Homeಫ್ಯಾಕ್ಟ್‌ಚೆಕ್"ಹಿಂದೂಗಳೇ ಮುಸಲ್ಮಾನರಿಗಿಂದ ಹೆಚ್ಚು ಐಎಸ್‌ಐ ಏಜೆಂಟ್‌ಗಳು"...ಅಜಿತ್‌ ದೋವಲ್ ಹೇಳಿಕೆ ಧೃಡ

“ಹಿಂದೂಗಳೇ ಮುಸಲ್ಮಾನರಿಗಿಂದ ಹೆಚ್ಚು ಐಎಸ್‌ಐ ಏಜೆಂಟ್‌ಗಳು”…ಅಜಿತ್‌ ದೋವಲ್ ಹೇಳಿಕೆ ಧೃಡ

- Advertisement -
- Advertisement -

ರಾಷ್ಟ್ರ ರಾಜಧಾನಿ ನವದೆಹಲಿಯ ಕೆಂಪು ಕೋಟೆ ಬಳಿ ನವೆಂಬರ್ 10ರಂದು ಸ್ಪೋಟ ಸಂಭವಿಸಿ 13 ಜನರು ಸಾವನ್ನಪ್ಪಿದ ಬಳಿಕ, ದೇಶದಲ್ಲಿ ಇಡೀ ಮುಸ್ಲಿಂ ಸಮುದಾಯವನ್ನು ಭಯೋತ್ಪಾದಕರು ಎಂದು ಕಟಕಟೆಯಲ್ಲಿ ನಿಲ್ಲಿಸುವ ಪ್ರಯತ್ನಗಳು ಜೋರಾಗಿಯೇ ನಡೆಯುತ್ತಿದೆ. ಬಹುತೇಕ ಮುಖ್ಯವಾಹಿನಿ ಮಾಧ್ಯಮಗಳು ಕೂಡ ದೃಢೀಕರಿಸಿದ, ಕಪೋಲಕಲ್ಪಿತ ವರದಿಗಳನ್ನು ಪ್ರಕಟಿಸಿ ಜನರನ್ನು ಪ್ರಚೋದಿಸುವ ಮೂಲಕ ಈ ಪ್ರಯತ್ನಕ್ಕೆ ಏಣಿ ಇಟ್ಟು ಕೊಡುತ್ತಿವೆ.

ಈ ನಡುವೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರರ (ಎನ್‌ಎಸ್‌ಎ) ಅಜಿತ ದೋವಲ್ ಅವರು “ಭಾರತದಲ್ಲಿ ಐಎಸ್‌ಐ (ಪಾಕಿಸ್ತಾನದ ಗುಪ್ತಚರ ಏಜೆನ್ಸಿ) ಕಾರ್ಯಗಳಿಗಾಗಿ ಮುಸ್ಲಿಮರಿಗಿಂತ ಹೆಚ್ಚಿನ ಹಿಂದೂಗಳನ್ನು ನೇಮಕ ಮಾಡಿಕೊಳ್ಳಲಾಗಿದೆ” ಎಂದು ಹೇಳಿರುವ 35 ಸೆಕೆಂಡ್‌ಗಳ ವಿಡಿಯೋ ಕ್ಲಿಪ್ ಒಂದು ವ್ಯಾಪಕವಾಗಿ ವೈರಲ್ ಆಗುತ್ತಿದೆ. ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ಮುಸ್ಲಿಮರ ವಿರುದ್ದದ ಆರೋಪಗಳಿಗೆ ತಿರುಗೇಟು ನೀಡಲು ದೋವಲ್ ಅವರ ಈ ವಿಡಿಯೋ ಕ್ಲಿಪ್ ಬಳಿಸಿಕೊಂಡಿದ್ದಾರೆ.

“ಐಎಸ್‌ಐ ಏಜೆಂಟ್‌ಗಳಾಗಿ ಮುಸಲ್ಮಾನರಿಗಿಂತ ಹಿಂದೂಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಭಯೋತ್ಪಾದನೆಯನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸಿ ನೋಡಬಾರದು. ಭಾರತದ ಮುಸ್ಲಿಂ ವಿದ್ವಾಂಸರು ಭಯೋತ್ಪಾದನೆಯ ವಿರುದ್ದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮದಲ್ಲಿ ಫತ್ವಾ ಹೊರಡಿಸಿದ್ದಾರೆ. ಆದರೆ, ಯಾವುದೇ ಹಿಂದೂ ಸಂಘಟನೆಗಳು ಆ ರೀತಿಯ ಯಾವ ಹೇಳಿಕೆಗಳನ್ನೂ ನೀಡಿಲ್ಲ” ಎಂದು ಅಜಿತ್ ದೋವಲ್ ಹೇಳಿರುವುದು ವೈರಲ್ ವಿಡಿಯೋದಲ್ಲಿ ಇದೆ.

ವೈರಲ್ ವಿಡಿಯೋ ನಕಲಿ ಎಂದ ಅಜಿತ್ ದೋವಲ್

ಹಳೆಯ ವಿಡಿಯೋ ಕ್ಲಿಪ್ ವೈರಲ್ ಆಗುತ್ತಿದ್ದಂತೆ ಅಜಿತ್ ದೋವಲ್ ತನ್ನ ವರಸೆ ಬದಲಿಸಿದ್ದಾರೆ. ಅದು ‘ಡೀಪ್‌ಫೇಕ್’ (ಎಐ ಸೃಷ್ಟಿತ) ಎಂದು ಹೇಳಿದ್ದಾರೆ.

