆ, ಯಾವುದೇ ಹಿಂದೂ ಸಂಘಟನೆಗಳು ಆ ರೀತಿಯ ಯಾವ ಹೇಳಿಕೆಗಳನ್ನೂ ನೀಡಿಲ್ಲ” ಎಂದು ಅಜಿತ್ ದೋವಲ್ ಹೇಳಿರುವುದು ವೈರಲ್ ವಿಡಿಯೋದಲ್ಲಿ ಇದೆ.

ವೈರಲ್ ವಿಡಿಯೋ ನಕಲಿ ಎಂದ ಅಜಿತ್ ದೋವಲ್

ಹಳೆಯ ವಿಡಿಯೋ ಕ್ಲಿಪ್ ವೈರಲ್ ಆಗುತ್ತಿದ್ದಂತೆ ಅಜಿತ್ ದೋವಲ್ ತನ್ನ ವರಸೆ ಬದಲಿಸಿದ್ದಾರೆ. ಅದು ‘ಡೀಪ್‌ಫೇಕ್’ (ಎಐ ಸೃಷ್ಟಿತ) ಎಂದು ಹೇಳಿದ್ದಾರೆ.

ನವೆಂಬರ್ 17 ರಂದು ಸಿಎನ್‌ಎನ್-ನ್ಯೂಸ್ 18 ಸುದ್ದಿವಾಹಿನಿಗೆ ನೀಡಿದ ಹೇಳಿಕೆಯಲ್ಲಿ, “ನಾನು ಎಂದಿಗೂ ಅಂತಹ ಮಾತುಗಳನ್ನು ಹೇಳಿಲ್ಲ. ಸಾರ್ವಜನಿಕ ಅಭಿಪ್ರಾಯವನ್ನು ತಿರುಚಿ ಈ ವಿಡಿಯೋವನ್ನು ರಚಿಸಲಾಗಿದೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ವಿರೂಪಗೊಳಿಸಲು ಇಂತಹ ಮಾಧ್ಯಮ ಸಾಧನಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಈ ವೈರಲ್ ಆಗುತ್ತಿರುವ ವಿಡಿಯೋ ಭಾರತದ ಭಯೋತ್ಪಾದನಾ ನಿಲುವನ್ನು ಗುರಿಯಾಗಿಸುವ ಪ್ರಯತ್ನವಾಗಿದೆ” ಎಂದಿದ್ದಾರೆ.

ದೋವಲ್ ಹೇಳಿಕೆ ಅಲ್ಲಗಳೆದ ಆಲ್ಟ್ ನ್ಯೂಸ್ 

“ವೈರಲ್ ವಿಡಿಯೋ ಡೀಪ್‌ಫೇಕ್ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು, ನಾವು ಕೆಲವು ಕೀ ವರ್ಡ್‌ಗಳ ಮೂಲಕ ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದ್ದೇವೆ. ಈ ವೇಳೆ ದೋವಲ್ ಅವರ ವೈರಲ್ ವಿಡಿಯೋ ಮಾರ್ಚ್ 20, 2014ರಂದು ಆಸ್ಟ್ರೇಲಿಯಾ ಇಂಡಿಯಾ ಇನ್‌ಸ್ಟಿಟ್ಯೂಟ್ ಅಪ್‌ಲೋಡ್ ಮಾಡಿರುವ 1 ಗಂಟೆ 17 ನಿಮಿಷಗಳ ಯೂಟ್ಯೂಬ್ ವಿಡಿಯೋದಿಂದ ತೆಗೆದುಕೊಳ್ಳಲಾಗಿದೆ ಎಂಬುದಾಗಿ ಕಂಡುಬಂದಿದೆ” ಎಂದು ಆಲ್ಟ್ ನ್ಯೂಸ್ ಹೇಳಿದೆ. 

“ವಿಡಿಯೋದಲ್ಲಿ 1ನಿಮಿಷ 4 ಸೆಕೆಂಡ್‌ ಅವಧಿಯಲ್ಲಿ, ‘ನಾನು ಈಗ ಒಬ್ಬ ವ್ಯಕ್ತಿಯಾಗಿ ಬಯಲಾಗಿರುವ ಕಾರಣ ಒಂದು ಸಣ್ಣ ವಿಷಯವನ್ನು ಹೇಳುತ್ತೇನೆ… ಭಾರತದಲ್ಲಿ ಗುಪ್ತಚರ ಕಾರ್ಯಗಳಿಗಾಗಿ ಪಾಕಿಸ್ತಾನದ ಐಎಸ್‌ಐ ಸಂಸ್ಥೆ ಯಾರನ್ನೆಲ್ಲಾ ನೇಮಿಸಿಕೊಂಡಿದೆ ಎಂದರೆ, ಮುಸ್ಲಿಮರ ಸಂಖ್ಯೆಗಿಂತ ಹೆಚ್ಚು ಹಿಂದೂಗಳೇ ಇದ್ದಾರೆ. 1947ರಿಂದ ಇಲ್ಲಿಯವರೆಗೆ ಬೆಳಕಿಗೆ ಬಂದಿರುವ 4,000ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಶೇಕಡಾ 20ರಷ್ಟು ಕೂಡ ಮುಸ್ಲಿಮರು ಇಲ್ಲ. ಆದ್ದರಿಂದ ಇದು ತುಂಬಾ ತಪ್ಪು ಕಲ್ಪನೆ. ನಾವು ಮುಸ್ಲಿಮರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತೇವೆ ಮತ್ತು ಈ ದೇಶವನ್ನು ಮಹಾನ್ ದೇಶವಾಗಿ ಮಾಡುತ್ತೇವೆ” ಎಂಬುವುದಾಗಿ ದೋವಲ್ ಹೇಳಿದ್ದಾರೆ ಎಂದು ಆಲ್ಟ್‌ ನ್ಯೂಸ್ ತಿಳಿಸಿದೆ.

ದೋವಲ್‌ ಅವರ ಹೇಳಿಕೆಯ ಪೂರ್ಣ ವಿಡಿಯೋ ಈ ಕೆಳಗಿನ ಲಿಂಕ್‌ನಲ್ಲಿದೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...