Homeಫ್ಯಾಕ್ಟ್‌ಚೆಕ್"ಹಿಂದೂಗಳೇ ಮುಸಲ್ಮಾನರಿಗಿಂದ ಹೆಚ್ಚು ಐಎಸ್‌ಐ ಏಜೆಂಟ್‌ಗಳು"...ಅಜಿತ್‌ ದೋವಲ್ ಹೇಳಿಕೆ ಧೃಡ

“ಹಿಂದೂಗಳೇ ಮುಸಲ್ಮಾನರಿಗಿಂದ ಹೆಚ್ಚು ಐಎಸ್‌ಐ ಏಜೆಂಟ್‌ಗಳು”…ಅಜಿತ್‌ ದೋವಲ್ ಹೇಳಿಕೆ ಧೃಡ

- Advertisement -
- Advertisement -

ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪು ಕೋಟೆ ಬಳಿ ನವೆಂಬರ್ 10ರಂದು ಸ್ಪೋಟ ಸಂಭವಿಸಿ 13 ಜನರು ಸಾವನ್ನಪ್ಪಿದ ಬಳಿಕ, ದೇಶದಲ್ಲಿ ಇಡೀ ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರು ಎಂದು ಕಟಕಟೆಯಲ್ಲಿ ನಿಲ್ಲಿಸುವ ಪ್ರಯತ್ನಗಳು ಜೋರಾಗಿಯೇ ನಡೆಯುತ್ತಿದೆ. ಬಹುತೇಕ ಮುಖ್ಯವಾಹಿನಿ ಮಾಧ್ಯಮಗಳು ಕೂಡ ದೃಢೀಕರಿಸಿದ, ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸಿ ಜನರನ್ನು ಪ್ರಚೋದಿಸುವ ಮೂಲಕ ಈ ಪ್ರಯತ್ನಕ್ಕೆ ಏಣಿ ಇಟ್ಟು ಕೊಡುತ್ತಿವೆ.

ಈ ನಡುವೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರ (ಎನ್‌ಎಸ್‌ಎ) ಅಜಿತ ದೋವಲ್ ಅವರು “ಭಾರತದಲ್ಲಿ ಐಎಸ್‌ಐ (ಪಾಕಿಸ್ತಾನದ ಗುಪ್ತಚರ ಏಜೆನ್ಸಿ) ಕಾರ್ಯಗಳಿಗಾಗಿ ಮುಸ್ಲಿಮರಿಗಿಂತ ಹೆಚ್ಚಿನ ಹಿಂದೂಗಳನ್ನು ನೇಮಕ ಮಾಡಿಕೊಳ್ಳಲಾಗಿದೆ” ಎಂದು ಹೇಳಿರುವ 35 ಸೆಕೆಂಡ್‌ಗಳ ವಿಡಿಯೋ ಕ್ಲಿಪ್ ಒಂದು ವ್ಯಾಪಕವಾಗಿ ವೈರಲ್ ಆಗುತ್ತಿದೆ. ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ಮುಸ್ಲಿಮರ ವಿರುದ್ದದ ಆರೋಪಗಳಿಗೆ ತಿರುಗೇಟು ನೀಡಲು ದೋವಲ್ ಅವರ ಈ ವಿಡಿಯೋ ಕ್ಲಿಪ್ ಬಳಿಸಿಕೊಂಡಿದ್ದಾರೆ.

“ಐಎಸ್‌ಐ ಏಜೆಂಟ್‌ಗಳಾಗಿ ಮುಸಲ್ಮಾನರಿಗಿಂತ ಹಿಂದೂಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಭಯೋತ್ಪಾದನೆಯನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸಿ ನೋಡಬಾರದು. ಭಾರತದ ಮುಸ್ಲಿಂ ವಿದ್ವಾಂಸರು ಭಯೋತ್ಪಾದನೆಯ ವಿರುದ್ದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ಫತ್ವಾ ಹೊರಡಿಸಿದ್ದಾರೆ. ಆದರೆ, ಯಾವುದೇ ಹಿಂದೂ ಸಂಘಟನೆಗಳು ಆ ರೀತಿಯ ಯಾವ ಹೇಳಿಕೆಗಳನ್ನೂ ನೀಡಿಲ್ಲ” ಎಂದು ಅಜಿತ್ ದೋವಲ್ ಹೇಳಿರುವುದು ವೈರಲ್ ವಿಡಿಯೋದಲ್ಲಿ ಇದೆ.

ವೈರಲ್ ವಿಡಿಯೋ ನಕಲಿ ಎಂದ ಅಜಿತ್ ದೋವಲ್

ಹಳೆಯ ವಿಡಿಯೋ ಕ್ಲಿಪ್ ವೈರಲ್ ಆಗುತ್ತಿದ್ದಂತೆ ಅಜಿತ್ ದೋವಲ್ ತನ್ನ ವರಸೆ ಬದಲಿಸಿದ್ದಾರೆ. ಅದು ‘ಡೀಪ್‌ಫೇಕ್’ (ಎಐ ಸೃಷ್ಟಿತ) ಎಂದು ಹೇಳಿದ್ದಾರೆ.

