Homeಮುಖಪುಟಹಿಂದೂಗಳು ಸುರಕ್ಷಿತರಾಗಿದ್ದರೆ, ಮುಸ್ಲಿಮರು ಕೂಡಾ ಸುರಕ್ಷಿತರು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆ

ಹಿಂದೂಗಳು ಸುರಕ್ಷಿತರಾಗಿದ್ದರೆ, ಮುಸ್ಲಿಮರು ಕೂಡಾ ಸುರಕ್ಷಿತರು: ಯುಪಿ ಸಿಎಂ ಆದಿತ್ಯನಾಥ್ ಹೇಳಿಕೆ

- Advertisement -
- Advertisement -

ರಾಜ್ಯದಲ್ಲಿ ಹಿಂದೂಗಳು ಸುರಕ್ಷಿತರಾಗಿದ್ದರೆ, ಮುಸ್ಲಿಮರು ಸಹ ಸುರಕ್ಷಿತವಾಗಿರಲಿದ್ದಾರೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ರಾಜ್ಯದಲ್ಲಿ ಎಲ್ಲಾ ಧರ್ಮದ ಜನರು ಸುರಕ್ಷಿತವಾಗಿದ್ದಾರೆ ಎಂದು ಹೇಳಿದ ಅವರು, ತಾನೊಬ್ಬ ಯೋಗಿಯಾಗಿ ನಾನು ಎಲ್ಲರ ಸಂತೋಷವನ್ನು ಬಯಸುತ್ತೇನೆ ಎಂದು ಅವರು ಪ್ರತಿಪಾದಿಸಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐಯ ಪಾಡ್‌ಕಾಸ್ಟ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೂರು ಹಿಂದೂ ಕುಟುಂಬಗಳು ಇರುವ ಜಾಗದಲ್ಲಿ ಒಂದು ಮುಸ್ಲಿಂ ಕುಟುಂಬವು ಸುರಕ್ಷಿತವಾಗಿರುತ್ತದೆ. ಆದಾಗ್ಯೂ, ನೂರು ಮುಸ್ಲಿಂ ಕುಟುಂಬಗಳು ಇರುವಲ್ಲಿ 50 ಹಿಂದೂ ಕುಟುಂಬಗಳು ಸುರಕ್ಷಿತವಾಗಿರುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಹಿಂದೂಗಳು ಸುರಕ್ಷಿತರಾಗಿದ್ದರೆ

ಅದಾಗ್ಯೂ, ಮುಖ್ಯಮಂತ್ರಿಯ ಈ ಹೇಳಿಕೆಗೆ ಯಾವುದೆ ಆಧಾರವಿಲ್ಲ. ಹಿಂದೂ ಬಾಹುಳ್ಯವಿರುವ ದೇಶದ ಹಲವಾರು ಭಾಗಗಳಲ್ಲಿ ಸಾವಿರಾರು ಮುಸ್ಲಿಮರ ಹತ್ಯೆಯಾಗಿರುವ ಹಲವಾರು ಉದಾಹರಣೆಗಳು ಇವೆ.

“ನೂರು ಹಿಂದೂ ಕುಟುಂಬಗಳಲ್ಲಿ ಒಂದು ಮುಸ್ಲಿಂ ಕುಟುಂಬವು ಅತ್ಯಂತ ಸುರಕ್ಷಿತವಾಗಿರುತ್ತದೆ. ಅವರು ತಮ್ಮ ಎಲ್ಲಾ ಧಾರ್ಮಿಕ ಕಾರ್ಯಗಳನ್ನು ಆಚರಿಸಲು ಸ್ವಾತಂತ್ರ್ಯವನ್ನು ಹೊಂದಿರುತ್ತಾರೆ. ಆದರೆ 100 ಮುಸ್ಲಿಂ ಕುಟುಂಬಗಳು ಇದ್ದಲ್ಲಿ 50 ಹಿಂದೂಗಳು ಸುರಕ್ಷಿತವಾಗಿರಬಹುದೇ? ಇಲ್ಲ. ಇದಕ್ಕೆ ಬಾಂಗ್ಲಾದೇಶವು ಒಂದು ಉದಾಹರಣೆಯಾಗಿದೆ.” ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಸ್ಲಿಮರು ಅತ್ಯಂತ ಸುರಕ್ಷಿತರು ಎಂದು ಸಿಎಂ ಆದಿತ್ಯನಾಥ್ ಪುನರುಚ್ಚರಿಸಿದ್ದು, 2017 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಕೋಮು ಗಲಭೆಗಳು ನಿಂತಿವೆ ಎಂದು ಒತ್ತಿ ಹೇಳಿದ್ದಾರೆ.