ನವೆಂಬರ್ 17 ರಂದು ಸಿಎನ್‌ಎನ್-ನ್ಯೂಸ್ 18 ಸುದ್ದಿವಾಹಿನಿಗೆ ನೀಡಿದ ಹೇಳಿಕೆಯಲ್ಲಿ, “ನಾನು ಎಂದಿಗೂ ಅಂತಹ ಮಾತುಗಳನ್ನು ಹೇಳಿಲ್ಲ. ಸಾರ್ವಜನಿಕ ಅಭಿಪ್ರಾಯವನ್ನು ತಿರುಚಿ ಈ ವಿಡಿಯೋವನ್ನು ರಚಿಸಲಾಗಿದೆ. ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ವಿರೂಪಗೊಳಿಸಲು ಇಂತಹ ಮಾಧ್ಯಮ ಸಾಧನಗಳನ್ನು ಹೆಚ್ಚಾಗಿ ಬಳಸಲಾಗುತ್ತದೆ. ಈ ವೈರಲ್ ಆಗುತ್ತಿರುವ ವಿಡಿಯೋ ಭಾರತದ ಭಯೋತ್ಪಾದನಾ ನಿಲುವನ್ನು ಗುರಿಯಾಗಿಸುವ ಪ್ರಯತ್ನವಾಗಿದೆ” ಎಂದಿದ್ದಾರೆ.

ದೋವಲ್ ಹೇಳಿಕೆ ಅಲ್ಲಗಳೆದ ಆಲ್ಟ್ ನ್ಯೂಸ್ 

“ವೈರಲ್ ವಿಡಿಯೋ ಡೀಪ್‌ಫೇಕ್ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು, ನಾವು ಕೆಲವು ಕೀ ವರ್ಡ್‌ಗಳ ಮೂಲಕ ರಿವರ್ಸ್ ಇಮೇಜ್ ಹುಡುಕಾಟವನ್ನು ನಡೆಸಿದ್ದೇವೆ. ಈ ವೇಳೆ ದೋವಲ್ ಅವರ ವೈರಲ್ ವಿಡಿಯೋ ಮಾರ್ಚ್ 20, 2014ರಂದು ಆಸ್ಟ್ರೇಲಿಯಾ ಇಂಡಿಯಾ ಇನ್‌ಸ್ಟಿಟ್ಯೂಟ್ ಅಪ್‌ಲೋಡ್ ಮಾಡಿರುವ 1 ಗಂಟೆ 17 ನಿಮಿಷಗಳ ಯೂಟ್ಯೂಬ್ ವಿಡಿಯೋದಿಂದ ತೆಗೆದುಕೊಳ್ಳಲಾಗಿದೆ ಎಂಬುದಾಗಿ ಕಂಡುಬಂದಿದೆ” ಎಂದು ಆಲ್ಟ್ ನ್ಯೂಸ್ ಹೇಳಿದೆ. 

“ವಿಡಿಯೋದಲ್ಲಿ 1ನಿಮಿಷ 4 ಸೆಕೆಂಡ್‌ ಅವಧಿಯಲ್ಲಿ, ‘ನಾನು ಈಗ ಒಬ್ಬ ವ್ಯಕ್ತಿಯಾಗಿ ಬಯಲಾಗಿರುವ ಕಾರಣ ಒಂದು ಸಣ್ಣ ವಿಷಯವನ್ನು ಹೇಳುತ್ತೇನೆ… ಭಾರತದಲ್ಲಿ ಗುಪ್ತಚರ ಕಾರ್ಯಗಳಿಗಾಗಿ ಪಾಕಿಸ್ತಾನದ ಐಎಸ್‌ಐ ಸಂಸ್ಥೆ ಯಾರನ್ನೆಲ್ಲಾ ನೇಮಿಸಿಕೊಂಡಿದೆ ಎಂದರೆ, ಮುಸ್ಲಿಮರ ಸಂಖ್ಯೆಗಿಂತ ಹೆಚ್ಚು ಹಿಂದೂಗಳೇ ಇದ್ದಾರೆ. 1947ರಿಂದ ಇಲ್ಲಿಯವರೆಗೆ ಬೆಳಕಿಗೆ ಬಂದಿರುವ 4,000ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಶೇಕಡಾ 20ರಷ್ಟು ಕೂಡ ಮುಸ್ಲಿಮರು ಇಲ್ಲ. ಆದ್ದರಿಂದ ಇದು ತುಂಬಾ ತಪ್ಪು ಕಲ್ಪನೆ. ನಾವು ಮುಸ್ಲಿಮರನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತೇವೆ ಮತ್ತು ಈ ದೇಶವನ್ನು ಮಹಾನ್ ದೇಶವಾಗಿ ಮಾಡುತ್ತೇವೆ” ಎಂಬುವುದಾಗಿ ದೋವಲ್ ಹೇಳಿದ್ದಾರೆ ಎಂದು ಆಲ್ಟ್‌ ನ್ಯೂಸ್ ತಿಳಿಸಿದೆ.

ದೋವಲ್‌ ಅವರ ಹೇಳಿಕೆಯ ಪೂರ್ಣ ವಿಡಿಯೋ ಈ ಕೆಳಗಿನ ಲಿಂಕ್‌ನಲ್ಲಿದೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...