Homeಮುಖಪುಟಭಾರತದಲ್ಲಿ ಹಿಂದೂಗಳನ್ನು ಅಲ್ಪಸಂಖ್ಯಾತರು ಎನ್ನಲಾಗುವುದಿಲ್ಲ: ಸುಪ್ರೀಂ ಕೋರ್ಟ್

ಭಾರತದಲ್ಲಿ ಹಿಂದೂಗಳನ್ನು ಅಲ್ಪಸಂಖ್ಯಾತರು ಎನ್ನಲಾಗುವುದಿಲ್ಲ: ಸುಪ್ರೀಂ ಕೋರ್ಟ್

- Advertisement -
- Advertisement -

ಧರ್ಮವು ಯಾವುದೇ ಗಡಿಗಳನ್ನು ಹೊಂದಿಲ್ಲ. ಧರ್ಮವನ್ನು ಸಂಪೂರ್ಣ ಭಾರತದ ಸನ್ನಿವೇಶದಲ್ಲಿ ನೋಡಬೇಕು. ಹಾಗಾಗಿ ಭಾರತದಲ್ಲಿ ಹಿಂದೂಗಳು ಅಲ್ಪಸಂಖ್ಯಾತರಲ್ಲ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂ ಕೋರ್ಟ್, ಕೆಲವು ರಾಜ್ಯಗಳಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂ ಸಮುದಾಯಗಳಿಗೆ ಸವಲತ್ತುಗಳನ್ನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ನೇತೃತ್ವದ ಮೂವರು ಸದಸ್ಯರ ಉನ್ನತ ನ್ಯಾಯಾಲಯದ ನ್ಯಾಯಪೀಠ ಈ ಪ್ರಕರಣದಲ್ಲಿ ಯಾವುದೇ ಮಾರ್ಗಸೂಚಿಗಳನ್ನು ಅಂಗೀಕರಿಸಲಾಗುವುದಿಲ್ಲ ಎಂದು ಹೇಳಿದೆ. ಒಂದು ಗುಂಪು ಅಥವಾ ಸಮುದಾಯವನ್ನು ಅಲ್ಪಸಂಖ್ಯಾತರು ಎಂದು ಘೋಷಿಸುವುದು ಸರ್ಕಾರವೇ ಹೊರತು ನ್ಯಾಯಾಲಯಗಳಲ್ಲ ಎಂದು ಅರ್ಜಿದಾರರಿಗೆ ಮತ್ತು ಬಿಜೆಪಿ ಮುಖಂಡ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯರಿಗೆ ಕೋರ್ಟ್‌ ನೆನಪಿಸಿದೆ.

ಪಾರ್ಸಿಗಳು, ಮುಸ್ಲಿಮರು, ಕ್ರಿಶ್ಚಿಯನ್ನರು, ಸಿಖ್ಖರು ಮತ್ತು ಬೌದ್ಧರ ಐದು ಸಮುದಾಯಗಳನ್ನು ಅಲ್ಪಸಂಖ್ಯಾತರನ್ನಾಗಿ ಪಟ್ಟಿ ಮಾಡಿದ ಕೇಂದ್ರದ 26 ವರ್ಷದ ಅಧಿಸೂಚನೆಯ ಮಾನ್ಯತೆಯನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು.

“ಭಾಷೆಗಳನ್ನು ರಾಜ್ಯವಾರು ನಿರ್ಬಂಧಿಸಬಹುದು … ಆದರೆ ಧರ್ಮಗಳಿಗೆ ರಾಜ್ಯ ಗಡಿಗಳಿಲ್ಲ. ನಾವು ಪ್ಯಾನ್-ಇಂಡಿಯಾ ವಿಧಾನವನ್ನು ತೆಗೆದುಕೊಳ್ಳಬೇಕಾಗಿದೆ. ಲಕ್ಷದ್ವೀಪದಲ್ಲಿ ಮುಸ್ಲಿಮರು ಹಿಂದೂ ಕಾನೂನನ್ನು ಅನುಸರಿಸುತ್ತಾರೆ” ಎಂದು ನ್ಯಾಯಮೂರ್ತಿಗಳಾದ ಬಿ.ಆರ್. ಮತ್ತು ಸೂರ್ಯ ಕಾಂತ್ ಹೇಳಿದ್ದಾರೆ. “ನಾವು ನಿಮ್ಮ (ಅರ್ಜಿದಾರ) ವಾದವನ್ನು ಒಪ್ಪುವುದಿಲ್ಲ. ನ್ಯಾಯಾಲಯಗಳು ಯಾರನ್ನೂ ಅಲ್ಪಸಂಖ್ಯಾತರೆಂದು ಘೋಷಿಸಿಲ್ಲ, ಅದನ್ನು ಸರ್ಕಾರವೇ ಮಾಡುತ್ತದೆ” ಎಂದಿದ್ದಾರೆ.

ಈ ವಿಷಯದಲ್ಲಿ ಸುಪ್ರೀಂ ಕೋರ್ಟ್ ಈ ಹಿಂದೆ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಅವರನ್ನು ಸಂಪರ್ಕಿಸಿತ್ತು. ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಿಂದೂಗಳು ಅಲ್ಪಸಂಖ್ಯಾತ ಜನಸಂಖ್ಯೆ ಎಂದು ಹೇಳಲಾಗಿತ್ತು. ಇವುಗಳಲ್ಲಿ ಪಂಜಾಬ್, ಮಿಜೋರಾಂ, ನಾಗಾಲ್ಯಾಂಡ್, ಮೇಘಾಲಯ, ಅರುಣಾಚಲ ಪ್ರದೇಶ ಮತ್ತು ಮಣಿಪುರ ಮತ್ತು ಕೇಂದ್ರ ಪ್ರದೇಶಗಳಾದ ಜಮ್ಮು ಮತ್ತು ಕಾಶ್ಮೀರ ಮತ್ತು ಲಕ್ಷದ್ವೀಪ ಸೇರಿವೆ.

ಪ್ಯಾನ್-ಇಂಡಿಯಾ ಸನ್ನಿವೇಶದಲ್ಲಿ ಧರ್ಮದ ಬಗ್ಗೆ ನ್ಯಾಯಾಲಯದ ಅವಲೋಕನವು ಕೇಂದ್ರ ಸರ್ಕಾರದ ಹೊಸ ಪೌರತ್ವ ಕಾನೂನಿನ ವಿರುದ್ಧ ಹೆಚ್ಚುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಬಂದಿರುವುದರಿಂದ ಮಹತ್ವ ಸಿಕ್ಕಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಪ್ರತಿಪಕ್ಷಗಳು ಪದೇ ಪದೇ ಸರ್ಕಾರದ ಮೇಲೆ ದಾಳಿ ನಡೆಸಿವೆ. ಇದು ಮುಸ್ಲಿಮರು ಸೇರಿದಂತೆ ಇತರ ಧಾರ್ಮಿಕ ಸಮುದಾಯಗಳ ವಿರುದ್ಧ ತಾರತಮ್ಯವನ್ನುಂಟುಮಾಡುತ್ತದೆ ಮತ್ತು ಸಂವಿಧಾನದ 14 ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಅವು ಆರೋಪಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...