Homeಫ್ಯಾಕ್ಟ್‌ಚೆಕ್"ಹಿಂದೂಗಳೇ ಮುಸಲ್ಮಾನರಿಗಿಂದ ಹೆಚ್ಚು ಐಎಸ್‌ಐ ಏಜೆಂಟ್‌ಗಳು"...ಅಜಿತ್‌ ದೋವಲ್ ಹೇಳಿಕೆ ಧೃಡ

“ಹಿಂದೂಗಳೇ ಮುಸಲ್ಮಾನರಿಗಿಂದ ಹೆಚ್ಚು ಐಎಸ್‌ಐ ಏಜೆಂಟ್‌ಗಳು”…ಅಜಿತ್‌ ದೋವಲ್ ಹೇಳಿಕೆ ಧೃಡ

- Advertisement -
- Advertisement -

ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪು ಕೋಟೆ ಬಳಿ ನವೆಂಬರ್ 10ರಂದು ಸ್ಪೋಟ ಸಂಭವಿಸಿ 13 ಜನರು ಸಾವನ್ನಪ್ಪಿದ ಬಳಿಕ, ದೇಶದಲ್ಲಿ ಇಡೀ ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರು ಎಂದು ಕಟಕಟೆಯಲ್ಲಿ ನಿಲ್ಲಿಸುವ ಪ್ರಯತ್ನಗಳು ಜೋರಾಗಿಯೇ ನಡೆಯುತ್ತಿದೆ. ಬಹುತೇಕ ಮುಖ್ಯವಾಹಿನಿ ಮಾಧ್ಯಮಗಳು ಕೂಡ ದೃಢೀಕರಿಸಿದ, ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸಿ ಜನರನ್ನು ಪ್ರಚೋದಿಸುವ ಮೂಲಕ ಈ ಪ್ರಯತ್ನಕ್ಕೆ ಏಣಿ ಇಟ್ಟು ಕೊಡುತ್ತಿವೆ.

ಈ ನಡುವೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರ (ಎನ್‌ಎಸ್‌ಎ) ಅಜಿತ ದೋವಲ್ ಅವರು “ಭಾರತದಲ್ಲಿ ಐಎಸ್‌ಐ (ಪಾಕಿಸ್ತಾನದ ಗುಪ್ತಚರ ಏಜೆನ್ಸಿ) ಕಾರ್ಯಗಳಿಗಾಗಿ ಮುಸ್ಲಿಮರಿಗಿಂತ ಹೆಚ್ಚಿನ ಹಿಂದೂಗಳನ್ನು ನೇಮಕ ಮಾಡಿಕೊಳ್ಳಲಾಗಿದೆ” ಎಂದು ಹೇಳಿರುವ 35 ಸೆಕೆಂಡ್‌ಗಳ ವಿಡಿಯೋ ಕ್ಲಿಪ್ ಒಂದು ವ್ಯಾಪಕವಾಗಿ ವೈರಲ್ ಆಗುತ್ತಿದೆ. ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ಮುಸ್ಲಿಮರ ವಿರುದ್ದದ ಆರೋಪಗಳಿಗೆ ತಿರುಗೇಟು ನೀಡಲು ದೋವಲ್ ಅವರ ಈ ವಿಡಿಯೋ ಕ್ಲಿಪ್ ಬಳಿಸಿಕೊಂಡಿದ್ದಾರೆ.

“ಐಎಸ್‌ಐ ಏಜೆಂಟ್‌ಗಳಾಗಿ ಮುಸಲ್ಮಾನರಿಗಿಂತ ಹಿಂದೂಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಭಯೋತ್ಪಾದನೆಯನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸಿ ನೋಡಬಾರದು. ಭಾರತದ ಮುಸ್ಲಿಂ ವಿದ್ವಾಂಸರು ಭಯೋತ್ಪಾದನೆಯ ವಿರುದ್ದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ಫತ್ವಾ ಹೊರಡಿಸಿದ್ದಾರೆ. ಆದರೆ, ಯಾವುದೇ ಹಿಂದೂ ಸಂಘಟನೆಗಳು ಆ ರೀತಿಯ ಯಾವ ಹೇಳಿಕೆಗಳನ್ನೂ ನೀಡಿಲ್ಲ” ಎಂದು ಅಜಿತ್ ದೋವಲ್ ಹೇಳಿರುವುದು ವೈರಲ್ ವಿಡಿಯೋದಲ್ಲಿ ಇದೆ.

ವೈರಲ್ ವಿಡಿಯೋ ನಕಲಿ ಎಂದ ಅಜಿತ್ ದೋವಲ್

ಹಳೆಯ ವಿಡಿಯೋ ಕ್ಲಿಪ್ ವೈರಲ್ ಆಗುತ್ತಿದ್ದಂತೆ ಅಜಿತ್ ದೋವಲ್ ತನ್ನ ವರಸೆ ಬದಲಿಸಿದ್ದಾರೆ. ಅದು ‘ಡೀಪ್‌ಫೇಕ್’ (ಎಐ ಸೃಷ್ಟಿತ) ಎಂದು ಹೇಳಿದ್ದಾರೆ.