“ಉತ್ತರ ಪ್ರದೇಶದಲ್ಲಿ, ಮುಸ್ಲಿಮರು ಅತ್ಯಂತ ಸುರಕ್ಷಿತರು. ಹಿಂದೂಗಳು ಸುರಕ್ಷಿತರಾಗಿದ್ದರೆ, ಅವರು ಸಹ ಸುರಕ್ಷಿತರು. 2017 ಕ್ಕಿಂತ ಮೊದಲು ಯುಪಿಯಲ್ಲಿ ಗಲಭೆಗಳಾಗಿದ್ದರೆ, ಹಿಂದೂ ಅಂಗಡಿಗಳು ಉರಿಯುತ್ತಿದ್ದರೆ, ಮುಸ್ಲಿಂ ಅಂಗಡಿಗಳು ಸಹ ಉರಿಯುತ್ತಿದ್ದವು. ಹಿಂದೂ ಮನೆಗಳು ಉರಿಯುತ್ತಿದ್ದರೆ, ಮುಸ್ಲಿಂ ಮನೆಗಳು ಸಹ ಉರಿಯುತ್ತಿದ್ದವು. ಮತ್ತು 2017 ರ ನಂತರ, ಗಲಭೆಗಳು ನಿಂತುಹೋದವು” ಎಂದು ಅವರು ಹೇಳಿದ್ದಾರೆ.

“ನಾನು ಒಬ್ಬ ಸಾಮಾನ್ಯ ನಾಗರಿಕ, ಉತ್ತರ ಪ್ರದೇಶದ ನಾಗರಿಕ. ಮತ್ತು ನಾನು ಎಲ್ಲರ ಸಂತೋಷವನ್ನು ಬಯಸುವ ಯೋಗಿ. ಎಲ್ಲರ ಬೆಂಬಲ ಮತ್ತು ಅಭಿವೃದ್ಧಿಯಲ್ಲಿ ನಾನು ನಂಬಿಕೆ ಇಡುತ್ತೇನೆ” ಎಂದು ಯುಪಿ ಸಿಎಂ ಹೇಳಿದ್ದಾರೆ. ಸನಾತನ ಧರ್ಮವನ್ನು ವಿಶ್ವದ ಅತ್ಯಂತ ಪ್ರಾಚೀನ ಧರ್ಮ ಎಂದು ಅವರು ಹೇಳಿದ ಅವರು, ಹಿಂದೂ ಆಡಳಿತಗಾರರು ತಮ್ಮ ಸ್ವಂತ ಶಕ್ತಿಯನ್ನು ಬಳಸಿಕೊಂಡು ಇತರರ ಮೇಲೆ ಪ್ರಾಬಲ್ಯ ಸಾಧಿಸಿದ ಉದಾಹರಣೆಗಳಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹೈಕೋರ್ಟ್ ನ್ಯಾಯಮೂರ್ತಿ ನಿವಾಸದಲ್ಲಿ ನಗದು ಪತ್ತೆ ಪ್ರಕರಣ: ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಹೈಕೋರ್ಟ್ ನ್ಯಾಯಮೂರ್ತಿ ನಿವಾಸದಲ್ಲಿ ನಗದು ಪತ್ತೆ ಪ್ರಕರಣ: ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...