ನವೆಂಬರ್ 17 ರಂದು ಸಿಎನ್‌ಎನ್-ನ್ಯೂಸ್ 18 ಸುದ್ದಿವಾಹಿನಿಗೆ ನೀಡಿದ ಹೇಳಿಕೆಯಲ್ಲಿ, “ನಾನು ಎಂದಿಗೂ ಅಂತಹ ಮಾತುಗಳನ್ನು ಹೇಳಿಲ್ಲ. ಸಾರ್ವಜನಿಕ ಅಭಿಪ್ರಾಯವನ್ನು ತಿರುಚಿ ಈ ವಿಡಿಯೋವನ್ನು ರಚಿಸಲಾಗಿದೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ವಿರೂಪಗೊಳಿಸಲು ಇಂತಹ ಮಾಧ್ಯಮ ಸಾಧನಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಈ ವೈರಲ್ ಆಗುತ್ತಿರುವ ವಿಡಿಯೋ ಭಾರತದ ಭಯೋತ್ಪಾದನಾ ನಿಲುವನ್ನು ಗುರಿಯಾಗಿಸುವ ಪ್ರಯತ್ನವಾಗಿದೆ” ಎಂದಿದ್ದಾರೆ.

ದೋವಲ್ ಹೇಳಿಕೆ ಅಲ್ಲಗಳೆದ ಆಲ್ಟ್ ನ್ಯೂಸ್ 

“ವೈರಲ್ ವಿಡಿಯೋ ಡೀಪ್‌ಫೇಕ್ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು, ನಾವು ಕೆಲವು ಕೀ ವರ್ಡ್‌ಗಳ ಮೂಲಕ ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದ್ದೇವೆ. ಈ ವೇಳೆ ದೋವಲ್ ಅವರ ವೈರಲ್ ವಿಡಿಯೋ ಮಾರ್ಚ್ 20, 2014ರಂದು ಆಸ್ಟ್ರೇಲಿಯಾ ಇಂಡಿಯಾ ಇನ್‌ಸ್ಟಿಟ್ಯೂಟ್ ಅಪ್‌ಲೋಡ್ ಮಾಡಿರುವ 1 ಗಂಟೆ 17 ನಿಮಿಷಗಳ ಯೂಟ್ಯೂಬ್ ವಿಡಿಯೋದಿಂದ ತೆಗೆದುಕೊಳ್ಳಲಾಗಿದೆ ಎಂಬುದಾಗಿ ಕಂಡುಬಂದಿದೆ” ಎಂದು ಆಲ್ಟ್ ನ್ಯೂಸ್ ಹೇಳಿದೆ. 

“ವಿಡಿಯೋದಲ್ಲಿ 1ನಿಮಿಷ 4 ಸೆಕೆಂಡ್‌ ಅವಧಿಯಲ್ಲಿ, ‘ನಾನು ಈಗ ಒಬ್ಬ ವ್ಯಕ್ತಿಯಾಗಿ ಬಯಲಾಗಿರುವ ಕಾರಣ ಒಂದು ಸಣ್ಣ ವಿಷಯವನ್ನು ಹೇಳುತ್ತೇನೆ… ಭಾರತದಲ್ಲಿ ಗುಪ್ತಚರ ಕಾರ್ಯಗಳಿಗಾಗಿ ಪಾಕಿಸ್ತಾನದ ಐಎಸ್‌ಐ ಸಂಸ್ಥೆ ಯಾರನ್ನೆಲ್ಲಾ ನೇಮಿಸಿಕೊಂಡಿದೆ ಎಂದರೆ, ಮುಸ್ಲಿಮರ ಸಂಖ್ಯೆಗಿಂತ ಹೆಚ್ಚು ಹಿಂದೂಗಳೇ ಇದ್ದಾರೆ. 1947ರಿಂದ ಇಲ್ಲಿಯವರೆಗೆ ಬೆಳಕಿಗೆ ಬಂದಿರುವ 4,000ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಶೇಕಡಾ 20ರಷ್ಟು ಕೂಡ ಮುಸ್ಲಿಮರು ಇಲ್ಲ. ಆದ್ದರಿಂದ ಇದು ತುಂಬಾ ತಪ್ಪು ಕಲ್ಪನೆ. ನಾವು ಮುಸ್ಲಿಮರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತೇವೆ ಮತ್ತು ಈ ದೇಶವನ್ನು ಮಹಾನ್ ದೇಶವಾಗಿ ಮಾಡುತ್ತೇವೆ” ಎಂಬುವುದಾಗಿ ದೋವಲ್ ಹೇಳಿದ್ದಾರೆ ಎಂದು ಆಲ್ಟ್‌ ನ್ಯೂಸ್ ತಿಳಿಸಿದೆ.

ದೋವಲ್‌ ಅವರ ಹೇಳಿಕೆಯ ಪೂರ್ಣ ವಿಡಿಯೋ ಈ ಕೆಳಗಿನ ಲಿಂಕ್‌ನಲ್ಲಿದೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....