ನವೆಂಬರ್ 17 ರಂದು ಸಿಎನ್‌ಎನ್-ನ್ಯೂಸ್ 18 ಸುದ್ದಿವಾಹಿನಿಗೆ ನೀಡಿದ ಹೇಳಿಕೆಯಲ್ಲಿ, “ನಾನು ಎಂದಿಗೂ ಅಂತಹ ಮಾತುಗಳನ್ನು ಹೇಳಿಲ್ಲ. ಸಾರ್ವಜನಿಕ ಅಭಿಪ್ರಾಯವನ್ನು ತಿರುಚಿ ಈ ವಿಡಿಯೋವನ್ನು ರಚಿಸಲಾಗಿದೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ವಿರೂಪಗೊಳಿಸಲು ಇಂತಹ ಮಾಧ್ಯಮ ಸಾಧನಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಈ ವೈರಲ್ ಆಗುತ್ತಿರುವ ವಿಡಿಯೋ ಭಾರತದ ಭಯೋತ್ಪಾದನಾ ನಿಲುವನ್ನು ಗುರಿಯಾಗಿಸುವ ಪ್ರಯತ್ನವಾಗಿದೆ” ಎಂದಿದ್ದಾರೆ.

ದೋವಲ್ ಹೇಳಿಕೆ ಅಲ್ಲಗಳೆದ ಆಲ್ಟ್ ನ್ಯೂಸ್ 

“ವೈರಲ್ ವಿಡಿಯೋ ಡೀಪ್‌ಫೇಕ್ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು, ನಾವು ಕೆಲವು ಕೀ ವರ್ಡ್‌ಗಳ ಮೂಲಕ ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದ್ದೇವೆ. ಈ ವೇಳೆ ದೋವಲ್ ಅವರ ವೈರಲ್ ವಿಡಿಯೋ ಮಾರ್ಚ್ 20, 2014ರಂದು ಆಸ್ಟ್ರೇಲಿಯಾ ಇಂಡಿಯಾ ಇನ್‌ಸ್ಟಿಟ್ಯೂಟ್ ಅಪ್‌ಲೋಡ್ ಮಾಡಿರುವ 1 ಗಂಟೆ 17 ನಿಮಿಷಗಳ ಯೂಟ್ಯೂಬ್ ವಿಡಿಯೋದಿಂದ ತೆಗೆದುಕೊಳ್ಳಲಾಗಿದೆ ಎಂಬುದಾಗಿ ಕಂಡುಬಂದಿದೆ” ಎಂದು ಆಲ್ಟ್ ನ್ಯೂಸ್ ಹೇಳಿದೆ. 

“ವಿಡಿಯೋದಲ್ಲಿ 1ನಿಮಿಷ 4 ಸೆಕೆಂಡ್‌ ಅವಧಿಯಲ್ಲಿ, ‘ನಾನು ಈಗ ಒಬ್ಬ ವ್ಯಕ್ತಿಯಾಗಿ ಬಯಲಾಗಿರುವ ಕಾರಣ ಒಂದು ಸಣ್ಣ ವಿಷಯವನ್ನು ಹೇಳುತ್ತೇನೆ… ಭಾರತದಲ್ಲಿ ಗುಪ್ತಚರ ಕಾರ್ಯಗಳಿಗಾಗಿ ಪಾಕಿಸ್ತಾನದ ಐಎಸ್‌ಐ ಸಂಸ್ಥೆ ಯಾರನ್ನೆಲ್ಲಾ ನೇಮಿಸಿಕೊಂಡಿದೆ ಎಂದರೆ, ಮುಸ್ಲಿಮರ ಸಂಖ್ಯೆಗಿಂತ ಹೆಚ್ಚು ಹಿಂದೂಗಳೇ ಇದ್ದಾರೆ. 1947ರಿಂದ ಇಲ್ಲಿಯವರೆಗೆ ಬೆಳಕಿಗೆ ಬಂದಿರುವ 4,000ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಶೇಕಡಾ 20ರಷ್ಟು ಕೂಡ ಮುಸ್ಲಿಮರು ಇಲ್ಲ. ಆದ್ದರಿಂದ ಇದು ತುಂಬಾ ತಪ್ಪು ಕಲ್ಪನೆ. ನಾವು ಮುಸ್ಲಿಮರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತೇವೆ ಮತ್ತು ಈ ದೇಶವನ್ನು ಮಹಾನ್ ದೇಶವಾಗಿ ಮಾಡುತ್ತೇವೆ” ಎಂಬುವುದಾಗಿ ದೋವಲ್ ಹೇಳಿದ್ದಾರೆ ಎಂದು ಆಲ್ಟ್‌ ನ್ಯೂಸ್ ತಿಳಿಸಿದೆ.

ದೋವಲ್‌ ಅವರ ಹೇಳಿಕೆಯ ಪೂರ್ಣ ವಿಡಿಯೋ ಈ ಕೆಳಗಿನ ಲಿಂಕ್‌ನಲ್ಲಿದೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...